Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:28 - ಪರಿಶುದ್ದ ಬೈಬಲ್‌

28 ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಜನರೊಂದಿಗೆ ಸಂಪರ್ಕವಿಟ್ಟುಕೊಳ್ಳುವುದಾಗಲಿ ಅವರನ್ನು ಭೇಟಿಮಾಡುವುದಾಗಲಿ ನಮ್ಮ ಯೆಹೂದ್ಯ ಧರ್ಮಶಾಸ್ತ್ರಕ್ಕೆ ವಿರುದ್ಧವಾದದ್ದು ಎಂಬುದು ನಿಮಗೆ ಗೊತ್ತೇ ಇದೆ. ಆದರೆ ಯಾವ ವ್ಯಕ್ತಿಯನ್ನೂ ಅಪವಿತ್ರನೆಂದಾಗಲಿ ಅಶುದ್ಧನೆಂದಾಗಲಿ ಕರೆಯಕೂಡದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಧರ್ಮದವರೊಡನೆ ಸಂಪರ್ಕ ಇಟ್ಟುಕೊಳ್ಳುವುದು ಅಥವಾ ಅವರಿಗೆ ಭೇಟಿಕೊಡುವುದು ಧರ್ಮನಿಷಿದ್ಧ ಎಂಬುದು ನಿಮಗೆ ತಿಳಿದೇ ಇದೆ. ಆದರೆ, ನಾನು ಯಾರನ್ನೂ ಅಶುದ್ಧ ಅಥವಾ ಅಸ್ಪೃಶ್ಯ ಎನ್ನಬಾರದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು ಅವರಿಗೆ - ಯೆಹೂದ್ಯರು ಅನ್ಯಜನರ ಕೂಡ ಹೊಕ್ಕು ಬಳಿಕೆಮಾಡುವದು ಯೆಹೂದ್ಯರ ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರದೆಂದು ದೇವರು ತೋರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಪೇತ್ರನು ಅವರಿಗೆ: “ಯೆಹೂದ್ಯನು ಯೆಹೂದ್ಯರಲ್ಲದವರೊಂದಿಗೆ ಸೇರಿ, ಅವರನ್ನು ಭೇಟಿ ಮಾಡುವುದಾಗಲಿ ನಮ್ಮ ಯೆಹೂದಿ ನಿಯಮಕ್ಕೆ ವಿರೋಧವಾದದ್ದು ಎಂದು ನಿಮಗೆಲ್ಲರಿರೂ ತಿಳಿದೇ ಇದೆ. ಆದರೆ ಯಾವ ಮನುಷ್ಯನನ್ನೂ ಅಶುದ್ಧನು ಇಲ್ಲವೆ ನಿಷಿದ್ಧವಾದವನು ಎಂದು ಕರೆಯಬಾರದು ಎಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಪೆದ್ರುನ್ ತೆಂಕಾ, “ಜುದೆವಾಂಚೊ ಎಕ್ ಮಾನುಸ್ ದುಸ್ರ್ಯಾ ಲೊಕಾಂಚ್ಯಾ ವಾಂಗ್ಡಾ ಸಂಪರ್ಕ್ ಥವ್ನ್ ಘೆತಲೆ ಹೊಂವ್ದಿ, ತೆಕಾ ಭೆಟ್ತಲೆ ಹೊಂವ್ದಿ ಹೆ ಸಗ್ಳೆ ಮೊಯ್ಜೆಚ್ಯಾ ಕರಾರಾಂಚ್ಯಾ ಪುಸ್ತಕಾಕ್ ವಿರೊದ್ ಹೊವ್ನ್ ಹಾಯ್ ಮನ್ತಲೆ ತುಮ್ಕಾ ಗೊತ್ತುಚ್ ಹಾಯ್, ಖರೆ ಖಚ್ಚ್ಯಾ ಮಾನ್ಸಾಕ್ಬಿ ಬ್ರಸ್ಟ್ ಮನುನ್ ಹೊಂವ್ದಿ ಅಶುದ್ದ್ ಮನುನ್ ಬಲ್ವುತಲೆ ಹೊಂವ್ದಿ ಕರು ನ್ಹಯ್ ಮನುನ್ ದೆವಾನ್ ಮಾಕಾ ದಾಕ್ವುನ್ ದಿಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:28
15 ತಿಳಿವುಗಳ ಹೋಲಿಕೆ  

ಸಮಾರ್ಯದ ಸ್ತ್ರೀಯು, “ಕುಡಿಯುವ ನೀರಿಗಾಗಿ ನೀನು ನನ್ನನ್ನು ಕೇಳುತ್ತಿರುವುದು ನನಗೆ ಆಶ್ಚರ್ಯವನ್ನು ಉಂಟುಮಾಡಿದೆ! ನೀನಾದರೋ ಯೆಹೂದ್ಯನು. ನಾನಾದರೋ ಸಮಾರ್ಯದವಳು!” ಎಂದು ಹೇಳಿದಳು. (ಯೆಹೂದ್ಯರು ಸಮಾರ್ಯದವರೊಂದಿಗೆ ಸ್ನೇಹದಿಂದಿರಲಿಲ್ಲ.)


“ಆದರೆ, ‘ಇವುಗಳನ್ನು ದೇವರು ಶುದ್ಧೀಕರಿಸಿದ್ದಾನೆ. ಇವುಗಳನ್ನು ಅಶದ್ಧವೆಂದು ಹೇಳಬೇಡ!’ ಎಂದು ಆ ವಾಣಿಯು ನನಗೆ ಉತ್ತರಕೊಟ್ಟಿತು.


ಬಳಿಕ ಯೆಹೂದ್ಯರು ಯೇಸುವನ್ನು ಕಾಯಫನ ಮನೆಯಿಂದ ರೋಮ್ ರಾಜ್ಯಪಾಲನ ಭವನಕ್ಕೆ ಕರೆದುಕೊಂಡು ಬಂದರು. ಆಗ ಮುಂಜಾನೆಯಾಗಿತ್ತು. ಯೆಹೂದ್ಯರು ಭವನದೊಳಗೆ ಹೋಗಲಿಲ್ಲ. ಅವರು ಪಸ್ಕಹಬ್ಬದ ಊಟಮಾಡ ಬೇಕೆಂದಿದ್ದ ಕಾರಣ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಲು ಇಷ್ಟಪಡಲಿಲ್ಲ.


ಆ ಸಮಯದಲ್ಲಿ ಆತನ ಶಿಷ್ಯರು ಹಿಂತಿರುಗಿ ಬಂದರು. ಯೇಸು ಒಬ್ಬ ಸ್ತ್ರೀಯೊಂದಿಗೆ ಮಾತಾಡುತ್ತಿರುವುದನ್ನು ನೋಡಿ ಅವರು ಆಶ್ಚರ್ಯಗೊಂಡರು. ಆದರೆ, “ನಿನಗೇನು ಬೇಕು?” ಎಂದಾಗಲಿ “ನೀನು ಆಕೆಯೊಂದಿಗೆ ಏಕೆ ಮಾತಾಡುತ್ತಿರುವೆ?” ಎಂದಾಗಲಿ ಅವರಲ್ಲಿ ಒಬ್ಬರೂ ಕೇಳಲಿಲ್ಲ.


ಆದರೆ ಅವರು ಇತರರಿಗೆ, ‘ನನ್ನ ಬಳಿಗೆ ಬರಬೇಡ. ನೀನು ನಿನ್ನನ್ನು ಶುದ್ಧಮಾಡುವ ತನಕ ನನ್ನನ್ನು ಮುಟ್ಟದಿರು’ ಎಂದು ಹೇಳುವರು. ಅವರು ನನ್ನ ಕಣ್ಣಿನಲ್ಲಿ ಹೊಗೆಯಂತಿದ್ದಾರೆ; ಅವರ ಬೆಂಕಿಯು ಸದಾ ಉರಿಯುತ್ತಿರುವದು.”


ಫರಿಸಾಯನು ಸುಂಕವಸೂಲಿಗಾರನನ್ನು ಕಂಡು ದೂರದಲ್ಲಿ ನಿಂತುಕೊಂಡು ಹೀಗೆ ಪ್ರಾರ್ಥಿಸಿದನು: ‘ದೇವರೇ, ನಾನು ಬೇರೆಯವರಂತೆ ಸುಲಿಗೆಗಾರನಲ್ಲ, ಮೋಸಗಾರನಲ್ಲ, ಅಥವಾ ವ್ಯಭಿಚಾರಿಯಲ್ಲ. ನಾನು ಈ ಸುಂಕವಸೂಲಿಗಾರನಂತೆಯೂ ಅಲ್ಲ. ಇದಕ್ಕಾಗಿ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.


ಯೇಸುವಿನ ಶಿಷ್ಯರಲ್ಲಿ ಕೆಲವರು ಕೈಗಳನ್ನು ತೊಳೆಯದೆ ಅಶುದ್ಧವಾದ ಕೈಗಳಿಂದ ಊಟ ಮಾಡುತ್ತಿರುವುದನ್ನು ಫರಿಸಾಯರು ಮತ್ತು ಧರ್ಮೋಪದೇಶಕರು ನೋಡಿದರು.


ಆದ್ದರಿಂದ, ನನ್ನನ್ನು ಇಲ್ಲಿಗೆ ಬರಬೇಕೆಂದು ಕರೆದ ಜನರೊಂದಿಗೆ ನಾನು ವಾದಮಾಡಲಿಲ್ಲ. ಆದರೆ ನೀವು ನನ್ನನ್ನು ಯಾಕೆ ಕರೆಸಿದಿರೆಂದು ದಯವಿಟ್ಟು ಈಗ ಹೇಳಿರಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು