Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:27 - ಪರಿಶುದ್ದ ಬೈಬಲ್‌

27 ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್‌ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಜೆರುಸಲೇಮಿನ ನಿವಾಸಿಗಳು ಮತ್ತು ಅವರ ಅಧಿಕಾರಿಗಳು ಯೇಸು ಲೋಕೋದ್ಧಾರಕನೆಂದು ಅರಿತುಕೊಳ್ಳಲಿಲ್ಲ. ಪ್ರತಿ ಸಬ್ಬತ್‍ದಿನ ಓದಲಾದ ಪ್ರವಾದಿಗಳ ವಾಕ್ಯಗಳನ್ನು ಅವರು ಗ್ರಹಿಸಿಕೊಳ್ಳಲಿಲ್ಲ. ಯೇಸುವಿಗೆ ಮರಣದಂಡನೆಯನ್ನು ವಿಧಿಸಿ ಆ ಪ್ರವಾದನೆಗಳು ನಿಜವಾಗಲು ಕಾರಣರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆರೂಸಲೇವಿುನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಆತನನ್ನಾಗಲಿ ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲಿ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆರೂಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಯೇಸುವನ್ನು ಯಾರೆಂದು ಗುರುತಿಸಿಲಿಲ್ಲ. ಆದರೂ ಅವರು ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನೂ ಗ್ರಹಿಸಲಿಲ್ಲ. ಅವರು ಯೇಸುವನ್ನು ಅಪರಾಧಿಯೆಂದು ತೀರ್ಪು ಮಾಡಿ, ಪ್ರವಾದಿಗಳ ವಾಕ್ಯಗಳನ್ನು ನೆರವೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಜೆರುಜಲೆಮಾತ್ ಹೊತ್ತ್ಯಾ ಜುದೆವಾನಿ ಅನಿ ಜುದೆವಾಂಚ್ಯಾ ಮುಂಖಡಾನಿ ಜೆಜುಚ್ ಅರ್ಥ್ ಕರುನ್ ಘೆವ್ಕ್ ನಾತ್, ಹರ್ ಎಕ್ ಸಬ್ಬತಾಚ್ಯಾ ದಿಸಾಬಿ ಪ್ರವಾದ್ಯಾಚಿ ಗೊಸ್ಟಿಯಾ ಪುರಾ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:27
25 ತಿಳಿವುಗಳ ಹೋಲಿಕೆ  

“ಸಹೋದರರೇ, ನೀವು ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನನಗೆ ಗೊತ್ತಿದೆ. ನಿಮ್ಮ ನಾಯಕರು ಸಹ ಅರ್ಥಮಾಡಿಕೊಳ್ಳಲಿಲ್ಲ.


ಸಹೋದರ ಸಹೋದರಿಯರೇ, ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳದಂತೆ ಇದುವರೆಗೆ ರಹಸ್ಯವಾಗಿದ್ದ ಸತ್ಯವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ: ಇಸ್ರೇಲಿನ ಜನರಲ್ಲಿ ಒಂದು ಪಾಲು ಮಂದಿ ಮೊಂಡರಾದರು. ಆದರೆ ಯೆಹೂದ್ಯರಲ್ಲದ ಜನರೆಲ್ಲರೂ ದೇವರ ಬಳಿಗೆ ಬಂದಾಗ ಅವರ ಮೊಂಡತನವು ಇಲ್ಲವಾಗುವುದು.


ಅವರು ಇವುಗಳನ್ನು ಮಾಡಕೂಡದು. ಏಕೆಂದರೆ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವಂಥ ಜನರು ಪ್ರತಿಯೊಂದು ಪಟ್ಟಣದಲ್ಲಿ ಇನ್ನೂ ಇದ್ದಾರೆ. ಅನೇಕ ವರ್ಷಗಳಿಂದ ಪ್ರತಿ ಸಬ್ಬತ್ ದಿನದಲ್ಲಿ ಮೋಶೆಯ ಮಾತುಗಳನ್ನು ಓದಲಾಗುತ್ತಿದೆ” ಎಂದು ಹೇಳಿದನು.


ನಮ್ಮ ನಾಯಕರು ಮತ್ತು ಮಹಾಯಾಜಕರು ಆತನಿಗೆ ಮರಣದಂಡನೆ ವಿಧಿಸಲು ಒಪ್ಪಿಸಿಕೊಟ್ಟು ಶಿಲುಬೆಗೆ ಜಡಿಸಿದರು.


ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.


ಆದರೆ ಅವರ ಬುದ್ಧಿಗೆ ಮಂಕು ಕವಿದಿದ್ದರಿಂದ ಅವರು ಅರ್ಥಮಾಡಿಕೊಳ್ಳಲಾಗಲಿಲ್ಲ. ಅವರು ಹಳೆ ಒಡಂಬಡಿಕೆಯನ್ನು ಓದುವಾಗ ಇಂದಿಗೂ ಅದೇ ಮುಸುಕು ಅರ್ಥವನ್ನು ಮರೆಮಾಡುತ್ತದೆ. ಆ ಮುಸುಕನ್ನು ತೆಗೆದು ಹಾಕಲಿಲ್ಲ. ಏಕೆಂದರೆ ಕ್ರಿಸ್ತನ ಮೂಲಕವಾಗಿ ಮಾತ್ರ ಅದು ತೆಗೆದುಹಾಕಲ್ಪಡುತ್ತದೆ.


ಈ ಲೋಕದ ಯಾವ ಅಧಿಪತಿಗಳೂ ಈ ಜ್ಞಾನವನ್ನು ಅರ್ಥಮಾಡಿಕೊಳ್ಳಲಿಲ್ಲ. ಅವರು ಅರ್ಥಮಾಡಿಕೊಂಡಿದ್ದರೆ, ಮಹಿಮೆಯುಳ್ಳ ಪ್ರಭುವನ್ನು ಶಿಲುಬೆಗೇರಿಸುತ್ತಿರಲಿಲ್ಲ.


ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.


ಜನರು ನನ್ನ ದೆಸೆಯಿಂದ ಇದನ್ನೆಲ್ಲಾ ನಿಮಗೆ ಮಾಡುವರು. ನನ್ನನ್ನು ಕಳುಹಿಸಿದಾತನನ್ನು ಅವರು ತಿಳಿದಿಲ್ಲ.


ಮೊದಲು, ನಾನು ಕ್ರಿಸ್ತನ ವಿರುದ್ಧ ಮಾತನಾಡಿದ್ದೆನು. ಆತನನ್ನು ಹಿಂಸಿಸಿದ್ದೆನು. ಆತನಿಗೆ ನೋವಾಗುವಂಥ ಕಾರ್ಯಗಳನ್ನು ಮಾಡಿದ್ದೆನು. ಆದರೆ ನಾನೇನು ಮಾಡುತ್ತಿದ್ದೇನೆಂಬುದು ನನಗೆ ತಿಳಿದಿರಲಿಲ್ಲವಾದ್ದರಿಂದ ದೇವರು ನನಗೆ ಕರುಣೆ ತೋರಿದನು. ನಂಬದಿರುವಾಗ ನಾನು ಅವುಗಳನ್ನು ಮಾಡಿದೆನು.


ಜನರು ತಂದೆಯನ್ನು ಮತ್ತು ನನ್ನನ್ನು ತಿಳಿದಿಲ್ಲದ ಕಾರಣ ಇವುಗಳನ್ನು ಮಾಡುವರು.


ಆದ್ದರಿಂದ ಆತನು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೇರಿಸುವಿರಿ (ಕೊಲ್ಲುವಿರಿ). ನಾನೇ ಆತನೆಂಬುದು ಆಗ ನಿಮಗೆ ತಿಳಿಯುವುದು. ನಾನು ಈ ಕಾರ್ಯಗಳನ್ನು ನನ್ನ ಸ್ವಂತ ಅಧಿಕಾರದಿಂದ ಮಾಡುತ್ತಿಲ್ಲ ಎಂಬುದನ್ನು ನೀವು ತಿಳಿದುಕೊಳ್ಳುವಿರಿ. ಅಲ್ಲದೆ, ತಂದೆಯು ನನಗೆ ಉಪದೇಶಿಸಿದ ಸಂಗತಿಗಳನ್ನು ಮಾತ್ರ ನಾನು ಹೇಳುತ್ತೇನೆಂಬುದೂ ನಿಮಗೆ ಅರಿವಾಗುವುದು.


ಅದಕ್ಕೆ ಯೇಸು, “ಪೇತ್ರನೇ, ನಾಳೆ ಬೆಳಿಗ್ಗೆ ಕೋಳಿ ಕೂಗುವ ಮೊದಲು ನನ್ನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವೆ!” ಅಂದನು.


ಯೇಸು, “ನೀವು ತಪ್ಪಾಗಿ ತಿಳಿದುಕೊಂಡಿರಲು ಕಾರಣವೇನೆಂದರೆ, ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ತಿಳಿದಿಲ್ಲ ಮತ್ತು ದೇವರ ಶಕ್ತಿಯ ಬಗ್ಗೆಯೂ ನಿಮಗೆ ಗೊತ್ತಿಲ್ಲ.


ನೀವು ನನಗೆ ಕೇಡುಮಾಡಲು ಯೋಚಿಸಿದಿರಿ. ಆದರೆ ದೇವರು ಒಳ್ಳೆಯದನ್ನೇ ಮಾಡಿದನು. ಬಹಳ ಜನರ ಪ್ರಾಣವನ್ನು ಉಳಿಸುವುದಕ್ಕಾಗಿ ನನ್ನನ್ನು ಬಳಸಿಕೊಳ್ಳುವುದು ದೇವರ ಯೋಜನೆಯಾಗಿತ್ತು. ಈಗಲೂ ಆತನದು ಅದೇ ಯೋಜನೆ.


ಪಿಲಾತನು ಮಹಾಯಾಜಕರನ್ನೂ ಯೆಹೂದ್ಯನಾಯಕರನ್ನೂ ಇತರ ಜನರನ್ನೂ ಒಟ್ಟಾಗಿ ಕರೆಸಿ,


ನೀವು ಪವಿತ್ರ ಗ್ರಂಥವನ್ನು ಜಾಗ್ರತೆಯಿಂದ ಅಧ್ಯಯನ ಮಾಡುತ್ತೀರಿ. ಆ ಪವಿತ್ರ ಗ್ರಂಥವು ನಿಮಗೆ ನಿತ್ಯಜೀವವನ್ನು ಕೊಡುತ್ತದೆ ಎಂಬುದು ನಿಮ್ಮ ಆಲೋಚನೆ. ಅದೇ ಪವಿತ್ರ ಗ್ರಂಥವು ನನ್ನ ಬಗ್ಗೆ ತಿಳಿಸುತ್ತದೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು