Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:4 - ಪರಿಶುದ್ದ ಬೈಬಲ್‌

4 ಆದರೆ ಪಟ್ಟಣದ ಜನರಲ್ಲಿ ಕೆಲವರು ಯೆಹೂದ್ಯರ ಮಾತನ್ನೂ ಇನ್ನು ಕೆಲವರು ಪೌಲ ಬಾರ್ನಬರ ಮಾತನ್ನೂ ನಂಬಿಕೊಂಡದ್ದರಿಂದ ಅವರಲ್ಲಿಯೇ ಎರಡು ಪಂಗಡವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಆ ಊರಿನ ಜನರು ಎರಡು ಭಾಗವಾದರೂ; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯ ಉಂಟಾಯಿತು. ಕೆಲವರು ಯೆಹೂದ್ಯರ ಪರವಾಗಿಯೂ ಮತ್ತೆ ಕೆಲವರು ಪ್ರೇಷಿತರ ಪರವಾಗಿಯೂ ವಿಂಗಡವಾಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಆ ಊರಿನ ಜನರಲ್ಲಿ ಭೇದವುಂಟಾಯಿತು; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯಗಳಾದವು. ಕೆಲವರು ಯೆಹೂದ್ಯರ ಪರವಾದರು, ಇನ್ನೂ ಕೆಲವರು ಅಪೊಸ್ತಲರ ಪರವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಖರೆ ಶಾರಾತ್ಲ್ಯಾ ಲೊಕಾತ್ನಿ ಥೊಡ್ಯಾನಿ ಪಾವ್ಲು ಅನಿ ಬಾರ್ನಾಬಾಸಾಚ್ಯಾ ವಾಂಗ್ಡಾ ಗೆಲಿ, ಅನಿ ಥೊಡ್ಯಾ ಲೊಕಾನಿ ಅಪೊಸ್ತಲಾಂಚ್ಯಾ ವಾಂಗ್ಡಾ ಗೆಲ್ಯಾನಿ ತೆಚ್ಯಾ ಸಾಟ್ನಿ ಥೈಚ್ ದೊನ್ ತಾಂಡೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:4
18 ತಿಳಿವುಗಳ ಹೋಲಿಕೆ  

ಪೌಲನು ಹೇಳಿದ ಕೆಲವು ಸಂಗತಿಗಳನ್ನು ಕೆಲವು ಮಂದಿ ಯೆಹೂದ್ಯರು ನಂಬಿದರು. ಆದರೆ ಉಳಿದವರು ನಂಬಲಿಲ್ಲ.


ಆದರೆ ಆ ಯೆಹೂದ್ಯರಲ್ಲಿ ಕೆಲವರು ಮೊಂಡರಾದರು. ಅವರು ನಂಬದೆ ದೇವರ ಮಾರ್ಗವನ್ನು ಜನರೆಲ್ಲರ ಎದುರಿನಲ್ಲಿ ದೂಷಿಸಿದರು. ಆದ್ದರಿಂದ ಪೌಲನು ಏಷ್ಯಾ ಪ್ರಾಂತ್ಯದ ಆ ಯೆಹೂದ್ಯರನ್ನೆಲ್ಲ ಬಿಟ್ಟು, ಯೇಸುವಿನ ಶಿಷ್ಯರನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ, ತುರನ್ನನ ಶಾಲೆಯಲ್ಲಿ ಪ್ರತಿದಿನವೂ ಚರ್ಚೆ ನಡೆಸಿದನು.


ಇದನ್ನು ಕೇಳಿದ ಪೌಲ ಬಾರ್ನಬರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಜನಸಮೂಹದೊಳಕ್ಕೆ ಓಡಿಹೋಗಿ ಹೀಗೆಂದು ಕೂಗಿ ಹೇಳಿದರು:


ಕ್ರಿಸ್ತ ವಿಶ್ವಾಸಿಯಾದ ಹೆಂಡತಿಯನ್ನು ನಮ್ಮೊಂದಿಗೆ ಪ್ರಯಾಣದಲ್ಲಿ ಕರೆದುಕೊಂಡು ಹೋಗಲು ಉಳಿದ ಅಪೊಸ್ತಲರಂತೆ, ಪ್ರಭುವಿನ ಸಹೋದರರಂತೆ ಮತ್ತು ಕೇಫನಂತೆ ನಮಗೆ ಹಕ್ಕಿಲ್ಲವೇ?


ಇವರೆಲ್ಲರು ಪ್ರಭುವಿನ ಸೇವೆ ಮಾಡುತ್ತಿದ್ದರು ಮತ್ತು ಉಪವಾಸ ಮಾಡುತ್ತಿದ್ದರು. ಪವಿತ್ರಾತ್ಮನು ಅವರಿಗೆ, “ನಾನು ವಿಶೇಷವಾದ ಕಾರ್ಯಕ್ಕಾಗಿ ಬಾರ್ನಬ ಮತ್ತು ಸೌಲರನ್ನು ಆರಿಸಿಕೊಂಡಿದ್ದೇನೆ. ಆ ಕಾರ್ಯಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ” ಎಂದು ಹೇಳಿದನು.


ಹೀಗೆ ಯೇಸುವಿನ ಕುರಿತು ಜನರಲ್ಲಿ ಭೇದ ಉಂಟಾಯಿತು.


ಬಳಿಕ ಸಿಮೆಯೋನನು ಅವರನ್ನು ಆಶೀರ್ವದಿಸಿ ಮರಿಯಳಿಗೆ, “ಈ ಮಗುವಿನ ನಿಮಿತ್ತ ಯೆಹೂದ್ಯರಲ್ಲಿ ಅನೇಕರು ಬೀಳುವರು. ಅನೇಕರು ಏಳುವರು. ಕೆಲವರು ಅಂಗೀಕರಿಸರು ಎಂಬುದಕ್ಕೆ ಈತನು ದೇವರಿಂದ ಬಂದ ಗುರುತಾಗಿರುವನು.


ಒಬ್ಬನ ವೈರಿಯು ಅವನ ಮನೆಯವರೇ ಆಗಿರುತ್ತಾರೆ. ಮಗನು ತಂದೆಗೆ ಗೌರವವನ್ನು ಕೊಡುವದಿಲ್ಲ. ಮಗಳು ತಾಯಿಗೆ ವಿರುದ್ಧವಾಗಿ ನಡೆಯುವಳು. ಸೊಸೆಯು ಅತ್ತೆಗೆ ವಿರುದ್ಧವಾಗಿ ನಡೆಯುವಳು.


ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು.


ಆದರೆ ಯೆಹೂದ್ಯರು ಕೆಲವು ಧಾರ್ಮಿಕ ಸ್ತ್ರೀಯರನ್ನೂ ನಗರದ ನಾಯಕರನ್ನೂ ಪ್ರಚೋಧಿಸಿ, ಪೌಲ ಬಾರ್ನಬರ ಮೇಲೆ ಅವರು ಕೋಪಗೊಳ್ಳುವಂತೆಯೂ ಅವರಿಗೆ ವಿರೋಧಿಗಳಾಗುವಂತೆಯೂ ಮಾಡಿ ಪೌಲ ಬಾರ್ನಬರನ್ನು ಪಟ್ಟಣದಿಂದ ಹೊರಗಟ್ಟಿಸಿದರು.


ಆದರೆ ಯೆಹೂದ್ಯರಲ್ಲಿ ನಂಬದೆ ಹೋದ ಕೆಲವರು ಯೆಹೂದ್ಯರಲ್ಲದವರನ್ನು ಪ್ರಚೋಧಿಸಿ ಸಹೋದರರ ವಿರುದ್ಧ ಜನರನ್ನು ಎಬ್ಬಿಸಿದರು.


ಯೆಹೂದ್ಯರಲ್ಲದವರಲ್ಲಿ ಮತ್ತು ಯೆಹೂದ್ಯರಲ್ಲಿ ಕೆಲವರು ತಮ್ಮ ನಾಯಕರೊಡನೆ ಸೇರಿಕೊಂಡು ಪೌಲ ಬಾರ್ನಬರನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು.


ಬಳಿಕ ಕೆಲವು ಯೆಹೂದ್ಯರು ಅಂತಿಯೋಕ್ಯದಿಂದ ಮತ್ತು ಇಕೋನಿಯದಿಂದ ಬಂದು ಪೌಲನಿಗೆ ವಿರೋಧವಾಗಿ ಜನರನ್ನು ಹುರಿದುಂಬಿಸಿ ಪೌಲನಿಗೆ ಕಲ್ಲೆಸೆದು, ಅವನು ಸತ್ತನೆಂದು ಭಾವಿಸಿ ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ಸಹೋದರ ಸಹೋದರಿಯರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳಂತಿದ್ದೀರಿ. ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಇತರ ಯೆಹೂದ್ಯರಿಂದ ಹಿಂಸಿಸಲ್ಪಟ್ಟರು. ಅದೇ ರೀತಿಯಲ್ಲಿ ನೀವೂ ನಿಮ್ಮ ದೇಶದ ಇತರ ಜನರಿಂದ ಹಿಂಸಿಸಲ್ಪಟ್ಟವರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು