Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:29 - ಪರಿಶುದ್ದ ಬೈಬಲ್‌

29 “ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಯೇಸುವಿಗೆ ಸಂಭವಿಸಬೇಕಾಗಿದ್ದ ಕೆಟ್ಟವುಗಳನ್ನೆಲ್ಲ ಯೆಹೂದ್ಯರು ಆತನಿಗೆ ಮಾಡಿದರು. ಬಳಿಕ ಅವರು ಯೇಸುವನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಯಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯೇಸುವನ್ನು ಕುರಿತು ಪವಿತ್ರಗ್ರಂಥ ಹೇಳುವುದೆಲ್ಲವೂ ನೆರವೇರಿದ ಮೇಲೆ ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವದನ್ನೆಲ್ಲಾ ನೆರವೇರಿಸಿದ ಮೇಲೆ ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಪವಿತ್ರ ವೇದದಲ್ಲಿ ಯೇಸುವನ್ನು ಕುರಿತು ಬರೆದಿರುವ ಪ್ರಕಾರ ನೆರವೇರಿದ ನಂತರ, ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಯಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಪವಿತ್ರ್ ಪುಸ್ತಕಾತ್ ಲಿವಲ್ಯಾ ಸಾರ್ಕೆ ಜೆಜುಕ್ ಹೊವ್ಚೆ ಮನುನ್ ಹೊತ್ತೆ ಬುರ್ಶೆಪಾನ್ ಸಗ್ಳೆ ಜುದೆವಾಂಚ್ಯಾ ಲೊಕಾನಿಚ್ ತೆಕಾ ಕರ್‍ಲ್ಯಾನಿ ತೆಚ್ಯಾ ಮಾನಾ ತೆಕಾ ಕುರ್ಸಾ ವೈನಾ ಖಾಲ್ತಿ ಉತ್ರುನ್ ಸಮಾದಿತ್ ಥವ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:29
16 ತಿಳಿವುಗಳ ಹೋಲಿಕೆ  

ಬಳಿಕ ಇವನು ಯೇಸುವಿನ ದೇಹವನ್ನು ಶಿಲುಬೆಯಿಂದ ಇಳಿಸಿ ಬಟ್ಟೆಯಲ್ಲಿ ಸುತ್ತಿ, ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಈ ಸಮಾಧಿಯಲ್ಲಿ ಬೇರೆ ಯಾರನ್ನೂ ಎಂದೂ ಹೂಳಿರಲಿಲ್ಲ.


ಯೇಸು ಹುಳಿರಸವನ್ನು ರುಚಿನೋಡಿ, “ತೀರಿತು” ಎಂದು ಹೇಳಿ ತಲೆಬಾಗಿ ಪ್ರಾಣಬಿಟ್ಟನು.


ಇದಾದ ಮೇಲೆ ಎಲ್ಲವೂ ನೆರವೇರಿತೆಂದು ತಿಳಿದುಕೊಂಡು ಪವಿತ್ರ ಗ್ರಂಥದ ಮಾತನ್ನು ನೆರವೇರಿಸುವುದಕ್ಕಾಗಿ ಆತನು, “ನನಗೆ ದಾಹವಾಗಿದೆ” ಎಂದು ಹೇಳಿದನು.


ಹೂಳಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬಂದನು.


ನೀವು ಯೇಸುವನ್ನು ಕೊಂದಿರಿ. ನೀವು ಆತನನ್ನು ಶಿಲುಬೆಯ ಮೇಲೆ ನೇತುಹಾಕಿದಿರಿ. ಆದರೆ ದೇವರು, ಅಂದರೆ ನಮ್ಮ ಪಿತೃಗಳ ದೇವರೇ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು!


ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು.


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್‌ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು!


ಯೇಸುವಿನ ವಿರುದ್ಧ ಒಟ್ಟಾಗಿ ಬಂದ ಈ ಜನರು ನಿನ್ನ ಯೋಜನೆ ನೆರವೇರುವಂತೆ ಮಾಡಿದರು. ನಿನ್ನ ಶಕ್ತಿಯಿಂದಲೂ ನಿನ್ನ ಚಿತ್ತದಿಂದಲೂ ಇದು ನೆರವೇರಿತು.


ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.


ಆಗ ಕತ್ತಲಾಗತೊಡಗಿತ್ತು. ಅಂದು ಸಿದ್ಧತೆಯ ದಿನವಾಗಿದ್ದರಿಂದ (ಅಂದರೆ ಸಬ್ಬತ್ತಿನ ಹಿಂದಿನ ದಿನ),


ಅರಿಮಥಾಯ ಎಂಬುದು ಯೆಹೂದ್ಯರ ಒಂದು ಊರು. ಯೋಸೇಫನು ಇದರ ನಿವಾಸಿ. ಇವನು ಒಳ್ಳೆಯ ಧಾರ್ಮಿಕ ವ್ಯಕ್ತಿಯಾಗಿದ್ದನು. ದೇವರ ರಾಜ್ಯದ ಆಗಮನವನ್ನು ಇವನು ನಿರೀಕ್ಷಿಸಿದ್ದನು. ಯೋಸೇಫನು ಯೆಹೂದ್ಯರ ಹಿರಿಸಭೆಯ ಸದಸ್ಯನಾಗಿದ್ದನು. ಆದರೆ ಬೇರೆ ಯೆಹೂದ್ಯ ನಾಯಕರು ಯೇಸುವನ್ನು ಕೊಲ್ಲಲು ತೀರ್ಮಾನಿಸಿದಾಗ ಇವನು ಅದಕ್ಕೆ ಒಪ್ಪಲಿಲ್ಲ.


ಆದರೆ ದೇವರು ನನಗೆ ಸಹಾಯಮಾಡಿದನು. ಆತನು ಇಂದಿನವರೆಗೂ ನನಗೆ ಸಹಾಯಮಾಡುತ್ತಿದ್ದಾನೆ. ಆದ್ದರಿಂದಲೇ ಇಂದು ಇಲ್ಲಿ ನಿಂತುಕೊಂಡಿದ್ದೇನೆ ಮತ್ತು ನಾನು ಕಂಡ ಸಂಗತಿಗಳ ಬಗ್ಗೆ ಜನರಿಗೆಲ್ಲಾ ಸಾಕ್ಷಿ ಹೇಳುತ್ತಿದ್ದೇನೆ. ಆದರೆ ನಾನು ಯಾವ ಹೊಸದನ್ನೂ ಹೇಳದೆ, ಮೋಶೆ ಮತ್ತು ಪ್ರವಾದಿಗಳು ಮುಂದೆ ನೆರವೇರುತ್ತವೆ ಎಂದು ಹೇಳಿದ ಸಂಗತಿಗಳನ್ನೇ ಹೇಳುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು