Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:18 - ಪರಿಶುದ್ದ ಬೈಬಲ್‌

18 ಪೌಲ ಬಾರ್ನಬರು ಇಷ್ಟೆಲ್ಲಾ ಹೇಳಿದರೂ ಯಜ್ಞವರ್ಪಿಸಿ ಆರಾಧಿಸದಂತೆ ಜನರನ್ನು ತಡೆಯಲು ಬಹಳ ಪ್ರಯಾಸಪಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬಾರ್ನಬ ಮತ್ತು ಪೌಲರು ಈ ಮಾತುಗಳನ್ನು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯಲು ಆಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪ್ರೇಷಿತರು ಇಷ್ಟು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯುವುದು ಕಷ್ಟಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಈ ಮಾತುಗಳನ್ನು ಹೇಳಿದರೂ ಜನರನ್ನು ತಮಗೆ ಬಲಿಕೊಡದಂತೆ ತಡೆಯುವದು ಕಷ್ಟವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೀಗೆ ಹೇಳಿದರೂ ಆ ಜನಸಮೂಹ ಅವರಿಗೆ ಬಲಿಯರ್ಪಿಸುವುದನ್ನು ತಡೆಯಲು ಕಷ್ಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಪಾವ್ಲುನ್ ಅನಿ ಬಾರ್ನಾಬಾಸಾನ್ ಯೆವ್ಡೆ ಸಗ್ಳ್ಯೆ ಸಾಂಗ್ಲಾರ್ಬಿ ಬಲಿ ಭೆಟ್ವುನ್ ಆರಾದನ್ ಕರುಚೆ ಮನುನ್ ಯೆಲ್ಲ್ಯಾ ಲೊಕಾಕ್ನಿ ಅಡ್ವುಕ್ ಲೈ ತರಾಸ್ ಹೊಲೊ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:18
8 ತಿಳಿವುಗಳ ಹೋಲಿಕೆ  

ತನ್ನನ್ನು ಬಲವಂತದಿಂದ ರಾಜನನ್ನಾಗಿ ಮಾಡಲು ಜನರು ಯೋಚಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅಲ್ಲಿಂದ ತಾನೊಬ್ಬನೇ ಬೆಟ್ಟಕ್ಕೆ ಮತ್ತೆ ಹೋದನು.


ಮನೆಯ ಸುತ್ತಲೂ ನಿಂತುಕೊಂಡಿದ್ದ ಗಂಡಸರು ಅವನಿಗೆ, “ದಾರಿಬಿಡು” ಎಂದು ಕೂಗಿದರು. ಆಮೇಲೆ ಅವರು ತಮ್ಮೊಳಗೆ, “ಈ ಲೋಟನು ನಮ್ಮ ನಗರಕ್ಕೆ ಪ್ರವಾಸಿಗನಂತೆ ಬಂದು ಈಗ ನಮಗೇ ನ್ಯಾಯವನ್ನು ಹೇಳಿಕೊಡುತ್ತಿದ್ದಾನೆ” ಎಂದು ಮಾತಾಡಿಕೊಂಡರು. ಆಮೇಲೆ ಅವರು ಲೋಟನಿಗೆ, “ನಾವು ಆ ಪುರುಷರಿಗೆ ಮಾಡುವುದಕ್ಕಿಂತ ನಿನಗೇ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ” ಎಂದು ಕೂಗಿಹೇಳಿ ಲೋಟನ ಸಮೀಪಕ್ಕೆ ಬಂದು ಬಾಗಿಲನ್ನು ಮುರಿದುಹಾಕಲು ಸಿದ್ಧರಾದರು.


ಯೆಹೋವನು, “ಈ ಜನರೆಲ್ಲರು ಒಂದೇ ಭಾಷೆಯನ್ನು ಮಾತಾಡುವುದರಿಂದ ಒಟ್ಟಾಗಿ ಸೇರಿಕೊಂಡಿದ್ದಾರೆ. ಪ್ರಾರಂಭದಲ್ಲೇ ಇಂಥ ಕಾರ್ಯವನ್ನು ಮಾಡುತ್ತಿರುವ ಇವರು ಮುಂದೆ ಏನು ಬೇಕಾದರೂ ಮಾಡಲು ಶಕ್ತರಾಗುವರು.


ಹೌದು, ಇವರ ಮನಸ್ಸುಗಳು ಕಠಿಣವಾಗಿವೆ. ಕಿವಿ ಮಂದವಾಗಿವೆ, ಕಣ್ಣು ಮಬ್ಬಾಗಿವೆ. ಅವರು ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆಯೂ ನನ್ನ ಕಡೆಗೆ ತಿರುಗಿಕೊಳ್ಳದಂತೆಯೂ ನನ್ನಿಂದ ಗುಣಹೊಂದದಂತೆಯೂ ಹೀಗಾಯಿತು.’


ಆದರೆ ತಾನೊಬ್ಬನೇ ನಿಜದೇವರೆಂಬುದನ್ನು ಆತನು ತನ್ನ ಒಳ್ಳೆಯ ಕಾರ್ಯಗಳಿಂದ ನಿರೂಪಿಸುತ್ತಿದ್ದಾನೆ. ಆತನು ನಿಮಗೆ ಆಕಾಶದಿಂದ ಮಳೆಯನ್ನೂ ನಿಮ್ಮ ಆಹಾರಕೋಸ್ಕರ ಸಕಾಲದಲ್ಲಿ ಸುಗ್ಗಿಯನ್ನೂ ದಯಪಾಲಿಸಿ ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸುತ್ತಿದ್ದಾನೆ.”


ಬಳಿಕ ಕೆಲವು ಯೆಹೂದ್ಯರು ಅಂತಿಯೋಕ್ಯದಿಂದ ಮತ್ತು ಇಕೋನಿಯದಿಂದ ಬಂದು ಪೌಲನಿಗೆ ವಿರೋಧವಾಗಿ ಜನರನ್ನು ಹುರಿದುಂಬಿಸಿ ಪೌಲನಿಗೆ ಕಲ್ಲೆಸೆದು, ಅವನು ಸತ್ತನೆಂದು ಭಾವಿಸಿ ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು