Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:8 - ಪರಿಶುದ್ದ ಬೈಬಲ್‌

8 ಲುಸ್ತ್ರದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಕಾಲುಗಳಲ್ಲಿ ಬಲವಿರಲಿಲ್ಲ. ಹುಟ್ಟುಕುಂಟನಾಗಿದ್ದ ಅವನು ಎಂದೂ ನಡೆದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಲುಸ್ತ್ರ ಪಟ್ಟಣದಲ್ಲಿ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕುಳಿತಿದ್ದನು. ಅವನು ಹುಟ್ಟುಕುಂಟನಾಗಿದ್ದು, ಅದುವರೆಗೂ ನಡೆಯಲಾರದೆ ಇದ್ದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಲುಸ್ತ್ರದಲ್ಲಿ ಒಬ್ಬ ಕುಂಟನಿದ್ದ. ಅವನೊಬ್ಬ ಹುಟ್ಟುಕುಂಟ. ಎಂದೂ ಕಾಲೂರಿ ನಡೆದವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಲುಸ್ತ್ರದೊಳಗೆ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕೂತಿದ್ದನು. ಅವನು ಹುಟ್ಟುಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಲುಸ್ತ್ರದಲ್ಲಿ ಒಬ್ಬ ಕುಂಟನಿದ್ದನು. ಅವನು ಹುಟ್ಟು ಕುಂಟನಾಗಿದ್ದುದರಿಂದ ಅವನೆಂದೂ ನಡೆದಾಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಲಿಸ್ತ್ರಾ ಮನ್ತಲ್ಯಾ ಶಾರಾತ್ ಎಕ್ಲೊ ಜಲ್ಮಿಸೊಟ್ಟೊ ಮಾನುಸ್ ಹೊತ್ತೊ ತೆಚ್ಯಾ ಪಾಂಯಾತ್ನಿ ಬಳ್ ನತ್ತಿ, ಅನಿ ಕನ್ನಾಬಿ ಚಲಲೊಚ್ ನತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:8
9 ತಿಳಿವುಗಳ ಹೋಲಿಕೆ  

ಅವರು ದೇವಾಲಯಕ್ಕೆ ಹೋಗುತ್ತಿದ್ದಾಗ ಅಲ್ಲೊಬ್ಬ ಹುಟ್ಟುಕುಂಟನಿದ್ದನು. ಅವನಿಗೆ ನಡೆಯಲಾಗುತ್ತಿರಲಿಲ್ಲ. ಆದ್ದರಿಂದ ಅವನ ಕೆಲವು ಸ್ನೇಹಿತರು ಅವನನ್ನು ಪ್ರತಿದಿನ ದೇವಾಲಯಕ್ಕೆ ಹೊತ್ತುಕೊಂಡು ಬಂದು, ದೇವಾಲಯದ ಹೊರ ಬಾಗಿಲುಗಳ ಒಂದರ ಸಮೀಪದಲ್ಲಿ ಕುಳ್ಳಿರಿಸುತ್ತಿದ್ದರು. ಆ ಬಾಗಿಲಿನ ಹೆಸರು “ಸುಂದರ ದ್ವಾರ.” ಅವನು ದೇವಾಲಯಕ್ಕೆ ಹೋಗುವ ಜನರಿಂದ ಭಿಕ್ಷೆ ಬೇಡುತ್ತಿದ್ದನು.


ಈ ಕುಂಟನಿಗಾದ ಒಳ್ಳೆಯದರ ಬಗ್ಗೆ ನೀವು ನಮ್ಮನ್ನು ಕೇಳುತ್ತಿದ್ದೀರಿ.


ಆ ರೋಗಿಯು, “ಅಯ್ಯಾ, ನೀರು ಉಕ್ಕುವಾಗ ಕೊಳದೊಳಗೆ ಇಳಿದುಹೋಗಲು ನನಗೆ ಯಾರೂ ಸಹಾಯ ಮಾಡುವುದಿಲ್ಲ. ನಾನು ಎಲ್ಲರಿಗಿಂತ ಮೊದಲೇ ನೀರಿಗೆ ಇಳಿಯಲು ಪ್ರಯತ್ನಿಸುವೆ. ಆದರೆ ಪ್ರತಿಸಲವೂ ನನಗಿಂತ ಮೊದಲೇ ಮತ್ತೊಬ್ಬನು ಇಳಿದುಬಿಡುತ್ತಾನೆ” ಎಂದು ಹೇಳಿದನು.


ಇದನ್ನು ಅರಿತುಕೊಂಡ ಪೌಲ ಬಾರ್ನಬರು ಆ ಪಟ್ಟಣವನ್ನು ಬಿಟ್ಟು ಲುಕವೋನಿಯಾದ ಪಟ್ಟಣಗಳಾದ ಲುಸ್ತ್ರ ಮತ್ತು ದರ್ಬೆಗಳಿಗೂ ಹಾಗೂ ಆ ಪಟ್ಟಣಗಳ ಸುತ್ತಮುತ್ತಲಿದ್ದ ಪ್ರದೇಶಗಳಿಗೂ ಹೋದರು.


ಪೌಲ ಬಾರ್ನಬರು ದರ್ಬೆ ಪಟ್ಟಣದಲ್ಲೂ ಸುವಾರ್ತೆಯನ್ನು ತಿಳಿಸಿದರು. ಅನೇಕ ಜನರು ಯೇಸುವಿನ ಶಿಷ್ಯರಾದರು. ಪೌಲಬಾರ್ನಬರು ಲುಸ್ತ್ರ, ಇಕೋನಿಯ ಮತ್ತು ಅಂತಿಯೋಕ್ಯ ಪಟ್ಟಣಗಳಿಗೆ ಹಿಂತಿರುಗಿ,


ಪೌಲನು ದರ್ಬೆ ಮತ್ತು ಲುಸ್ತ್ರ ಪಟ್ಟಣಗಳಿಗೆ ಹೋದನು. ತಿಮೊಥೆ ಎಂಬ ಕ್ರಿಸ್ತನ ಶಿಷ್ಯನೊಬ್ಬನು ಅಲ್ಲಿದ್ದನು. ತಿಮೊಥೆಯನ ತಾಯಿ ಯೆಹೂದ್ಯ ವಿಶ್ವಾಸಿಯಾಗಿದ್ದಳು. ಅವನ ತಂದೆಯು ಗ್ರೀಕನಾಗಿದ್ದನು.


ನನಗೆ ಸಂಭವಿಸಿದ ಹಿಂಸೆ ಮತ್ತು ಸಂಕಟಗಳ ಬಗ್ಗೆಯೂ ನಿನಗೆ ತಿಳಿದಿದೆ. ಅಂತಿಯೋಕ್ಯ, ಇಕೋನ್ಯ, ಲುಸ್ತ್ರಗಳಲ್ಲಿ ನನಗೆ ಸಂಭವಿಸಿದ ಸಂಗತಿಗಳೆಲ್ಲವೂ ನಿನಗೆ ತಿಳಿದಿವೆ. ನಾನು ಆ ಸ್ಥಳಗಳಲ್ಲಿ ಅನುಭವಿಸಿದ ಹಿಂಸೆಯು ನಿನಗೆ ತಿಳಿದಿದೆ. ಆದರೆ ಆ ಎಲ್ಲ ತೊಂದರೆಗಳಿಂದ ಪ್ರಭುವು ನನ್ನನ್ನು ಕಾಪಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು