Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:4 - ಪರಿಶುದ್ದ ಬೈಬಲ್‌

4 ಕೊರ್ನೇಲಿಯನು ದೇವದೂತನನ್ನು ಕಂಡು ಭಯದಿಂದ “ಸ್ವಾಮೀ, ನಿಮಗೇನು ಬೇಕು?” ಎಂದು ಕೇಳಿದನು. ಆ ದೇವದೂತನು ಅವನಿಗೆ, “ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿದ್ದಾನೆ. ನೀನು ಬಡವರಿಗೆ ಕೊಟ್ಟವುಗಳನ್ನು ಆತನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕೊರ್ನೇಲಿಯನು ಭಯದಿಂದ ದೇವದೂತನನ್ನು ದಿಟ್ಟಿಸಿನೋಡುತ್ತಾ, “ಏನು ಸ್ವಾಮಿ?” ಎಂದನು. ಅದಕ್ಕೆ ದೇವದೂತನು, “ನಿನ್ನ ಪ್ರಾರ್ಥನೆ ಮತ್ತು ದಾನಧರ್ಮ ದೇವರನ್ನು ಮುಟ್ಟಿವೆ. ಅವರು ನಿನ್ನನ್ನು ಮೆಚ್ಚಿದ್ದಾರೆ; ನಿನ್ನ ಕೋರಿಕೆಗಳನ್ನು ಈಡೇರಿಸಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ - ಏನು ಸ್ವಾಮೀ ಎಂದು ಕೇಳಲು ದೂತನು ಅವನಿಗೆ - ನಿನ್ನ ಪ್ರಾರ್ಥನೆಗಳೂ ನಿನ್ನ ದಾನಧರ್ಮಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಏರಿ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಕೊರ್ನೆಲಾನ್ ದೆವಾಚ್ಯಾ ದುತಾಕ್ ಬಗುನ್ ಭಿಂವ್ನ್ ಸಾಯ್ಬಾ ತುಕಾ ಕಾಯ್ ಹೊವ್ಚೆ? ಮನುನ್ ಇಚಾರ್‍ಲ್ಯಾನ್, ತೆಕಾ “ದೆವಾನ್ ತುಜಿ ಮಾಗ್ನಿಯಾ ಆಯಿಕ್ಲ್ಯಾನ್, ತಿಯಾ ಗರಿಬಾಕ್ನಿ ದಾನ್ ಧರ್ಮ್ ದಿಲ್ಲೆ ಸಗ್ಳ್ಯೆ ತೆನಿ ಬಗ್ಲಾ, ದೆವಾನ್ ತುಕಾ ಮೆಚ್ಚುನ್ ಘೆಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:4
24 ತಿಳಿವುಗಳ ಹೋಲಿಕೆ  

ಯಾವುದರ ಬಗ್ಗೆಯೂ ಚಿಂತಿಸಬೇಡಿ. ಆದರೆ ಪ್ರಾರ್ಥನೆ ಮಾಡುತ್ತಾ ನಿಮ್ಮ ಅಗತ್ಯತೆಗಳಿಗೆಲ್ಲಾ ದೇವರಲ್ಲಿ ವಿಜ್ಞಾಪಿಸಿರಿ. ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.


ದೇವರು ನ್ಯಾಯವಂತನಾಗಿದ್ದಾನೆ. ನೀವು ಮಾಡಿದ ಉಪಕಾರವನ್ನು ಮತ್ತು ದೇವಜನರಿಗೆ ಸಹಾಯ ಮಾಡಿದ್ದರ ಮೂಲಕ ಮತ್ತು ಸಹಾಯ ಮಾಡುತ್ತಲೇ ಇರುವುದರ ಮೂಲಕ ನೀವು ಆತನಿಗೆ ತೋರಿದ ಪ್ರೀತಿಯನ್ನು ಆತನು ಮರೆತುಬಿಡುವುದಿಲ್ಲ.


ದೇವರನ್ನು ಅನುಸರಿಸುವ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು ಯೆಹೋವನು ಆಲೈಸಿದನು. ಆತನ ಮುಂದೆ ದೇವಜನರ ಹೆಸರುಗಳನ್ನು ಬರೆದಿರುವ ಒಂದು ಪುಸ್ತಕವಿತ್ತು. ಯೆಹೋವನ ಹೆಸರನ್ನು ಘನಪಡಿಸುವವರ ಹೆಸರುಗಳು ಅದರಲ್ಲಿದ್ದವು.


ಆ ಮನುಷ್ಯನು, ‘ಕೊರ್ನೇಲಿಯನೇ! ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ. ನೀನು ಬಡಜನರಿಗೆ ಕೊಡುವಂಥವುಗಳನ್ನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.


ಧೂಪದ ಹೊಗೆಯು ದೇವದೂತನ ಕೈಯಿಂದ ದೇವಜನರ ಪ್ರಾರ್ಥನೆಗಳೊಂದಿಗೆ ದೇವರ ಬಳಿಗೆ ಏರಿಹೋಯಿತು.


ನನ್ನ ಪ್ರಾರ್ಥನೆಯು ನಿನಗೆ ಧೂಪದಂತೆಯೂ ಸಾಯಂಕಾಲದ ಯಜ್ಞದಂತೆಯೂ ಸಮರ್ಪಕವಾಗಲಿ.


ಎಪಫ್ರೊದೀತನು ನಿಮ್ಮ ಕೊಡುಗೆಯನ್ನು ತಂದು ಕೊಟ್ಟಿದ್ದರಿಂದ ಬೇಕಾದದ್ದೆಲ್ಲ ನನ್ನಲ್ಲಿ ಹೇರಳವಾಗಿದೆ. ನಿಮ್ಮ ಕೊಡುಗೆಯು ದೇವರಿಗೆ ಅರ್ಪಿಸಲ್ಪಟ್ಟ ಪರಿಮಳಭರಿತವಾದ ಯಜ್ಞವಾಗಿದೆ. ಇದು ದೇವರಿಗೆ ಮೆಚ್ಚಿಕೆಯಾದದ್ದೂ ಆಗಿದೆ.


ಇದಲ್ಲದೆ ಪರೋಪಕಾರವನ್ನೂ ದಾನಧರ್ಮವನ್ನೂ ಮರೆಯದಿರಿ. ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


ದೇವದೂತನ ಮಾತನ್ನು ಕೇಳಿ ಬಹು ಗಲಿಬಿಲಿಗೊಂಡ ಮರಿಯಳು, “ಇದರ ಅರ್ಥವೇನಿರಬಹುದು?” ಎಂದು ಆಶ್ಚರ್ಯಪಟ್ಟಳು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಪ್ರಪಂಚದಾದ್ಯಂತ ಎಲ್ಲೆಲ್ಲಿ ಸುವಾರ್ತೆಯನ್ನು ತಿಳಿಸಲಾಗುವುದೋ ಅಲ್ಲೆಲ್ಲಾ ಈ ಕಾರ್ಯವನ್ನು ಈಕೆಯ ನೆನಪಿಗಾಗಿ ತಿಳಿಸಲಾಗುವುದು” ಎಂದು ಹೇಳಿದನು.


ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು ನನಗೆ, “ದಾನಿಯೇಲನೇ, ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ನಾನು ನಿನಗೆ ಈ ಮುಂದೆ ಹೇಳುವ ಮಾತುಗಳ ಬಗ್ಗೆ ಚೆನ್ನಾಗಿ ವಿಚಾರಮಾಡು. ಎದ್ದುನಿಲ್ಲು, ನನ್ನನ್ನು ನಿನ್ನ ಬಳಿಗೆ ಕಳುಹಿಸಲಾಗಿದೆ” ಎಂದು ಹೇಳಿದನು. ಆಗ ನಾನು ಎದ್ದುನಿಂತೆ. ನಾನು ಭಯದಿಂದ ಇನ್ನೂ ನಡುಗುತ್ತಿದ್ದೆ.


ಆದರೆ ನೀನು ನನ್ನನ್ನು ಜ್ಞಾಪಿಸಿಕೊಳ್ಳಬೇಕು. ನಾವು ಒಟ್ಟಾಗಿ ಸೇರಿ ಯಾವದು ಸರಿ ಎಂದು ನಿರ್ಧರಿಸಬೇಕು. ನೀನು ಮಾಡಿದ್ದು ಸರಿಯಾಗಿದ್ದರೆ ರುಜುವಾತು ಮಾಡಬೇಕು.


ಆ ಸಮಯದಲ್ಲಿ ಹಿಜ್ಕೀಯನು ಮರಣಕರವಾದ ರೋಗದಿಂದ ನರಳುತ್ತಾ ಇದ್ದದರಿಂದ ಯೆಹೋವನಿಗೆ ಪ್ರಾರ್ಥಿಸಿದನು. ಯೆಹೋವನು ಹಿಜ್ಕೀಯನೊಂದಿಗೆ ಮಾತನಾಡಿ ಅವನಿಗೊಂದು ಗುರುತನ್ನು ಕೊಟ್ಟನು.


ಪರಲೋಕದಲ್ಲಿ ವಾಸಿಸುವ ನೀನು ಆ ಪರದೇಶಿಯ ಪ್ರಾರ್ಥನೆಯನ್ನು ಕೇಳಿ ಉತ್ತರಿಸು. ಆಗ ಇಸ್ರೇಲ್ ಜನರಂತೆ ಈ ಲೋಕದಲ್ಲಿರುವ ಜನರೆಲ್ಲಾ ನಿನ್ನ ವಿಷಯ ಕೇಳಿ ನಿನ್ನನ್ನು ಗೌರವಿಸುವರು. ನಾನು ಕಟ್ಟಿದ ಈ ದೇವಾಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂಬದು ಆಗ ಅವರಿಗೆ ಗೊತ್ತಾಗುವುದು.


ಯೆಹೋವನು ಅಲ್ಲಿ ಪ್ರತ್ಯಕ್ಷನಾಗಿ ನಿಂತು ಮೊದಲು ಕರೆದಂತೆಯೇ “ಸಮುವೇಲನೇ, ಸಮುವೇಲನೇ” ಎಂದು ಕರೆದನು. ಸಮುವೇಲನು, “ಅಪ್ಪಣೆಯಾಗಲಿ, ನಾನು ನಿನ್ನ ಸೇವಕ, ಕೇಳಿಸಿಕೊಳ್ಳುತ್ತಿದ್ದೇನೆ” ಎಂದನು.


“ನಾನು, ‘ಪ್ರಭುವೇ, ನಾನೇನು ಮಾಡಲಿ’ ಎಂದೆನು. ಪ್ರಭುವು ‘ಎದ್ದು ದಮಸ್ಕದೊಳಗೆ ಹೋಗು. ನಾನು ನಿನಗೆ ನೇಮಿಸಿರುವ ಕೆಲಸಗಳನ್ನೆಲ್ಲಾ ಅಲ್ಲಿ ನಿನಗೆ ತಿಳಿಸಲಾಗುವುದು’ ಎಂದು ಉತ್ತರಕೊಟ್ಟನು.


ಆ ಸ್ತ್ರೀಯರು ಬಹಳವಾಗಿ ಹೆದರಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬಗ್ಗಿಸಿಕೊಂಡು ನಿಂತರು. ಆ ಮನುಷ್ಯರು, “ಬದುಕಿರುವ ವ್ಯಕ್ತಿಯನ್ನು ಇಲ್ಲಿ ಹುಡುಕುವುದೇಕೆ? ಇದು ಸತ್ತ ಜನರನ್ನು ಇಡುವ ಸ್ಥಳ!


ನಾನು ಗುಪ್ತವಾಗಿ ಮಾತನಾಡದೆ ಬಹಿರಂಗವಾಗಿಯೇ ಮಾತನಾಡಿದ್ದೇನೆ. ಈ ಭೂಮಿಯ ಕತ್ತಲೆಯ ಸ್ಥಳದಲ್ಲಿ ನನ್ನ ಮಾತುಗಳನ್ನು ಅಡಗಿಸಿಡಲಿಲ್ಲ. ನನ್ನನ್ನು ಕಂಡುಹಿಡಿಯಲು ಗುಪ್ತಸ್ಥಳದಲ್ಲಿ ಹುಡುಕಿರಿ ಎಂದು ನಾನು ಯಾಕೋಬನ ಜನರಿಗೆ ಹೇಳಲಿಲ್ಲ. ನಾನೇ ಯೆಹೋವನು. ನಾನು ಸತ್ಯವನ್ನೇ ಆಡುವೆನು.


ಬಳಿಕ ಅವನು ಅದನ್ನು ಯಾಜಕರಾದ ಆರೋನನ ಪುತ್ರರ ಬಳಿಗೆ ತರಬೇಕು. ಯಾಜಕನು ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ ಧೂಪವೆಲ್ಲವನ್ನೂ ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ವೇದಿಕೆಯ ಮೇಲೆ ಅದನ್ನು ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಮಾಡಿದ ಸಮರ್ಪಣೆಯಾಗಿದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ನೀನು ಅರ್ಪಿಸಿದ ಕಾಣಿಕೆಗಳನ್ನೆಲ್ಲ ಆತನು ಜ್ಞಾಪಿಸಿಕೊಳ್ಳಲಿ. ನಿನ್ನ ಯಜ್ಞಗಳನ್ನೆಲ್ಲ ಆತನು ಸ್ವೀಕರಿಸಿಕೊಳ್ಳಲಿ.


ಪೇತ್ರ ಮತ್ತು ಯೋಹಾನ ಆ ಕುಂಟನಿಗೆ, “ನಮ್ಮನ್ನು ನೋಡು!” ಎಂದರು.


ಈ ಮನುಷ್ಯನು ತಾನು ಕುಳಿತಲ್ಲೇ ಪೌಲನ ಮಾತನ್ನು ಆಲಿಸುತ್ತಿದ್ದನು. ಪೌಲನು ಅವನನ್ನು ದೃಷ್ಟಿಸಿ ನೋಡಿದನು. ದೇವರು ಗುಣಪಡಿಸಬಲ್ಲನೆಂಬ ನಂಬಿಕೆ ಅವನಲ್ಲಿರುವುದನ್ನು ಪೌಲನು ಕಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು