Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:13 - ಪರಿಶುದ್ದ ಬೈಬಲ್‌

13 ಆದರೆ ಪೌಲನು ಬೆರೋಯದಲ್ಲಿ ದೇವರ ವಾಕ್ಯವನ್ನು ಹೇಳುತ್ತಿದ್ದಾನೆ ಎಂಬ ವಾರ್ತೆಯನ್ನು ಕೇಳಿದ ಥೆಸಲೋನಿಕದ ಯೆಹೂದ್ಯರು ಬೆರೋಯಕ್ಕೂ ಬಂದು ಅಲ್ಲಿಯ ಜನರನ್ನು ಗಲಿಬಿಲಿಗೊಳಿಸಿ ಗಲಭೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪೌಲನು ಬೆರೋಯದಲ್ಲೂ ದೇವರ ವಾಕ್ಯವನ್ನು ಸಾರುತ್ತಿದ್ದಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದುಬಂತು. ಅವರು ಅಲ್ಲಿಗೂ ಬಂದು ಜನಸಮೂಹವನ್ನು ಪ್ರಚೋದಿಸಿ ಗಲಭೆಯೆಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಿಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿ ಕಲಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಪೌಲನು ದೇವರ ವಾಕ್ಯವನ್ನು ಬೆರೋಯದಲ್ಲಿ ಬೋಧಿಸುತ್ತಿದ್ದಾನೆಂಬುದು ಥೆಸಲೋನಿಕದಲ್ಲಿದ್ದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು, ಜನಸಮೂಹವನ್ನು ಪ್ರಚೋದಿಸಿ ಗಲಭೆ ಎಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ಪಾವ್ಲುನ್ ಬೆರೊಯಾ ಶಾರಾತ್ ಯೆವ್ನ್ ದೆವಾಚ್ಯಾ ಗೊಸ್ಟಿಯಾ ಸಾಂಗ್ಲ್ಯಾನ್, ಮನ್ತಲಿ ಖಬರ್ ಆಯ್ಕುನ್ ಥೆಸಲೊನಿಕಾತ್ಲ್ಯಾ ಜುದೆವಾಂಚ್ಯಾ ಲೊಕಾಕ್ನಿ ಕಂಗಾಲ್ ಕರುನ್ ಧಾಂದಲ್ ಉಟ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:13
14 ತಿಳಿವುಗಳ ಹೋಲಿಕೆ  

ಆ ಏಳು ದಿನಗಳ ಅವಧಿ ಮುಗಿಯುವುದರಲ್ಲಿತ್ತು. ಆದರೆ ಏಷ್ಯಾದಿಂದ ಬಂದಿದ್ದ ಕೆಲವು ಯೆಹೂದ್ಯರು ಪೌಲನನ್ನು ಕಂಡು ಜನಸಮೂಹವನ್ನು ಉದ್ದೇಶಿಸಿ,


ಆದರೆ ನಂಬದೆಹೋದ ಯೆಹೂದ್ಯರು ಅಸೂಯೆಗೊಂಡರು. ಅವರು ಪಟ್ಟಣದಲ್ಲಿದ್ದ ಕೆಲವು ಕೆಡುಕರಿಗೆ ಹಣಕೊಟ್ಟು ಕರೆದುಕೊಂಡು ಬಂದರು. ಈ ಕೆಡುಕರು ಅನೇಕ ಜನರನ್ನು ಒಟ್ಟುಗೂಡಿಸಿ, ಪಟ್ಟಣದಲ್ಲಿ ಗಲಭೆ ಮಾಡಿದರು. ಜನರು ಪೌಲ ಸೀಲರನ್ನು ಹುಡುಕುತ್ತಾ ಯಾಸೋನನ ಮನೆಗೆ ಹೋದರು. ಅವರು ಪೌಲ ಸೀಲರನ್ನು ಜನರ ಮುಂದೆ ಹೊರಗೆ ಎಳೆದುಕೊಂಡು ಬರಬೇಕೆಂದಿದ್ದರು.


ಆದರೆ ಯೆಹೂದ್ಯರಲ್ಲಿ ನಂಬದೆ ಹೋದ ಕೆಲವರು ಯೆಹೂದ್ಯರಲ್ಲದವರನ್ನು ಪ್ರಚೋಧಿಸಿ ಸಹೋದರರ ವಿರುದ್ಧ ಜನರನ್ನು ಎಬ್ಬಿಸಿದರು.


ಹೀಗೆ ಈ ಯೆಹೂದ್ಯರು ಜನರನ್ನೂ ಯೆಹೂದ್ಯರ ಹಿರಿಯನಾಯಕರನ್ನೂ ಧರ್ಮೋಪದೇಶಕರನ್ನೂ ಗಲಿಬಿಲಿಗೊಳಿಸಿದರು. ಅವರು ಬಹು ಸಿಟ್ಟಿನಿಂದ ಬಂದು ಸ್ತೆಫನನನ್ನು ಬಂಧಿಸಿ ಯೆಹೂದ್ಯನಾಯಕರ ಸಭೆಗೆ ಕೊಂಡೊಯ್ದರು.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


ದುರಾಶೆಯುಳ್ಳವನು ಜಗಳಗಳನ್ನು ಎಬ್ಬಿಸುತ್ತಾನೆ. ಯೆಹೋವನಲ್ಲಿ ಭರವಸೆ ಇಡುವವನಾದರೋ ಅಭಿವೃದ್ಧಿ ಹೊಂದುವನು.


ನಾನು ಲೋಕಕ್ಕೆ ಸಮಾಧಾನವನ್ನು ಕೊಡುವುದಕ್ಕೆ ಬಂದೆನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ಲೋಕದಲ್ಲಿ ಭೇದವನ್ನು ಉಂಟುಮಾಡಲು ಬಂದೆನು!


ಮುಂಗೋಪಿಯು ಜಗಳವನ್ನು ಎಬ್ಬಿಸುವನು. ತಾಳ್ಮೆಯುಳ್ಳವನು ಶಾಂತಿಯನ್ನು ಸ್ಥಾಪಿಸುವನು.


ಅಹಾಬನು ಮಾಡಿದಷ್ಟು ಪಾಪಗಳನ್ನು, ಇಲ್ಲವೆ ಕೆಟ್ಟಕಾರ್ಯಗಳನ್ನು ಮಾಡಿದ ಮನುಷ್ಯರು ಬೇರೆ ಯಾರೂ ಇಲ್ಲ. ಅವನು ಆ ಕಾರ್ಯಗಳನ್ನು ಮಾಡುವುದಕ್ಕೆ ಅವನ ಪತ್ನಿಯಾದ ಈಜೆಬೆಲಳು ಅವನನ್ನು ಒತ್ತಾಯಪಡಿಸಿದಳು.


ಪೌಲ ಸೀಲರು ಆಂಫಿಪೊಲಿ ಮತ್ತು ಅಪೊಲೋನಿಯ ಮಾರ್ಗವಾಗಿ ಪ್ರಯಾಣ ಮಾಡಿ ಥೆಸಲೋನಿಕ ಪಟ್ಟಣಕ್ಕೆ ಬಂದರು. ಆ ಪಟ್ಟಣದಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.


ಅದೇ ರಾತ್ರಿಯಲ್ಲಿ ವಿಶ್ವಾಸಿಗಳು ಪೌಲ ಸೀಲರನ್ನು ಬೆರೋಯ ಎಂಬ ಮತ್ತೊಂದು ಪಟ್ಟಣಕ್ಕೆ ಕಳುಹಿಸಿದರು. ಬೆರೋಯದಲ್ಲಿ ಪೌಲ ಸೀಲರು ಯೆಹೂದ್ಯರ ಸಭಾಮಂದಿರಕ್ಕೆ ಹೋದರು.


ಕೆಲವು ಜನರು ಅವನೊಂದಿಗಿದ್ದರು. ಅವರು ಯಾರೆಂದರೆ: ಬೆರೋಯ ಪಟ್ಟಣದ ಪುರ್ರನ ಮಗನಾದ ಸೋಪತ್ರನು, ಥೆಸಲೋನಿಕ ಪಟ್ಟಣದ ಆರಿಸ್ತಾರ್ಕ ಮತ್ತು ಸೆಕುಂದ, ದರ್ಬೆ ಪಟ್ಟಣದ ಗಾಯ ಮತ್ತು ತಿಮೊಥೆಯ, ಅಲ್ಲದೆ ಏಷ್ಯಾದ ತುಖಿಕ ಹಾಗು ತ್ರೊಫಿಮ.


ಅನೇಕ ಪ್ರಯಾಣಗಳನ್ನು ಮಾಡಿದೆನು. ನದಿಗಳಿಂದಲೂ ಕಳ್ಳರಿಂದಲೂ ನನ್ನ ಸ್ವಂತ ಜನರಾದ ಯೆಹೂದ್ಯರಿಂದಲೂ ಮತ್ತು ಯೆಹೂದ್ಯರಲ್ಲದವರಿಂದಲೂ ಅಪಾಯಕ್ಕೀಡಾಗಿದ್ದೆನು. ಪಟ್ಟಣಗಳಲ್ಲಿಯೂ ಜನರು ವಾಸವಾಗಿಲ್ಲದ ಸ್ಥಳಗಳಲ್ಲಿಯೂ ಸಮುದ್ರಗಳಲ್ಲಿಯೂ ಸುಳ್ಳುಸಹೋದರರ ಮಧ್ಯದಲ್ಲಿಯೂ ಅಪಾಯಕ್ಕೀಡಾಗಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು