Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:19 - ಪರಿಶುದ್ದ ಬೈಬಲ್‌

19 “ಆದ್ದರಿಂದ, ದೇವರ ಕಡೆಗೆ ತಿರುಗಿಕೊಂಡ ಯೆಹೂದ್ಯರಲ್ಲದ ಸಹೋದರರಿಗೆ ನಾವು ತೊಂದರೆ ಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಆದುದರಿಂದ ನನ್ನ ತೀರ್ಮಾನವೇನೆಂದರೆ : ದೇವರ ಕಡೆಗೆ ತಿರುಗುತ್ತಿರುವ ಅನ್ಯಧರ್ಮೀಯರನ್ನು ತೊಂದರೆಗೆ ಈಡುಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗಿರಲಾಗಿ ನನ್ನ ಅಭಿಪ್ರಾಯ ಏನಂದರೆ - ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಆದ್ದರಿಂದ, ದೇವರ ಕಡೆಗೆ ತಿರುಗುತ್ತಿರುವ ಯೆಹೂದ್ಯರಲ್ಲದವರಿಗೆ ನಾವು ತೊಂದರೆ ಮಾಡಬಾರದು ಎಂಬುದೇ ನನ್ನ ತೀರ್ಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತಸೆ ಹೊವ್ನ್ ಜುದೆವ್ ನ್ಹಯ್ ಹೊಲ್ಲ್ಯಾ ದೆವಾಕ್ಡೆ ಪರ್ತುನ್ ಯೆಲ್ಲ್ಯಾ ಲೊಕಾಕ್ನಿ ಅಮಿ ತರಾಸ್ ದಿತಲೆ ನಕ್ಕೊ, ಹಿ ಮಾಜೆ ಸಲಹಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:19
12 ತಿಳಿವುಗಳ ಹೋಲಿಕೆ  

ನಿಮಗೆ ಇನ್ನೂ ಹೆಚ್ಚಿನ ಭಾರಗಳು ಇರಕೂಡದೆಂಬುದು ಪವಿತ್ರಾತ್ಮನ ನಿರ್ಧಾರ. ಅದಕ್ಕೆ ನಾವು ಒಪ್ಪಿಕೊಂಡಿದ್ದೇವೆ. ನೀವು ಈ ನಿಯಮಗಳನ್ನು ಮಾತ್ರ ಅನುಸರಿಸಬೇಕಾಗಿದೆ:


ನಾವು ನಿಮ್ಮೊಡನೆ ಇದ್ದಾಗ ನೀವು ನಮ್ಮ ಬೋಧನೆಯನ್ನು ಹೃತ್ಪೂರ್ವಕವಾಗಿ ಸ್ವೀಕರಿಸಿಕೊಂಡದ್ದರ ಕುರಿತಾಗಿಯೂ ವಿಗ್ರಹಾರಾಧನೆಯನ್ನು ನಿಲ್ಲಿಸಿ ಜೀವವುಳ್ಳ ಸತ್ಯದೇವರನ್ನು ಆರಾಧಿಸತೊಡಗಿದ್ದರ ಕುರಿತಾಗಿಯೂ ಅಲ್ಲಿನ ಜನರೆಲ್ಲರೂ ತಿಳಿಸುತ್ತಾರೆ.


ನಮ್ಮ ಸಮುದಾಯದಿಂದ ನಿಮ್ಮ ಬಳಿಗೆ ಬಂದ ಕೆಲವರು ನಿಮಗೆ ಕೆಲವು ಸಂಗತಿಗಳನ್ನು ಹೇಳುವುದರ ಮೂಲಕ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮಲ್ಲಿ ಗಲಿಬಿಲಿ ಉಂಟುಮಾಡಿದರೆಂಬ ಸಮಾಚಾರ ನಮಗೆ ತಿಳಿಯಿತು. ಆದರೆ ಹೀಗೆ ಮಾಡಬೇಕೆಂದು ನಾವು ಅವರಿಗೆ ಹೇಳಿರಲಿಲ್ಲ!


ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.


ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ ಮತ್ತು ಆತನಿಗೆ ಹೀಗೆ ಹೇಳು: “ನಮ್ಮ ಪಾಪಗಳನ್ನು ನಮ್ಮಿಂದ ತೆಗೆ. ನಾವು ಮಾಡುವ ಒಳ್ಳೆಯ ಕಾರ್ಯಗಳನ್ನು ಸ್ವೀಕರಿಸು. ಆಗ ನಮ್ಮ ತುಟಿಗಳಿಂದ ನಿನಗೆ ಸ್ತೋತ್ರವೆಂಬ ಕಾಣಿಕೆಯನ್ನು ಸಮರ್ಪಿಸುವೆವು.


ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.


ಹೀಗಿರಲಾಗಿ, ಯೆಹೂದ್ಯರಲ್ಲದ ಸಹೋದರರ ಹೆಗಲ ಮೇಲೆ ಭಾರವಾದ ಹೊರೆಯನ್ನು ಯಾಕೆ ಹೊರಿಸುತ್ತೀರಿ? ನೀವು ದೇವರನ್ನು ಸಿಟ್ಟಿಗೆಬ್ಬಿಸಲು ಪ್ರಯತ್ನಿಸುತ್ತಿದ್ದೀರಾ? ನಮಗಾಗಲಿ ನಮ್ಮ ಪಿತೃಗಳಿಗಾಗಲಿ ಈ ಹೊರೆಯನ್ನು ಹೊರವಷ್ಟು ಶಕ್ತಿ ಇರಲಿಲ್ಲ!


ಈ ಯೆಹೂದ್ಯರು ನಿನ್ನ ಉಪದೇಶದ ಬಗ್ಗೆ ಕೇಳಿದ್ದಾರೆ. ಬೇರೆ ದೇಶಗಳಲ್ಲಿ ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ವಾಸವಾಗಿರುವ ಯೆಹೂದ್ಯರಿಗೆ, “ನೀವು ಮೋಶೆಯ ಧರ್ಮಶಾಸ್ತ್ರವನ್ನು ತ್ಯಜಿಸಿರಿ; ನಿಮ್ಮ ಮಕ್ಕಳಿಗೆ ಸುನ್ನತಿ ಮಾಡಬೇಡಿರಿ ಯೆಹೂದ್ಯರ ಸಂಪ್ರದಾಯಗಳಿಗೆ ವಿಧೇಯರಾಗಬೇಡಿರಿ ಎಂಬುದಾಗಿ ಹೇಳುತ್ತಿರುವಿಯೆಂದು ಅವರು ಕೇಳಿದ್ದಾರೆ.


“ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ನಾವು ಒಂದು ಪತ್ರವನ್ನು ಈಗಾಗಲೇ ಕಳುಹಿಸಿದ್ದೇವೆ. ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ. ಯಾವ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ’ ಎಂದು ಆ ಪತ್ರದಲ್ಲಿ ಬರೆಯಲಾಗಿದೆ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು