Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:34 - ಪರಿಶುದ್ದ ಬೈಬಲ್‌

34 ಇದಾದ ಮೇಲೆ ಅವನು ಪೌಲ ಸೀಲರನ್ನು ಮನೆಗೆ ಕರೆದೊಯ್ದು ಅವರಿಗೆ ಊಟಮಾಡಿಸಿದನು. ಆ ಜನರೆಲ್ಲರೂ ಪ್ರಭುವಿನಲ್ಲಿ ನಂಬಿಕೆ ಇಟ್ಟದ್ದರಿಂದ ಬಹ ಸಂತೋಷಭರಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಬಳಿಕ ಪೌಲ ಮತ್ತು ಸೀಲರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಬಡಿಸಿದನು. ದೇವರಲ್ಲಿ ವಿಶ್ವಾಸವಿಡುವ ಸದವಕಾಶ ದೊರಕಿದ್ದಕ್ಕಾಗಿ ಅವನೂ ಅವನ ಮನೆಯವರೆಲ್ಲರೂ ಉಲ್ಲಾಸಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ನಂಬಿ ಉಲ್ಲಾಸಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಸೆರೆಮನೆಯ ಅಧಿಕಾರಿ ಅವರನ್ನು ತನ್ನ ಮನೆಗೆ ಕರೆದುಕೊಂಡು ಬಂದು ಅವರಿಗೆ ಊಟಬಡಿಸಿದನು ಮತ್ತು ಅವನೂ ತನ್ನ ಮನೆಯವರೆಲ್ಲರೂ ದೇವರಲ್ಲಿ ವಿಶ್ವಾಸವಿಟ್ಟಿದ್ದಕ್ಕಾಗಿ ಉಲ್ಲಾಸಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಯೆವ್ಡೆ ಹೊಲ್ಲ್ಯಾ ತನ್ನಾ, ತೆನಿ ಸಗ್ಳಿ ಲೊಕಾ ಧನಿಯಾಚೆರ್ ವಿಶ್ವಾಸ್ ಥವಲ್ಲ್ಯಾಸಾಟಿ ಲೈ ಕುಶಿ ಹೊಲೆ ಮಾನಾ ತೆನಿ ಪಾವ್ಲುಕ್ ಅನಿ ಸಿಲಾಸಾಕ್ ಅಪ್ಲ್ಯಾ ಘರಾಕ್ ಬಲ್ವುನ್ ನ್ಹೆವ್ನ್ ಜೆವಾನ್ ಕರಸ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:34
26 ತಿಳಿವುಗಳ ಹೋಲಿಕೆ  

ನಿರೀಕ್ಷೆಯನ್ನು ಕೊಡುವ ದೇವರು ನಂಬಿಕೆಯಿಂದ ಉಂಟಾಗುವ ಆನಂದವನ್ನೂ ಸಮಾಧಾನವನ್ನೂ ನಿಮಗೆ ಸಂಪೂರ್ಣವಾಗಿ ದಯಪಾಲಿಸಲೆಂದು ನಾನು ಪ್ರಾರ್ಥಿಸುತ್ತೇನೆ. ಆಗ ಪವಿತ್ರಾತ್ಮನ ಶಕ್ತಿಯ ಮೂಲಕ ನಿರೀಕ್ಷೆಯು ನಿಮ್ಮಲ್ಲಿ ತುಂಬಿ ಹೊರಸೂಸುವುದು.


ನನ್ನ ಸಹೋದರನೇ, ದೇವಜನರಿಗೆ ನೀನು ಪ್ರೀತಿಯನ್ನು ತೋರಿಸಿ ಅವರ ಹೃದಯಗಳನ್ನು ಸಂತೈಸಿರುವೆ. ಇದು ನನಗೆ ಹೆಚ್ಚಿನ ಸಂತಸವನ್ನೂ ನೆಮ್ಮದಿಯನ್ನೂ ತಂದುಕೊಟ್ಟಿದೆ.


ಇಷ್ಟು ಮಾತ್ರವಲ್ಲದೆ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಾವು ದೇವರಲ್ಲಿ ಹರ್ಷಿಸುತ್ತೇವೆ. ಈಗ ನಾವು ದೇವರ ಸ್ನೇಹಿತರಾಗಿರುವುದು ಯೇಸುವಿನಿಂದಲೇ.


ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು.


ನನ್ನ ಮಕ್ಕಳೇ, ನಮ್ಮ ಪ್ರೀತಿಯು ಕೇವಲ ಶಬ್ಧಗಳಲ್ಲಿ ಮತ್ತು ಮಾತಿನಲ್ಲಿ ಇರಬಾರದು. ನಮ್ಮ ಪ್ರೀತಿಯು ನಿಜವಾದ ಪ್ರೀತಿಯಾಗಿರಬೇಕು. ನಾವು ಮಾಡುವ ಕಾರ್ಯಗಳಲ್ಲಿಯೇ ನಮ್ಮ ಪ್ರೀತಿಯನ್ನು ತೋರ್ಪಡಿಸಬೇಕು.


ನಿಜವಾಗಿಯೂ, ನಿಮ್ಮಿಂದ ಕೊಡುಗೆಗಳನ್ನು ಪಡೆದುಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಲ್ಲ. ಆದರೆ ಕೊಡುವುದರ ಮೂಲಕ ಮುಂದೆ ಹೇರಳವಾಗಿ ದೊರೆಯುವ ಆಶೀರ್ವಾದಗಳನ್ನು ನೀವು ಹೊಂದಿಕೊಳ್ಳಬೇಕೆಂಬುದೇ ನನ್ನ ಅಪೇಕ್ಷೆ.


ಯಾವಾಗಲೂ ಪ್ರಭುವಿನಲ್ಲಿ ಆನಂದಿಸಿರಿ; ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ಈಗ ನಾವು ಆನಂದಿಸುತ್ತಿರುವ ದೇವರ ಕೃಪಾಶ್ರಯಕ್ಕೆ ಕ್ರಿಸ್ತನೇ ನಮ್ಮನ್ನು ನಮ್ಮ ನಂಬಿಕೆಯ ಮೂಲಕ ತಂದಿದ್ದಾನೆ. ದೇವರ ಮಹಿಮೆಯನ್ನು ಹೊಂದುವೆವು ಎಂಬ ನಿರೀಕ್ಷೆಯು ನಮಗಿರುವುದರಿಂದ ನಾವು ಬಹು ಸಂತೋಷವಾಗಿದ್ದೇವೆ.


ಅವನು ನಿಮ್ಮೊಂದಿಗೆ ಮಾತಾಡುವನು. ಅವನು ಹೇಳುವ ಸಂಗತಿಗಳು ನಿನ್ನನ್ನೂ ನಿನ್ನ ಕುಟಂಬದವರನ್ನೂ ರಕ್ಷಿಸುತ್ತವೆ’ ಎಂದು ಹೇಳಿದನು.


ಅವರು ನೀರಿನಿಂದ ಮೇಲಕ್ಕೆ ಬಂದಾಗ ಪ್ರಭುವಿನ ಆತ್ಮನಿಂದ ಫಿಲಿಪ್ಪನು ಎತ್ತಲ್ಪಟ್ಟನು. ಅವನು ಫಿಲಿಪ್ಪನನ್ನು ಮತ್ತೆಂದೂ ನೋಡಲಿಲ್ಲ. ಅವನು ಬಹಳ ಸಂತೋಷದಿಂದ ತನ್ನ ಪ್ರಯಾಣವನ್ನು ಮುಂದುವರಿಸಿದನು.


ಆಗ ಜಕ್ಕಾಯನು ಬೇಗನೆ ಕೆಳಗಿಳಿದು ಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು.


ನಾವು ಸಂತೋಷಪಡಬೇಕು. ಉಲ್ಲಾಸಪಡಬೇಕು, ಏಕೆಂದರೆ ನಿನ್ನ ತಮ್ಮನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತವಾಗಿ ಬಂದಿದ್ದಾನೆ. ಅವನು ಕಳೆದುಹೋಗಿದ್ದನು, ಈಗಲಾದರೋ ಮತ್ತೆ ಸಿಕ್ಕಿದ್ದಾನೆ’ ಅಂದನು.”


ಬಳಿಕ ಲೇವಿಯು ಯೇಸುವಿಗೆ ತನ್ನ ಮನೆಯಲ್ಲಿ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಅನೇಕ ಸುಂಕವಸೂಲಿಗಾರರು ಮತ್ತು ಇನ್ನಿತರ ಜನರು ಸಹ ಊಟಕ್ಕೆ ಕುಳಿತಿದ್ದರು.


ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.


“ಆದ್ದರಿಂದ ನೀವು ಸಂತೋಷದಿಂದ ಹೊರಡುವಿರಿ ಮತ್ತು ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ. ಪರ್ವತಗಳೂ ಬೆಟ್ಟಗಳೂ ಸಂತೋಷದಿಂದ ನಿಮ್ಮ ಮುಂದೆ ಕುಣಿದಾಡುವವು. ಭೂಮಿಯ ಮೇಲಿರುವ ಮರಗಳೆಲ್ಲಾ ಚಪ್ಪಾಳೆ ತಟ್ಟುವವು.


ಆದರೆ ದೇವರಾತ್ಮನು ಹುಟ್ಟಿಸುವುದು ಪ್ರೀತಿ, ಆನಂದ, ಶಾಂತಿ, ತಾಳ್ಮೆ, ಕರುಣೆ, ಉಪಕಾರ, ನಂಬಿಗಸ್ತಿಕೆ,


ಆಕೆ ಮತ್ತು ಆಕೆಯ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆಕೆಯು, “ನಾನು ಪ್ರಭು ಯೇಸುವಿನಲ್ಲಿ ನಿಜವಾದ ವಿಶ್ವಾಸಿಯೆಂದು ನೀವು ಯೋಚಿಸುವುದಾಗಿದ್ದರೆ, ನನ್ನ ಮನೆಗೆ ಬಂದು ತಂಗಿರಿ” ಎಂದು ಕೇಳಿಕೊಂಡು ನಮ್ಮನ್ನು ಒತ್ತಾಯ ಮಾಡಿದಳು.


ಮರುದಿನ ಮುಂಜಾನೆ ನಾಯಕರು ಸೆರೆಮನೆಯ ಅಧಿಕಾರಿಗೆ, “ಈ ಜನರನ್ನು ಬಿಟ್ಟುಬಿಡು!” ಎಂದು ಕೆಲವು ಸೈನಿಕರ ಮೂಲಕ ಹೇಳಿ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು