ಅಪೊಸ್ತಲರ ಕೃತ್ಯಗಳು 16:16 - ಪರಿಶುದ್ದ ಬೈಬಲ್16 ಒಂದು ಸಲ, ನಾವು ಪ್ರಾರ್ಥನಾಸ್ಥಳಕ್ಕೆ ಹೋಗುತ್ತಿದ್ದಾಗ ಒಂದು ಸಂಗತಿ ಸಂಭವಿಸಿತು. ದಾಸಿಯೊಬ್ಬಳು ನಮ್ಮನ್ನು ಎದುರುಗೊಂಡಳು. ಆಕೆಯಲ್ಲಿ ವಿಶೇಷವಾದ ಆತ್ಮವಿತ್ತು. ಆ ಆತ್ಮದ ಶಕ್ತಿಯಿಂದ ಅವಳು ಮುಂದೆ ಸಂಭವಿಸುವ ಸಂಗತಿಗಳ ಬಗ್ಗೆ ಹೇಳುತ್ತಿದ್ದಳು. ಇದರ ಮೂಲಕವಾಗಿ ಆಕೆ ತನ್ನ ಯಜಮಾನರಿಗೆ ಬಹಳ ಹಣವನ್ನು ಗಳಿಸಿ ಕೊಡುತ್ತಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಒಂದು ದಿನ ನಾವು ಪ್ರಾರ್ಥನಾ ಸ್ಥಳಕ್ಕೆ ಹೋಗುತ್ತಿದ್ದೆವು. ಗಾರುಡಗಾತಿಯಾದ ಒಬ್ಬ ದಾಸಿ ನಮ್ಮನ್ನು ಎದುರುಗೊಂಡಳು. ಆ ಹುಡುಗಿ ಕಣಿಶಕುನ ಹೇಳಿ ತನ್ನ ಯಜಮಾನನಿಗೆ ತುಂಬಾ ಹಣ ಸಂಪಾದಿಸುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಒಂದು ದಿನ ನಾವು ಪ್ರಾರ್ಥನೆಯ ಸ್ಥಳಕ್ಕೆ ಹೋಗುತ್ತಿದ್ದೆವು, ಆಗ ಭವಿಷ್ಯ ಹೇಳುವ ದುರಾತ್ಮವುಳ್ಳ ದಾಸಿಯೊಬ್ಬಳು ನಮ್ಮನ್ನು ಭೇಟಿಯಾದಳು. ಭವಿಷ್ಯ ಹೇಳುವುದರಿಂದ ಆಕೆ ತನ್ನ ಯಜಮಾನನಿಗೆ ಬಹಳ ಹಣ ಸಂಪಾದಿಸುತ್ತಿದ್ದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಎಗ್ದಾ ಅಮಿ ಮಾಗ್ನಿ ಕರ್ತಲ್ಯಾ ಜಾಗ್ಯಾಕ್ ಜಾತಾನಾ ಎಕ್ ಸಂಗತ್ ಹೊಲಿ, ಎಕ್ ದಾಸಿ ಅಮ್ಕಾ ಭೆಟ್ಲಿ ತಿಜ್ಯಾಕ್ಡೆ ಎಕ್ ವಿಶೆಸ್ ಆತ್ಮೊ ಹೊತ್ತೊ, ತ್ಯಾ ಆತ್ಮ್ಯಾಚ್ಯಾ ಬಳಾನ್ ತಿ ಫಿಡೆ ಹೊತಲೆ ಹೊತ್ತ್ಯಾಚ್ಯಾ ವಿಶಯಾತ್ ಸಾಂಗಿತ್ ಹೊತ್ತಿ, ತಸೆ ಕರುನ್ ತಿ ಅಪ್ಲ್ಯಾ ಯಜಮಾನಾಕ್ ಲೈ ಪೈಸೆ ಕರುನ್ ದಿತ್ ಹೊತ್ತಿ. ಅಧ್ಯಾಯವನ್ನು ನೋಡಿ |
ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”
ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.