Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:27 - ಪರಿಶುದ್ದ ಬೈಬಲ್‌

27 ಆಗ ಸೆರೆಮನೆಯ ಅಧಿಕಾರಿಗೆ ಎಚ್ಚರವಾಯಿತು. ಸೆರೆಮನೆಯ ಬಾಗಿಲುಗಳು ತೆರೆದುಕೊಂಡಿರುವುದನ್ನು ಕಂಡು ಈಗಾಗಲೇ ಕೈದಿಗಳು ತಪ್ಪಿಸಿಕೊಂಡಿದ್ದಾರೆಂದು ಅವನು ಭಾವಿಸಿದನು. ಆದ್ದರಿಂದ ಅವನು ತನ್ನ ಕತ್ತಿಯನ್ನು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಬೇಕೆನ್ನುವಷ್ಟರಲ್ಲಿಯೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚೆತ್ತು ಸೆರೆಮನೆಯ ಕದಗಳು ತೆರೆದಿರುವುದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಎಚ್ಚೆತ್ತ ಅಧಿಕಾರಿ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದಿರುವುದನ್ನು ಕಂಡನು. ಕೈದಿಗಳೆಲ್ಲರು ತಪ್ಪಿಸಿಕೊಂಡಿರುವರೆಂದು ಭಾವಿಸಿ ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳುವುದರಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯ ಮಾಡಿಕೊಳ್ಳಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಸೆರೆಮನೆಯ ಅಧಿಕಾರಿ ಎಚ್ಚತ್ತುಕೊಂಡು, ಸೆರೆಮನೆಯ ಬಾಗಿಲುಗಳು ತೆರೆದಿರುವುದನ್ನು ಕಂಡು, ಸೆರೆಯಾಳುಗಳು ತಪ್ಪಿಸಿಕೊಂಡು ಹೋಗಿರಬಹುದೆಂದು ಭಾವಿಸಿ, ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ಬಂದಿಖಾನ್ಯಾಚೊ ಅಧಿಕಾರಿ ನಿಜೆತ್ನಾ ಜಾಗೊ ಹೊಲೊ, ದಾರಾ ಸಗ್ಳಿ ಉಗಡಲ್ಲಿ ಹೊತ್ತಿ ಬಗುನ್ ಅತ್ತಾ ಸಗ್ಳಿ ಚೊರಾಬಿ ಚುಕ್ವುನ್ ಘೆವ್ನ್ ಪಳುನ್ ಜಾವ್ಕ್ ಫಿರೆ ಮನುನ್ ಚಿಂತುನ್, ತೆನಿ ಅಪ್ಲೊ ಕೊಯ್ತೊ ಘೆವ್ನ್ ಜಿವ್ ಕಾಡುನ್ ಘೆವ್ಚೆ ಮನುನ್ ಹೊತ್ತ್ಯಾ ತನ್ನಾಚ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:27
9 ತಿಳಿವುಗಳ ಹೋಲಿಕೆ  

ಹೆರೋದನು ಎಲ್ಲೆಲ್ಲಿ ಹುಡುಕಿದರೂ ಪೇತ್ರನನ್ನು ಕಂಡುಹಿಡಿಯಲಾಗಲಿಲ್ಲ. ಆದ್ದರಿಂದ ಹೆರೋದನು ಕಾವಲುಗಾರರನ್ನು ವಿಚಾರಿಸಿ ಅವರಿಗೇ ಮರಣದಂಡನೆ ವಿಧಿಸಿದನು. ತರುವಾಯ ಹೆರೋದನು ಜುದೇಯದಿಂದ ಹೊರಟು ಸೆಜರೇಯ ಪಟ್ಟಣಕ್ಕೆ ಬಂದು ಅಲ್ಲೇ ಸ್ವಲ್ಪಕಾಲ ನೆಲೆಸಿದ್ದನು.


ಆಗ ಯೂದನು ಆ ಹಣವನ್ನು ದೇವಾಲಯದೊಳಗೆ ಬಿಸಾಡಿ ಹೊರಟುಹೋಗಿ ನೇಣು ಹಾಕಿಕೊಂಡನು.


ಆ ನಗರವು ವಶವಾದುದನ್ನು ಜಿಮ್ರಿಯು ಕಂಡು ಅರಮನೆಯೊಳಕ್ಕೆ ಹೋಗಿ ಬೆಂಕಿಯನ್ನು ಹತ್ತಿಸಿದನು. ಅವನು ಅರಮನೆಯನ್ನು ಸುಟ್ಟುಹಾಕಿ ತಾನೂ ಸುಟ್ಟುಕೊಂಡನು.


ಅಹೀತೋಫೆಲನು ತನ್ನ ಸಲಹೆಯನ್ನು ಇಸ್ರೇಲರು ಸ್ವೀಕರಿಸಲಿಲ್ಲವೆಂಬುದನ್ನು ತಿಳಿದು ತನ್ನ ಹೇಸರಕತ್ತೆಯ ಮೇಲೆ ತಡಿಯನ್ನು ಹಾಕಿ ತನ್ನ ಸ್ವಂತ ಊರಿನಲ್ಲಿದ್ದ ಮನೆಗೆ ಹೋದನು. ಅವನು ತನ್ನ ಕುಟುಂಬಕ್ಕೆ ಯೋಜನೆಗಳನ್ನು ಮಾಡಿದನು. ನಂತರ ಅವನೇ ನೇಣು ಹಾಕಿಕೊಂಡು ಸತ್ತನು. ಅಹೀತೋಫೆಲನನ್ನು ಜನರು ಅವನ ತಂದೆಯ ಸಮಾಧಿಯ ಬಳಿ ಸಮಾಧಿ ಮಾಡಿದರು.


ಕೂಡಲೆ ಅಬೀಮೆಲೆಕನು ತನ್ನ ಆಯುಧವಾಹಕನಿಗೆ, “ನಿನ್ನ ಖಡ್ಗವನ್ನು ಹೊರತೆಗೆದು ನನ್ನನ್ನು ಕೊಂದುಬಿಡು. ‘ಒಬ್ಬ ಹೆಂಗಸು ಅಬೀಮೆಲೆಕನನ್ನು ಕೊಂದಳು’ ಎಂದು ಜನರು ಹೇಳಬಾರದು. ಅದಕ್ಕಾಗಿ ನೀನು ನನ್ನನ್ನು ಕೊಲ್ಲಬೇಕೆಂದು ನನ್ನ ಇಚ್ಛೆ” ಎಂದನು. ಆದ್ದರಿಂದ ಆ ಸೇವಕನು ಅಬೀಮೆಲೆಕನನ್ನು ತನ್ನ ಕತ್ತಿಯಿಂದ ಇರಿದನು; ಅಬೀಮೆಲೆಕನು ಸತ್ತನು.


ಪೌಲನು ಅವನಿಗೆ, “ಹಾನಿ ಮಾಡಿಕೊಳ್ಳಬೇಡ! ನಾವೆಲ್ಲಾ ಇಲ್ಲೇ ಇದ್ದೇವೆ!” ಎಂದು ಕೂಗಿ ಹೇಳಿದನು.


ಸೆರೆಮನೆಯ ಅಧಿಕಾರಿಯು ಪೌಲನಿಗೆ, “ನಮ್ಮ ನಾಯಕರು ನಿಮ್ಮನ್ನು ಬಿಡುಗಡೆ ಮಾಡಬೇಕೆಂದು ಸೈನಿಕರ ಮೂಲಕ ಹೇಳಿ ಕಳುಹಿಸಿದ್ದಾರೆ. ಈಗ ನೀವು ಸಮಾಧಾನದಿಂದ ಹೋಗಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು