ಅಪೊಸ್ತಲರ ಕೃತ್ಯಗಳು 14:15 - ಪರಿಶುದ್ದ ಬೈಬಲ್15 “ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಜನರೇ, ನೀವು ಮಾಡುವದು ಇದೇನು? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಪ್ರಿಯ ಜನರೇ, ನೀವಿದನ್ನು ಏಕೆ ಮಾಡುತ್ತಿರುವಿರಿ? ನಾವೂ ನಿಮ್ಮ ಹಾಗೆಯೇ ಮಾನವರು. ಇಂಥಾ ವ್ಯರ್ಥವಾದ ಸಂಗತಿಗಳನ್ನು ಬಿಟ್ಟು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದ ಜೀವಿಸುವ ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ನಿಮಗೆ ಸುವಾರ್ತೆಯನ್ನು ಸಾರುತ್ತಿದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಲೊಕಾನು, ತುಮಿ ಹೆ ಸಗ್ಳೆ ಕಶ್ಯಾಕ್ ಕರುಲ್ಲ್ಯಾಸಿ? ಅಮಿ ದೆವಾ ನ್ಹಯ್, ಅಮಿಬಿ ತುಮ್ಚ್ಯಾ ಸಾರ್ಕಿ ಮಾನ್ಸಾ, ತುಮ್ಕಾ ದೆವಾಚಿ ಬರಿ ಖಬರ್ ಸಾಂಗುಚೆ ಮನುನ್ ಅಮಿ ಹಿತ್ತೆ ಹಾತ್, ಜಿವ್ ಸ್ವರುಪಾಚ್ಯಾ ದೆವಾಕ್ಡೆ ಪರ್ತುನ್ ಯೆವಾ,ಸಮುಂದರ್ ಮಳ್ಬ್, ಜಿಮಿನ್ ಅನಿ ತ್ಯಾತುರ್ ಹೊತ್ತೆ ಹರ್ ಎಕ್ಬಿ ರಚಲ್ಲೊ ತೊಚ್. ಅಧ್ಯಾಯವನ್ನು ನೋಡಿ |
ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”
ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.
ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.
ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.