Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:27 - ಪರಿಶುದ್ದ ಬೈಬಲ್‌

27 “ಜನರು ತನ್ನನ್ನು ಹುಡುಕಬೇಕೆಂಬುದು ದೇವರ ಉದ್ದೇಶವಾಗಿತ್ತು. ತನಗಾಗಿ ಸುತ್ತಮುತ್ತಲೆಲ್ಲಾ ಹುಡುಕಿ ಕಂಡುಕೊಳ್ಳಬಹುದೆಂದು ದೇವರು ಹಾಗೆ ಮಾಡಿದನು. ಆದರೆ ಆತನು ನಮ್ಮಲ್ಲಿ ಯಾರಿಗೂ ಬಹುದೂರವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಒಂದು ವೇಳೆ ಅವರು ತಡವಾಗಿಯಾದರೂ ತನ್ನನ್ನು ಕಂಡುಕೊಂಡಾರೇನೋ ಎಂದು ತನ್ನನ್ನು ಹುಡುಕುವವರನ್ನಾಗಿ ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರವಾದವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಜನರು ತಮ್ಮನ್ನು ಅರಸಬೇಕೆಂಬುದೇ ಅವರ ಉದ್ದೇಶ; ಹೀಗಾದರೂ ತಮ್ಮನ್ನು ಅರಸಿ ಸಾಕ್ಷಾತ್ಕರಿಸಿಕೊಂಡಾರು ಎಂದು ದೇವರು ಹೀಗೆ ಮಾಡಿದರು. ಆದರೂ, ನಮ್ಮಲ್ಲಿ ಯಾರೊಬ್ಬರಿಂದಲೂ ದೇವರು ದೂರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಒಂದು ವೇಳೆ ಅವರು ತಡಕಾಡಿ ಕಂಡುಕೊಂಡಾರೇನೋ ಎಂದು ತನ್ನನ್ನು ಹುಡುಕುವವರನ್ನಾಗಿ ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರವಾದವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದೇವರು ನಮ್ಮಲ್ಲಿ ಯಾರಿಂದಲೂ ದೂರವಾಗಿಲ್ಲವಾದರೂ ದೇವರನ್ನು ನಾವು ಅಪೇಕ್ಷಿಸುವಂತೆ ನಾವು ದೇವರನ್ನು ಹುಡುಕಿ ಕಂಡುಕೊಳ್ಳುವಂತೆ ಹೀಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಲೊಕಾನಿ ಅಪ್ನಾಕ್ ಹುಡ್ಗುಚೆ ಮನ್ತಲಿ ದೆವಾಚಿ ಇಚ್ಚ್ಯಾ ಹೊಲ್ಲೆ ಅಪ್ನಾಸಾಟ್ನಿ ಅಜುಭಾಜುಕ್ ಸಗ್ಳ್ಯೆ ಹುಡ್ಕುನ್ ಕಾಡುನ್ ಘೆವ್ಕ್ ಹೊತಾ ಮನುನ್ ದೆವಾನ್ ತಸೆ ಕರ್‍ಲ್ಯಾನ್, ಖರೆ ಅಮ್ಕಾ ಕೊನಾಕ್ಬಿ ತೊ ಎಕ್ಲ್ಯಾಕ್ಬಿ ಧುರ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:27
9 ತಿಳಿವುಗಳ ಹೋಲಿಕೆ  

“ನಾವು ನಮ್ಮ ದೇವರಾದ ಯೆಹೋವನಿಗೆ ಪ್ರಾರ್ಥಿಸುವಾಗ ಆತನು ನಮ್ಮ ಹತ್ತಿರವೇ ಇದ್ದಾನೆ. ಯಾವ ದೇಶದವರಿಗೂ ಆತನಂಥ ದೇವರಿಲ್ಲ.


ಆದರೆ ತಾನೊಬ್ಬನೇ ನಿಜದೇವರೆಂಬುದನ್ನು ಆತನು ತನ್ನ ಒಳ್ಳೆಯ ಕಾರ್ಯಗಳಿಂದ ನಿರೂಪಿಸುತ್ತಿದ್ದಾನೆ. ಆತನು ನಿಮಗೆ ಆಕಾಶದಿಂದ ಮಳೆಯನ್ನೂ ನಿಮ್ಮ ಆಹಾರಕೋಸ್ಕರ ಸಕಾಲದಲ್ಲಿ ಸುಗ್ಗಿಯನ್ನೂ ದಯಪಾಲಿಸಿ ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸುತ್ತಿದ್ದಾನೆ.”


ಜನರು ದೇವರ ನಿತ್ಯಶಕ್ತಿಯನ್ನಾಗಲಿ ಆತನ ದೈವತ್ವಗಳನ್ನಾಗಲಿ ಕಾಣಲಾರರು. ಆದರೆ ಲೋಕದ ಆರಂಭದಿಂದಲೂ ಆ ಸಂಗತಿಗಳು ಜನರಿಗೆ ಸುಲಭವಾಗಿ ಅರ್ಥವಾಗುತ್ತವೆ. ದೇವರು ಮಾಡಿದ ಸೃಷ್ಟಿಗಳಲ್ಲಿ ಆ ಸಂಗತಿಗಳು ಸ್ಪಷ್ಟವಾಗಿವೆ. ಆದ್ದರಿಂದ ಜನರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ನೆವ ಹೇಳಲು ಸಾಧ್ಯವಿಲ್ಲ.


ದೇವರು ನಿಮ್ಮ ವಿಷಯದಲ್ಲಿ ಬಹು ಕನಿಕರ ಉಳ್ಳವನಾಗಿದ್ದಾನೆ; ತಾಳ್ಮೆ ಉಳ್ಳವನಾಗಿದ್ದಾನೆ. ನೀವು ಮಾರ್ಪಾಟಾಗಬೇಕೆಂದು ದೇವರು ನಿಮಗಾಗಿ ಕಾದುಕೊಂಡಿದ್ದಾನೆ. ಆದರೆ ನೀವು ಆತನ ಕರುಣೆಯ ಬಗ್ಗೆ ಆಲೋಚಿಸುವುದೇ ಇಲ್ಲ. ನೀವು ನಿಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳಬೇಕಾಗುತ್ತದೆಯೆಂದು ದೇವರ ಕನಿಕರವನ್ನು ಅರ್ಥಮಾಡಿಕೊಳ್ಳದೆ ಇದ್ದೀರಿ.


ಬಳಿಕ ಇತರ ಜನರೆಲ್ಲರೂ ಪ್ರಭುವಿಗಾಗಿ ಹುಡುಕುವರು. ಯೆಹೂದ್ಯರಲ್ಲದ ಜನರೆಲ್ಲರೂ ಸಹ ನನ್ನ ಜನರೇ ಆಗಿದ್ದಾರೆ. ಪ್ರಭುವೇ ಇದನ್ನು ಹೇಳಿದ್ದಾನೆ. ಈ ಕಾರ್ಯಗಳನ್ನೆಲ್ಲ ಮಾಡುವವನು ಆತನೇ.’


“ದೇವರೇ, ನೀನು ನಿಜವಾಗಿಯೂ ನಮ್ಮೊಡನೆ ಭೂಲೋಕದಲ್ಲಿ ವಾಸಿಸುವೆಯಾ? ಆಕಾಶವೆಲ್ಲವೂ ಹಾಗೂ ಉನ್ನತೋನ್ನತವಾದ ಪರಲೋಕವೆಲ್ಲವೂ ನಿನ್ನನ್ನು ಹಿಡಿಸಲಾರವು. ಹೀಗಿರಲು, ನಾನು ನಿನಗಾಗಿ ನಿರ್ಮಿಸಿರುವ ಈ ಆಲಯವು ನಿನ್ನ ವಾಸಕ್ಕೆ ಖಂಡಿತವಾಗಿಯೂ ಸಾಲುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು