Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:14 - ಪರಿಶುದ್ದ ಬೈಬಲ್‌

14 ಅವರು ತಮ್ಮ ಪ್ರಯಾಣವನ್ನು ಪೆರ್ಗದಿಂದ ಮುಂದುವರಿಸಿ, ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಹೋದರು. ಅವರು ಅಂತಿಯೋಕ್ಯಕ್ಕೆ ಸಬ್ಬತ್ ದಿನದಂದು ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಉಳಿದವರು ಪೆರ್ಗದಿಂದ ಹೊರಟು ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‍ದಿನದಲ್ಲಿ ಪ್ರಾರ್ಥನಾಮಂದಿರಕ್ಕೆ ಹೋಗಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‍ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಉಳಿದವರು ಪೆರ್ಗೆದಿಂದ ಪಿಸಿದ್ಯದ ಅಂತಿಯೋಕ್ಯಕ್ಕೆ ಹೋದರು. ಸಬ್ಬತ್ ದಿನ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆನಿ ಪೆರ್ಗೆ ಮನ್ತಲ್ಯಾ ಗಾಂವಾತ್ನಿ ಫಿಡೆ ಜಾವ್ನ್, ಪಿಸಿದಿಯಾ ಮನ್ತಲ್ಯಾ ಪ್ರಾಂತ್ಯಾಚ್ಯಾ ಅಂತಿಯೊಕಾಕ್ ಗೆಲೆ ತೆನಿ ಸಬ್ಬತಾಚ್ಯಾ ದಿಸಿ ಅಂತಿಯೊಕ್ಯಾತ್ಲಾ ಜುದೆವಾಂಚ್ಯಾ ಸಿನಾಗೊತ್ ಜಾವ್ನ್ ಬಸ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:14
13 ತಿಳಿವುಗಳ ಹೋಲಿಕೆ  

ನದಿಯ ಸಮೀಪದಲ್ಲಿ ವಿಶೇಷವಾದ ಪ್ರಾರ್ಥನಾ ಸ್ಥಳವನ್ನು ನಾವು ಕಾಣಬಹುದೆಂದು ಆಲೋಚಿಸಿಕೊಂಡು ಸಬ್ಬತ್ ದಿನದಂದು ನದಿಯ ಬಳಿಗೆ ಹೋಗಲು ನಗರದ್ವಾರದಿಂದ ಹೊರಗೆ ಹೋದೆವು. ಕೆಲವು ಸ್ತ್ರೀಯರು ಅಲ್ಲಿ ಸೇರಿ ಬಂದಿದ್ದರು. ಆದ್ದರಿಂದ ನಾವು ಕುಳಿತುಕೊಂಡು ಅವರೊಂದಿಗೆ ಮಾತಾಡಿದೆವು.


ಪೌಲನು ಎಂದಿನಂತೆ ಯೆಹೂದ್ಯರನ್ನು ಭೇಟಿಯಾಗಲು ಈ ಸಭಾಮಂದಿರದೊಳಗೆ ಹೋದನು. ಅವನು ಮೂರು ವಾರಗಳವರೆಗೆ ಪ್ರತಿ ಸಬ್ಬತ್‌ದಿನದಂದು ಯೆಹೂದ್ಯರೊಂದಿಗೆ ಪವಿತ್ರ ಗ್ರಂಥದ ಆಧಾರದೊಡನೆ ಚರ್ಚಿಸಿ ವಿವರಿಸಿದನು.


ಬಳಿಕ ಕೆಲವು ಯೆಹೂದ್ಯರು ಅಂತಿಯೋಕ್ಯದಿಂದ ಮತ್ತು ಇಕೋನಿಯದಿಂದ ಬಂದು ಪೌಲನಿಗೆ ವಿರೋಧವಾಗಿ ಜನರನ್ನು ಹುರಿದುಂಬಿಸಿ ಪೌಲನಿಗೆ ಕಲ್ಲೆಸೆದು, ಅವನು ಸತ್ತನೆಂದು ಭಾವಿಸಿ ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ಬಾರ್ನಬ ಮತ್ತು ಸೌಲರು ಸಲಾಮಿಸ್ ಪಟ್ಟಣಕ್ಕೆ ಬಂದಾಗ ಯೆಹೂದ್ಯರ ಸಭಾಮಂದಿರದಲ್ಲಿ ದೇವರ ಸಂದೇಶವನ್ನು ಸಾರಿದರು. (ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯ ಮಾಡುವುದಕ್ಕಾಗಿ ಅವರೊಂದಿಗಿದ್ದನು.)


ಪ್ರತಿ ಸಬ್ಬತ್‌ದಿನದಂದು ಪೌಲನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ಗ್ರೀಕರೊಂದಿಗೂ ಚರ್ಚಿಸುತ್ತಾ ಯೇಸುವಿನಲ್ಲಿ ನಂಬಿಕೆ ಇಡುವಂತೆ ಅವರನ್ನು ಪ್ರೋತ್ಸಾಹಿಸಿದನು.


ಅನಂತರ ಮೂರು ತಿಂಗಳ ಕಾಲ ಪೌಲನು ಸಭಾಮಂದಿರಕ್ಕೆ ಹೋಗಿ ಬಹು ಧೈರ್ಯದಿಂದ ಮಾತಾಡಿದನು. ಅವನು ಯೆಹೂದ್ಯರಿಗೆ ದೇವರ ರಾಜ್ಯದ ಸಂಗತಿಗಳನ್ನು ತಿಳಿಸಿ ಅವರನ್ನು ಒಡಂಬಡಿಸಲು ಪ್ರಯತ್ನಿಸಿದನು.


ಮುಂದಿನ ಸಬ್ಬತ್‌ದಿನದಂದು, ಪ್ರಭುವಿನ ವಾಕ್ಯವನ್ನು ಕೇಳುವುದಕ್ಕಾಗಿ ಬಹುಮಟ್ಟಿಗೆ ನಗರದ ಜನರೆಲ್ಲರೂ ನೆರೆದುಬಂದರು.


ಪೌಲ ಮತ್ತು ಬಾರ್ನಬ ಸಭಾಮಂದಿರದಿಂದ ಹೋಗುವಾಗ, ಈ ಸಂಗತಿಗಳ ಬಗ್ಗೆ ಇನ್ನೂ ಹೆಚ್ಚಿಗೆ ತಿಳಿಸುವುದಕ್ಕಾಗಿ ಮುಂದಿನ ಸಬ್ಬತ್‌ದಿನದಂದು ಮತ್ತೆ ಬರಬೇಕೆಂದು ಜನರು ಅವರನ್ನು ಕೇಳಿಕೊಂಡರು.


ಅವನು ತಡಮಾಡದೆ ಸಭಾಮಂದಿರಗಳಿಗೆ ಹೋಗಿ “ಯೇಸುವೇ ದೇವಕುಮಾರ”ನೆಂದು ಬೋಧಿಸತೊಡಗಿದನು.


ಯೇಸು ತಾನು ಬೆಳೆದ ನಜರೇತ್ ಎಂಬ ಊರಿಗೆ ಪ್ರಯಾಣ ಮಾಡಿದನು. ವಾಡಿಕೆಯ ಪ್ರಕಾರ, ಆತನು ಸಬ್ಬತ್‌ದಿನದಲ್ಲಿ ಸಭಾಮಂದಿರಕ್ಕೆ ಹೋದನು. ಯೇಸು ಓದುವುದಕ್ಕಾಗಿ ಎದ್ದುನಿಂತನು.


ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ!


ನನಗೆ ಸಂಭವಿಸಿದ ಹಿಂಸೆ ಮತ್ತು ಸಂಕಟಗಳ ಬಗ್ಗೆಯೂ ನಿನಗೆ ತಿಳಿದಿದೆ. ಅಂತಿಯೋಕ್ಯ, ಇಕೋನ್ಯ, ಲುಸ್ತ್ರಗಳಲ್ಲಿ ನನಗೆ ಸಂಭವಿಸಿದ ಸಂಗತಿಗಳೆಲ್ಲವೂ ನಿನಗೆ ತಿಳಿದಿವೆ. ನಾನು ಆ ಸ್ಥಳಗಳಲ್ಲಿ ಅನುಭವಿಸಿದ ಹಿಂಸೆಯು ನಿನಗೆ ತಿಳಿದಿದೆ. ಆದರೆ ಆ ಎಲ್ಲ ತೊಂದರೆಗಳಿಂದ ಪ್ರಭುವು ನನ್ನನ್ನು ಕಾಪಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು