Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:19 - ಪರಿಶುದ್ದ ಬೈಬಲ್‌

19 ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ತನ್ನ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ನಮ್ಮ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲ ಮಾಡಿ ಆ ಜನರ ದೇಶವನ್ನು ಅವರಿಗೆ ಬಾಧ್ಯವಾಗಿ ಹಂಚಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕಾನಾನ್ ದೇಶದಲ್ಲಿದ್ದ ಏಳು ರಾಜ್ಯಗಳನ್ನು ಜಯಿಸಿ, ಅವರ ದೇಶವನ್ನು ತಮ್ಮ ಜನರಿಗೆ ಬಾಧ್ಯವಾಗಿ ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಕಾನಾನ್ ಮನ್ತಲ್ಯಾ ಪ್ರಾಂತ್ಯಾತ್ಲ್ಯಾ ಸಾತ್ ಘರಾನಾಂಚ್ಯಾ ಲೊಕಾಕ್ನಿ ನಾಸ್‍ ಕರುನ್ ಅಪ್ಲ್ಯಾ ಲೊಕಾಕ್ನಿ ತ್ಯಾ ಗಾಂವಾಚೊ ಅದಿಕಾರ್ ಸ್ವತಾಚೆ ಕರುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:19
16 ತಿಳಿವುಗಳ ಹೋಲಿಕೆ  

“ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ಯೆಹೋವನು ನಿಮ್ಮನ್ನು ನಡೆಸುವನು. ನಿಮಗಿಂತ ಬಲಿಷ್ಠವಾಗಿದ್ದು ಅಲ್ಲಿ ವಾಸಿಸುತ್ತಿರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ಆ ದೇಶದಿಂದ ನಿಮಗಾಗಿ ಹೊರಗಟ್ಟುವನು.


ಆ ನಾಡಿನ ಜನಾಂಗಗಳನ್ನು ಆತನು ಬಲವಂತವಾಗಿ ಹೊರಗಟ್ಟಿದನು. ಆತನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಆ ನಾಡಿನಲ್ಲಿ ಪಾಲುಕೊಟ್ಟನು; ಆ ನಾಡಿನ ಮನೆಗಳಲ್ಲಿ ಅವರನ್ನು ನೆಲೆಗೊಳಿಸಿದನು.


ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ಆ ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಆ ಹೊಸ ದೇಶದೊಳಗೆ ಹೋದಾಗ ಈ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಈ ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು.


ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರೇಲಿನ ಕುಲಪ್ರಧಾನರೂ ಶೀಲೋವಿನಲ್ಲಿ ಸೇರಿಬಂದು ದೇವದರ್ಶನಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟುಹಾಕಿ ಹಂಚಿಕೊಟ್ಟ ಪ್ರಾಂತ್ಯಗಳೇ ಇವು. ಹೀಗೆ ದೇಶ ವಿಭಾಗ ಕಾರ್ಯವು ಪೂರ್ಣಗೊಂಡಿತು.


ಯಾಜಕನಾದ ಎಲ್ಲಾಜಾರನು, ನೂನನ ಮಗನಾದ ಯೆಹೋಶುವನು ಮತ್ತು ಇಸ್ರೇಲಿನ ಕುಲಗಳ ನಾಯಕರು, ಇಸ್ರೇಲರಿಗೆ ಕಾನಾನ್ ನಾಡಿನ ಯಾವಯಾವ ಭಾಗವನ್ನು ಕೊಡಬೇಕೆಂಬುದನ್ನು ತೀರ್ಮಾನಿಸಿದರು.


ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು; ಬಾಷಾನಿನ ರಾಜನಾದ ಓಗನನ್ನೂ ಕಾನಾನ್ ದೇಶದ ಎಲ್ಲಾ ಜನಾಂಗಗಳನ್ನೂ ಸೋಲಿಸಿದನು.


ಆ ಮಕ್ಕಳು ದೇಶವನ್ನು ಸ್ವಾಧೀನಪಡಿಸಿಕೊಂಡರು; ಅಲ್ಲಿ ವಾಸಿಸಿದ್ದ ಕಾನಾನ್ಯರನ್ನು ಓಡಿಸಿದರು. ಅವರನ್ನು ಸೋಲಿಸುವಂತೆ ನೀನೇ ಮಾಡಿದೆ. ಆ ರಾಜ್ಯಗಳಿಗೆ, ರಾಜರುಗಳಿಗೆ ಅವರು ಮಾಡಬೇಕೆಂದಿದ್ದನ್ನು ಮಾಡುವಂತೆ ಅವರಿಗೇ ಅವಕಾಶಮಾಡಿಕೊಟ್ಟೆ.


“‘ತರುವಾಯ ನೀವು ಜೋರ್ಡನ್ ನದಿಯನ್ನು ದಾಟಿ ಜೆರಿಕೊ ನಗರಕ್ಕೆ ಹೋದಿರಿ. ಜೆರಿಕೊ ನಗರದ ಜನರು ನಿಮ್ಮ ಮೇಲೆ ಯುದ್ಧ ಮಾಡಿದರು. ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಕೂಡ ನಿಮ್ಮ ಮೇಲೆ ಯುದ್ಧಕ್ಕೆ ಬಂದರು. ಆದರೆ ನೀವು ಅವರೆಲ್ಲರನ್ನು ಸೋಲಿಸುವಂತೆ ನಾನು ಮಾಡಿದೆನು.


ಪಶ್ಚಿಮದಲ್ಲಿ ಮೆಡಿಟರೇನಿಯನ್ ಸಮುದ್ರವನ್ನು ಮತ್ತು ಜೋರ್ಡನ್ ನದಿಯ ಮಧ್ಯದ ಪ್ರದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳಬಹುದೆಂದು ನಾನು ನಿಮಗೆ ತಿಳಿಸಿದ್ದನ್ನು ಸ್ಮರಿಸಿಕೊಳ್ಳಿ. ನಾನು ಆ ಪ್ರದೇಶವನ್ನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ್ದೆ. ಆದರೆ ಇಲ್ಲಿಯವರೆಗೂ ಅದು ನಿಮ್ಮ ಅಧೀನಕ್ಕೆ ಬಂದಿಲ್ಲ.


ಯೆಹೋಶುವನು ಅವರಿಗಾಗಿ ಶೀಲೋವಿನಲ್ಲಿ ಯೆಹೋವನ ಮುಂದೆ ಚೀಟುಹಾಕಿದನು. ಹೀಗೆ ಯೆಹೋಶುವನು ಭೂಮಿಯನ್ನು ಹಂಚಿದನು; ಪ್ರತಿಯೊಂದು ಕುಲಕ್ಕೆ ಅದರ ಭೂಭಾಗವನ್ನು ಕೊಟ್ಟನು.


ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು.


ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಒಬ್ಬಂಟಿಗನಾಗಿ ಹೋಗಲಿಲ್ಲ. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತನ್ನೊಂದಿಗೆ ಕರೆದುಕೊಂಡು ಹೋದನು. ಹಾರಾನ್ ಪಟ್ಟಣದಲ್ಲಿ ತಮಗಿದ್ದ ಸ್ವತ್ತುಗಳನ್ನೆಲ್ಲ ಅವರು ತೆಗೆದುಕೊಂಡು ಹೋದರು. ಅಬ್ರಾಮನು ಹಾರಾನ್ ಪಟ್ಟಣದಲ್ಲಿ ಹೊಂದಿದ್ದ ಸೇವಕರು ಸಹ ಅವನೊಡನೆ ಹೋದರು. ಅಬ್ರಾಮನು ಮತ್ತು ಅವನ ಸಂಗಡಿಗರು ಹಾರಾನ್ ಪಟ್ಟಣವನ್ನು ಬಿಟ್ಟು ಕಾನಾನ್ ದೇಶಕ್ಕೆ ಪ್ರಯಾಣಮಾಡಿದರು.


ಇಸ್ರೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್ ನಗರ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳಲ್ಲಿಯೂ ಅರೋಯೇರ್ ನಗರ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳಲ್ಲಿಯೂ ಅರ್ನೋನ್ ನದಿತೀರದ ಎಲ್ಲ ನಗರಗಳಲ್ಲಿಯೂ ಮುನ್ನೂರು ವರ್ಷಗಳಿಂದ ವಾಸಮಾಡುತ್ತಲಿದ್ದಾರೆ. ಈ ನಗರಗಳನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳಲು ನೀವು ಇಷ್ಟು ವರ್ಷ ಏಕೆ ಪ್ರಯತ್ನ ಮಾಡಲಿಲ್ಲ?


ಇಸ್ರೇಲಿನ ಜನರು ಈಜಿಪ್ಟನ್ನು ಬಿಟ್ಟ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ ರಾಜನಾದ ಸೊಲೊಮೋನನು ಇಸ್ರೇಲನ್ನು ಆಳಲಾರಂಭಿಸಿದ ನಾಲ್ಕನೆಯ ವರ್ಷದಲ್ಲಿ ದೇವಾಲಯದ ನಿರ್ಮಾಣವು ಆರಂಭಗೊಂಡಿತು. ಅದು ವರ್ಷದ ಎರಡನೆಯ ತಿಂಗಳಾದ ಜೀವ್ (ವೈಶಾಖ) ತಿಂಗಳಲ್ಲಿ ಆರಂಭಗೊಂಡಿತು.


ಅವುಗಳಿಗೆ ಮಾಡತಕ್ಕದ್ದನ್ನು ದೇವರು ತೀರ್ಮಾನಿಸಿದ್ದಾನೆ. ಆತನು ಅವುಗಳಿಗೆ ಒಂದು ಸ್ಥಳವನ್ನು ಆರಿಸಿದ್ದಾನೆ. ಆತನು ಮೇರೆಯನ್ನು ನಿರ್ಮಿಸಿ ಅವುಗಳ ದೇಶವನ್ನು ತೋರಿಸಿದ್ದಾನೆ. ಹೀಗೆ ಆ ಪ್ರಾಣಿಗಳು ದೇಶವನ್ನು ನಿತ್ಯಕಾಲಕ್ಕೂ ತಮ್ಮದಾಗಿ ಮಾಡಿಕೊಳ್ಳುವವು. ವರ್ಷವರ್ಷವೂ ಅವುಗಳು ಅಲ್ಲಿಯೇ ವಾಸಮಾಡುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು