Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:4 - ಪರಿಶುದ್ದ ಬೈಬಲ್‌

4 ಪೌಲ ಬಾರ್ನಬರು ಮತ್ತು ಇತರರು ಜೆರುಸಲೇಮನ್ನು ತಲುಪಿದರು. ಅಪೊಸ್ತಲರು, ಹಿರಿಯರು ಮತ್ತು ಸಭೆಯವರು ಇವರನ್ನು ಸ್ವಾಗತಿಸಿದರು. ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಮತ್ತು ಇತರರು ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗೂ ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ಯೆರೂಸಲೇವಿುಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಯೆರೂಸಲೇಮನ್ನು ತಲುಪಿದಾಗ, ಸಭೆಯವರು, ಅಪೊಸ್ತಲರು ಹಾಗೂ ಹಿರಿಯರು ಅವರನ್ನು ಸ್ವಾಗತಿಸಿದರು. ದೇವರು ತಮ್ಮ ಮುಖಾಂತರವಾಗಿ ಮಾಡಿದ್ದನ್ನು ಅವರು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಪಾವ್ಲು ಬಾರ್ನಾಬಾಸ್ ಅನಿ ಉಲ್ಲಿ ಲೊಕಾ ಜೆರುಜಲೆಮಾಕ್ ಅಪೊಸ್ತಲಾನಿ, ಜಾಂನ್ತ್ಯಾ ಲೊಕಾನಿ ಅನಿ ತಾಂಡ್ಯಾಚ್ಯಾ ಲೊಕಾನಿ ತೆಂಕಾ ಸ್ವಾಗತ್ ಕರ್‍ಲ್ಯಾನಿ, ತೆನಿ ಸಗ್ಳ್ಯಾನಿ ದೆವಾನ್ ಅಪ್ಲ್ಯಾ ವಾಂಗ್ಡಾ ಕರಲ್ಲ್ಯಾ ಬರ್‍ಯಾ ಕಾಮಾಂಚ್ಯಾ ವಿಶಯಾತ್ ಥೈತ್ಲ್ಯಾ ಲೊಕಾಕ್ನಿ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:4
20 ತಿಳಿವುಗಳ ಹೋಲಿಕೆ  

ಆಗ ಇಡೀ ಸಭೆಯು ಮೌನವಾಯಿತು. ಅವರು ಪೌಲ ಬಾರ್ನಬರಿಗೆ ಕಿವಿಗೊಟ್ಟರು. ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ದೇವರು ತಮ್ಮ ಮೂಲಕವಾಗಿ ಮಾಡಿದ ಎಲ್ಲಾ ಅದ್ಭುತಕಾರ್ಯಗಳ ಮತ್ತು ಸೂಚಕಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಹೇಳಿದರು.


ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.


ಅಂತೆಯೇ ಸಭೆಯು ಇವರನ್ನು ಕಳುಹಿಸಿತು. ಇವರು ಫೆನಿಷ್ಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣಮಾಡಿದರು. ಯೆಹೂದ್ಯರಲ್ಲದ ಜನರು ನಿಜದೇವರ ಕಡೆಗೆ ತಿರುಗಿಕೊಂಡಿದ್ದರ ಬಗ್ಗೆ ಈ ನಾಡುಗಳಲ್ಲಿ ವಿವರಿಸಿದರು. ಇದನ್ನು ಕೇಳಿ ಸಹೋದರರಿಗೂ ಬಹಳ ಸಂತೋಷವಾಯಿತು.


ನಾನು ನನ್ನ ಸ್ವಕಾರ್ಯಗಳ ಬಗ್ಗೆಯೂ ಮಾತಾಡುವುದಿಲ್ಲ. ಯೆಹೂದ್ಯರಲ್ಲದ ಜನರನ್ನು ತನಗೆ ವಿಧೇಯರನ್ನಾಗಿ ಮಾಡಿಕೊಳ್ಳಲು ಕ್ರಿಸ್ತನು ನನ್ನ ಮೂಲಕ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಮಾಡಿದ ಕಾರ್ಯಗಳನ್ನು ಹೇಳಿಕೊಳ್ಳುತ್ತೇನೆ.


ನಾವು ಜೆರುಸಲೇಮನ್ನು ತಲುಪಿದಾಗ ನಮ್ಮನ್ನು ಕಂಡು ವಿಶ್ವಾಸಿಗಳಿಗೆ ಸಂತೋಷವಾಯಿತು.


ನಿಮ್ಮ ಬಳಿಗೆ ಬರುವವನು ಈ ಉಪದೇಶವನ್ನು ಹೊಂದಿಲ್ಲದಿದ್ದರೆ ಅವನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಳ್ಳಬೇಡಿ. ಅವನನ್ನು ಸ್ವಾಗತಿಸಬೇಡಿ.


ಅರಿಸ್ತಾರ್ಕನು ವಂದನೆ ತಿಳಿಸಿದ್ದಾನೆ. ಅವನೂ ನನ್ನೊಡನೆ ಸೆರೆಯಲ್ಲಿದ್ದಾನೆ. ಬಾರ್ನಬನಿಗೆ ಸೋದರ ಬಾಂಧ್ಯವ್ಯವುಳ್ಳ ಮಾರ್ಕನೂ ವಂದನೆಯನ್ನು ಹೇಳುತ್ತಾನೆ. (ಮಾರ್ಕನ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ಈಗಾಗಲೇ ಹೇಳಿದ್ದೇನೆ. ಅವನು ಬಂದರೆ ಅವನನ್ನು ಸ್ವಾಗತಿಸಿರಿ.)


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.


ಅಂದರೆ, ದೇವರು ಕ್ರಿಸ್ತನಲ್ಲಿ ಇಡೀ ಜಗತ್ತನ್ನೇ ತನ್ನೊಂದಿಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನು. ದೇವರು ಕ್ರಿಸ್ತನಲ್ಲಿ ಜನರ ಅಪರಾಧಗಳನ್ನು ಪರಿಗಣಿಸುವುದಿಲ್ಲ. ಈ ಸಮಾಧಾನದ ಸಂದೇಶವನ್ನು ಜನರಿಗೆ ತಿಳಿಸುವ ಕೆಲಸವನ್ನು ದೇವರು ನಮಗೆ ಕೊಟ್ಟಿದ್ದಾನೆ.


ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.)


ಕ್ರಿಸ್ತನು ನಿಮ್ಮನ್ನು ಸ್ವೀಕರಿಸಿಕೊಂಡನು. ಆದ್ದರಿಂದ ನೀವು ಒಬ್ಬರನ್ನೊಬ್ಬರು ಸ್ವೀಕರಿಸಿಕೊಳ್ಳಬೇಕು. ಇದು ದೇವರಿಗೆ ಮಹಿಮೆಯನ್ನು ಉಂಟು ಮಾಡುತ್ತದೆ.


ಪೌಲನು ಅವರೆಲ್ಲರನ್ನು ವಂದಿಸಿದನು. ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ಅನೇಕ ಕಾರ್ಯಗಳನ್ನು ಮಾಡುವುದಕ್ಕಾಗಿ ದೇವರು ತನ್ನನ್ನು ಉಪಯೋಗಿಸಿಕೊಂಡ ಬಗೆಯನ್ನೂ ತನ್ನ ಮೂಲಕವಾಗಿ ದೇವರು ಮಾಡಿದ ಎಲ್ಲಾ ಕಾರ್ಯಗಳ ಕುರಿತಾಗಿಯೂ ಅವನು ಅವರಿಗೆ ತಿಳಿಸಿದನು.


ಅಪೊಲ್ಲೋಸನು ಅಖಾಯ ಪ್ರಾಂತ್ಯಕ್ಕೆ ಹೋಗಲು ಅಪೇಕ್ಷಿಸಿದಾಗ ಎಫೆಸದ ಸಹೋದರರು ಅವನನ್ನು ಪ್ರೋತ್ಸಾಹಿಸಿದರು. ಅಲ್ಲದೆ ಅಖಾಯದಲ್ಲಿದ್ದ ಯೇಸುವಿನ ಶಿಷ್ಯರಿಗೆ ಅವರು ಪತ್ರವನ್ನು ಬರೆದು, ಅಪೊಲ್ಲೋಸನನ್ನು ಸ್ವೀಕರಿಸಿಕೊಳ್ಳಬೇಕೆಂದು ಅವರನ್ನು ಕೇಳಿಕೊಂಡರು. ಅಖಾಯದಲ್ಲಿ ಈ ಶಿಷ್ಯರು ದೇವರ ಕೃಪೆಯಿಂದಾಗಿ ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು. ಅಪೊಲ್ಲೋಸನು ಅಲ್ಲಿಗೆ ಹೋಗಿ ಅವರಿಗೆ ಬಹಳ ನೆರವು ನೀಡಿದನು.


“ನಿಮ್ಮನ್ನು ಅಂಗೀಕರಿಸುವವನು ನನ್ನನ್ನು ಸಹ ಅಂಗೀಕರಿಸುವನು. ನನ್ನನ್ನು ಅಂಗೀಕರಿಸುವವನು ನನ್ನನ್ನು ಕಳುಹಿಸಿದಾತನನ್ನು (ದೇವರನ್ನು) ಸಹ ಅಂಗೀಕರಿಸುವನು.


ಅವರು ಹಣವನ್ನು ಕೂಡಿಸಿ ಬಾರ್ನಬ ಮತ್ತು ಸೌಲರಿಗೆ ಕೊಟ್ಟರು. ಬಳಿಕ ಬಾರ್ನಬ ಮತ್ತು ಸೌಲರು ಅದನ್ನು ತಂದು ಜುದೇಯದಲ್ಲಿದ್ದ ಸಭಾಹಿರಿಯರಿಗೆ ಕೊಟ್ಟರು.


ಪೌಲ ಬಾರ್ನಬರು ಈ ಉಪದೇಶಕ್ಕೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿ ಅವರೊಂದಿಗೆ ವಾದ ಮಾಡಿದರು. ಈ ಸಮಸ್ಯೆಯ ಬಗ್ಗೆ ಅಪೊಸ್ತಲರೊಡನೆ ಮತ್ತು ಹಿರಿಯರೊಡನೆ ಚರ್ಚಿಸಲು ಪೌಲ ಬಾರ್ನಬರನ್ನು ಮತ್ತು ಇತರ ಕೆಲವರನ್ನು ಜೆರುಸಲೇಮಿಗೆ ಕಳುಹಿಸಲು ಸಭೆ ನಿರ್ಧರಿಸಿತು.


ಬಳಿಕ, ಅಪೊಸ್ತಲರು ಮತ್ತು ಹಿರಿಯರು ಈ ಸಮಸ್ಯೆಯನ್ನು ಪರಿಶೀಲಿಸಲು ಸೇರಿಬಂದರು.


ಅಪೊಸ್ತಲರು, ಹಿರಿಯರು ಮತ್ತು ಇಡೀ ಸಭೆಯವರು ಪೌಲ ಬಾರ್ನಬರೊಂದಿಗೆ ಕೆಲವು ಜನರನ್ನು ಅಂತಿಯೋಕ್ಯಕ್ಕೆ ಕಳುಹಿಸಬಯಸಿದರು. ತಮ್ಮವರೇ ಆದ ಕೆಲವರನ್ನು ಆರಿಸಿಕೊಳ್ಳಲು ಸಭೆಯು ನಿರ್ಧರಿಸಿತು. ಅವರು ಯೂದನನ್ನು (ಬಾರ್ಸಬನೆಂದೂ ಕರೆಯುತ್ತಿದ್ದರು) ಮತ್ತು ಸೀಲನನ್ನು ಆರಿಸಿಕೊಂಡರು. ಇವರು ಜೆರುಸಲೇಮಿನ ಸಭೆಯವರಲ್ಲಿ ಪ್ರಮುಖರಾಗಿದ್ದರು.


ಬಳಿಕ ಪೌಲನು ಮತ್ತು ಅವನ ಸಂಗಡಿಗರು ಬೇರೆ ಪಟ್ಟಣಗಳ ಮೂಲಕ ಪ್ರಯಾಣ ಮಾಡಿದರು. ಜೆರುಸಲೇಮಿನಲ್ಲಿರುವ ಅಪೊಸ್ತಲರ ಮತ್ತು ಹಿರಿಯರ ನಿಯಮಗಳನ್ನೂ ತೀಮಾರ್ನಗಳನ್ನೂ ಅವರು ವಿಶ್ವಾಸಿಗಳಿಗೆ ಕೊಟ್ಟು ಅವುಗಳಿಗೆ ವಿಧೇಯರಾಗಬೇಕೆಂದು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು