Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:32 - ಪರಿಶುದ್ದ ಬೈಬಲ್‌

32 “ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ವಿಷಯವಾದ ಸುವಾರ್ತೆಯನ್ನು ನಾವು ನಿಮಗೆ ಹೇಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32-33 ನಾವೀಗ ನಿಮಗೆ ಸಾರುವ ಶುಭಸಂದೇಶ ಇದು: ದೇವರು ಯೇಸುಸ್ವಾಮಿಯನ್ನು ಪುನರುತ್ಥಾನಗೊಳಿಸಿದ್ದಾರೆ. ಈ ಮೂಲಕ ನಮ್ಮ ಪೂರ್ವಜರಿಗೆ ಮಾಡಿದ ವಾಗ್ದಾನವನ್ನು ಅವರ ಸಂತತಿಯಾದ ನಮಗಿಂದು ಈಡೇರಿಸಿದ್ದಾರೆ. ಎರಡನೆಯ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ: ‘ನೀನೇ ನನ್ನ ಪುತ್ರ, ನಾನಿಂದು ನಿನ್ನ ಜನಕ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32-33 ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಎಬ್ಬಿಸಿದ್ದರಲ್ಲಿ - ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ನಾವು ನಿಮಗೆ, ದೇವರು ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ್ದನ್ನು ಶುಭವರ್ತಮಾನವನ್ನಾಗಿ ಹೇಳುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 “ದೆವಾನ್ ಅಮ್ಚ್ಯಾ ಪುರ್ವಜ್ ಲೊಕಾಕ್ನಿ ಗೊಸ್ಟ್ ದಿಲ್ಲ್ಯಾ ವಿಶಯಾಚೆ ಬರಿ ಖಬರ್ ಅಮಿ ತುಮ್ಕಾ ಸಾಂಗ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:32
40 ತಿಳಿವುಗಳ ಹೋಲಿಕೆ  

ಅಬ್ರಹಾಮನಿಗೂ ಅವನ ಸಂತತಿಯವರಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದನು. ಆದರೆ ಅಬ್ರಹಾಮನು ಆ ವಾಗ್ದಾನವನ್ನು ಹೊಂದಿಕೊಂಡದ್ದು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಅಬ್ರಹಾಮನು ನಂಬಿಕೆಯ ಮೂಲಕ ನೀತಿವಂತನಾದ ಕಾರಣ ಆ ವಾಗ್ದಾನವನ್ನು ಹೊಂದಿಕೊಂಡನು.


ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನಾನು ನಿರೀಕ್ಷಿಸಿಕೊಂಡಿರುವುದರಿಂದಲೇ ಈಗ ವಿಚಾರಣೆಗೆ ಗುರಿಯಾಗಿದ್ದೇನೆ.


ಆಮೇಲೆ ನಾನು ಅವರಿಗೆ ಒಬ್ಬ ಕುರುಬನನ್ನು ನೇಮಿಸುವೆನು. ಅವನು ನನ್ನ ಸೇವಕನಾದ ದಾವೀದನು; ಅವನು ಅವರನ್ನು ಮೇಯಿಸುವನು ಮತ್ತು ಅವರಿಗೆ ಕುರುಬನಾಗುವನು.


ಅವರು ಇಸ್ರೇಲಿನ ಜನರು. ಅವರು ದೇವರಿಂದ ಆರಿಸಲ್ಪಟ್ಟ ಮಕ್ಕಳು. ಅವರು ದೇವರ ಮಹಿಮೆಯನ್ನು ಮತ್ತು ದೇವರು ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಗಳನ್ನು ಹೊಂದಿದ್ದಾರೆ. ದೇವರು ಅವರಿಗೆ ಮೋಶೆಯ ಧರ್ಮಶಾಸ್ತ್ರವನ್ನೂ ಸರಿಯಾದ ಆರಾಧನೆಯ ಕ್ರಮವನ್ನೂ ತನ್ನ ವಾಗ್ದಾನಗಳನ್ನೂ ಕೊಟ್ಟನು.


ಸಹೋದರರೇ, ಇದು ನಿಮಗೆ ತಿಳಿದಿರಲಿ: ಆತನ ಮೂಲಕವಾಗಿ ನಿಮ್ಮ ಪಾಪಗಳಿಗೆ ಕ್ಷಮೆ ದೊರೆಯುತ್ತದೆ. ಮೋಶೆಯ ಧರ್ಮಶಾಸ್ತ್ರಕ್ಕೆ, ನಿಮ್ಮನ್ನು ನಿಮ್ಮ ಪಾಪಗಳಿಂದ ಬಿಡಿಸಲಾಗಲಿಲ್ಲ. ಆದರೆ ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನು ಆತನ ಮೂಲಕವಾಗಿ ತನ್ನ ಎಲ್ಲಾ ಪಾಪಗಳಿಂದ ಬಿಡುಗಡೆಯಾಗುವನು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಕೊಂಬೆ ಎಂಬ ಒಬ್ಬಾತನು ಇದ್ದಾನೆ. ಆತನು ಬೆಳೆದು ಬಲಿಷ್ಠನಾಗುವನು. ಆತನು ದೇವಾಲಯವನ್ನು ಕಟ್ಟುವನು.


ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ಇದು ಯೆಹೋವನ ಸಂದೇಶ: “ನಾನು ಒಳ್ಳೆಯ ‘ಸಸಿಯನ್ನು’ ಚಿಗುರಿಸುವ ಕಾಲ ಬಂದಿದೆ. ಅವನು ಬುದ್ಧಿವಂತಿಕೆಯಿಂದ ಆಳುವ ರಾಜನಾಗಿರುವನು. ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಬದ್ಧವಾದದ್ದನ್ನು ಮಾಡುವನು.


ಬೋಧಕರನ್ನು ಕಳುಹಿಸದ ಹೊರತು ಜನರಿಗೆ ತಿಳಿಸುವುದಾದರೂ ಹೇಗೆ? ಆದ್ದರಿಂದಲೇ, “ಸುವಾರ್ತಿಕರ ಪಾದಗಳು ಸುಂದರವಾಗಿವೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ಅವರು ಜನರಿಗೆ ಉಪದೇಶಿಸುವುದನ್ನು ನಿಲ್ಲಿಸಲಿಲ್ಲ. ಯೇಸುವೇ ಕ್ರಿಸ್ತನೆಂಬ ಶುಭವಾರ್ತೆಯನ್ನು ಜನರಿಗೆ ಹೇಳುವುದನ್ನು ಮುಂದುವರಿಸಿದರು. ಅವರು ಪ್ರತಿದಿನ ದೇವಾಲಯದಲ್ಲಿಯೂ ಜನರ ಮನೆಗಳಲ್ಲಿಯೂ ಉಪದೇಶಿಸುತ್ತಿದ್ದರು.


ಆದ್ದರಿಂದ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿ. ಆಗ ಆತನು ನಿಮ್ಮ ಪಾಪಗಳನ್ನು ಕ್ಷಮಿಸುವನು.


ದೇವದೂತನು ಅವರಿಗೆ, “ಹೆದರಬೇಡಿರಿ, ಜನರೆಲ್ಲರಿಗೆ ಮಹಾಸಂತೋಷವನ್ನು ಉಂಟುಮಾಡುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ:


ದೇವದೂತನು, “ನನ್ನ ಹೆಸರು ಗಬ್ರಿಯೇಲ. ನಾನು ದೇವರ ಸನ್ನಿಧಿಯಲ್ಲಿ ನಿಂತುಕೊಂಡಿರುವವನು. ನಿನಗೆ ಈ ಶುಭಸಮಾಚಾರವನ್ನು ತಿಳಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ.


“ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸ ಬುಗ್ಗೆಯ ನೀರು ಚಿಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ನಾನು ಜನಾಂಗಗಳನ್ನು ನಡುಗಿಸುವೆನು. ಆಗ ಅವರು ಎಲ್ಲಾ ಜನಾಂಗಗಳ ಐಶ್ವರ್ಯದೊಡನೆ ನಿಮ್ಮಲ್ಲಿಗೆ ಬರುವರು. ಆಗ ನನ್ನ ಈ ಆಲಯವನ್ನು ಮಹಿಮೆಯಿಂದ ತುಂಬಿಸುವೆನು.’ ಸರ್ವಶಕ್ತನಾದ ದೇವರು ಇದನ್ನು ಹೇಳುತ್ತಿದ್ದಾನೆ!


ಯೆಹೋವನ ಸೇವಕನು ಹೇಳುವುದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.


ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ, ನಾವು ರಕ್ಷಿಸಲ್ಪಟ್ಟಿದ್ದೇವೆ. ಚೀಯೋನೇ, ನಿನ್ನ ದೇವರು ಅರಸನಾಗಿದ್ದಾನೆ!” ಎಂಬ ಸಂದೇಶವನ್ನು ಕೇಳುವದು ಎಷ್ಟೋ ಸಂತೋಷ ಕೊಡುವದಾಗಿದೆ.


ಈ ವಿಷಯಗಳ ಬಗ್ಗೆ ತಿಳಿಸಿದವರಲ್ಲಿ ಯೆಹೋವನೆಂಬ ನಾನೇ ಮೊದಲನೆಯವನು. ‘ನೋಡು ನಿನ್ನ ಜನರು ಹಿಂತಿರುಗಿ ಬರುತ್ತಿದ್ದಾರೆ’ ಎಂಬ ಸಂದೇಶವನ್ನು ನಾನು ಜೆರುಸಲೇಮಿಗೆ ಕಳುಹಿಸಿದೆನು.”


ಚೀಯೋನೇ, ಸಾರಿ ತಿಳಿಸಲು ನಿನಗೆ ಒಂದು ಶುಭವಾರ್ತೆಯಿದೆ. ಉನ್ನತ ಪರ್ವತಕ್ಕೆ ಏರಿಹೋಗಿ ಶುಭವಾರ್ತೆಯನ್ನು ಗಟ್ಟಿಯಾಗಿ ಸಾರು! ಜೆರುಸಲೇಮೇ, ನಿನಗೆ ತಿಳಿಸಲು ಒಳ್ಳೆಯ ವಾರ್ತೆ ಇದೆ. ಹೆದರಬೇಡ, ಅದನ್ನು ಗಟ್ಟಿಯಾಗಿ ಸಾರು. ಯೆಹೂದದ ಎಲ್ಲಾ ನಗರಗಳಲ್ಲಿ ತಿಳಿಸು: “ಇಗೋ! ನಿನ್ನ ದೇವರು ಇಲ್ಲಿದ್ದಾನೆ.”


ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು. ಆ ಕೊಂಬೆಯು ಇಷಯನ ಬೇರಿನಿಂದ ಬೆಳೆಯುವುದು.


ನನ್ನ ಒಡೆಯನಾದ ದೇವರು ನಿಮಗೊಂದು ಗುರುತನ್ನು ಕೊಡುವನು: ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನಿಗೆ ಜನ್ಮ ನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ನಿಮ್ಮ ದೇವರು ನಿಮ್ಮ ಬಳಿಗೆ ಪ್ರವಾದಿಯನ್ನು ಕಳುಹಿಸುವನು. ಆ ಪ್ರವಾದಿಯು ನಿಮ್ಮ ಕುಲದವರಲ್ಲಿ ಒಬ್ಬನಾಗಿರುವನು. ಅವನು ನನ್ನ ಹಾಗೆ ಇರುವನು ಮತ್ತು ನೀವು ಅವನ ಮಾತುಗಳನ್ನು ಕೇಳಬೇಕು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ನಾನು ನಿನ್ನ ಸಂತಾನವನ್ನು ಆಕಾಶದಲ್ಲಿನ ನಕ್ಷತ್ರಗಳಷ್ಟು ಹೆಚ್ಚಿಸಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳವರು ನಿನ್ನ ಸಂತತಿಯಿಂದ ಆಶೀರ್ವಾದ ಹೊಂದುವರು.


ನೀನು ನನಗೆ ವಿಧೇಯನಾದದ್ದರಿಂದ ನಿನ್ನ ಸಂತತಿಗಳವರ ಮೂಲಕವಾಗಿ ಭೂಮಿಯ ಮೇಲಿರುವ ಪ್ರತಿಯೊಂದು ಜನಾಂಗವೂ ಆಶೀರ್ವಾದ ಹೊಂದುವುದು” ಎಂದು ಹೇಳಿದನು.


ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು; ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ ಆಶೀರ್ವಾದ ಹೊಂದುವರು” ಎಂದು ಹೇಳಿದನು.


ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.


ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ!


“ದೇವರು ತನ್ನ ವಾಗ್ದಾನಕ್ಕನುಸಾರವಾಗಿ ದಾವೀದನ ಸಂತಾನದವರಲ್ಲಿ ಒಬ್ಬನನ್ನು ಇಸ್ರೇಲರ ರಕ್ಷಕನನ್ನಾಗಿ ಕಳುಹಿಸಿ ಕೊಟ್ಟಿದ್ದಾನೆ. ಆತನೇ ಯೇಸು.


“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.


ದೇವರು ತನ್ನ ಜನರಿಗೆ ಈ ಸುವಾರ್ತೆಯನ್ನು ಕೊಡುವುದಾಗಿ ಬಹುಕಾಲದ ಹಿಂದೆಯೇ ತನ್ನ ಪ್ರವಾದಿಗಳ ಮೂಲಕ ಪವಿತ್ರ ಗ್ರಂಥದಲ್ಲಿ ವಾಗ್ದಾನ ಮಾಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು