Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:12 - ಪರಿಶುದ್ದ ಬೈಬಲ್‌

12 ಸಂದೇಹಪಡದೆ ಅವರೊಂದಿಗೆ ಹೋಗಬೇಕೆಂದು ಪವಿತ್ರಾತ್ಮನು ನನಗೆ ಹೇಳಿದನು. ಇಲ್ಲಿರುವ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು. ನಾವು ಕೊರ್ನೇಲಿಯನ ಮನೆಗೆ ಹೋದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇವರಾತ್ಮನು, ನನಗೆ ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾನು ಸಂಕೋಚಪಡದೆ ಅವರೊಡನೆ ಹೋಗಬೇಕೆಂದು ಪವಿತ್ರಾತ್ಮ ತಿಳಿಸಿದರು. ಜೊಪ್ಪದ ಈ ಆರುಮಂದಿ ಭಕ್ತರೂ ನನ್ನೊಡನೆ ಸೆಜರೇಯಕ್ಕೆ ಬಂದರು. ನಾವೆಲ್ಲರೂ ಕೊರ್ನೇಲಿಯನ ಮನೆಯನ್ನು ಪ್ರವೇಶಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದೇವರಾತ್ಮನು - ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ನನಗೆ ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏನೂ ಸಂಶಯಪಡದೇ ಅವರ ಜೊತೆಯಲ್ಲಿ ಹೋಗಬೇಕೆಂದು ಪವಿತ್ರಾತ್ಮ ದೇವರು ನನಗೆ ಅಪ್ಪಣೆಕೊಟ್ಟರು. ಇದಲ್ಲದೆ ಈ ಆರು ಜನ ಸಹೋದರರೂ ನನ್ನೊಂದಿಗೆ ಹೊರಟರು. ನಾವು ಆ ಮನುಷ್ಯನ ಮನೆಯೊಳಗೆ ಪ್ರವೇಶಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅನ್ಮಾನ್ ಕರಿನಸ್ತಾನಾ ತೆಂಚ್ಯಾ ವಾಂಗ್ಡಾ ಜಾವ್ಚೆ ಮನುನ್ ಪವಿತ್ರ್ ಆತ್ಮ್ಯಾನ್ ಮಾಕಾ ಸಾಂಗ್ಲ್ಯಾನ್, ಹಿತ್ತೆ ಹೊತ್ತಿ ಹಿ ಸಾ ಲೊಕಾ ಭಾವಾಬಿ ಮಾಜ್ಯಾ ವಾಗ್ಡಾ ಸೆಜರಿಯಾಕ್ ಯೆಲಿ ಮಾನಾ ಅಮಿ ಕೊರ್ನೆಲಾಚ್ಯಾ ಘರಾಕ್ ಗೆಲ್ಲ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:12
17 ತಿಳಿವುಗಳ ಹೋಲಿಕೆ  

ಪವಿತ್ರಾತ್ಮನು ಫಿಲಿಪ್ಪನಿಗೆ, “ರಥದ ಬಳಿಗೆ ಹೋಗಿ ಅದರ ಸಮೀಪದಲ್ಲಿ ನಿಂತುಕೊ” ಎಂದು ಹೇಳಿದನು.


ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.


ಪ್ರಭುವಿನ ದಿನವು ಈಗಾಗಲೇ ಬಂದುಬಿಟ್ಟಿತು ಎಂದು ಯಾರಾದರು ನಿಮಗೆ ಹೇಳಿದರೆ ಆ ಕೂಡಲೇ ಕಳವಳಗೊಳ್ಳಬೇಡಿ ಅಥವಾ ಭಯಪಡಬೇಡಿ. ಯಾವನಾದರೂ ತನ್ನ ಪ್ರವಾದನೆಯಲ್ಲಾಗಲಿ ಉಪದೇಶದಲ್ಲಾಗಲಿ ಹಾಗೆ ಹೇಳುವ ಸಾಧ್ಯತೆ ಇದೆ. ಯಾವನಾದರೂ ಸುಳ್ಳುಪತ್ರವನ್ನೇ ನಮ್ಮ ಹೆಸರಿನಲ್ಲಿ ತಾನೇ ಬರೆದು ನಿಮ್ಮ ಮುಂದೆ ಓದಿ ತಿಳಿಸುವ ಸಾಧ್ಯತೆಯೂ ಇದೆ.


ಪೇತ್ರನು ಅವರನ್ನು ಒಳಗೆ ಕರೆದು, ಆ ರಾತ್ರಿ ಅಲ್ಲೇ ಇರಬೇಕೆಂದು ಕೇಳಿಕೊಂಡನು. ಮರುದಿನ ಪೇತ್ರನು ಸಿದ್ಧನಾಗಿ, ಆ ಮೂವರೊಂದಿಗೆ ಹೊರಟನು. ಜೊಪ್ಪದ ವಿಶ್ವಾಸಿಗಳಲ್ಲಿ ಕೆಲವರು ಅವನೊಂದಿಗೆ ಹೋದರು.


ದೇವರ ದೃಷ್ಟಿಯಲ್ಲಿ ಅವರಿಗೂ ನಮಗೂ ಯಾವ ವ್ಯತ್ಯಾಸವಿಲ್ಲ. ಅವರು ನಂಬಿಕೊಂಡಾಗ, ದೇವರು ಅವರ ಹೃದಯಗಳನ್ನು ಶುದ್ಧೀಕರಿಸಿದನು.


ಪೇತ್ರನೊಂದಿಗೆ ಬಂದಿದ್ದ ಯೆಹೂದ್ಯ ವಿಶ್ವಾಸಿಗಳು ವಿಸ್ಮಿತರಾದರು. ಯೆಹೂದ್ಯರಲ್ಲದ ಜನರಿಗೂ ಸಹ ಪವಿತ್ರಾತ್ಮಧಾರೆಯಾದದ್ದನ್ನು ಕಂಡು ಅವರು ಆಶ್ಚರ್ಯಪಟ್ಟರು.


ಆದರೆ ಸತ್ಯದ ಆತ್ಮನು ಬಂದಾಗ, ಆತನು ನಿಮ್ಮನ್ನು ಸಕಲ ವಿಷಯದಲ್ಲಿಯೂ ಸತ್ಯಕ್ಕೆ ನಡೆಸುವನು. ಸತ್ಯದ ಆತ್ಮನು ಹೇಳುವುದು ಆತನ ಸ್ವಂತ ಮಾತುಗಳಲ್ಲ. ತಾನು ಕೇಳಿದ್ದನ್ನು ಮಾತ್ರ ಆತನು ಹೇಳುತ್ತಾನೆ. ಸಂಭವಿಸಲಿರುವ ಸಂಗತಿಗಳನ್ನು ಆತನು ನಿಮಗೆ ತಿಳಿಸುತ್ತಾನೆ.


ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ.


ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.


ದೀರ್ಘಚರ್ಚೆಯಾಯಿತು. ಬಳಿಕ ಪೇತ್ರ ಎದ್ದುನಿಂತು ಅವರಿಗೆ, “ನನ್ನ ಸಹೋದರರೇ, ನಿಮಗೇ ತಿಳಿದಿರುವಂತೆ, ಯೆಹೂದ್ಯರಲ್ಲದ ಜನರಿಗೆ ಸುವಾರ್ತೆಯನ್ನು ಬೋಧಿಸುವುದಕ್ಕಾಗಿ ನಿಮ್ಮ ಮಧ್ಯದೊಳಗಿಂದ ದೇವರು ನನ್ನನ್ನು ಬಹುದಿನಗಳ ಹಿಂದೆ ಆರಿಸಿಕೊಂಡನು. ಅವರು ನನ್ನಿಂದ ಸುವಾರ್ತೆಯನ್ನು ಕೇಳಿ ನಂಬಿಕೊಂಡರು.


ಬಾರ್ನಬ ಮತ್ತು ಸೌಲರನ್ನು ಪವಿತ್ರಾತ್ಮನೇ ಕಳುಹಿಸಿಕೊಟ್ಟನು. ಅವರು ಸೆಲೂಸಿಯಾ ಪಟ್ಟಣಕ್ಕೆ ಹೋದರು. ಬಳಿಕ ಅವರು ಸೆಲೂಸಿಯಾದಿಂದ ಸೈಪ್ರಸ್ ದ್ವೀಪಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿದರು.


ಇವರೆಲ್ಲರು ಪ್ರಭುವಿನ ಸೇವೆ ಮಾಡುತ್ತಿದ್ದರು ಮತ್ತು ಉಪವಾಸ ಮಾಡುತ್ತಿದ್ದರು. ಪವಿತ್ರಾತ್ಮನು ಅವರಿಗೆ, “ನಾನು ವಿಶೇಷವಾದ ಕಾರ್ಯಕ್ಕಾಗಿ ಬಾರ್ನಬ ಮತ್ತು ಸೌಲರನ್ನು ಆರಿಸಿಕೊಂಡಿದ್ದೇನೆ. ಆ ಕಾರ್ಯಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ” ಎಂದು ಹೇಳಿದನು.


ಕೆಲವು ದಿನಗಳಾದ ಮೇಲೆ ವಿಶ್ವಾಸಿಗಳು ಸಭೆ ಸೇರಿದ್ದರು. (ಅಲ್ಲಿ ಸುಮಾರು ನೂರಿಪ್ಪತ್ತು ಮಂದಿ ಇದ್ದರು.) ಪೇತ್ರನು ಎದ್ದುನಿಂತುಕೊಂಡು ಹೀಗೆಂದನು:


ತನ್ನ ಮನೆಯಲ್ಲಿ ದೇವದೂತನೊಬ್ಬನು ನಿಂತಿರುವುದನ್ನು ತಾನು ಕಂಡದ್ದರ ಬಗ್ಗೆ ಕೊರ್ನೇಲಿಯನು ನನಗೆ ಹೇಳಿದನು. ಆ ದೇವದೂತನು ಕೊರ್ನೇಲಿಯನಿಗೆ, ‘ಕೆಲವು ಜನರನ್ನು ಜೊಪ್ಪಕ್ಕೆ ಕಳುಹಿಸು. ಸೀಮೋನ್ ಪೇತ್ರನನ್ನು ಆಹ್ವಾನಿಸಿ ನಿಮ್ಮ ಬಳಿಗೆ ಬರಮಾಡಿಕೊ.


ನಾವು ಇಲ್ಲಿರುವುದು ರೋಮಿನಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. ಅವರು ನಮ್ಮನ್ನು ಭೇಟಿಯಾಗುವುದಕ್ಕಾಗಿ “ಅಪ್ಪಿಯ” ಮಾರುಕಟ್ಟೆಗೂ ಮತ್ತು “ತ್ರಿಛತ್ರ” ಎಂಬ ಸ್ಥಳಕ್ಕೂ ಬಂದರು. ಈ ವಿಶ್ವಾಸಿಗಳನ್ನು ಕಂಡಾಗ ಪೌಲನು ಧೈರ್ಯಗೊಂಡು ದೇವರಿಗೆ ಸ್ತೋತ್ರ ಸಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು