Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:40 - ಪರಿಶುದ್ದ ಬೈಬಲ್‌

40 ಪೌಲನು ತನ್ನೊಂದಿಗೆ ಸೀಲನನ್ನು ಕರೆದುಕೊಂಡು ಹೋದನು. ಅಂತಿಯೋಕ್ಯದ ಸಹೋದರರು ಪೌಲನನ್ನು ಪ್ರಭುವಿನ ಆಶ್ರಯಕ್ಕೆ ಒಪ್ಪಿಸಿ ಕಳುಹಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಅಲ್ಲಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಪೌಲನು ಸೀಲನನ್ನು ಆರಿಸಿಕೊಂಡು ಅವನೊಡನೆ ತೆರಳಿದನು. ಸಹೋದರರು ಅವನನ್ನು ಪ್ರಭುವಿನ ಕೃಪಾಶ್ರಯಕ್ಕೆ ಒಪ್ಪಿಸಿ ಕಳುಹಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಹೊರಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆದರೆ ಪೌಲನು ಸೀಲನನ್ನು ಆರಿಸಿಕೊಂಡು ಹೋದನು. ವಿಶ್ವಾಸಿಗಳಿಂದ ಅವನನ್ನು ಕರ್ತ ಯೇಸುವಿನ ಕೃಪೆಗೆ ಒಪ್ಪಿಸಿ, ಕಳುಹಿಸಿಕೊಟ್ಟುರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಪಾವ್ಲುನ್ ಅಪ್ನಾ ವಾಂಗ್ಡಾ ಸಿಲಾಸ್ ಮನ್ತಲ್ಯಾಕ್ ಬಲ್ವುನ್ ಘೆವ್ನ್ ಗೆಲ್ಯಾನ್, ಅಂತಿಯೊಕ್ಯಾತ್ಲಾ ಭಾವಾನಿ ಪಾವ್ಲುಕ್ ಧನಿಯಾಚ್ಯಾ ಕುರ್ಪೆಚ್ಯಾ ಹಾತಿತ್ ಒಪ್ಸುನ್ ಧಾಡುನ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:40
14 ತಿಳಿವುಗಳ ಹೋಲಿಕೆ  

ಅಪೊಸ್ತಲರು, ಹಿರಿಯರು ಮತ್ತು ಇಡೀ ಸಭೆಯವರು ಪೌಲ ಬಾರ್ನಬರೊಂದಿಗೆ ಕೆಲವು ಜನರನ್ನು ಅಂತಿಯೋಕ್ಯಕ್ಕೆ ಕಳುಹಿಸಬಯಸಿದರು. ತಮ್ಮವರೇ ಆದ ಕೆಲವರನ್ನು ಆರಿಸಿಕೊಳ್ಳಲು ಸಭೆಯು ನಿರ್ಧರಿಸಿತು. ಅವರು ಯೂದನನ್ನು (ಬಾರ್ಸಬನೆಂದೂ ಕರೆಯುತ್ತಿದ್ದರು) ಮತ್ತು ಸೀಲನನ್ನು ಆರಿಸಿಕೊಂಡರು. ಇವರು ಜೆರುಸಲೇಮಿನ ಸಭೆಯವರಲ್ಲಿ ಪ್ರಮುಖರಾಗಿದ್ದರು.


ಅಲ್ಲಿಂದ ಅವರು ಸಿರಿಯಾದ ಅಂತಿಯೋಕ್ಯಕ್ಕೆ ನೌಕಾಯಾನ ಮಾಡಿದರು. ಈವರೆಗೆ ಮಾಡಿಮುಗಿಸಿದ್ದ ಸೇವಾಕಾರ್ಯಕ್ಕಾಗಿ ದೇವರ ಕೈಗೆ ಒಪ್ಪಿಸಿ ಕಳುಹಿಸಿಕೊಟ್ಟಿದ್ದವರು ಈ ಪಟ್ಟಣದ ವಿಶ್ವಾಸಿಗಳೇ.


ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.


ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.)


ಇಲ್ಲಿ ನನ್ನೊಡನೆ ಇರುವ ಜನರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆ ಇಟ್ಟವರಾಗಿದ್ದು ನಮ್ಮನ್ನು ಪ್ರೀತಿಸುವವರಿಗೆಲ್ಲ ನಮ್ಮ ವಂದನೆ ತಿಳಿಸು. ದೇವರ ಕೃಪೆಯು ನಿಮ್ಮೊಂದಿಗಿರಲಿ.


ಪ್ರಭುವು ನಿನ್ನ ಆತ್ಮದ ಸಂಗಡ ಇರಲಿ. ಆತನ ಕೃಪೆಯು ನಿನ್ನೊಂದಿಗಿರಲಿ.


“ಈಗ ನಾನು ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತಿದ್ದೇನೆ. ಆತನ ಕೃಪಾವಾಕ್ಯವು ನಿಮ್ಮ ಭಕ್ತಿಯನ್ನು ವೃದ್ಧಿಪಡಿಸಿ ಪರಿಶುದ್ಧರ ಬಾಧ್ಯತೆಯಲ್ಲಿ ಪಾಲುಗಾರರನ್ನಾಗಿ ಮಾಡುವುದು.


ಯೂದ ಸೀಲರು ಸಹ ಪ್ರವಾದಿಗಳಾಗಿದ್ದರು. ಅವರು ಅನೇಕ ಸಂಗತಿಗಳನ್ನು ಸಹೋದರರಿಗೆ ತಿಳಿಸಿ ಅವರನ್ನು ಬಲಪಡಿಸಿದರು.


ಆದ್ದರಿಂದ ಸಭೆಯವರು ಉಪವಾಸವಿದ್ದು ಪ್ರಾರ್ಥನೆ ಮಾಡಿದರು. ಅವರು ಬಾರ್ನಬ ಮತ್ತು ಸೌಲರ ಮೇಲೆ ಹಸ್ತಾರ್ಪಣೆ ಮಾಡಿ ಅವರನ್ನು ಕಳುಹಿಸಿಕೊಟ್ಟರು.


ಇದನ್ನು ಕಂಡ ಅವಳ ಯಜಮಾನರು ಈಗ ಆಕೆಯಿಂದ ಹಣಗಳಿಸಲು ಸಾಧ್ಯವಿಲ್ಲವೆಂದು ಅರಿತುಕೊಂಡರು. ಆದ್ದರಿಂದ ಅವರು ಪೌಲ ಸೀಲರನ್ನು ಹಿಡಿದು ಪಟ್ಟಣದ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋದರು. ನಗರಾಧಿಕಾರಿಗಳು ಅಲ್ಲಿದ್ದರು.


ನಿಜದೇವರನ್ನು ಪ್ರೀತಿಸುತ್ತಿದ್ದ ಕೆಲವು ಮಂದಿ ಗ್ರೀಕರು ಮತ್ತು ಕೆಲವು ಮಂದಿ ಪ್ರಮುಖ ಸ್ತ್ರೀಯರು ಅಲ್ಲಿದ್ದರು. ಅವರಲ್ಲಿ ಅನೇಕರಿಗೆ ಮನವರಿಕೆಯಾಗಿ ಪೌಲ ಸೀಲರನ್ನು ಸೇರಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು