Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:4 - ಪರಿಶುದ್ದ ಬೈಬಲ್‌

4 ಬಾರ್ನಬ ಮತ್ತು ಸೌಲರನ್ನು ಪವಿತ್ರಾತ್ಮನೇ ಕಳುಹಿಸಿಕೊಟ್ಟನು. ಅವರು ಸೆಲೂಸಿಯಾ ಪಟ್ಟಣಕ್ಕೆ ಹೋದರು. ಬಳಿಕ ಅವರು ಸೆಲೂಸಿಯಾದಿಂದ ಸೈಪ್ರಸ್ ದ್ವೀಪಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೀಗೆ ಪವಿತ್ರಾತ್ಮ ಅವರೇ ಕಳುಹಿಸಿದ ಬಾರ್ನಬ ಮತ್ತು ಸೌಲ ಸೆಲೂಸಿಯಾಕ್ಕೆ ಹೋದರು. ಅಲ್ಲಿಂದ ಸೈಪ್ರಸ್ ದ್ವೀಪಕ್ಕೆ ನೌಕಾಯಾನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಿಕೊಂಡವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪವಿತ್ರಾತ್ಮ ದೇವರಿಂದ ಕಳುಹಿಸಲಾದ ಅವರಿಬ್ಬರೂ ಸೆಲ್ಯೂಕ್ಯಕ್ಕೆ ಹೋಗಿ ಅಲ್ಲಿಂದ ನೌಕೆಯಲ್ಲಿ ಪ್ರಯಾಣಮಾಡಿ ಸೈಪ್ರಸಿಗೆ ತಲುಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಬಾನಾಬಾಸಾಕ್ ಅನಿ ಸಾವ್ಲಾಕ್ ಪವಿತ್ರ್ ಆತ್ಮ್ಯಾನುಚ್ ಧಾಡುನ್ ದಿಲ್ಯಾನ್, ತೆನಿ ಸಿಲಿಸಿಯಾ ಮನ್ತಲ್ಯಾ ಶಾರಾಕ್ ಗೆಲೆ, ಮಾನಾ ತೆನಿ ಸಿಲಿಸಿಯಾಕ್ನಾ ಢೊನಾತ್ನಾ ಸೈಪ್ರಸ್ ದ್ವಿಪಾಕ್ ಜಾವ್ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:4
7 ತಿಳಿವುಗಳ ಹೋಲಿಕೆ  

ಆ ವಿಶ್ವಾಸಿಗಳಲ್ಲಿ ಯೋಸೇಫ ಎಂಬವನೂ ಇದ್ದನು. ಅಪೊಸ್ತಲರು ಅವನನ್ನು ಬಾರ್ನಬ ಎಂದು ಕರೆಯುತ್ತಿದ್ದರು. (ಬಾರ್ನಬ ಅಂದರೆ “ಧೈರ್ಯದಾಯಕ.”) ಸೈಪ್ರಸ್‌ನಲ್ಲಿ ಹುಟ್ಟಿದ ಇವನು ಲೇವಿಯನಾಗಿದ್ದನು.


ಇವರೆಲ್ಲರು ಪ್ರಭುವಿನ ಸೇವೆ ಮಾಡುತ್ತಿದ್ದರು ಮತ್ತು ಉಪವಾಸ ಮಾಡುತ್ತಿದ್ದರು. ಪವಿತ್ರಾತ್ಮನು ಅವರಿಗೆ, “ನಾನು ವಿಶೇಷವಾದ ಕಾರ್ಯಕ್ಕಾಗಿ ಬಾರ್ನಬ ಮತ್ತು ಸೌಲರನ್ನು ಆರಿಸಿಕೊಂಡಿದ್ದೇನೆ. ಆ ಕಾರ್ಯಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ” ಎಂದು ಹೇಳಿದನು.


ಸ್ತೆಫನನು ಕೊಲ್ಲಲ್ಪಟ್ಟ ನಂತರ ಉಂಟಾದ ಹಿಂಸೆಯಿಂದಾಗಿ ವಿಶ್ವಾಸಿಗಳು ಚದರಿಹೋದರು. ವಿಶ್ವಾಸಿಗಳಲ್ಲಿ ಕೆಲವರು ಬಹು ದೂರದ ಸ್ಥಳಗಳಾದ ಫೆನಿಷ್ಯ, ಸೈಪ್ರಸ್ ಮತ್ತು ಅಂತಿಯೋಕ್ಯಗಳಿಗೆ ಹೋದರು. ವಿಶ್ವಾಸಿಗಳು ಈ ಸ್ಥಳಗಳಲ್ಲಿ ಸುವಾರ್ತೆಯನ್ನು ತಿಳಿಸಿದರು. ಆದರೆ ಅವರು ಯೆಹೂದ್ಯರಿಗೆ ಮಾತ್ರ ತಿಳಿಸಿದರು.


ನಾವು ಸಿದೋನ್ ಪಟ್ಟಣದಿಂದ ಹೊರಟೆವು. ಎದುರುಗಾಳಿ ಬೀಸುತ್ತಿದ್ದ ಕಾರಣ ನಾವು ಸೈಪ್ರಸ್ ದ್ವೀಪದ ಸಮೀಪದಲ್ಲಿ ನೌಕಾಯಾನ ಮಾಡಿದೆವು.


ಜೆರುಸಲೇಮಿನಲ್ಲಿ ತೊಂದರೆಗಳು ಮತ್ತು ಸೆರೆವಾಸವು ನನಗಾಗಿ ಕಾದಿವೆಯೆಂದು ಪವಿತ್ರಾತ್ಮನು ಪ್ರತಿಯೊಂದು ಪಟ್ಟಣದಲ್ಲಿಯೂ ನನಗೆ ಹೇಳುತ್ತಿರುವುದು ಮಾತ್ರ ಸ್ಪಷ್ಟವಾಗಿದೆ.


ಆದ್ದರಿಂದ ಸಭೆಯವರು ಉಪವಾಸವಿದ್ದು ಪ್ರಾರ್ಥನೆ ಮಾಡಿದರು. ಅವರು ಬಾರ್ನಬ ಮತ್ತು ಸೌಲರ ಮೇಲೆ ಹಸ್ತಾರ್ಪಣೆ ಮಾಡಿ ಅವರನ್ನು ಕಳುಹಿಸಿಕೊಟ್ಟರು.


ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ, “ನಾವು ಅನೇಕ ಪಟ್ಟಣಗಳಲ್ಲಿ ಪ್ರಭುವಿನ ಸಂದೇಶವನ್ನು ತಿಳಿಸಿದೆವು. ಆ ಪಟ್ಟಣಗಳಲ್ಲಿರುವ ನಮ್ಮ ಸಹೋದರ ಸಹೋದರಿಯರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿಕೊಂಡು ಬರೋಣ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು