Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:35 - ಪರಿಶುದ್ದ ಬೈಬಲ್‌

35 ಆದರೆ ಪೌಲ ಬಾರ್ನಬರು ಅಂತಿಯೋಕ್ಯದಲ್ಲಿ ತಂಗಿದ್ದು ಇತರ ಅನೇಕರೊಂದಿಗೆ ಸೇರಿಕೊಂಡು ಸುವಾರ್ತೆಯನ್ನು ಸಾರಿದರು ಮತ್ತು ಪ್ರಭುವಿನ ಸಂದೇಶವನ್ನು ಜನರಿಗೆ ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಇತ್ತ ಪೌಲ ಮತ್ತು ಬಾರ್ನಬ ಅಂತಿಯೋಕ್ಯದಲ್ಲೇ ತಂಗಿದ್ದು ಅನೇಕರೊಡಗೂಡಿ ಪ್ರಭುವಿನ ವಾಕ್ಯವನ್ನು ಬೋಧಿಸುತ್ತಾ ಶುಭಸಂದೇಶವನ್ನು ಸಾರುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆದರೆ ಪೌಲನು ಮತ್ತು ಬಾರ್ನಬರು ಅಂತಿಯೋಕ್ಯದಲ್ಲಿಯೇ ಉಳಿದುಕೊಂಡು ಅನೇಕರಿಗೆ ಕರ್ತ ಯೇಸುವಿನ ವಾಕ್ಯವನ್ನು ಬೋಧಿಸುತ್ತಾ ಸುವಾರ್ತೆ ಸಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಪಾವ್ಲು ಅನಿ ಬಾರ್ನಾಬಾಸ್ ಅಂತಿಯೊಕಾತ್ ರ್‍ಹಾವ್ನ್, ಹುರಲ್ಲ್ಯಾ ಲೈ ಲೊಕಾಂಚ್ಯಾ ವಾಂಗ್ಡಾ ಮಿಳುನ್ ದೆವಾಚಿ ಬರಿ ಖಬರ್ ಪರ್ಗಟ್ ಕರ್‍ಲ್ಯಾನಿ ಅನಿ ಧನಿಯಾಚೆ ಶಿಕಾಪ್ ಲೊಕಾಕ್ನಿ ಕಳ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:35
11 ತಿಳಿವುಗಳ ಹೋಲಿಕೆ  

ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು.


ಆದ್ದರಿಂದಲೇ ನಾವು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುವವರಾಗಿದ್ದೇವೆ. ಪ್ರತಿಯೊಬ್ಬರನ್ನೂ ಬಲಪಡಿಸುವುದಕ್ಕಾಗಿ ಪ್ರತಿಯೊಬ್ಬರಿಗೂ ಉಪದೇಶಿಸುವುದಕ್ಕಾಗಿ ನಮ್ಮ ಜ್ಞಾನವನ್ನೆಲ್ಲಾ ಉಪಯೋಗಿಸುತ್ತೇವೆ. ಪ್ರತಿಯೊಬ್ಬರನ್ನು ಕ್ರಿಸ್ತನಲ್ಲಿ ಸಂಪೂರ್ಣ ಆತ್ಮಿಕರನ್ನಾಗಿ ಮಾಡಿ ದೇವರ ಸನ್ನಿಧಿಗೆ ತರಲು ಪ್ರಯತ್ನಿಸುತ್ತೇವೆ.


ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.


ಆದ ಕಾರಣವೇ ಸುವಾರ್ತೆಯನ್ನು ಸಾರುವುದಕ್ಕಾಗಿಯೂ ಅಪೊಸ್ತಲನಾಗುವುದಕ್ಕಾಗಿಯೂ ಯೆಹೂದ್ಯರಲ್ಲದ ಜನರಿಗೆ ಬೋಧಿಸುವುದಕ್ಕಾಗಿಯೂ ನನ್ನನ್ನು ಆರಿಸಿಕೊಳ್ಳಲಾಯಿತು. (ಇದು ಸತ್ಯ, ಖಂಡಿತವಾಗಿಯೂ ಸುಳ್ಳಲ್ಲ.) ಸತ್ಯವನ್ನು ತಿಳಿದುಕೊಳ್ಳಬೇಕೆಂತಲೂ ನಂಬಬೇಕೆಂತಲೂ ನಾನು ಅವರಿಗೆ ಬೋಧಿಸುತ್ತೇನೆ.


ದೇವರ ರಾಜ್ಯದ ಬಗ್ಗೆ ಬೋಧಿಸುತ್ತಿದ್ದನು; ಪ್ರಭು ಯೇಸುಕ್ರಿಸ್ತನ ಬಗ್ಗೆ ಉಪದೇಶಿಸುತ್ತಿದ್ದನು; ಬಹು ಧೈರ್ಯದಿಂದ ಮಾತಾಡುತ್ತಿದ್ದನು. ಅವನಿಗೆ ಅಡ್ಡಿಮಾಡಲು ಯಾರೂ ಪ್ರಯತ್ನಿಸಲಿಲ್ಲ.


ಅಲ್ಲಿ ಪೌಲಬಾರ್ನಬರು ಯೇಸುವಿನ ಶಿಷ್ಯರೊಂದಿಗೆ ಬಹುಕಾಲ ಇದ್ದರು.


ವಿಶ್ವಾಸಿಗಳು ಎಲ್ಲೆಲ್ಲಿಯೂ ಚದರಿಹೋದರು. ವಿಶ್ವಾಸಿಗಳು ತಾವು ಹೋದ ಪ್ರತಿಯೊಂದು ಸ್ಥಳದಲ್ಲಿಯೂ ಜನರಿಗೆ ಸುವಾರ್ತೆಯನ್ನು ತಿಳಿಸಿದರು.


ಬಾರ್ನಬ ಮತ್ತು ಸೌಲರು ಜೆರುಸಲೇಮಿನಲ್ಲಿ ತಮ್ಮ ಕಾರ್ಯವನ್ನು ಮುಗಿಸಿದ ಮೇಲೆ ಅಂತಿಯೋಕ್ಯಕ್ಕೆ ಹಿಂತಿರುಗಿದರು. ಮಾರ್ಕನೆಂಬ ಯೋಹಾನನು ಅವರೊಂದಿಗಿದ್ದನು.


ಇದನ್ನು ಕಂಡ ರಾಜ್ಯಪಾಲನು ಪ್ರಭುವನ್ನು ನಂಬಿಕೊಂಡನು. ಪ್ರಭುವಿನ ವಿಷಯವಾದ ಉಪದೇಶವನ್ನು ಕೇಳಿ ವಿಸ್ಮಿತನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು