Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:15 - ಪರಿಶುದ್ದ ಬೈಬಲ್‌

15 “ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಜನರೇ, ನೀವು ಮಾಡುವದು ಇದೇನು? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಪ್ರಿಯ ಜನರೇ, ನೀವಿದನ್ನು ಏಕೆ ಮಾಡುತ್ತಿರುವಿರಿ? ನಾವೂ ನಿಮ್ಮ ಹಾಗೆಯೇ ಮಾನವರು. ಇಂಥಾ ವ್ಯರ್ಥವಾದ ಸಂಗತಿಗಳನ್ನು ಬಿಟ್ಟು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದ ಜೀವಿಸುವ ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ನಿಮಗೆ ಸುವಾರ್ತೆಯನ್ನು ಸಾರುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಲೊಕಾನು, ತುಮಿ ಹೆ ಸಗ್ಳೆ ಕಶ್ಯಾಕ್ ಕರುಲ್ಲ್ಯಾಸಿ? ಅಮಿ ದೆವಾ ನ್ಹಯ್, ಅಮಿಬಿ ತುಮ್ಚ್ಯಾ ಸಾರ್ಕಿ ಮಾನ್ಸಾ, ತುಮ್ಕಾ ದೆವಾಚಿ ಬರಿ ಖಬರ್ ಸಾಂಗುಚೆ ಮನುನ್ ಅಮಿ ಹಿತ್ತೆ ಹಾತ್, ಜಿವ್ ಸ್ವರುಪಾಚ್ಯಾ ದೆವಾಕ್ಡೆ ಪರ್ತುನ್ ಯೆವಾ,ಸಮುಂದರ್ ಮಳ್ಬ್, ಜಿಮಿನ್ ಅನಿ ತ್ಯಾತುರ್ ಹೊತ್ತೆ ಹರ್ ಎಕ್‍ಬಿ ರಚಲ್ಲೊ ತೊಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:15
67 ತಿಳಿವುಗಳ ಹೋಲಿಕೆ  

ಎಲೀಯನು ಸಹ ನಮ್ಮಂತೆಯೇ ಒಬ್ಬ ಮನುಷ್ಯನಾಗಿದ್ದನು. ಮಳೆ ಬಾರದಂತೆ ಅವನು ಪ್ರಾರ್ಥಿಸಿದಾಗ ಮೂರುವರೆ ವರ್ಷಗಳವರೆಗೆ ಆ ನಾಡಿನಲ್ಲಿ ಮಳೆಯೇ ಬೀಳಲಿಲ್ಲ!


ಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ.


ಆದರೆ ಪೇತ್ರನು ಅವನನ್ನು ಮೇಲಕ್ಕೆಬ್ಬಿಸಿ, “ಎದ್ದುನಿಲ್ಲು! ನಾನೂ ನಿನ್ನಂತೆಯೇ ಕೇವಲ ಒಬ್ಬ ಮನುಷ್ಯನು” ಎಂದು ಹೇಳಿದನು.


ವಿಗ್ರಹಗಳು ಕೇವಲ ಪ್ರತಿಮೆಗಳಷ್ಟೇ. ಅವು ನಿಮಗೆ ಸಹಾಯ ಮಾಡಲಾರವು. ಆದ್ದರಿಂದ ಅವುಗಳನ್ನು ಪೂಜಿಸಬೇಡಿ. ವಿಗ್ರಹಗಳು ನಿಮಗೆ ಸಹಾಯ ಮಾಡಲಾರವು ಮತ್ತು ರಕ್ಷಿಸಲಾರವು. ಅವುಗಳಿಂದ ಪ್ರಯೋಜನವೇನೂ ಇಲ್ಲ.


ಆ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ, “ದೇವರಿಗೆ ಭಯಪಡಿರಿ. ಆತನನ್ನು ಸ್ತುತಿಸಿರಿ. ಜನರಿಗೆಲ್ಲ ದೇವರು ತೀರ್ಪು ನೀಡುವ ಸಮಯವು ಹತ್ತಿರ ಬಂದಿದೆ. ದೇವರನ್ನು ಆರಾಧಿಸಿರಿ. ಪರಲೋಕವನ್ನೂ ಭೂಮಿಯನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಸೃಷ್ಟಿಸಿದವನು ಆತನೇ” ಎಂದು ಹೇಳಿದನು.


ಅನ್ಯರ ವಿಗ್ರಹಗಳಿಗೆ ಮಳೆ ಸುರಿಸುವ ಸಾಮರ್ಥ್ಯವಿಲ್ಲ. ಆಕಾಶಕ್ಕೆ ಮಳೆಯನ್ನು ಸುರಿಸುವ ಸಾಮರ್ಥ್ಯವಿಲ್ಲ. ನೀನೊಬ್ಬನೇ ನಮ್ಮ ಆಶಾಕೇಂದ್ರ. ನೀನೇ ಈ ಎಲ್ಲವುಗಳನ್ನು ಸೃಷ್ಟಿಸಿದವನು.


ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.


ನಾವು ನಿಮ್ಮೊಡನೆ ಇದ್ದಾಗ ನೀವು ನಮ್ಮ ಬೋಧನೆಯನ್ನು ಹೃತ್ಪೂರ್ವಕವಾಗಿ ಸ್ವೀಕರಿಸಿಕೊಂಡದ್ದರ ಕುರಿತಾಗಿಯೂ ವಿಗ್ರಹಾರಾಧನೆಯನ್ನು ನಿಲ್ಲಿಸಿ ಜೀವವುಳ್ಳ ಸತ್ಯದೇವರನ್ನು ಆರಾಧಿಸತೊಡಗಿದ್ದರ ಕುರಿತಾಗಿಯೂ ಅಲ್ಲಿನ ಜನರೆಲ್ಲರೂ ತಿಳಿಸುತ್ತಾರೆ.


ಪ್ರಭುವಿಗೋಸ್ಕರ ನಾನು ನಿಮಗೆ ಇದನ್ನು ಹೇಳುತ್ತೇನೆ ಮತ್ತು ಎಚ್ಚರಿಸುತ್ತೇನೆ. ಅವಿಶ್ವಾಸಿಗಳಂತೆ ಇನ್ನು ಮೇಲೆ ಜೀವಿಸದಿರಿ. ಅವರ ಆಲೋಚನೆಗಳು ನಿಷ್ಪ್ರಯೋಜಕವಾಗಿವೆ.


“ಕೆಲವು ಜನರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಪೂಜಿಸುತ್ತಾರೆ. ಆದರೆ ಆ ವಿಗ್ರಹಗಳು ಅವರಿಗೆ ಸಹಾಯ ಮಾಡುವುದಿಲ್ಲ.


ಅವರು ದೆವ್ವಗಳನ್ನು ದೇವರನ್ನಾಗಿ ಮಾಡಿ ನನ್ನಲ್ಲಿ ಅಸೂಯೆಯನ್ನು ಉಂಟುಮಾಡಿದರು. ಆ ವಿಗ್ರಹಗಳು ನಿಜವಾದ ದೇವರುಗಳಲ್ಲ! ಅವರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಮಾಡಿ ನನ್ನನ್ನು ಸಿಟ್ಟಿಗೆಬ್ಬಿಸಿದರು. ಆದ್ದರಿಂದ ನಿಜವಾದ ಜನಾಂಗವಲ್ಲದವರಿಂದ ನಾನು ಅವರಲ್ಲಿ ಈರ್ಷೆಯನ್ನು ಉಂಟು ಮಾಡುವೆನು. ಮೂರ್ಖ ಜನಾಂಗದಿಂದ ಅವರನ್ನು ಸಿಟ್ಟಿಗೆಬ್ಬಿಸುವೆನು.


ಇದನ್ನು ಕೇಳಿದಾಗ ವಿಶ್ವಾಸಿಗಳು ಏಕಮನಸ್ಸಿನಿಂದ ದೇವರಲ್ಲಿ ಪ್ರಾರ್ಥಿಸಿದರು: ಅವರೆಲ್ಲರಲ್ಲಿ ಒಂದೇ ಮನಸ್ಸಿತ್ತು. “ಒಡೆಯನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಲೋಕದಲ್ಲಿರುವ ಪ್ರತಿಯೊಂದನ್ನೂ ನಿರ್ಮಿಸಿದಾತನು ನೀನೇ.


ಸೀಮೋನ್ ಪೇತ್ರನು, “ನೀನೇ ಬರಬೇಕಾಗಿರುವ ಕ್ರಿಸ್ತನು. ನೀನೇ ಜೀವಸ್ವರೂಪನಾದ ದೇವರ ಮಗನು” ಎಂದು ಉತ್ತರಕೊಟ್ಟನು.


“ದೇವರಾದ ಯೆಹೋವನೇ, ನೀನು ಭೂಮ್ಯಾಕಾಶಗಳನ್ನು ಸೃಷ್ಟಿಸಿದೆ. ಅವುಗಳನ್ನು ನೀನು ನಿನ್ನ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ.


ಸುಳ್ಳುದೇವರುಗಳನ್ನು ಪೂಜಿಸುವವರನ್ನು ನಾನು ದ್ವೇಷಿಸುವೆನು. ನಾನು ಯೆಹೋವನಲ್ಲಿಯೇ ಭರವಸವಿಡುವೆನು.


ಯಾಕೆಂದರೆ ಯೆಹೋವನು ಆರು ದಿನಗಳಲ್ಲಿ ಕೆಲಸ ಮಾಡಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿದನು. ಆದ್ದರಿಂದ ಯೆಹೋವನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ತನ್ನ ದಿನವನ್ನಾಗಿ ಮಾಡಿದನು.


ಆದ್ದರಿಂದ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಯಾರೂ ಕೆಟ್ಟಬುದ್ಧಿಯುಳ್ಳವರಾಗದಂತೆ, ನಂಬದವರಾಗದಂತೆ, ಜೀವಸ್ವರೂಪನಾದ ದೇವರನ್ನು ತೊರೆಯದಂತೆ ಎಚ್ಚರಿಕೆಯಿಂದಿರಿ.


ನಂತರ ನಾನು ನಿನ್ನ ಬಳಿಗೆ ಬೇಗ ಬಾರದೆ ಇದ್ದರೂ, ದೇವರ ಮನೆಯಲ್ಲಿ ಜನರು ಮಾಡಲೇಬೇಕಾದ ಕಾರ್ಯಗಳ ಬಗ್ಗೆ ನಿನಗೆ ತಿಳಿದಿದೆ. ಆ ಮನೆಯು ಜೀವಂತ ದೇವರ ಸಭೆ. ಅದು ಸತ್ಯದ ಅಡಿಪಾಯವೂ ಆಧಾರವೂ ಆಗಿದೆ.


ಪೌಲ ಬಾರ್ನಬರು ದರ್ಬೆ ಪಟ್ಟಣದಲ್ಲೂ ಸುವಾರ್ತೆಯನ್ನು ತಿಳಿಸಿದರು. ಅನೇಕ ಜನರು ಯೇಸುವಿನ ಶಿಷ್ಯರಾದರು. ಪೌಲಬಾರ್ನಬರು ಲುಸ್ತ್ರ, ಇಕೋನಿಯ ಮತ್ತು ಅಂತಿಯೋಕ್ಯ ಪಟ್ಟಣಗಳಿಗೆ ಹಿಂತಿರುಗಿ,


ತನ್ನ ಸ್ವಂತ ಆಲೋಚನೆಗಳನ್ನು ಉಪದೇಶಿಸುವವನು, ತನಗೇ ಘನತೆಯನ್ನು ಉಂಟುಮಾಡಿಕೊಳ್ಳಲು ಪ್ರಯತ್ನಿಸುತ್ತಾನೆ. ಆದರೆ ತನ್ನನ್ನು ಕಳುಹಿಸಿದಾತನಿಗೆ ಘನತೆಯನ್ನು ಉಂಟುಮಾಡಲು ಪ್ರಯತ್ನಿಸುವವನು ಸತ್ಯವನ್ನೇ ಹೇಳುತ್ತಾನೆ. ಆತನಲ್ಲಿ ಯಾವ ಸುಳ್ಳೂ ಇಲ್ಲ.


ಇಸ್ರೇಲಿನ ಬಗ್ಗೆ ಯೆಹೋವನ ದುಃಖದ ಸಂದೇಶ. ಯೆಹೋವನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುತ್ತಾನೆ. ಮಾನವನಲ್ಲಿ ತನ್ನ ಆತ್ಮವನ್ನಿಟ್ಟನು. ಆ ಬಳಿಕ ಆತನು ಹೇಳಿದ್ದೇನೆಂದರೆ,


ಬೇರೆ ಜನಾಂಗಗಳ ಎಲ್ಲಾ ಜನರು ಮಂದಬುದ್ಧಿಯವರಾಗಿದ್ದಾರೆ ಮತ್ತು ಮೂರ್ಖರಾಗಿದ್ದಾರೆ; ಅವರ ಉಪದೇಶಗಳು ನಿಷ್ಪ್ರಯೋಜಕವಾದ ಮರದ ಬೊಂಬೆಗಳಿಂದ ಬಂದವುಗಳಾಗಿವೆ.


ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”


ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.


“ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು.


ಯೆಹೋವನು ದೇವರಾಗಿದ್ದಾನೆ. ಆತನು ಭೂಮ್ಯಾಕಾಶಗಳನ್ನು ಉಂಟುಮಾಡಿದ್ದಾನೆ. ಆತನು ಭೂಮಿಯನ್ನು ಅದರ ಸ್ಥಾನದಲ್ಲಿ ಇಟ್ಟಿದ್ದಾನೆ. ಆತನು ಈ ಲೋಕವನ್ನು ಸೃಷ್ಟಿಸಿದ್ದು ಅದು ಶೂನ್ಯವಾಗಿರಲೆಂದಲ್ಲ. ಅದು ಜನಭರಿತವಾಗಿರಲೆಂದೇ ಸೃಷ್ಟಿಸಿದನು. “ನಾನೇ ಯೆಹೋವನು, ನನ್ನ ಹೊರತು ಬೇರೆ ದೇವರುಗಳಿಲ್ಲ.


ನಮಗೆ ಸಹಾಯವು ಯೆಹೋವನಿಂದಲೇ ಬಂದಿತು. ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿದವನು ಆತನೇ.


ಯೆಹೋವನು ಆಜ್ಞಾಪಿಸಲು ಆಕಾಶವು ಸೃಷ್ಟಿಯಾಯಿತು! ಆತನ ಉಸಿರು ಭೂಮಿಯ ಮೇಲಿರುವ ಸಮಸ್ತವನ್ನು ಸೃಷ್ಟಿಸಿತು.


ಜೀವಸ್ವರೂಪನಾದ ದೇವರ ನುಡಿಯನ್ನು ಪ್ರತ್ಯಕ್ಷವಾಗಿ ನಾವು ಕೇಳಿದ ಹಾಗೆ ಬೇರೆ ಯಾರೂ ಕೇಳಿಲ್ಲ. ಆದರೂ ನಾವು ಜೀವದಿಂದಿದ್ದೇವೆ.


ಆದರೆ ಆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ನಾನು ನಿನ್ನಂತೆ, ಈ ಪುಸ್ತಕದಲ್ಲಿರುವ ವಾಕ್ಯಗಳಿಗೆ ವಿಧೇಯರಾಗಿರುವ ಎಲ್ಲ ಜನರಂತೆ ಮತ್ತು ನಿನ್ನ ಸಹೋದರರಾದ ಪ್ರವಾದಿಗಳಂತೆ ಒಬ್ಬ ಸೇವಕನು. ನೀನು ದೇವರನ್ನು ಆರಾಧಿಸಬೇಕು!” ಎಂದು ಹೇಳಿದನು.


ನಂತರ ನಾನು ಲೋಕದ ರಾಜರನ್ನು ಮತ್ತು ಮೃಗವನ್ನು ನೋಡಿದೆನು. ಅವರು ಕುದುರೆಯ ಮೇಲೆ ಕುಳಿತಿದ್ದವನ ಮೇಲೆ ಮತ್ತು ಅವನ ಸೈನ್ಯದ ಮೇಲೆ ಯುದ್ಧ ಮಾಡುವುದಕ್ಕಾಗಿ ತಮ್ಮ ಸೈನ್ಯವನ್ನೆಲ್ಲ ಒಟ್ಟುಗೂಡಿಸಿದ್ದರು.


ಆಗ ನಾನು ದೇವದೂತನನ್ನು ಆರಾಧಿಸಲು ಅವನ ಪಾದದ ಮುಂದೆ ಅಡ್ಡಬಿದ್ದೆನು. ಆದರೆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ಯೇಸುವಿನ ಸತ್ಯವನ್ನು ಹೊಂದಿರುವ ನಿನ್ನಂತೆಯೂ ನಿನ್ನ ಸಹೋದರರಂತೆಯೂ ನಾನು ಒಬ್ಬ ಸೇವಕನಾಗಿದ್ದೇನೆ. ಆದ್ದರಿಂದ ದೇವರನ್ನು ಆರಾಧಿಸು! ಏಕೆಂದರೆ ಯೇಸುವಿನ ಸತ್ಯವೇ ಪ್ರವಾದನೆಯ ಸಾಕ್ಷಿಯಾಗಿದೆ” ಎಂದು ಹೇಳಿದನು.


ಆದ್ದರಿಂದ ಜನರೇ, ಸಂತೋಷದಿಂದಿರಿ! ನಾನು ದೇವರಲ್ಲಿ ಭರವಸೆಯಿಟ್ಟಿದ್ದೇನೆ. ಆತನ ದೂತನು ಹೇಳಿದಂತೆ ಪ್ರತಿಯೊಂದೂ ನೆರವೇರುವುದು.


ಆ ಜನರು ಬಹಳ ದಿನಗಳವರೆಗೆ ಊಟಮಾಡಲಿಲ್ಲ. ಆಗ ಒಂದು ದಿನ ಪೌಲನು ಎದ್ದುನಿಂತುಕೊಂಡು ಅವರಿಗೆ, “ಜನರೇ, ಕ್ರೇಟ್ ದ್ವೀಪದಿಂದ ಹೊರಡಬೇಡಿರಿ ಎಂದು ನಾನು ನಿಮಗೆ ಹೇಳಿದೆ. ನೀವು ನನ್ನ ಮಾತನ್ನು ಕೇಳಬೇಕಿತ್ತು. ಆಗ ನಿಮಗೆ ಇಷ್ಟು ಕಷ್ಟವಾಗಲಿ ನಷ್ಟವಾಗಲಿ ಆಗುತ್ತಿರಲಿಲ್ಲ.


ಆದ್ದರಿಂದ ಪೌಲನು ಅವರಿಗೆ, “ಜನರೇ, ಈ ಪ್ರಯಾಣದಲ್ಲಿ ನಮಗೆ ಬಹಳ ತೊಂದರೆಯಿದೆ ಎಂದು ನನಗೆ ತೋರುತ್ತದೆ. ಹಡಗು ಮತ್ತು ಹಡಗಿನಲ್ಲಿರುವ ವಸ್ತುಗಳು ನಾಶವಾಗುತ್ತವೆ. ನಮ್ಮ ಪ್ರಾಣಗಳು ಸಹ ನಷ್ಟವಾಗಬಹುದು!” ಎಂದು ಎಚ್ಚರಿಸಿದನು.


ಬಳಿಕ ಅವನು ಅವರನ್ನು ಹೊರಗೆ ಕರೆದುಕೊಂಡು ಬಂದು, “ಸ್ವಾಮಿಗಳೇ, ನಾನು ರಕ್ಷಣೆ ಹೊಂದಬೇಕಾದರೆ ಏನು ಮಾಡಬೇಕು?” ಎಂದು ಕೇಳಿದನು.


ಅವರು ಅಲ್ಲಿಯೂ ಸುವಾರ್ತೆ ತಿಳಿಸಿದರು.


“ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ವಿಷಯವಾದ ಸುವಾರ್ತೆಯನ್ನು ನಾವು ನಿಮಗೆ ಹೇಳುತ್ತೇವೆ.


“ಮರುದಿನ, ಇಬ್ಬರು ಯೆಹೂದ್ಯರು ಹೊಡೆದಾಡುವುದನ್ನು ಮೋಶೆಯು ಕಂಡನು. ಅವರನ್ನು ಸಮಾಧಾನಪಡಿಸಲು ಅವನು ಪ್ರಯತ್ನಿಸಿ ‘ಗೆಳೆಯರೇ, ನೀವು ಸಹೋದರರಾಗಿದ್ದೀರಿ! ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡುವುದೇಕೆ?’ ಎಂದು ಅವರನ್ನು ಕೇಳಿದನು.


ತಂದೆಯು ಜೀವಕೊಡುವ ಶಕ್ತಿಯನ್ನು ತಾನು ಹೊಂದಿರುವಂತೆ ಮಗನಿಗೂ ಜೀವಕೊಡುವ ಶಕ್ತಿಯನ್ನು ಅನುಗ್ರಹಿಸಿದನು,


ಯೆಹೋವನು ಹೇಳುವುದೇನೆಂದರೆ, “ಯೆಹೂದ ಜನರ ಅನೇಕ ಅಪರಾಧಗಳಿಗಾಗಿ ಅವರನ್ನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲಿಲ್ಲ. ಅವರ ಪೂರ್ವಿಕರು ಸುಳ್ಳನ್ನು ನಂಬಿದರು. ಆ ಸುಳ್ಳುಗಳಿಂದ ಅವರು ನನ್ನನ್ನು ಹಿಂಬಾಲಿಸಲಿಲ್ಲ.


ನಾನೊಂದು ಹೊಸ ಶಾಸನವನ್ನು ಮಾಡುತ್ತಿದ್ದೇನೆ. ಈ ಶಾಸನವು ನನ್ನ ರಾಜ್ಯದ ಎಲ್ಲ ಭಾಗಗಳ ಜನರಿಗೆ ಅನ್ವಯಿಸುವುದು. ನೀವೆಲ್ಲರೂ ದಾನಿಯೇಲನ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ದಾನಿಯೇಲನ ದೇವರೇ ಜೀವಸ್ವರೂಪನಾದ ದೇವರು. ಆತನು ನಿರಂತರವೂ ಇರುವಾತನಾಗಿದ್ದಾನೆ. ಆತನ ಸಾಮ್ರಾಜ್ಯವು ಎಂದಿಗೂ ಹಾಳಾಗುವದಿಲ್ಲ. ಆತನ ಆಧಿಪತ್ಯವು ಎಂದಿಗೂ ಮುಗಿಯುವದಿಲ್ಲ.


ಯೆಹೋವನೇ, ದಯವಿಟ್ಟು ನನ್ನ ಮಾತುಗಳನ್ನು ಆಲಿಸು! ಯೆಹೋವನೇ, ನಿನ್ನ ಕಣ್ಣುಗಳನ್ನು ತೆರೆದು, ಈ ಪತ್ರವನ್ನು ನೋಡು. ಸನ್ಹೇರೀಬನು ಜೀವಸ್ವರೂಪನಾದ ದೇವರನ್ನು ನಿಂದಿಸಿ ಕಳುಹಿಸಿರುವ ಈ ವಾಕ್ಯವನ್ನು ಕೇಳು!


ಸೇನಾಧಿಪತಿಯ ಒಡೆಯನಾದ ಅಶ್ಶೂರದ ರಾಜನು, ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟದ್ದನ್ನು ನುಡಿಯಲು ಅವನನ್ನು ಕಳುಹಿಸಿದನು. ನಿಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲ ಕೇಳಿರುತ್ತಾನೆ. ಯೆಹೋವನು ಶತ್ರುಗಳನ್ನು ತಪ್ಪಿತಸ್ಥರೆಂದು ನಿರ್ಧರಿಸಬಹುದು! ಆದ್ದರಿಂದ ಇನ್ನೂ ಜೀವಸಹಿತ ಉಳಿದಿರುವ ಜನರಿಗಾಗಿ ಪ್ರಾರ್ಥಿಸಿ” ಎಂದು ಹೇಳಿದರು.


ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅವನೂ ಮಾಡಿದನು, ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಆದ್ದರಿಂದ ಅವರು ಇಸ್ರೇಲಿನ ದೇವರಾದ ಯೆಹೋವನನ್ನು ಹೆಚ್ಚು ಕೋಪಗೊಳಿಸಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಆರಾಧಿಸಿದ್ದರಿಂದ ಯೆಹೋವನು ಕೋಪಗೊಂಡನು.


ಬಾಷನ ಮತ್ತು ಅವನ ಮಗನಾದ ಏಲನ ಪಾಪಗಳೇ ಅದಕ್ಕೆ ಕಾರಣ. ಅವರು ಪಾಪಗಳನ್ನು ಮಾಡಿದರು ಮತ್ತು ಪಾಪಗಳನ್ನು ಮಾಡುವಂತೆ ಇಸ್ರೇಲಿನ ಜನರನ್ನು ಪ್ರೇರೇಪಿಸಿದರು. ಅವರಲ್ಲಿ ಅನೇಕ ವಿಗ್ರಹಗಳಿದ್ದುದರಿಂದ ಯೆಹೋವನು ಕೋಪಗೊಂಡನು.


ನಾನು ಒಂದು ಸಿಂಹವನ್ನೂ ಒಂದು ಕರಡಿಯನ್ನೂ ಕೊಂದಿದ್ದೇನೆ. ಅದೇ ರೀತಿಯಲ್ಲಿ ನಾನು ಅನ್ಯದೇಶಿಯನಾದ ಗೊಲ್ಯಾತನನ್ನೂ ಕೊಂದು ಹಾಕುತ್ತೇನೆ. ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸಿದ್ದರಿಂದ ಗೊಲ್ಯಾತನು ಸಾಯಲೇಬೇಕು.


ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.


ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.


ಯೋಸೇಫನು, “ಕನಸುಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ನನ್ನಲ್ಲಿಲ್ಲ. ಆ ಶಕ್ತಿಯನ್ನು ಹೊಂದಿರುವವನು ದೇವರೊಬ್ಬನೇ. ಆದರೆ ದೇವರು ಫರೋಹನಿಗೋಸ್ಕರ ಅರ್ಥವನ್ನು ತಿಳಿಸುವನು” ಎಂದು ಹೇಳಿದನು.


ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಪರಲೋಕವನ್ನೂ ಭೂಲೋಕವನ್ನೂ ಸೃಷ್ಟಿಮಾಡಿದಾತನು ಆತನೇ.


ಯೆಹೋವನು ತನ್ನ ಅಪಾರ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದನು. ತನ್ನ ಜ್ಞಾನದಿಂದ ಈ ಲೋಕವನ್ನು ನಿರ್ಮಿಸಿದನು. ತನ್ನ ವಿವೇಕದಿಂದ ಆಕಾಶವನ್ನು ಹರಡಿದನು.


“ನಮ್ಮ ಪ್ರಭುವೇ, ನಮ್ಮ ದೇವರೇ! ನೀನು ಪ್ರಭಾವ, ಗೌರವ, ಅಧಿಕಾರಗಳನ್ನು ಪಡೆಯಲು ಯೋಗ್ಯನಾಗಿರುವೆ. ಎಲ್ಲವನ್ನೂ ನಿರ್ಮಿಸಿದಾತನು ನೀನೇ. ನಿನ್ನ ಚಿತ್ತದಂತೆಯೇ ಎಲ್ಲವೂ ಇದ್ದವು; ಎಲ್ಲವೂ ಸೃಷ್ಟಿಗೊಂಡವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು