Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:10 - ಪರಿಶುದ್ದ ಬೈಬಲ್‌

10 ಪೇತ್ರನು ಮತ್ತು ದೇವದೂತನು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿಹೋದರು. ಬಳಿಕ ಅವರು ತಮ್ಮನ್ನು ಪಟ್ಟಣದತ್ತ ನಡೆಸುವ ಕಬ್ಬಿಣದ ಬಾಗಿಲಿಗೆ ಬಂದರು. ಆ ಬಾಗಿಲು ಅವರಿಗಾಗಿ ತನ್ನಷ್ಟಕ್ಕೆ ತಾನೇ ತೆರೆದುಕೊಂಡಿತು. ಪೇತ್ರ ಮತ್ತು ಆ ದೇವದೂತನು ಬಾಗಿಲ ಮೂಲಕ ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು. ಆಗ ಇದ್ದಕ್ಕಿದ್ದಂತೆ ಆ ದೇವದೂತನು ಅವನನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿದರು. ಪಟ್ಟಣದ ಕಡೆಯಿದ್ದ ಕಬ್ಬಿಣದ ದ್ವಾರದ ಬಳಿ ಬಂದರು. ಆ ದ್ವಾರ ತನ್ನಷ್ಟಕ್ಕೆ ತಾನೇ ತೆರೆಯಿತು. ಅವರು ಹೊರ ನಡೆದರು. ಬೀದಿಯೊಂದರಲ್ಲಿ ಹಾದುಹೋಗುತ್ತಿರಲು ಒಮ್ಮೆಲೆ ದೂತನು ಪೇತ್ರನನ್ನು ಬಿಟ್ಟು ಅದೃಶ್ಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣದೊಳಗೆ ನಡೆಸುವ ಕಬ್ಬಿಣದ ದ್ವಾರಕ್ಕೆ ಅವರು ಬಂದರು. ಅದು ತನ್ನಷ್ಟಕ್ಕೆ ತಾನೇ ತೆರೆಯಲು ಅವರು ಅದನ್ನು ದಾಟಿ ಹೊರಗೆ ಬಂದರು. ಒಂದು ಬೀದಿಯನ್ನು ದಾಟುವವರೆಗೆ ನಡೆದು ಬಂದ ನಂತರ ಫಕ್ಕನೆ ದೇವದೂತನು ಪೇತ್ರನನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ದೆವಾಚೊ ದುತ್ ಅನಿ ಪೆದ್ರುನ್ ಅದ್ದಿಚಿ ಅನಿ ದೊನ್ವೆಚಿ ರಾಕ್ವನ್ ಹೊತ್ತೆ ಜಾಗೆ ದಾಟ್ಲ್ಯಾನಿ, ಮಾನಾ ತೆನಿ ಅಪ್ಲ್ಯಾ ಗಾಂವಾಕ್ಡೆ ಜಾತಲ್ಯಾ ಲೊಂಗ್ಟಾಂಚ್ಯಾ ದಾರಾಕ್ಡೆ ಯೆಲೆ, ತೆ ದಾರ್ ಅಪ್ಲ್ಯಾ ಯೆವ್ಡ್ಯಾಕುಚ್ ಅಪ್ನಿ ಉಗಡ್ಲೆ ಪೆದ್ರು ಅನಿ ದೆವಾಚೊ ದುತ್ ತ್ಯಾ ದಾರಾನಿ ಭಾಯ್ರ್ ಯೆವ್ನ್ ಉಲ್ಲೆ ದುರ್ ಗೆಲ್ಲ್ಯಾ ತನ್ನಾ ದೆವ್ ದುತ್ ಪೆದ್ರುಕ್ ಸೊಡುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:10
11 ತಿಳಿವುಗಳ ಹೋಲಿಕೆ  

ಆದರೆ ರಾತ್ರಿಯಲ್ಲಿ ಪ್ರಭುವಿನ ದೂತನೊಬ್ಬನು ಸೆರೆಮನೆಯ ಬಾಗಿಲುಗಳನ್ನು ತೆರೆದನು. ದೇವದೂತನು ಅಪೊಸ್ತಲರನ್ನು ಕರೆದುಕೊಂಡು ಹೊರಗೆ ಬಂದು ಅವರಿಗೆ,


ಇದ್ದಕ್ಕಿದ್ದಂತೆ ದೊಡ್ಡ ಭೂಕಂಪವಾಯಿತು. ಭೀಕರವಾಗಿದ್ದ ಅದು ಸೆರೆಮನೆಯ ಅಡಿಪಾಯವನ್ನೇ ನಡುಗಿಸಿತು. ಆಗ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದುಕೊಂಡವು. ಎಲ್ಲಾ ಕೈದಿಗಳ ಸರಪಣಿಗಳು ಕಳಚಿಬಿದ್ದವು.


ಅಂದು ಭಾನುವಾರ, ಅದೇ ಸಾಯಂಕಾಲ ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯೆಹೂದ್ಯರಿಗೆ ಹೆದರಿ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.


ಒಂದು ದಿವಸ ಆ ಕಾವಲುಗಾರನು, “ನನ್ನ ಒಡೆಯನೇ, ಪ್ರತಿ ದಿನವೂ ನಾನು ಹಗಲಿರುಳು ಕಾವಲಿನ ಬುರುಜಿನಲ್ಲಿ ನಿಂತುಕೊಂಡು ಕಾವಲು ಕಾಯುತ್ತಿದ್ದೇನೆ;


ಅವನನ್ನು ಶಿಕ್ಷಿಸಬೇಕಾದ ವಿಧಿಯನ್ನು ಅವರು ತಿಳಿಯದೆ ಇದ್ದುದರಿಂದ ಅವನನ್ನು ಕಾವಲಲ್ಲಿಟ್ಟರು.


ಆಮೇಲೆ ಯೋಸೇಫನು ಅವರೆಲ್ಲರನ್ನು ಮೂರು ದಿನಗಳವರೆಗೆ ಸೆರೆಮನೆಯಲ್ಲಿಟ್ಟನು.


ಆದ್ದರಿಂದ ಅವರನ್ನು ಯೋಸೇಫನಿದ್ದ ಸೆರೆಮನೆಗೆ ಹಾಕಿಸಿದನು. ಪೋಟೀಫರನು ಫರೋಹನ ಕಾವಲುಗಾರ ಅಧಿಕಾರಿಯಾಗಿದ್ದು ಈ ಸೆರೆಮನೆಯ ಜವಾಬ್ದಾರಿಯನ್ನು ಹೊಂದಿದ್ದನು.


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಪವಿತ್ರನೂ ಸತ್ಯವಂತನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಬೀಗದ ಕೈ ನನ್ನಲ್ಲಿದೆ. ನಾನು ತೆರೆದದ್ದನ್ನು ಯಾರೂ ಮುಚ್ಚಲಾರರು; ಮುಚ್ಚಿದ್ದನ್ನು ಯಾರೂ ತೆರೆಯಲಾರರು.


ಹದಿನಾರು ಮಂದಿ ಸಿಪಾಯಿಗಳು ಪೇತ್ರನನ್ನು ಕಾಯುತ್ತಿದ್ದರು. ಪಸ್ಕಹಬ್ಬದ ಕಾಲ ಮುಗಿದೊಡನೆ ಪೇತ್ರನನ್ನು ಜನರ ಮುಂದೆ ನಿಲ್ಲಿಸಬೇಕೆಂದಿದ್ದನು.


ಒಂದು ವಾರದ ನಂತರ ಶಿಷ್ಯರು ಮನೆಯೊಂದರಲ್ಲಿ ಒಟ್ಟಾಗಿ ಸೇರಿದ್ದರು. ತೋಮನು ಅವರೊಂದಿಗೆ ಇದ್ದನು. ಬಾಗಿಲುಗಳನ್ನು ಮುಚ್ಚಲಾಗಿತ್ತು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು