Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:29 - ಪರಿಶುದ್ದ ಬೈಬಲ್‌

29 ಜುದೇಯದಲ್ಲಿರುವ ಸಹೋದರ ಸಹೋದರಿಯರಿಗೆ ಸಹಾಯಮಾಡಲು ವಿಶ್ವಾಸಿಗಳು ನಿರ್ಧರಿಸಿದರು. ವಿಶ್ವಾಸಿಗಳಲ್ಲಿ ಪ್ರತಿಯೊಬ್ಬರೂ ತಮ್ಮಿಂದಾದಷ್ಟನ್ನು ಅವರಿಗೆ ಕಳುಹಿಸಿಕೊಡಲು ಯೋಜನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಗ ಭಕ್ತರಲ್ಲಿ ಪ್ರತಿಯೊಬ್ಬರು ತಮ್ಮ ಶಕ್ತಿಗನುಸಾರ ಜುದೇಯದಲ್ಲಿ ವಾಸಿಸುತ್ತಿದ್ದ ಭಕ್ತಾದಿಗಳಿಗೆ ನೆರವು ನೀಡಲು ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರು ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮ ತಮ್ಮ ಶಕ್ತ್ಯನುಸಾರ ದ್ರವ್ಯ ಸಹಾಯಮಾಡಬೇಕೆಂದು ನಿಶ್ಚಯಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೂದಾಯದಲ್ಲಿ ವಾಸಿಸುತ್ತಿದ್ದ ಸಹೋದರರಿಗೆ ಸಹಾಯ ಒದಗಿಸಲು ಅನುಕೂಲಸ್ಥರಾದ ಶಿಷ್ಯರು ತಮ್ಮ ಶಕ್ತ್ಯಾನುಸಾರ ಕೊಡಲು ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಜುದೆಯ್ ಗಾಂವಾತ್ಲ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ಮಜ್ಜತ್ ಕರುಚೆ ಮನುನ್ ದೆವಾಚ್ಯಾ ಲೊಕಾನಿ ಚಿಂತುನ್ ದೆವಾಚ್ಯಾ ಲೊಕಾತ್ನಿ ಹರ್ ಎಕ್ಲ್ಯಾನ್‍ಬಿ ಅಪ್ನಾಕ್ಡೆ ಕೌವ್ಡೆ ಹೊತಾ ತವ್ಡೆ ತೆಂಕಾ ಧಾಡುನ್ ದಿವ್ಕ್ ಯೆವ್ಜನ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:29
27 ತಿಳಿವುಗಳ ಹೋಲಿಕೆ  

ಬಡಜನರನ್ನು ಜ್ಞಾಪಕದಲ್ಲಿಟ್ಟುಕೊಂಡು ಅವರಿಗೆ ಸಹಾಯಮಾಡಬೇಕೆಂಬ ಒಂದೇ ಒಂದು ಸಂಗತಿಯನ್ನು ಅವರು ನಮಗೆ ತಿಳಿಸಿದರು. ನಾನೂ ಈ ಕಾರ್ಯವನ್ನು ಮಾಡಬೇಕೆಂದುಕೊಂಡಿದ್ದೆನು.


ಪ್ರೀತಿಯು ನಾಚಿಕೆಕರವಾದ ರೀತಿಯಲ್ಲಿ ವರ್ತಿಸುವುದಿಲ್ಲ; ಸ್ವಾರ್ಥಿಯಲ್ಲ ಮತ್ತು ಬೇಗನೆ ಕೋಪಗೊಳ್ಳುವುದಿಲ್ಲ; ತನಗಾದ ಅಪಕಾರಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


ಬಾರ್ನಬನು ಅಲ್ಲಿ ಸೌಲನನ್ನು ಕಂಡುಕೊಂಡು ಅವನನ್ನು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಸೌಲನು ಮತ್ತು ಬಾರ್ನಬನು ಅಂತಿಯೋಕ್ಯದಲ್ಲಿ ಒಂದು ವರ್ಷ ಪೂರ್ತಿ ಸಭೆಯ ಅನ್ಯೋನ್ಯತೆಯಲ್ಲಿ ಇದ್ದುಕೊಂಡು ಅನೇಕ ಜನರಿಗೆ ಬೋಧಿಸಿದರು. ಯೇಸುವಿನ ಹಿಂಬಾಲಕರಿಗೆ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲೇ.


ಯೆಹೂದ್ಯರಲ್ಲದವರು ಸಹ ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅಪೊಸ್ತಲರಿಗೂ ಜುದೇಯದ ಸಹೋದರರಿಗೂ ತಿಳಿಯಿತು.


ಅವರೆಲ್ಲರ ಅವಶ್ಯಕತೆಗಳನ್ನು ಪೂರೈಸಲಾಗುತ್ತಿತ್ತು. ಜಮೀನುಗಳನ್ನು ಮತ್ತು ಮನೆಗಳನ್ನು ಹೊಂದಿದ್ದ ಪ್ರತಿಯೊಬ್ಬರು ಅವುಗಳನ್ನು ಮಾರಿ,


“ನಮ್ಮ ಯೆಹೂದಿ ಜನರನ್ನು ಪರದೇಶಗಳಲ್ಲಿ ಗುಲಾಮರನ್ನಾಗಿ ಮಾರಿದ್ದರು. ಅಂಥವರನ್ನು ನಾವು ಕ್ರಯಕೊಟ್ಟು ಕೊಂಡುಕೊಂಡು ಅವರನ್ನು ಗುಲಾಮತನದಿಂದ ಬಿಡುಗಡೆ ಮಾಡಿಸಿದೆವು. ಆದರೆ ನೀವು ಈಗ ಮತ್ತೆ ಗುಲಾಮರನ್ನಾಗಿ ಮಾಡುತ್ತಿದ್ದೀರಿ” ಎಂದೆನು. ಸೇರಿಬಂದಿದ್ದ ಶ್ರೀಮಂತರೂ ಅಧಿಕಾರಿಗಳೂ ಸುಮ್ಮನೆ ಬಾಯಿ ಮುಚ್ಚಿಕೊಂಡರು. ಅವರಿಗೆ ಏನೂ ಹೇಳಲಿಕ್ಕೂ ಆಗಲಿಲ್ಲ.


ದೇವಾಲಯ ಕಟ್ಟಲು ಅವರು ತಮ್ಮಿಂದ ಸಾಧ್ಯವಾದಷ್ಟು ಕಾಣಿಕೆಗಳನ್ನು ಕೊಟ್ಟರು. ಒಟ್ಟು ಐನೂರು ಕಿಲೋಗ್ರಾಂ ಬಂಗಾರ, ಮೂರು ಸಾವಿರ ಕಿಲೋಗ್ರಾಂ ಬೆಳ್ಳಿ, ನೂರು ಯಾಜಕರು ಧರಿಸಬೇಕಾದ ಬಟ್ಟೆಗಳನ್ನು ದಾನ ಮಾಡಿದರು.


ಯೇಸು ಮತ್ತು ಆತನ ಶಿಷ್ಯರನ್ನು ಸಹ ಮದುವೆಗೆ ಆಹ್ವಾನಿಸಲಾಗಿತ್ತು.


ಕೆಲವು ದಿನಗಳಾದ ಮೇಲೆ ವಿಶ್ವಾಸಿಗಳು ಸಭೆ ಸೇರಿದ್ದರು. (ಅಲ್ಲಿ ಸುಮಾರು ನೂರಿಪ್ಪತ್ತು ಮಂದಿ ಇದ್ದರು.) ಪೇತ್ರನು ಎದ್ದುನಿಂತುಕೊಂಡು ಹೀಗೆಂದನು:


ಯೇಸುವಿನ ಶಿಷ್ಯರ ಸಂಖ್ಯೆಯು ಹೆಚ್ಚುಹೆಚ್ಚಾಗುತ್ತಿತ್ತು. ಆದರೆ ಈ ಸಮಯದಲ್ಲಿ ಗ್ರೀಕ್ ಮಾತಾಡುವ ಶಿಷ್ಯರು ಯೆಹೂದ್ಯ ಶಿಷ್ಯರಿಗೆ ದೂರು ಹೇಳಿದರು. ಪ್ರತಿದಿನ ಶಿಷ್ಯರಿಗೆ ಕೊಡುವಂಥವುಗಳಲ್ಲಿ ತಮ್ಮ ವಿಧವೆಯರಿಗೆ ಅವರ ಪಾಲು ದೊರೆಯುತ್ತಿಲ್ಲವೆಂದು ಅವರು ಆಪಾದಿಸಿದರು.


ಬಳಿಕ ಅವನು ಊಟಮಾಡಿ ಚೇತರಿಸಿಕೊಂಡನು. ಸೌಲನು ದಮಸ್ಕದಲ್ಲಿ ಯೇಸುವಿನ ಶಿಷ್ಯರೊಂದಿಗೆ ಕೆಲವು ದಿನಗಳವರೆಗೆ ಇದ್ದನು.


ಒಂದು ರಾತ್ರಿ, ಸೌಲನ ಕೆಲವು ಶಿಷ್ಯರು ಅವನನ್ನು ಪಟ್ಟಣದಿಂದ ಹೊರಗೆ ಕಳುಹಿಸುವುದಕ್ಕಾಗಿ ಅವನನ್ನು ಒಂದು ಬುಟ್ಟಿಯಲ್ಲಿ ಕುಳ್ಳಿರಿಸಿ, ನಗರದ ಕೋಟೆಯ ಸಂದಿನ ಮೂಲಕ ಅವನನ್ನು ಕೆಳಗಿಳಿಸಿದರು.


ಆದರೆ ಯೇಸುವಿನ ಶಿಷ್ಯರು ಸಂತೋಷವಾಗಿದ್ದರು ಮತ್ತು ಪವಿತ್ರಾತ್ಮಭರಿತರಾಗಿದ್ದರು.


ಆದರೆ, ಯೇಸುವಿನ ಶಿಷ್ಯರು ಅವನ ಸುತ್ತಲೂ ನೆರೆದು ಬಂದಾಗ ಅವನು ಎದ್ದು ಪಟ್ಟಣದೊಳಗೆ ಹೋದನು. ಮರುದಿನ ಅವನು ಮತ್ತು ಬಾರ್ನಬನು ದರ್ಬೆಪಟ್ಟಣಕ್ಕೆ ಹೋದರು.


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


“ನಾನು ಅನೇಕ ವರ್ಷಗಳಿಂದ ಜೆರುಸಲೇಮಿನಲ್ಲಿ ಇರಲಿಲ್ಲ. ಬಳಿಕ ನಾನು ನನ್ನ ಜನರಿಗಾಗಿ ಹಣವನ್ನು ತರುವುದಕ್ಕಾಗಿಯೂ ಉಡುಗೊರೆಗಳನ್ನು ಕೊಡುವುದಕ್ಕಾಗಿಯೂ ಜೆರುಸಲೇಮಿಗೆ ಮರಳಿ ಹೋದೆನು.


ಎರಡು ತಲಾಂತು ಹೊಂದಿದ ಸೇವಕನೂ ಅದೇ ರೀತಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಎರಡು ತಲಾಂತು ಸಂಪಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು