Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:9 - ಪರಿಶುದ್ದ ಬೈಬಲ್‌

9 ಈ ಮನುಷ್ಯನು ತಾನು ಕುಳಿತಲ್ಲೇ ಪೌಲನ ಮಾತನ್ನು ಆಲಿಸುತ್ತಿದ್ದನು. ಪೌಲನು ಅವನನ್ನು ದೃಷ್ಟಿಸಿ ನೋಡಿದನು. ದೇವರು ಗುಣಪಡಿಸಬಲ್ಲನೆಂಬ ನಂಬಿಕೆ ಅವನಲ್ಲಿರುವುದನ್ನು ಪೌಲನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಒಮ್ಮೆ, ಅವನು ಕುಳಿತಲ್ಲೇ ಪೌಲನ ಮಾತುಗಳನ್ನು ಆಲಿಸುತ್ತಿದ್ದನು. ಆಗ ಪೌಲನು ಅವನನ್ನೇ ದಿಟ್ಟಿಸಿ ನೋಡಿದನು. ಅವನಲ್ಲಿ ಸ್ವಸ್ಥ ಪಡೆಯುವಷ್ಟು ವಿಶ್ವಾಸವನ್ನು ಕಂಡು ಸ್ವರವೆತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗುವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪೌಲನು ಮಾತನಾಡುತ್ತಿರುವುದನ್ನು ಅವನು ಆಲಿಸುತ್ತಿದ್ದನು. ಪೌಲನು ನೇರವಾಗಿ ಅವನನ್ನೇ ದೃಷ್ಟಿಸಿ ನೋಡಿ, ತಾನು ಗುಣಹೊಂದಲು ಅವನಲ್ಲಿ ವಿಶ್ವಾಸವಿದೆಯೆಂದು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಹ್ಯೊ ಮಾನುಸ್ ಅಪ್ನಿ ಬಸಲ್ಲ್ಯಾಕ್ನಾಚ್ ಪಾವ್ಲುಚಿ ಬೊಲ್ನಿ ಆಯ್ಕಿತ್ ಹೊತ್ತೊ, ಪಾವ್ಲುನ್ ತೆಕಾಚ್ ಬಗ್ಲ್ಯಾನ್ ದೆವ್ ಅಪ್ನಾಕ್ ಗುನ್‍ ಕರ್‍ತಾ ಮನ್ತಲೊ ವಿಶ್ವಾಸ್ ತೆಕಾ ಹೊತ್ತೊ ಪಾವ್ಲುನ್ ವಳ್ಕುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:9
13 ತಿಳಿವುಗಳ ಹೋಲಿಕೆ  

ಪೇತ್ರ ಮತ್ತು ಯೋಹಾನ ಆ ಕುಂಟನಿಗೆ, “ನಮ್ಮನ್ನು ನೋಡು!” ಎಂದರು.


ಆಗ ಯೇಸು, “ಅಮ್ಮಾ, ನಿನ್ನ ನಂಬಿಕೆ ದೊಡ್ಡದು. ನಿನ್ನ ಕೋರಿಕೆಯನ್ನು ನಾನು ಈಡೇರಿಸುತ್ತೇನೆ” ಎಂದನು. ಆ ಕ್ಷಣದಲ್ಲೇ ಆಕೆಯ ಮಗಳು ಗುಣವಾದಳು.


ಯೇಸು, “ಹೋಗು, ನೀನು ನಂಬಿದ್ದರಿಂದ ನಿನಗೆ ಗುಣವಾಯಿತು” ಎಂದನು. ಆಗ ಅವನಿಗೆ ದೃಷ್ಟಿ ಬಂದಿತು. ಅವನು ಯೇಸುವನ್ನು ಆ ದಾರಿಯಲ್ಲಿ ಹಿಂಬಾಲಿಸಿದನು.


ಈ ಜನರ ದೊಡ್ಡ ನಂಬಿಕೆಯನ್ನು ಕಂಡ ಯೇಸು ರೋಗಿಗೆ, “ಯುವಕನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.


ಆ ಜನರ ಅವಿಶ್ವಾಸದ ಕಾರಣ ಆತನು ಅಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಲಿಲ್ಲ.


ಯೇಸು ಹಿಂತಿರುಗಿ ಆ ಹೆಂಗಸನ್ನು ನೋಡಿ, “ಮಗಳೇ, ಸಂತೋಷಪಡು! ನಿನ್ನ ನಂಬಿಕೆಯಿಂದಲೇ ನಿನಗೆ ಗುಣವಾಯಿತು” ಎಂದು ಹೇಳಿದನು. ಆಗ ಅವಳು ಗುಣಮುಖಳಾದಳು.


ಇದನ್ನು ಕೇಳಿ ಯೇಸುವಿಗೆ ಆಶ್ಚರ್ಯವಾಯಿತು. ಯೇಸು ತನ್ನ ಸಂಗಡ ಇದ್ದವರಿಗೆ, “ನಾನು ಇಸ್ರೇಲಿನಲ್ಲಿಯೂ ಸಹ ಇಷ್ಟು ನಂಬಿಕೆಯುಳ್ಳ ವ್ಯಕ್ತಿಯನ್ನು ಕಾಣಲಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಎಂದನು.


ಯೇಸು ತನ್ನ ಕೈಗಳನ್ನು ಮತ್ತೆ ಕುರುಡನ ಕಣ್ಣುಗಳ ಮೇಲೆ ಇಟ್ಟನು. ಆಗ ಅವನು ತನ್ನ ಕಣ್ಣುಗಳನ್ನು ಅಗಲವಾಗಿ ತೆರೆದನು. ಅವನ ಕಣ್ಣುಗಳು ಗುಣಹೊಂದಿದ್ದವು. ಅವನಿಗೆ ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.


ಕೊರ್ನೇಲಿಯನು ದೇವದೂತನನ್ನು ಕಂಡು ಭಯದಿಂದ “ಸ್ವಾಮೀ, ನಿಮಗೇನು ಬೇಕು?” ಎಂದು ಕೇಳಿದನು. ಆ ದೇವದೂತನು ಅವನಿಗೆ, “ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿದ್ದಾನೆ. ನೀನು ಬಡವರಿಗೆ ಕೊಟ್ಟವುಗಳನ್ನು ಆತನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು