Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:33 - ಪರಿಶುದ್ದ ಬೈಬಲ್‌

33 ಆದ್ದರಿಂದ, ನಾನು ತಕ್ಷಣ ನಿನಗೆ ಕರೆಕಳುಹಿಸಿದೆ. ನೀನು ಇಲ್ಲಿಗೆ ಬಂದದ್ದು ಉಪಕಾರವಾಯಿತು. ನಮಗೆ ತಿಳಿಸಬೇಕೆಂದು ಪ್ರಭುವು ನಿನಗೆ ಆಜ್ಞಾಪಿಸಿರುವ ಪ್ರತಿಯೊಂದನ್ನು ಕೇಳಲು ನಾವೆಲ್ಲರು ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನಾನು ತಡಮಾಡದೆ ನಿನ್ನ ಹತ್ತರ ಕಳುಹಿಸಿದೆನು. ನೀನು ಬಂದದ್ದು ಉಪಕಾರವಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದ್ದರಿಂದ ನಾನು ನಿನ್ನನ್ನು ಕೂಡಲೇ ಕರೆದುಕೊಂಡು ಬರಲು ಕೆಲವರನ್ನು ಕಳುಹಿಸಿದೆ. ನೀನು ಬಂದಿರುವುದು ಒಳ್ಳೆಯದೇ ಆಯಿತು. ಕರ್ತ ಯೇಸು ನಮಗೆ ಏನು ಹೇಳಬೇಕೆಂದು ನಿನಗೆ ಆಜ್ಞಾಪಿಸಿರುವರೋ ಅದೆಲ್ಲವನ್ನು ಕೇಳಲು ಈಗ ನಾವು ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತಸೆ ಹೊವ್ನ್, ಮಿಯಾ ಲಗ್ಗುನಾ ತುಕಾ ಯೆವ್ಕ್ ಸಾಂಗುನ್ ಧಾಡ್ಲೊ, ತಿಯಾ ಹಿತ್ತೆ ಯೆಲ್ಲೆ ಉಪ್ಕಾರ್ ಹೊಲೊ, ಅಮ್ಕಾ ಸಾಂಗ್ ಮನುನ್ ಧನಿಯಾನ್ ತುಕಾ ಸಾಂಗಲ್ಲೆ ಹರ್ ಎಕ್‍ಬಿ ಆಯ್ಕುಕ್ ಅಮಿ ಸಗ್ಳೆ ಹಿತ್ತೆ ದೆವಾಚ್ಯಾ ಫಿಡ್ಯಾತ್ ಗೊಳಾ ಹೊಲಾಂವ್ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:33
20 ತಿಳಿವುಗಳ ಹೋಲಿಕೆ  

ನನ್ನ ಸಹೋದರ ಸಹೋದರಿಯರೇ, ಯಾವಾಗಲೂ ಮಾತನಾಡುವುದಕ್ಕಿಂತ ಕೇಳುವುದರಲ್ಲಿ ಆಸಕ್ತರಾಗಿರಿ. ಸುಲಭವಾಗಿ ಕೋಪಗೊಳ್ಳದಿರಿ.


ನನ್ನ ಅನಾರೋಗ್ಯವು ನಿಮಗೆ ಹೊರೆಯಾಗಿತ್ತು. ಆದರೆ ನೀವು ನನ್ನ ವಿಷಯದಲ್ಲಿ ಬೇಸರಮಾಡಿಕೊಳ್ಳಲಿಲ್ಲ. ನೀವು ನನ್ನನ್ನು ಕಳುಹಿಸಿಬಿಡಲಿಲ್ಲ. ದೇವದೂತನೋ ಎಂಬಂತೆ ನೀವು ನನ್ನನ್ನು ಸ್ವಾಗತಿಸಿದಿರಿ; ಸ್ವತಃ ಯೇಸು ಕ್ರಿಸ್ತನೋ ಎಂಬಂತೆ ನನ್ನನ್ನು ಸ್ವೀಕರಿಸಿಕೊಂಡಿರಿ.


ಆದ್ದರಿಂದ ಎಲ್ಲಾ ನೀಚತನವನ್ನೂ ದುಷ್ಟತನವನ್ನೂ ನಿಮ್ಮ ಜೀವನದಿಂದ ದೂರತಳ್ಳಿರಿ. ನಿಮ್ಮ ಹೃದಯದಲ್ಲಿ ಬೇರೂರಿರುವ ದೇವರ ವಾಕ್ಯವನ್ನು ದೀನತೆಯಿಂದ ಒಪ್ಪಿಕೊಳ್ಳಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುತ್ತದೆ.


ನಿಮಗೆ ನೀವೇ ಮೋಸಮಾಡಿಕೊಳ್ಳಬೇಡಿ. ನಿಮ್ಮಲ್ಲಿರುವ ಯಾವನಾದರೂ ತಾನು ಈ ಲೋಕದಲ್ಲಿ ಜ್ಞಾನಿಯೆಂದು ಆಲೋಚಿಸಿಕೊಂಡರೆ ಅವನು ಮೂಢನಾಗಲೇಬೇಕು. ಆಗ ಆ ವ್ಯಕ್ತಿಯು ನಿಜವಾಗಿಯೂ ಜ್ಞಾನಿಯಾಗಬಲ್ಲನು.


“ದೇವರು ತನ್ನ ರಕ್ಷಣೆಯನ್ನು ಯೆಹೂದ್ಯರಲ್ಲದವರಿಗೆ ಕಳುಹಿಸಿದ್ದಾನೆ. ಅವರು ಅದಕ್ಕೆ ಕಿವಿಗೊಡುವರು. ಯೆಹೂದ್ಯರಾದ ನಿಮಗೆ ಇದು ತಿಳಿದಿರಲಿ!”


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ದೇವರ ರಾಜ್ಯವನ್ನು ಮಕ್ಕಳ ಮನೋಭಾವದಿಂದ ಸ್ವೀಕರಿಸದಿದ್ದರೆ ನೀವು ಅದರೊಳಗೆ ಸೇರುವುದೇ ಇಲ್ಲ” ಎಂದು ಹೇಳಿದನು.


ಈ ಚಿಕ್ಕ ಮಗುವಿನಂತೆ ತನ್ನನ್ನು ತಗ್ಗಿಸಿಕೊಳ್ಳುವವನೇ ಪರಲೋಕರಾಜ್ಯದಲ್ಲಿ ಅತ್ಯುತ್ತಮ ಸ್ಥಾನ ಪಡೆಯುತ್ತಾನೆ.


ಜ್ಞಾನಿಯು ನಿನಗೆ ಕೊಡುವ ಎಚ್ಚರಿಕೆಯು ಚಿನ್ನದ ಉಂಗುರಗಳಿಗಿಂತಲೂ ಬಂಗಾರದ ಆಭರಣಗಳಿಗಿಂತಲೂ ಹೆಚ್ಚು ಬೆಲೆ ಬಾಳುತ್ತದೆ.


ಈ ಜ್ಞಾನೋಕ್ತಿಗಳಿಗೆ ಕಿವಿಗೊಡುವುದರ ಮೂಲಕ ಜ್ಞಾನಿಗಳು ತಮ್ಮ ಪಾಂಡಿತ್ಯವನ್ನೂ ವಿವೇಕಿಗಳು ತಮ್ಮ ಉಚಿತಾಲೋಚನೆಗಳನ್ನೂ ಹೆಚ್ಚಿಸಿಕೊಳ್ಳಲಿ.


ಇದಲ್ಲದೆ, ದೇವರ ಶಕ್ತಿಯು ಯೆಹೂದದ ಜನರನ್ನು ಒಂದಾಗಿ ಮಾಡಿತು. ಆದ್ದರಿಂದ ಅವರು ಅರಸನಿಗೆ ಮತ್ತು ಅಧಿಕಾರಿಗಳಿಗೆ ವಿಧೇಯರಾದರು. ಹೀಗೆ ಜನರು ಯೆಹೋವನ ಕಟ್ಟಳೆಗಳಿಗೆ ವಿಧೇಯರಾದರು.


ನೀವು ದೇವರ ಸಂದೇಶವನ್ನು ಸ್ವೀಕರಿಸಿಕೊಂಡದ್ದಕ್ಕಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀವು ಆ ಸಂದೇಶವನ್ನು ನಮ್ಮಿಂದ ಕೇಳಿ, ಅದನ್ನು ದೇವರ ವಾಕ್ಯದಂತೆ ಒಪ್ಪಿಕೊಂಡಿರೇ ಹೊರತು ಮಾನವನ ವಾಕ್ಯಗಳೆಂದಲ್ಲ. ಅದು ನಿಜವಾಗಿಯೂ ದೇವರ ಸಂದೇಶ. ಆ ಸಂದೇಶವು ನಂಬುವವರಾದ ನಿಮ್ಮಲ್ಲಿ ಕಾರ್ಯಮಾಡುತ್ತದೆ.


ಆದರೆ ಮೊದಲನೆಯವರಲ್ಲಿ ಅನೇಕರು ಕಡೆಯರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು.


ಜ್ಞಾನಿಗೆ ಹೆಚ್ಚು ಕಲಿತುಕೊಳ್ಳುವುದಕ್ಕೆ ಇಷ್ಟ; ಆದ್ದರಿಂದ ಅವನು ಗಮನವಿಟ್ಟು ಕೇಳುವನು.


ಆದ್ದರಿಂದ ಕೆಲವು ಜನರನ್ನು ಜೊಪ್ಪಪಟ್ಟಣಕ್ಕೆ ಕಳುಹಿಸಿ ಸೀಮೋನ್ ಪೇತ್ರನನ್ನು ಬರಬೇಕೆಂದು ಕೇಳಿಕೊ. ಪೇತ್ರನು ಚರ್ಮಕಾರನಾದ ಸೀಮೋನ ಎಂಬವನ ಮನೆಯಲ್ಲಿ ಇಳಿದುಕೊಂಡಿದ್ದಾನೆ. ಅವನ ಮನೆಯು ಸಮುದ್ರ ತೀರದಲ್ಲಿದೆ’ ಎಂದನು.


ಪೇತ್ರನು ಮಾತಾಡಲಾರಂಭಿಸಿ ಹೀಗೆಂದನು: “ದೇವರಿಗೆ ಎಲ್ಲರೂ ಒಂದೇ ಎಂಬುದು ನನಗೆ ಈಗ ಅರ್ಥವಾಯಿತು.


ಇದು ಸಮುದ್ರದ ಆಚೆ ಇರುವ ಮಾತಲ್ಲ, ‘ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವವರು ಯಾರಿರುವರು? ನಾವದನ್ನು ಕೇಳಿ ಅದರಂತೆ ನಡೆಯಬಹುದಾಗಿತ್ತು’ ಎಂದು ಹೇಳುವ ಅವಶ್ಯಕತೆ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು