Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:7 - ಪರಿಶುದ್ದ ಬೈಬಲ್‌

7 ಇದ್ದಕ್ಕಿದ್ದಂತೆ, ಪ್ರಭುವಿನ ದೂತನೊಬ್ಬನು ಅಲ್ಲಿ ನಿಂತುಕೊಂಡನು. ಬೆಳಕು ಕೋಣೆಯಲ್ಲಿ ಪ್ರಕಾಶಿಸಿತು. ದೇವದೂತನು ಪೇತ್ರನ ಪಕ್ಕೆಯನ್ನು ಮುಟ್ಟಿ ಅವನನ್ನು ಎಬ್ಬಿಸಿ, “ಬೇಗನೆ ಎದ್ದೇಳು!” ಎಂದನು. ಆ ಕೂಡಲೆ ಸರಪಣಿಗಳು ಪೇತ್ರನ ಕೈಗಳಿಂದ ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಫಕ್ಕನೆ ದೇವದೂತನೊಬ್ಬನು ಕಾಣಿಸಿಕೊಂಡನು. ಆ ಕೋಣೆಯೆಲ್ಲಾ ಪ್ರಕಾಶಮಯವಾಯಿತು. ದೂತನು ಪೇತ್ರನ ಭುಜವನ್ನು ತಟ್ಟಿ, ಎಬ್ಬಿಸಿ, “ಬೇಗನೆ ಏಳು,” ಎಂದನು. ಆ ಕ್ಷಣವೇ ಪೇತ್ರನ ಕೈಗಳಿಗೆ ಕಟ್ಟಿದ್ದ ಸರಪಣಿಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು. ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ - ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಫಕ್ಕನೆ ದೇವದೂತನೊಬ್ಬನು ಪ್ರತ್ಯಕ್ಷನಾಗಲು ಕೋಣೆಯೆಲ್ಲಾ ಪ್ರಕಾಶಮಯವಾಯಿತು. ಅವನು ಪೇತ್ರನನ್ನು ತಟ್ಟಿ ಎಬ್ಬಿಸಿ, “ಬೇಗ ಎದ್ದೇಳು!” ಎಂದನು. ಪೇತ್ರನ ಕೈಗಳಿಗೆ ಬಂಧಿಸಿದ್ದ ಸರಪಣಿಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಎಗ್ದಮ್, ಧನಿಯಾಚೊ ದುತ್ ಥೈ ಇಬೆ ರ್‍ಹಾಲೊ, ತ್ಯಾ ಖೊಲಿತ್ ಉಜ್ವೊಡ್ ಹೊಲೊ, ದೆವ್ ದುತಾನ್ ಪೆದ್ರುಕ್ ಆಪ್ಡುನ್ ಉಟ್ವುನ್ “ಲಗ್ಗುನಾ ಉಟ್!” ಮಟ್ಲ್ಯಾನ್, ತನ್ನಾ ತಾಬೊಡ್ತೊಬ್ ತೆಚ್ಯಾ ಹಾತಿಚಿ ಸರ್ಪೊಳಿಯಾ ಸುಟುನ್ ಪಡ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:7
37 ತಿಳಿವುಗಳ ಹೋಲಿಕೆ  

ಆದರೆ ರಾತ್ರಿಯಲ್ಲಿ ಪ್ರಭುವಿನ ದೂತನೊಬ್ಬನು ಸೆರೆಮನೆಯ ಬಾಗಿಲುಗಳನ್ನು ತೆರೆದನು. ದೇವದೂತನು ಅಪೊಸ್ತಲರನ್ನು ಕರೆದುಕೊಂಡು ಹೊರಗೆ ಬಂದು ಅವರಿಗೆ,


ಇದ್ದಕ್ಕಿದ್ದಂತೆ ದೊಡ್ಡ ಭೂಕಂಪವಾಯಿತು. ಭೀಕರವಾಗಿದ್ದ ಅದು ಸೆರೆಮನೆಯ ಅಡಿಪಾಯವನ್ನೇ ನಡುಗಿಸಿತು. ಆಗ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದುಕೊಂಡವು. ಎಲ್ಲಾ ಕೈದಿಗಳ ಸರಪಣಿಗಳು ಕಳಚಿಬಿದ್ದವು.


ಹಿಂಸೆಗೆ ಗುರಿಯಾಗಿರುವವರಿಗೆ ನ್ಯಾಯವನ್ನೂ; ಹಸಿದವರಿಗೆ ಆಹಾರವನ್ನೂ ಕೊಡುವವನು ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುವನು.


ಆತನು ಅವರನ್ನು ಕಾರ್ಗತ್ತಲೆಯ ಸೆರೆಮನೆಗಳಿಂದ ಹೊರತಂದನು; ಕಟ್ಟಿದ ಹಗ್ಗಗಳನ್ನು ಕಿತ್ತುಹಾಕಿದನು.


ಯೆಹೋವನ ಭಕ್ತರ ಸುತ್ತಲೂ ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುವನು.


ಆಗ ಕೊರ್ನೇಲಿಯನು, “ನಾಲ್ಕು ದಿನಗಳ ಹಿಂದೆ, ನಾನು ನನ್ನ ಮನೆಯಲ್ಲಿ ಪ್ರಾರ್ಥಿಸುತ್ತಿದ್ದೆನು. ಆಗ ಮಧ್ಯಾಹ್ನದ ಸುಮಾರು ಮೂರು ಗಂಟೆ ಸಮಯವಾಗಿತ್ತು. ಇದ್ದಕ್ಕಿದ್ದಂತೆ ಒಬ್ಬ ಮನುಷ್ಯನು ನನ್ನ ಮುಂದೆ ನಿಂತನು. ಅವನು ಧರಿಸಿಕೊಂಡಿದ್ದ ಬಟ್ಟೆಗಳು ಪ್ರಕಾಶಮಾನವಾಗಿ ಹೊಳೆಯುತ್ತಿದ್ದವು.


ಪ್ರತಿಯೊಂದನ್ನು ಸ್ಪಷ್ಟವಾಗಿ ತೋರಿಸುವಂಥದ್ದೇ ಬೆಳಕು. ಆದ್ದರಿಂದಲೇ ಹೀಗೆ ಬರೆದದೆ: “ನಿದ್ರೆಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


ಯೇಸು ಮರಣವೇದನೆಯನ್ನು ಅನುಭವಿಸಿದನು. ಆದರೆ ದೇವರು ಆತನನ್ನು ಬಿಡಿಸಿದನು. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಮರಣವು ಯೇಸುವನ್ನು ಹಿಡಿದುಕೊಳ್ಳಲಾಗಲಿಲ್ಲ.


ಸ್ತ್ರೀಯರಿಗೆ ಇದು ಅರ್ಥವಾಗದೆ ಆಶ್ಚರ್ಯಪಡುತ್ತಿರಲು, ಹೊಳೆಯುವ ಉಡುಪುಗಳನ್ನು ಧರಿಸಿಕೊಂಡಿದ್ದ ಇಬ್ಬರು (ದೇವದೂತರು) ಅವರ ಬಳಿಯಲ್ಲಿ ನಿಂತರು.


ಪ್ರಭುವಿನ ದೂತನೊಬ್ಬನು ಕುರುಬರ ಮುಂದೆ ನಿಂತನು. ಅವರ ಸುತ್ತಲೂ ಪ್ರಭುವಿನ ಪ್ರಭೆಯು ಪ್ರಕಾಶಿಸಿತು. ಕುರುಬರು ಬಹಳವಾಗಿ ಹೆದರಿದರು.


ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ. ಆದ್ದರಿಂದ ಆತನು ನನ್ನ ಮೇಲೆ ಕೋಪಿಸಿಕೊಂಡಿದ್ದಾನೆ. ಆದರೆ ನನ್ನ ಪರವಾಗಿ ಆತನು ವಾದಿಸುತ್ತಾನೆ. ನನಗೆ ಒಳ್ಳೆಯದನ್ನೇ ಆತನು ಮಾಡುತ್ತಾನೆ. ಆ ಬಳಿಕ ನನ್ನನ್ನು ಹೊರಗೆ ಬೆಳಕಿಗೆ ತರುವನು. ಆತನು ನೀತಿವಂತನೆಂಬುದು ಆಗ ನನಗೆ ತಿಳಿಯುವುದು.


ನನ್ನ ದೇವರು ನನ್ನನ್ನು ರಕ್ಷಿಸುವುದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು. ಆ ದೇವದೂತನು ಸಿಂಹಗಳ ಬಾಯಿಯನ್ನು ಮುಚ್ಚಿದನು. ಸಿಂಹಗಳು ನನ್ನನ್ನು ಗಾಯಗೊಳಿಸಲಿಲ್ಲ. ಏಕೆಂದರೆ ನಾನು ತಪ್ಪಿತಸ್ಥನಲ್ಲವೆಂದು ನನ್ನ ದೇವರಿಗೆ ಗೊತ್ತುಂಟು. ರಾಜನೇ, ನಾನೆಂದೂ ನಿನಗೆ ತಪ್ಪು ಮಾಡಲಿಲ್ಲ” ಎಂದು ಉತ್ತರಿಸಿದನು.


ತರುವಾಯ ಯೆಹೋವನ ದೂತನು ಅವನ ಬಳಿಗೆ ಮತ್ತೆ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದೇಳು! ಊಟಮಾಡು! ನೀನು ಊಟ ಮಾಡದಿದ್ದರೆ, ಬಹುದೂರ ನೀನು ಪ್ರಯಾಣ ಮಾಡಬೇಕಾಗಿರುವುದರಿಂದ ನಿನ್ನಲ್ಲಿ ಸಾಕಷ್ಟು ಶಕ್ತಿಯಿರುವುದಿಲ್ಲ” ಎಂದು ಹೇಳಿದನು.


ಹೆರೋದನು ಈ ಹೊಗಳಿಕೆಯನ್ನು ತಾನೇ ಸ್ವೀಕರಿಸಿಕೊಂಡನು. ದೇವರನ್ನು ಮಹಿಮೆಪಡಿಸಲಿಲ್ಲ. ಆದ್ದರಿಂದ ಆ ಕ್ಷಣವೇ, ಪ್ರಭುವಿನ ದೂತನೊಬ್ಬನು ಅವನಿಗೆ ಕಾಯಿಲೆಯನ್ನು ಬರಮಾಡಿದನು. ಅವನ ದೇಹದ ಒಳಭಾಗವನ್ನು ಹುಳಗಳು ತಿಂದುಹಾಕಿದ್ದರಿಂದ ಅವನು ಸತ್ತುಹೋದನು.


ಅಂತೆಯೇ ಸೌಲನು ದಮಸ್ಕಕ್ಕೆ ಹೊರಟನು. ಅವನು ಪಟ್ಟಣದ ಸಮೀಪಕ್ಕೆ ಬಂದಾಗ, ಬಹು ಪ್ರಕಾಶಮಾನವಾದ ಬೆಳಕೊಂದು ಆಕಾಶದಿಂದ ಇದ್ದಕ್ಕಿದ್ದಂತೆ ಅವನ ಸುತ್ತಲೂ ಹೊಳೆಯಿತು.


ಬೆಳಕಿನ ಕಿರಣಗಳು ಆತನ ಕೈಯಿಂದ ಹೊಳೆಯುತ್ತವೆ. ಅದು ಹೊಳೆಯುವಂಥ ಪ್ರಕಾಶಮಾನವಾದ ಹೊಳಪು. ಆ ಕೈಗಳಲ್ಲಿ ಅಂಥಾ ಶಕ್ತಿಯು ಅಡಕವಾಗಿದೆ.


ಅಲ್ಲಿ ಇಸ್ರೇಲ್ ದೇವರ ಮಹಿಮೆಯು ಪೂರ್ವದಿಂದ ಬಂದಿತು. ದೇವರ ಸ್ವರವು ಸಮುದ್ರದ ಶಬ್ದದಂತೆ ಗಟ್ಟಿಯಾಗಿತ್ತು. ದೇವರ ಮಹಿಮಾ ಪ್ರಕಾಶದಿಂದ ನೆಲವು ಬೆಳಕಿನಿಂದ ತುಂಬಿತ್ತು.


“ಜೆರುಸಲೇಮೇ, ಏಳು, ಪ್ರಕಾಶಿಸು! ನಿನ್ನ ಪ್ರಕಾಶವೆಂಬಾತನು ಬರುತ್ತಾನೆ. ಯೆಹೋವನ ಮಹಿಮೆಯು ನಿನ್ನ ಮೇಲೆ ಪ್ರಕಾಶಿಸುವುದು.


ಯೆಹೋವನೇ, ನಾನು ನಿನ್ನ ಸೇವಕ. ನಿನ್ನ ದಾಸಿಯರಲ್ಲೊಬ್ಬಳ ಮಗ. ನೀನೇ ನನ್ನ ಪ್ರಥಮ ಉಪಾಧ್ಯಾಯ!


ನಂತರ ಎಲೀಯನು ಪೊದೆಯ ಕೆಳಗೆ ಮಲಗಿ ನಿದ್ದೆಹೋದನು. ದೂತನೊಬ್ಬನು ಎಲೀಯನ ಹತ್ತಿರಕ್ಕೆ ಬಂದು ಅವನನ್ನು ಸ್ಪರ್ಶಿಸಿ, “ಎದ್ದೇಳು! ಊಟಮಾಡು!” ಎಂದನು.


ನಂತರ ಮತ್ತೊಬ್ಬ ದೇವದೂತನು ಪರಲೋಕದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಈ ದೇವದೂತನಿಗೆ ಮಹಾ ಅಧಿಕಾರವಿತ್ತು. ಈ ದೇವದೂತನ ಪ್ರಭಾವವು ಭೂಮಿಯನ್ನು ಪ್ರಕಾಶಗೊಳಿಸಿತು.


ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.


ಪೇತ್ರನು ಇಬ್ಬರು ಸೈನಿಕರ ಮಧ್ಯೆ ನಿದ್ರೆಮಾಡುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಅನೇಕ ಸೈನಿಕರು ಸೆರೆಮನೆಯ ಬಾಗಿಲನ್ನು ಕಾಯುತ್ತಿದ್ದರು. ಆಗ ರಾತ್ರಿಯಾಗಿತ್ತು. ಮರುದಿನ ಪೇತ್ರನನ್ನು ಜನರ ಮುಂದೆ ತರಬೇಕೆಂದು ಹೆರೋದನು ಯೋಚಿಸಿಕೊಂಡಿದ್ದನು.


ಸೂರ್ಯಚಂದ್ರರು ತಮ್ಮ ಪ್ರಕಾಶವನ್ನು ಕಳಕೊಂಡವು. ಹೊಳೆಯುವ ನಿನ್ನ ಮಿಂಚುಗಳನ್ನು ನೋಡಿ ಅವು ಪ್ರಕಾಶಿಸುವದನ್ನು ನಿಲ್ಲಿಸಿದವು. ಆ ಮಿಂಚುಗಳು ಗಾಳಿಯಲ್ಲಿ ತೂರಿಬರುವ ಭರ್ಜಿ, ಬಾಣಗಳಂತಿದ್ದವು.


ಆಗ ಯೆಹೋವನು ಹಿಜ್ಕೀಯನಿಗೆ, “ಈ ಮಾತುಗಳೆಲ್ಲಾ ಸತ್ಯವೆಂಬುದಕ್ಕೆ ನಿನಗೊಂದು ಗುರುತನ್ನು ಕೊಡುತ್ತೇನೆ. ಬೀಜ ಬಿತ್ತಲು ನಿನಗೆ ಸಾಧ್ಯವಿರಲಿಲ್ಲ. ಆದ್ದರಿಂದ ಈ ವರ್ಷದಲ್ಲಿ ಕೂಳೆಬೆಳೆಯನ್ನೂ ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ನೀನು ಊಟಮಾಡುವೆ. ಆದರೆ ಮೂರನೆಯ ವರ್ಷದಲ್ಲಿ ನೀನೇ ಬಿತ್ತಿದ ಬೀಜದಲ್ಲಿ ಬೆಳೆದ ಬೆಳೆಯನ್ನು ಊಟಮಾಡುವೆ. ಆ ಬೆಳೆಯಿಂದ ನಿನಗೆ ಬೇಕಾದಷ್ಟು ಆಹಾರ ಸಂಗ್ರಹವಾಗುವದು. ನೀನು ದ್ರಾಕ್ಷಾಲತೆಗಳನ್ನು ನೆಟ್ಟು ಅದರ ಫಲಗಳನ್ನು ತಿನ್ನುವೆ.


ಯೆಹೋವನೇ, ನನ್ನ ದೀಪವು ನೀನೇ. ಯೆಹೋವನು ನನಗೆ ಬೆಳಕು ಕೊಟ್ಟು ನನ್ನ ಸುತ್ತಲಿನ ಅಂಧಕಾರವನ್ನು ಪ್ರಕಾಶಮಯವಾಗುವಂತೆ ಮಾಡುವನು.


ದೇವರು ಒಬ್ಬಂಟಿಗರಿಗೆ ಸಂಸಾರವನ್ನು ದಯಪಾಲಿಸುವನು. ಆತನು ತನ್ನ ಜನರನ್ನು ಸೆರೆಯಿಂದ ಬಿಡಿಸಿ ಸಂತೋಷಗೊಳಿಸುವನು. ದೇವದ್ರೋಹಿಗಳಾದರೋ ಉರಿಬಿಸಿಲಿನ ಸೆರೆಯಲ್ಲಿ ಉಳಿಯುವರು.


ರಾಮನಗರದ ಹತ್ತಿರ ಅವನ ಬಿಡುಗಡೆಯಾದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನ ವಿಶೇಷ ರಕ್ಷಕ ದಳದ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ರಾಮದಲ್ಲಿ ನೋಡಿದನು. ಯೆರೆಮೀಯನನ್ನು ಸಂಕೋಲೆಗಳಿಂದ ಬಿಗಿಯಲಾಗಿತ್ತು. ಅವನು ಜೆರುಸಲೇಮ್ ಮತ್ತು ಯೆಹೂದದ ಎಲ್ಲಾ ಸೆರೆಯಾಳುಗಳ ಜೊತೆಗಿದ್ದನು. ಆ ಸೆರೆಯಾಳುಗಳನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.


ಜ್ಞಾನಿಗಳು ಹೊರಟುಹೋದ ನಂತರ ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎದ್ದೇಳು! ಮಗುವನ್ನು ಮತ್ತು ಅದರ ತಾಯಿಯನ್ನು ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ಹೆರೋದನು ಮಗುವನ್ನು ಹುಡುಕಲು ಪ್ರಾರಂಭಿಸುವನು. ಅವನು ಮಗುವನ್ನು ಕೊಲ್ಲಬೇಕೆಂದಿದ್ದಾನೆ. ‘ಅಪಾಯವಿಲ್ಲ’ ಎಂದು ನಾನು ನಿನಗೆ ಹೇಳುವ ತನಕ ನೀನು ಈಜಿಪ್ಟಿನಲ್ಲೇ ಇರು” ಎಂದು ಹೇಳಿದನು.


ದೇವದೂತನು ಪೇತ್ರನಿಗೆ, “ಬಟ್ಟೆ ಧರಿಸಿಕೊ, ಪಾದರಕ್ಷೆಗಳನ್ನು ಮೆಟ್ಟಿಕೊ” ಎಂದು ಹೇಳಿದನು. ಅಂತೆಯೇ ಪೇತ್ರನು ಮಾಡಿದನು. ಬಳಿಕ ದೇವದೂತನು, “ನಿನ್ನ ಮೇಲಂಗಿಯನ್ನು ಧರಿಸಿಕೊಂಡು ನನ್ನನ್ನು ಹಿಂಬಾಲಿಸು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು