ಅಪೊಸ್ತಲರ ಕೃತ್ಯಗಳು 10:35 - ಪರಿಶುದ್ದ ಬೈಬಲ್35 ತನ್ನನ್ನು ಆರಾಧಿಸುವ ನೀತಿವಂತರು ಯಾರೇ ಆಗಿದ್ದರೂ ಅವರನ್ನು ದೇವರು ಸ್ವೀಕರಿಸಿಕೊಳ್ಳುವನು. ಅವನು ಯಾವ ದೇಶದವನು ಎಂಬುದು ಮುಖ್ಯವಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ದೇವರಿಗೆ ಭಯಪಟ್ಟು ಸತ್ಪುರುಷನಾಗಿ ಬಾಳುವವನು ಯಾವ ಜನಾಂಗದವನೇ ಆಗಿರಲಿ, ಅವನು ಅವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ದೇವರು ಪಕ್ಷಪಾತಿಯಲ್ಲ, ಯಾವ ಜನರಲ್ಲಿಯಾದರೂ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ದೇವರು ಪ್ರತಿಯೊಂದು ದೇಶದಲ್ಲಿಯೂ ತಮಗೆ ಭಯಪಡುವ ಮತ್ತು ಸರಿಯಾದದ್ದನ್ನು ಮಾಡುವ ಜನರನ್ನು ಸ್ವೀಕರಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಅಪ್ನಾಕ್ ಆರಾದನ್ ಕರ್ತಲೊ ನಿತಿಚೊ ಮಾನುಸ್ ಕೊನ್ ಹೊಲ್ಯಾರ್ಬಿ ದೆವ್ ತೆಕಾ ಅಪ್ನಾಚ್ಯಾ ಜಗ್ಗೊಳ್ ಘೆತಾ, ಹಿತ್ತೆ ತೊ ಖಚ್ಚ್ಯಾ ದೆಶ್ಯಾಚೊ ಮನ್ತಲೆ ಜವಾಬ್ ಯೆಯ್ನಾ. ಅಧ್ಯಾಯವನ್ನು ನೋಡಿ |
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.