Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:30 - ಪರಿಶುದ್ದ ಬೈಬಲ್‌

30 ಬಳಿಕ ಅವನು ಅವರನ್ನು ಹೊರಗೆ ಕರೆದುಕೊಂಡು ಬಂದು, “ಸ್ವಾಮಿಗಳೇ, ನಾನು ರಕ್ಷಣೆ ಹೊಂದಬೇಕಾದರೆ ಏನು ಮಾಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಮತ್ತು ಅವರನ್ನು ಹೊರಗೆ ಕರೆದುಕೊಂಡು ಬಂದು; “ಸ್ವಾಮಿಗಳೇ, ನಾನು ರಕ್ಷಣೆಹೊಂದುವುದಕ್ಕೆ ಏನು ಮಾಡಬೇಕೆಂದು?” ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅನಂತರ ಅವರನ್ನು ಹೊರಗೆ ಕರೆತಂದು, “ಸ್ವಾಮಿಗಳೇ, ಜೀವೋದ್ಧಾರ ಪಡೆಯಲು ನಾನು ಮಾಡಬೇಕಾದುದು ಏನು?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಮತ್ತು ಅವರನ್ನು ಹೊರಗೆ ಕರಕೊಂಡು ಬಂದು - ಸ್ವಾವಿುಗಳೇ, ನಾನು ರಕ್ಷಣೆಹೊಂದುವದಕ್ಕೆ ಏನು ಮಾಡಬೇಕೆಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಮೇಲೆ ಅವರನ್ನು ಹೊರಗೆ ಕರೆದುಕೊಂಡು ಬಂದು, “ಮಹನೀಯರೇ, ನಾನು ರಕ್ಷಣೆ ಹೊಂದಲು ಏನು ಮಾಡಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಮಾನಾ ತೆಂಕಾ ದೊಗ್ಯಾಕ್ನಿ ಭಾಯ್ರ್ ಬಲ್ವುನ್ ಘೆವ್ನ್ ತೆನಿ, “ಸಾಯ್ಬಾನು, ಮಿಯಾ ದೆವಾಚಿ ರಾಕ್ವನ್ ಘೆವ್ಚೆ ಹೊಲ್ಯಾರ್ ಕಾಯ್ ಕರುಚೆ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:30
16 ತಿಳಿವುಗಳ ಹೋಲಿಕೆ  

ಇದನ್ನು ಕೇಳಿದಾಗ, ಅವರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪೇತ್ರನನ್ನು ಮತ್ತು ಉಳಿದ ಅಪೊಸ್ತಲರನ್ನು, “ಈಗ ನಾವೇನು ಮಾಡಬೇಕು?” ಎಂದು ಕೇಳಿದರು.


“ನಾನು, ‘ಪ್ರಭುವೇ, ನಾನೇನು ಮಾಡಲಿ’ ಎಂದೆನು. ಪ್ರಭುವು ‘ಎದ್ದು ದಮಸ್ಕದೊಳಗೆ ಹೋಗು. ನಾನು ನಿನಗೆ ನೇಮಿಸಿರುವ ಕೆಲಸಗಳನ್ನೆಲ್ಲಾ ಅಲ್ಲಿ ನಿನಗೆ ತಿಳಿಸಲಾಗುವುದು’ ಎಂದು ಉತ್ತರಕೊಟ್ಟನು.


“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.


ಆದ್ದರಿಂದ ಜನರು, “ಈಗ ನಾವೇನು ಮಾಡಬೇಕು?” ಎಂದು ಕೇಳಿದರು.


ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದನ್ನು ನೀವು ತಕ್ಕ ಕಾರ್ಯಗಳ ಮೂಲಕ ತೋರಿಸಿ.


ಆಗ ನೀವು ಯೆಹೋವನನ್ನು ಕರೆದಾಗ ಆತನು ನಿಮಗೆ ಉತ್ತರಿಸುವನು. ನೀವು ಆತನನ್ನು ಕೂಗಿದಾಗ, “ಇಗೋ, ನಾನಿದ್ದೇನೆ” ಎಂದು ಅನ್ನುವನು. ನೀವು ಜನರಿಗೆ ಕಷ್ಟಕೊಡುವದನ್ನೂ ಅವರಿಗೆ ಭಾರ ಹೊರಿಸುವದನ್ನೂ ನಿಲ್ಲಿಸಬೇಕು. ಜನರಿಗೆ ಕಟುವಾಗಿ ಮಾತನಾಡಿ ಅವರನ್ನು ಬಯ್ಯುವದನ್ನು ನಿಲ್ಲಿಸಬೇಕು.


ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.


ಆದ್ದರಿಂದ ಸೆರೆಮನೆಯ ಅಧಿಕಾರಿಯು ಅವರನ್ನು ಸೆರೆಮನೆಯ ಒಳಕೋಣೆಗೆ ಹಾಕಿಸಿ, ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಿಗಿಸಿದನು.


ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಈ ಜನರು ಮಹೋನ್ನತನಾದ ದೇವರ ಸೇವಕರು! ನೀವು ಹೇಗೆ ರಕ್ಷಣೆ ಹೊಂದಬಹುದೆಂಬುದನ್ನು ಅವರು ಹೇಳುತ್ತಿದ್ದಾರೆ!” ಎಂದು ಕೂಗುತ್ತಿದ್ದಳು.


ಈಗ ಎದ್ದು ಪಟ್ಟಣದೊಳಗೆ ಹೋಗು. ನೀನು ಏನು ಮಾಡಬೇಕೆಂಬುದನ್ನು ಅಲ್ಲಿಯ ಒಬ್ಬನು ನಿನಗೆ ತಿಳಿಸುವನು” ಎಂದಿತು.


ದೇವರಿಗೆ ಹೋಲಿಸಿದರೆ ಯಾವನೂ ನೀತಿವಂತನಲ್ಲ. ಯಾವ ಮನುಷ್ಯನೂ ಪರಿಶುದ್ಧನಾಗಿರಲು ಸಾಧ್ಯವಿಲ್ಲ.


ಕರುಣೆ ತೋರುವವರು ಧನ್ಯರು. ಅವರು ಕರುಣೆ ಹೊಂದುವರು.


“ನನಗೆ ಬೇಕಾಗಿರುವ ವಿಶೇಷ ದಿವಸ ಯಾವುದೆಂದು ನಾನು ಹೇಳುತ್ತೇನೆ. ಅದು ಜನರನ್ನು ಸ್ವತಂತ್ರರನ್ನಾಗಿ ಮಾಡುವ ದಿವಸ, ಜನರಿಂದ ಅವರ ಭಾರವನ್ನು ತೆಗೆದುಹಾಕುವ ದಿವಸ; ತೊಂದರೆಗೀಡಾಗಿರುವ ಜನರನ್ನು ವಿಮುಕ್ತರನ್ನಾಗಿ ಮಾಡುವ ದಿವಸ; ಅವರ ಹೆಗಲಿನಿಂದ ಭಾರದ ಹೊರೆಯನ್ನು ಇಳಿಸುವ ದಿವಸ.


ದೇವರೇ, ನೀನು ನನಗೆ ಅಗೋಚರವಾಗಿದ್ದರೂ ನೀತಿಮಾರ್ಗವನ್ನು ಬೋಧಿಸು, ನಾನು ತಪ್ಪು ಮಾಡಿದ್ದರೆ ಅದನ್ನು ಮತ್ತೆ ಮಾಡುವುದಿಲ್ಲ’ ಎಂದು ಹೇಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು