Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:25 - ಪರಿಶುದ್ದ ಬೈಬಲ್‌

25 ಸುಮಾರು ಮಧ್ಯರಾತ್ರಿಯಲ್ಲಿ ಪೌಲ ಸೀಲರು ಪ್ರಾರ್ಥನೆ ಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡುವವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಸುಮಾರು ಮಧ್ಯರಾತ್ರಿಯಲ್ಲಿ ಪೌಲ, ಸೀಲರು ಪ್ರಾರ್ಥನೆ ಮಾಡುವವರಾಗಿ ಸ್ತುತಿಗೀತೆಯಿಂದ ದೇವರಿಗೆ ಸ್ತೋತ್ರ ಮಾಡುತ್ತಿದ್ದರು. ಸೆರೆಮನೆಯಲ್ಲಿ ಇತರ ಕೈದಿಗಳು ಅದನ್ನು ಆಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಅರ್ದ್ಯಾ ರಾತ್ತಿನ್ ಪಾವ್ಲು ಅನಿ ಸಿಲಾಸ್ ಮಾಗ್ನಿ ಕರಿತ್ ದೆವಾಕ್ ಸ್ತುತಿ ಗಿತಾ ಸಾಂಗಿತ್ ಹೊತ್ತೆ, ಹುರಲ್ಲಿ ಚೊರಾ ಸಗ್ಳಿ ತೆ ಆಯ್ಕಿತ್ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:25
38 ತಿಳಿವುಗಳ ಹೋಲಿಕೆ  

ನನ್ನ ಸಹೋದರ ಸಹೋದರಿಯರೇ, ನಿಮಗೆ ಅನೇಕ ತೊಂದರೆಗಳು ಬರುತ್ತವೆ. ಆದರೆ ಅವುಗಳು ಬಂದಾಗ ನೀವು ಬಹಳ ಸಂತೋಷಪಡಬೇಕು.


ನಿನ್ನ ಒಳ್ಳೆಯ ನಿರ್ಧಾರಗಳಿಗಾಗಿ ಕೃತಜ್ಞತೆ ಸಲ್ಲಿಸಲು ನಾನು ಮಧ್ಯರಾತ್ರಿಯಲ್ಲಿ ಎದ್ದೇಳುವೆನು.


ಅಲ್ಲದೆ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷವಾಗಿದ್ದೇವೆ. ಏಕೆಂದರೆ, ಈ ಕಷ್ಟಸಂಕಟಗಳು ನಮ್ಮಲ್ಲಿ ಹೆಚ್ಚು ತಾಳ್ಮೆಯನ್ನು ಉಂಟುಮಾಡುತ್ತವೆ.


ರಾತ್ರಿಯಲ್ಲಿ, ನಾನು ಮಾಡುತ್ತಿದ್ದ ಗಾನವನ್ನು ನೆನಸಿಕೊಳ್ಳುವೆನು; ಆಂತರ್ಯದಲ್ಲಿ ಮಾತಾಡುತ್ತಾ ಅರ್ಥಮಾಡಿಕೊಳ್ಳಲು ಪ್ರಯತ್ನಿಸುವೆನು.


ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.


ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತಾಡಿರಿ. ನಿಮ್ಮ ಹೃದಯಗಳಲ್ಲಿ ಪ್ರಭುವಿಗೆ ವಾದ್ಯ ನುಡಿಸುತ್ತಾ ಹಾಡಿರಿ.


ನಾನು ನಿಮಗಾಗಿ ಅನುಭವಿಸಿದ ಬಾಧೆಗಳಿಂದ ನನಗೆ ಸಂತೋಷವಾಗಿದೆ. ಕ್ರಿಸ್ತನು ಸಭೆಯೆಂಬ ತನ್ನ ದೇಹದ ಮೂಲಕ ಇನ್ನೂ ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಈ ಸಂಕಟಗಳಲ್ಲಿ ನಾನು ಅನುಭವಿಸಬೇಕಾದವುಗಳನ್ನು ಆತನ ದೇಹಕ್ಕೋಸ್ಕರ ನನ್ನ ದೇಹದಲ್ಲಿ ಅನುಭವಿಸುತ್ತೇನೆ.


ನಿಮಗೆ ನಿರೀಕ್ಷೆಯಿರುವುದರಿಂದ ಸಂತೋಷವಾಗಿರಿ. ನಿಮಗೆ ಸಂಕಟಗಳಿರುವಾಗ ತಾಳ್ಮೆಯಿಂದಿರಿ. ಎಲ್ಲಾ ಸಮಯದಲ್ಲಿ ಪ್ರಾರ್ಥಿಸಿರಿ.


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ಆದರೆ ಆ ಕೆಟ್ಟ ಜನರು ಸಹಾಯಕ್ಕಾಗಿ ದೇವರನ್ನು ಕೇಳಿಕೊಳ್ಳುವುದಿಲ್ಲ. ಅವರು, ‘ನನ್ನನ್ನು ಸೃಷ್ಟಿಸಿದ ದೇವರೆಲ್ಲಿ?’ ಎಂದು ಕೇಳುವುದಿಲ್ಲ. ‘ಕುಗ್ಗಿಹೋದವರಿಗೆ ಸಹಾಯಮಾಡುವ ದೇವರೆಲ್ಲಿ?’ ಎಂದು ಕೇಳುವುದಿಲ್ಲ.


ಆ ಸಮಯದಲ್ಲಿ ನೀವು ಹರ್ಷಗಾನ ಹಾಡುವಿರಿ. ಅದು ಹಬ್ಬದ ರಾತ್ರಿಯ ಸಮಯದಂತಿರುವದು. ದೇವರ ಪರ್ವತದಲ್ಲಿ ನಡೆಯುತ್ತಿರುವಾಗ ನೀವು ಅತ್ಯಂತ ಸಂತೋಷಪಡುವಿರಿ. ಇಸ್ರೇಲಿನ ಬಂಡೆಯಾಗಿರುವ ಯೆಹೋವನನ್ನು ಆರಾಧಿಸಲು ಹೋಗುವಾಗ ಕೊಳಲಿನ ಗಾನವನ್ನು ಕೇಳಿ ಸಂತೋಷಿಸುವಿರಿ.


ನಾನು ಅನೇಕರಿಗೆ ಮಾದರಿಯಾಗಿದ್ದೇನೆ. ಯಾಕೆಂದರೆ ನೀನೇ ನನ್ನ ಶಕ್ತಿಗೆ ಆಧಾರ.


ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು. ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿರುವುದು.


ನೀವು ಕ್ರಿಸ್ತನನ್ನು ಅನುಸರಿಸುತ್ತಿರುವುದರ ನಿಮಿತ್ತವಾಗಿ ನಿಮ್ಮ ಬಗ್ಗೆ ಜನರು ಕೆಟ್ಟದ್ದನ್ನು ನುಡಿದರೆ ನೀವು ಭಾಗ್ಯವಂತರಾಗಿದ್ದೀರಿ. ತೇಜೋಮಯವಾದ ಆತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನೆ. ಆತನು ದೇವರಾತ್ಮನಾಗಿದ್ದಾನೆ.


ನೀವು ನಿಮ್ಮ ಜೀವಿತಗಳನ್ನು ದೇವರ ಸೇವೆಗಾಗಿ ಯಜ್ಞದೋಪಾದಿಯಲ್ಲಿ ಅರ್ಪಿಸಿಕೊಳ್ಳಲು ನಿಮ್ಮ ನಂಬಿಕೆಯು ನಿಮ್ಮನ್ನು ಪ್ರೇರೇಪಿಸುತ್ತದೆ. ಒಂದುವೇಳೆ, ನಿಮ್ಮ ಯಜ್ಞದೊಡನೆ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ಸಂತೋಷಿಸುತ್ತೇನೆ, ನಿಮ್ಮೆಲ್ಲರೊಂದಿಗೆ ಸಂತೋಷಿಸುತ್ತೇನೆ.


ದುಃಖಿತರಂತೆ ಕಂಡರೂ ಯಾವಾಗಲೂ ಉಲ್ಲಾಸಿಸುವವರಾಗಿದ್ದೇವೆ; ಬಡವರಂತೆ ಕಂಡರೂ ಅನೇಕರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿ ಮಾಡುತ್ತಿದ್ದೇವೆ; ಏನೂ ಇಲ್ಲದವರಂತೆ ಕಂಡರೂ ವಾಸ್ತವವಾಗಿ ಎಲ್ಲವನ್ನೂ ಹೊಂದಿದವರಾಗಿದ್ದೇವೆ.


ಅಪೊಸ್ತಲರು ಸಭೆಯಿಂದ ಹೊರಟುಹೋದರು. ಯೇಸುವಿನ ಹೆಸರಿಗಾಗಿ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದುಕೊಂಡೆವೆಂದು ಅವರು ಸಂತೋಷಪಟ್ಟರು.


ಪ್ರಧಾನ ಯಾಜಕನಾದ ಯೆಹೋಶುವನೇ, ಅವನೊಂದಿಗೆ ಸೇವೆಮಾಡುವ ಇತರ ಯಾಜಕರೇ, ನನ್ನ ಮಾತಿಗೆ ಕಿವಿಗೊಡಿರಿ. ಈ ಗಂಡಸರು ಮುಂದೆ ಏನಾಗಬಹುದೆಂಬುದಕ್ಕೆ ನಿದರ್ಶನವಾಗಿದ್ದಾರೆ. ಆಗ ನಾನು ನನ್ನ ವಿಶೇಷ ಸೇವಕನನ್ನು ಕರೆತರುವೆನು. ಆತನ ಹೆಸರು ಕೊಂಬೆ.


ರಾತ್ರಿಯಲ್ಲಿ ನಾನು ನಿನ್ನ ಹೆಸರನ್ನೂ ನಿನ್ನ ಉಪದೇಶಗಳನ್ನೂ ಜ್ಞಾಪಿಸಿಕೊಳ್ಳುವೆ.


ಹಗಲಲ್ಲಿ ಯೆಹೋವನು ನನಗೆ ನಿಜಪ್ರೀತಿಯನ್ನು ತೋರುವುದರಿಂದ ಜೀವಸ್ವರೂಪನಾದ ಆತನಿಗೆ ಪ್ರತಿ ರಾತ್ರಿಯಲ್ಲಿಯೂ ನೂತನ ಕೀರ್ತನೆಯನ್ನು ಹಾಡುವೆ; ಆತನಲ್ಲಿ ಪ್ರಾರ್ಥಿಸುವೆ.


ಯೇಸುವಿಗೆ ತುಂಬಾ ವೇದನೆಯಿತ್ತು. ಆತನು ಪ್ರಾರ್ಥನೆಯಲ್ಲಿ ಕಷ್ಟಪಟ್ಟು ಹೋರಾಡಿದನು. ಆತನ ಮುಖದಲ್ಲಿ ಬೆವರು ರಕ್ತದೋಪಾದಿಯಲ್ಲಿ ತೊಟ್ಟಿಕ್ಕತೊಡಗಿತು.


ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.


ನನ್ನ ಯೆಹೋವನೇ, ಇಕ್ಕಟ್ಟಿನಲ್ಲಿ ನಿನ್ನನ್ನು ಕರೆದೆನು; ರಾತ್ರಿಯೆಲ್ಲಾ ನಿನಗಾಗಿ ಕೈಚಾಚಿಕೊಂಡಿದ್ದೆನು. ಆದರೆ ನನ್ನ ಮನಸ್ಸು ಸಮಾಧಾನಗೊಳ್ಳಲಿಲ್ಲ.


ನಿಮ್ಮಲ್ಲಿ ತೊಂದರೆಗೆ ಒಳಗಾಗಿರುವವನು ಪ್ರಾರ್ಥಿಸಬೇಕು. ನಿಮ್ಮಲ್ಲಿ ಸಂತೋಷದಿಂದಿರುವವನು ಹಾಡಬೇಕು.


ನನ್ನ ದೇವರೇ, ಹಗಲಿನಲ್ಲಿ ನಾನು ನಿನ್ನನ್ನು ಕೂಗಿಕೊಂಡೆನು, ಆದರೂ ನೀನು ನನಗೆ ಉತ್ತರಿಸಲಿಲ್ಲ. ರಾತ್ರಿಯಲ್ಲೂ ನಿನ್ನನ್ನು ಕೂಗಿಕೊಳ್ಳುತ್ತಲೇ ಇದ್ದೆನು.


ಅಪೊಸ್ತಲರು, ಹಿರಿಯರು ಮತ್ತು ಇಡೀ ಸಭೆಯವರು ಪೌಲ ಬಾರ್ನಬರೊಂದಿಗೆ ಕೆಲವು ಜನರನ್ನು ಅಂತಿಯೋಕ್ಯಕ್ಕೆ ಕಳುಹಿಸಬಯಸಿದರು. ತಮ್ಮವರೇ ಆದ ಕೆಲವರನ್ನು ಆರಿಸಿಕೊಳ್ಳಲು ಸಭೆಯು ನಿರ್ಧರಿಸಿತು. ಅವರು ಯೂದನನ್ನು (ಬಾರ್ಸಬನೆಂದೂ ಕರೆಯುತ್ತಿದ್ದರು) ಮತ್ತು ಸೀಲನನ್ನು ಆರಿಸಿಕೊಂಡರು. ಇವರು ಜೆರುಸಲೇಮಿನ ಸಭೆಯವರಲ್ಲಿ ಪ್ರಮುಖರಾಗಿದ್ದರು.


ಇದನ್ನು ಕಂಡ ಅವಳ ಯಜಮಾನರು ಈಗ ಆಕೆಯಿಂದ ಹಣಗಳಿಸಲು ಸಾಧ್ಯವಿಲ್ಲವೆಂದು ಅರಿತುಕೊಂಡರು. ಆದ್ದರಿಂದ ಅವರು ಪೌಲ ಸೀಲರನ್ನು ಹಿಡಿದು ಪಟ್ಟಣದ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋದರು. ನಗರಾಧಿಕಾರಿಗಳು ಅಲ್ಲಿದ್ದರು.


ಆಗ ಮಧ್ಯರಾತ್ರಿ ಕಳೆದಿತ್ತು. ಆದರೂ ಅವನು ಪೌಲ ಸೀಲರನ್ನು ಕರೆದೊಯ್ದು ಅವರ ಗಾಯಗಳನ್ನು ತೊಳೆದನು. ಬಳಿಕ ಅವನು ಮತ್ತು ಅವನ ಮನೆಯವರೆಲ್ಲರೂ ದೀಕ್ಷಾಸ್ನಾನ ಮಾಡಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು