Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:9 - ಪರಿಶುದ್ದ ಬೈಬಲ್‌

9 ಮರುದಿನ ಈ ಜನರು ಜೊಪ್ಪಕ್ಕೆ ಸಮೀಪಿಸಿದಾಗ ಮಧ್ಯಾಹ್ನದ ಸಮಯವಾಗಿತ್ತು. ಆ ಸಮಯದಲ್ಲಿ ಪೇತ್ರನು ಪ್ರಾರ್ಥಿಸುವುದಕ್ಕಾಗಿ ಮಾಳಿಗೆಯ ಮೇಲೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮರುದಿನ ಅವರು ಪ್ರಯಾಣಮಾಡಿ ಆ ಪಟ್ಟಣದ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಗೆ ಪ್ರಾರ್ಥನೆಮಾಡುವುದಕ್ಕಾಗಿ ಮಹಡಿಯನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮಾರನೆಯ ದಿನ ಅವರು ಪ್ರಯಾಣ ಮಾಡಿ ಜೊಪ್ಪವನ್ನು ಸಮೀಪಿಸಿದಾಗ ಮಧ್ಯಾಹ್ನ ಸಮಯ. ಆಗತಾನೇ ಪೇತ್ರನು ಪ್ರಾರ್ಥನೆ ಮಾಡಲು ಮಾಳಿಗೆಯ ಮೇಲಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನದಲ್ಲಿ ಪ್ರಾರ್ಥನೆ ಮಾಡುವದಕ್ಕಾಗಿ ಮಾಳಿಗೆಯನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಮಾರನೆಯ ದಿನ ಅವರು ಪ್ರಯಾಣಮಾಡಿ ಮಧ್ಯಾಹ್ನದ ಸಮಯ ಯೊಪ್ಪ ಪಟ್ಟಣವನ್ನು ಸಮೀಪಿಸುತ್ತಿದ್ದಾಗ, ಆಗತಾನೇ ಪೇತ್ರನು ಪ್ರಾರ್ಥಿಸಲು ಮಾಳಿಗೆಯ ಮೇಲಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ದುಸ್ರ್ಯಾ ದಿಸಿ ಹಿ ಲೊಕಾ ಜೊಪ್ಪಾ ಮನ್ತಲ್ಯಾ ಗಾಂವಾಕ್ ಜಗ್ಗೊಳ್ ಯೆಲ್ಲ್ಯಾ ದೊಪಾರ್ಚೊ ಎಳ್ ಹೊಲ್ಲೊ ತ್ಯಾ ವೆಳಾರ್ ಪೆದ್ರು ಮಾಗ್ನಿ ಕರುಕ್ ಸಾಟ್ನಿ ಘರಾಚ್ಯಾ ಮಾಳ್ಗಿ ವರ್‍ತಿ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:9
19 ತಿಳಿವುಗಳ ಹೋಲಿಕೆ  

ತಮ್ಮ ಮಾಳಿಗೆಯ ಮೇಲೆ ಹತ್ತಿ ನಕ್ಷತ್ರಗಳನ್ನು ಆರಾಧಿಸುತ್ತಾರೋ ನಾನು ಅವರನ್ನು ನಿರ್ಮೂಲ ಮಾಡುತ್ತೇನೆ. ಜನರು ತಮ್ಮ ಸುಳ್ಳು ಪುರೋಹಿತರನ್ನು ಮರೆತುಬಿಡುವರು. ಕೆಲವರು ತಮ್ಮನ್ನು ನನ್ನ ಆರಾಧಕರೆಂದು ಹೇಳಿಕೊಳ್ಳುವರು. ಆದರೆ ಈಗ ಅವರು ಸುಳ್ಳು ದೇವರಾದ ಮಲ್ಕಾಮನನ್ನು ಆರಾಧಿಸುತ್ತಾರೆ. ಅಂಥವರನ್ನು ಅವರ ಸ್ಥಳಗಳಿಂದ ತೆಗೆದುಹಾಕುವೆನು.


ನಾನು ದೇವರೊಂದಿಗೆ ಸಾಯಂಕಾಲದಲ್ಲಿಯೂ ಮುಂಜಾನೆಯಲ್ಲಿಯೂ ಮಧ್ಯಾಹ್ನದಲ್ಲಿಯೂ ಮಾತಾಡುವೆನು. ನನಗಾಗಿರುವ ದುಃಖವನ್ನು ಆತನಿಗೆ ಹೇಳಿಕೊಳ್ಳುವೆನು. ಆತನು ನನಗೆ ಕಿವಿಗೊಡುವನು!


ಆಗ ನಾವು ನಮ್ಮ ಸಮಯವನ್ನೆಲ್ಲಾ ಪ್ರಾರ್ಥನೆಗೂ ದೇವರ ವಾಕ್ಯೋಪದೇಶಕ್ಕೂ ಕೊಡಲು ಸಾಧ್ಯವಾಗುತ್ತದೆ” ಎಂದು ಹೇಳಿದರು.


ಯೇಸು ಜನರನ್ನು ಬೀಳ್ಕೊಟ್ಟ ಮೇಲೆ ಪ್ರಾರ್ಥಿಸುವುದಕ್ಕಾಗಿ ಬೆಟ್ಟದ ಮೇಲಕ್ಕೆ ಹೋದನು.


ಮರುದಿನ ಮುಂಜಾನೆ, ಇನ್ನೂ ಕತ್ತಲೆ ಇರುವಾಗಲೇ ಯೇಸು ಎದ್ದು ಪ್ರಾರ್ಥಿಸುವುದಕ್ಕಾಗಿ ಏಕಾಂತವಾದ ಸ್ಥಳಕ್ಕೆ ಹೋದನು.


ಅಂದು ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಮೂರು ಗಂಟೆಯವರೆಗೆ ದೇಶದಲ್ಲೆಲ್ಲಾ ಕತ್ತಲೆ ಕವಿಯಿತು.


ಮಾಳಿಗೆಯ ಮೇಲಿರುವವನು ಇಳಿದು ತನ್ನ ವಸ್ತುಗಳನ್ನು ಮನೆಯಿಂದ ತೆಗೆದುಕೊಳ್ಳದೆ ಓಡಿಹೋಗಲಿ.


ಆ ಕೂಲಿಯಾಳುಗಳು ಕೆಲಸ ಮಾಡಲು ಅವನ ತೋಟಕ್ಕೆ ಹೋದರು. “ಆ ಯಜಮಾನನು ಅದೇ ರೀತಿ ಸುಮಾರು ಹನ್ನೆರಡು ಗಂಟೆಗೊಮ್ಮೆ ಮತ್ತೆ ಮೂರು ಗಂಟೆಗೊಮ್ಮೆ ಪೇಟೆಗೆ ಹೋದನು. ಆ ಎರಡು ಸಲವೂ ತನ್ನ ಹೊಲದಲ್ಲಿ ಕೆಲಸ ಮಾಡಲು ಬೇರೆ ಕೆಲವು ಕೂಲಿಯವರನ್ನು ಅವನು ಗೊತ್ತುಮಾಡಿದನು.


ನೀವು ಪ್ರಾರ್ಥನೆ ಮಾಡಬೇಕಾದರೆ, ನಿಮ್ಮ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ನಿಮಗೆ ಕಾಣದಿರುವ ನಿಮ್ಮ ತಂದೆಗೆ ಪ್ರಾರ್ಥಿಸಿ. ರಹಸ್ಯದಲ್ಲಿ ನಡೆಯುವ ಕಾರ್ಯಗಳನ್ನು ನೋಡಬಲ್ಲ ನಿಮ್ಮ ತಂದೆಯು ನಿಮಗೆ ಪ್ರತಿಫಲವನ್ನು ಕೊಡುವನು.


ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.


ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು.


‘ಜೆರುಸಲೇಮಿನ ಮನೆಗಳು ಈ ತೋಫೆತಿನಷ್ಟೆ “ಹೊಲಸಾಗುವವು.” ಯೆಹೂದದ ರಾಜರ ಅರಮನೆಗಳು ಈ ತೋಫೆತಿನಂತೆ ಹಾಳಾಗುವವು. ಏಕೆಂದರೆ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರುಗಳನ್ನು ಪೂಜಿಸಿದರು. ಅವರು ನಕ್ಷತ್ರಗಳನ್ನು ಪೂಜಿಸಿ ಅವುಗಳ ಗೌರವಾರ್ಥವಾಗಿ ಧೂಪಹಾಕಿದರು. ಅವರು ಸುಳ್ಳುದೇವರುಗಳಿಗೆ ಪಾನನೈವೇದ್ಯಗಳನ್ನು ಅರ್ಪಿಸಿದರು.’”


ಅವರು ಊಟಮಾಡಿದ ನಂತರ, ಆರಾಧನಾ ಸ್ಥಳದಿಂದ ಇಳಿದುಬಂದು, ಪಟ್ಟಣಕ್ಕೆ ಹಿಂದಿರುಗಿದರು. ಸಮುವೇಲನು ಮಲಗಲು ಸೌಲನಿಗಾಗಿ ಮಾಳಿಗೆಯ ಮೇಲೆ ಹಾಸಿಗೆಯನ್ನು ಸಿದ್ಧಪಡಿಸಿದನು. ಸೌಲನು ಅಲ್ಲಿ ಮಲಗಿಕೊಂಡನು.


ಎಲ್ಲಾ ಸ್ಥಳಗಳಲ್ಲಿ ಪುರುಷರು ಪ್ರಾರ್ಥನೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ತಮ್ಮ ಕೈಗಳನ್ನು ಮೇಲೆತ್ತಿ ಪ್ರಾರ್ಥಿಸುವ ಅವರು ಪರಿಶುದ್ಧರಾಗಿರಬೇಕು. ಅವರು ವಾಗ್ವಾದ ಮಾಡುವವರೂ ಕೋಪಗೊಳ್ಳುವವರೂ ಆಗಿರಬಾರದು.


ನೀವು ಪವಿತ್ರಾತ್ಮನ ಸಹಾಯದಿಂದ ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಾ ಸಕಲವಿಧವಾದ ವಿಜ್ಞಾಪನೆಗಳನ್ನು ಮಾಡಿರಿ ಮತ್ತು ನಿಮಗೆ ಅಗತ್ಯವಾದವುಗಳಿಗಾಗಿ ಬೇಡಿಕೊಳ್ಳಿರಿ. ಇದಕ್ಕಾಗಿ ಯಾವಾಗಲೂ ಸಿದ್ಧರಾಗಿರಿ. ಪ್ರಾರ್ಥನೆಯನ್ನು ಬಿಟ್ಟುಕೊಡಬೇಡಿರಿ. ದೇವಜನರೆಲ್ಲರಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ.


ಅವನು ಸಾಯಂಕಾಲ ತನ್ನ ಹಾಸಿಗೆಯಿಂದ ಮೇಲೆದ್ದು ಅರಮನೆಯ ಮಾಳಿಗೆಯ ಮೇಲಕ್ಕೆ ಹೋಗಿ ತಿರುಗಾಡುತ್ತಿದ್ದನು. ದಾವೀದನು ಮಾಳಿಗೆಯ ಮೇಲಿರುವಾಗ, ಒಬ್ಬ ಹೆಂಗಸು ಸ್ನಾನ ಮಾಡುತ್ತಿರುವುದನ್ನು ನೋಡಿದನು. ಅವಳು ಅತ್ಯಂತ ಸುಂದರಳಾಗಿದ್ದಳು.


ಒಂದು ಮಧ್ಯಾಹ್ನ ಸುಮಾರು ಮೂರು ಗಂಟೆಯಲ್ಲಿ ಕೊರ್ನೇಲಿಯನಿಗೆ ಒಂದು ದರ್ಶನವಾಯಿತು. ಅವನು ಅದನ್ನು ಸ್ಪಷ್ಟವಾಗಿ ಕಂಡನು. ಆ ದರ್ಶನದಲ್ಲಿ ದೇವದೂತನೊಬ್ಬನು ಅವನ ಬಳಿಗೆ ಬಂದು, “ಕೊರ್ನೇಲಿಯನೇ” ಎಂದು ಕರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು