Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:4 - ಪರಿಶುದ್ದ ಬೈಬಲ್‌

4 ನಿಜದೇವರನ್ನು ಪ್ರೀತಿಸುತ್ತಿದ್ದ ಕೆಲವು ಮಂದಿ ಗ್ರೀಕರು ಮತ್ತು ಕೆಲವು ಮಂದಿ ಪ್ರಮುಖ ಸ್ತ್ರೀಯರು ಅಲ್ಲಿದ್ದರು. ಅವರಲ್ಲಿ ಅನೇಕರಿಗೆ ಮನವರಿಕೆಯಾಗಿ ಪೌಲ ಸೀಲರನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇದು ಸತ್ಯವೆಂದು ಮನವರಿಕೆ ಆದ ಕೆಲವರು ಪೌಲ ಮತ್ತು ಸೀಲರನ್ನು ಸೇರಿಕೊಂಡರು. ಅಂತೆಯೇ ದೈವಭಕ್ತರಾಗಿದ್ದ ಗ್ರೀಕರ ದೊಡ್ಡ ಗುಂಪೂ ಅನೇಕ ಕುಲೀನ ಸ್ತ್ರೀಯರೂ ಅವರನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರಲ್ಲಿ ಕೆಲವರೂ ದೇವಭಕ್ತರಾದ ಗ್ರೀಕರಲ್ಲಿ ದೊಡ್ಡ ಗುಂಪೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಸೀಲರನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರಲ್ಲಿ ಕೆಲವರು ದೇವಭಕ್ತಿಯುಳ್ಳ ಗ್ರೀಕರೂ ಪ್ರಮುಖರಾಗಿದ್ದ ಮಹಿಳೆಯರೂ ದೊಡ್ಡ ಸಂಖ್ಯೆಯಲ್ಲಿ ಒಡಂಬಟ್ಟವರಾಗಿ ಪೌಲ, ಸೀಲರನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಥೈ ಖರ್ಯ್ಯಾ ದೆವಾಕ್ ಪ್ರೆಮ್ ಕರ್‍ತಲಿ ಗ್ರಿಕಾಂಚಿ ಉಲ್ಲಿ ಲೊಕಾ ಉಲ್ಲಿ ಪ್ರಮುಖ್ಯ್ ಬಾಯ್ಕಾಮಾನ್ಸಾ ಹೊತ್ತಿ, ತೆನಿ ಮನ್ ಪರ್ತುನ್ ಪಾವ್ಲು ಅನಿ ಸಿಲಾಸಾಚ್ಯಾ ತಾಂಡ್ಯಾಕ್ ಮಿಳ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:4
31 ತಿಳಿವುಗಳ ಹೋಲಿಕೆ  

ಈ ಯೆಹೂದ್ಯರಲ್ಲಿ ಅನೇಕರು ನಂಬಿದರು. ಅತಿ ಪ್ರಮುಖರಾದ ಗ್ರೀಕ್ ಸ್ತ್ರೀಯರು ಮತ್ತು ಪುರುಷರು ನಂಬಿಕೊಂಡರು.


ಆದರೆ ಪಟ್ಟಣದ ಜನರಲ್ಲಿ ಕೆಲವರು ಯೆಹೂದ್ಯರ ಮಾತನ್ನೂ ಇನ್ನು ಕೆಲವರು ಪೌಲ ಬಾರ್ನಬರ ಮಾತನ್ನೂ ನಂಬಿಕೊಂಡದ್ದರಿಂದ ಅವರಲ್ಲಿಯೇ ಎರಡು ಪಂಗಡವಾಯಿತು.


ಸಭೆಯು ಮುಗಿದ ಮೇಲೆ ಅನೇಕ ಯೆಹೂದ್ಯರು ಪೌಲ ಬಾರ್ನಬರನ್ನು ಆ ಸ್ಥಳದಿಂದ ಹಿಂಬಾಲಿಸಿದರು. ಯೆಹೂದ್ಯರ ಧರ್ಮಕ್ಕೆ ಸೇರಿಕೊಂಡಿದ್ದ ಅನೇಕ ಅನ್ಯಮತೀಯರೂ ಆ ಯೆಹೂದ್ಯರೊಂದಿಗಿದ್ದರು. ಮತಾಂತರಗೊಂಡಿದ್ದ ಇವರು ಸಹ ನಿಜದೇವರನ್ನು ಆರಾಧಿಸುತ್ತಿದ್ದರು. ಪೌಲ ಬಾರ್ನಬರು ಅವರೊಂದಿಗೆ ಮಾತಾಡಿ, ದೇವರ ಕೃಪೆಯಲ್ಲೇ ಭರವಸವಿಟ್ಟು ಮುಂದುವರಿಯಬೇಕೆಂದು ಪ್ರೋತ್ಸಾಹಪಡಿಸಿದರು.


ನಾವೆಂದೂ ನೆನಸಿಲ್ಲದ ರೀತಿಯಲ್ಲಿ ಅವರು ಕೊಟ್ಟರು. ಅವರು ತಮ್ಮ ಹಣವನ್ನು ನಮಗೆ ಕೊಡುವುದಕ್ಕಿಂತ ಮೊದಲು ತಮ್ಮನ್ನೇ ಪ್ರಭುವಿಗೂ ನಮಗೂ ಒಪ್ಪಿಸಿಕೊಟ್ಟರು. ದೇವರು ಬಯಸುವುದು ಇದನ್ನೇ.


ಪೌಲನು ಹೇಳಿದ ಕೆಲವು ಸಂಗತಿಗಳನ್ನು ಕೆಲವು ಮಂದಿ ಯೆಹೂದ್ಯರು ನಂಬಿದರು. ಆದರೆ ಉಳಿದವರು ನಂಬಲಿಲ್ಲ.


ಅಪೊಸ್ತಲರು, ಹಿರಿಯರು ಮತ್ತು ಇಡೀ ಸಭೆಯವರು ಪೌಲ ಬಾರ್ನಬರೊಂದಿಗೆ ಕೆಲವು ಜನರನ್ನು ಅಂತಿಯೋಕ್ಯಕ್ಕೆ ಕಳುಹಿಸಬಯಸಿದರು. ತಮ್ಮವರೇ ಆದ ಕೆಲವರನ್ನು ಆರಿಸಿಕೊಳ್ಳಲು ಸಭೆಯು ನಿರ್ಧರಿಸಿತು. ಅವರು ಯೂದನನ್ನು (ಬಾರ್ಸಬನೆಂದೂ ಕರೆಯುತ್ತಿದ್ದರು) ಮತ್ತು ಸೀಲನನ್ನು ಆರಿಸಿಕೊಂಡರು. ಇವರು ಜೆರುಸಲೇಮಿನ ಸಭೆಯವರಲ್ಲಿ ಪ್ರಮುಖರಾಗಿದ್ದರು.


ಆದರೆ ಯೆಹೂದ್ಯರು ಕೆಲವು ಧಾರ್ಮಿಕ ಸ್ತ್ರೀಯರನ್ನೂ ನಗರದ ನಾಯಕರನ್ನೂ ಪ್ರಚೋಧಿಸಿ, ಪೌಲ ಬಾರ್ನಬರ ಮೇಲೆ ಅವರು ಕೋಪಗೊಳ್ಳುವಂತೆಯೂ ಅವರಿಗೆ ವಿರೋಧಿಗಳಾಗುವಂತೆಯೂ ಮಾಡಿ ಪೌಲ ಬಾರ್ನಬರನ್ನು ಪಟ್ಟಣದಿಂದ ಹೊರಗಟ್ಟಿಸಿದರು.


“ಯೆಹೂದ್ಯ ಜನರೇ, ನಮಗೆ ಸಹಾಯಮಾಡಿ! ಮೋಶೆಯ ಧರ್ಮಶಾಸ್ತ್ರಕ್ಕೂ ನಮ್ಮ ಜನರಿಗೂ ಮತ್ತು ಈ ಸ್ಥಳಕ್ಕೂ (ದೇವಾಲಯ) ವಿರೋಧವಾಗಿ ಎಲ್ಲಾ ಕಡೆಗಳಲ್ಲಿ ಜನರಿಗೆ ಉಪದೇಶಿಸುತ್ತಿದ್ದವನು ಇವನೇ. ಈಗ ಇವನು ಕೆಲವು ಗ್ರೀಕರನ್ನು ದೇವಾಲಯದೊಳಕ್ಕೆ ಕರೆದುಕೊಂಡು ಬಂದಿದ್ದಾನೆ! ಈ ಪವಿತ್ರ ಸ್ಥಳವನ್ನು ಇವನು ಅಶುದ್ಧಗೊಳಿಸಿದ್ದಾನೆ!” ಎಂದು ಕೂಗಿಹೇಳಿ ಗಲಿಬಿಲಿ ಮಾಡಿದರು.


ಹೀಗೆ ಎರಡು ವರ್ಷಗಳು ಕಳೆದವು. ಇದರಿಂದಾಗಿ, ಏಷ್ಯಾದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರು ಮತ್ತು ಗ್ರೀಕರು ಪ್ರಭುವಿನ ವಾಕ್ಯವನ್ನು ಕೇಳಿದರು.


ಪ್ರತಿ ಸಬ್ಬತ್‌ದಿನದಂದು ಪೌಲನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ಗ್ರೀಕರೊಂದಿಗೂ ಚರ್ಚಿಸುತ್ತಾ ಯೇಸುವಿನಲ್ಲಿ ನಂಬಿಕೆ ಇಡುವಂತೆ ಅವರನ್ನು ಪ್ರೋತ್ಸಾಹಿಸಿದನು.


ಆದರೆ ಆ ಜನರಲ್ಲಿ ಕೆಲವರು ಪೌಲನನ್ನು ನಂಬಿ ಅವನನ್ನು ಸೇರಿಕೊಂಡರು. ನಂಬಿದ ಜನರಲ್ಲಿ ಅರಿಯೊಪಾಗ ನ್ಯಾಯಸಭೆಯ ಸದಸ್ಯನಾದ ದಿಯೊನಿಸಿಯನೂ ದಮಾರಿ ಎಂಬ ಸ್ತ್ರೀಯೂ ಮತ್ತಿತರರೂ ಇದ್ದರು.


ಸಭಾಮಂದಿರದಲ್ಲಿ ಪೌಲನು ಯೆಹೂದ್ಯರೊಂದಿಗೆ ಮತ್ತು ಯೆಹೂದ್ಯರಾಗಿದ್ದ ಗ್ರೀಕರೊಂದಿಗೆ ಚರ್ಚಿಸಿದನು. ಪಟ್ಟಣದ ವ್ಯಾಪಾರಸ್ಥಳದಲ್ಲಿಯೂ ಪೌಲನು ಕೆಲವು ಜನರೊಂದಿಗೆ ಪ್ರತಿದಿನ ಚರ್ಚಿಸಿದನು.


ಪೌಲನು ತಿಮೊಥೆಯನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಲು ಅಪೇಕ್ಷಿಸಿದನು. ಆದರೆ ಆ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲಾ ಜನರಿಗೂ ತಿಮೊಥೆಯನ ತಂದೆ ಗ್ರೀಕನೆಂಬುದು ಗೊತ್ತಿತ್ತು. ಆದ್ದರಿಂದ ಪೌಲನು ಯೆಹೂದ್ಯರನ್ನು ಮೆಚ್ಚಿಸುವುದಕ್ಕಾಗಿ ತಿಮೊಥೆಯನಿಗೆ ಸುನ್ನತಿ ಮಾಡಿಸಿದನು.


ಪೌಲನು ತನ್ನೊಂದಿಗೆ ಸೀಲನನ್ನು ಕರೆದುಕೊಂಡು ಹೋದನು. ಅಂತಿಯೋಕ್ಯದ ಸಹೋದರರು ಪೌಲನನ್ನು ಪ್ರಭುವಿನ ಆಶ್ರಯಕ್ಕೆ ಒಪ್ಪಿಸಿ ಕಳುಹಿಸಿಕೊಟ್ಟರು.


ಯೂದ ಸೀಲರು ಸಹ ಪ್ರವಾದಿಗಳಾಗಿದ್ದರು. ಅವರು ಅನೇಕ ಸಂಗತಿಗಳನ್ನು ಸಹೋದರರಿಗೆ ತಿಳಿಸಿ ಅವರನ್ನು ಬಲಪಡಿಸಿದರು.


ಆದ್ದರಿಂದ ನಾವು ಯೂದನನ್ನು ಮತ್ತು ಸೀಲನನ್ನು ಅವರೊಂದಿಗೆ ಕಳುಹಿಸಿದ್ದೇವೆ. ಕೆಳಕಂಡ ಸಂಗತಿಗಳನ್ನೆಲ್ಲ ಅವರು ನಿಮಗೆ ತಿಳಿಸುವರು.


ಪೌಲ ಬಾರ್ನಬರು ಇಕೋನಿಯಾ ಪಟ್ಟಣಕ್ಕೆ ಹೋದರು. (ಪ್ರತಿಯೊಂದು ಪಟ್ಟಣದಲ್ಲಿಯೂ ಅವರು ಮಾಡುತ್ತಿದ್ದಂತೆ) ಇಲ್ಲಿಯೂ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಜನರಿಗೆ ಬೋಧಿಸಿದರು. ಪೌಲ ಬಾರ್ನಬರ ಅಮೋಘ ಬೋಧನೆಯನ್ನು ಕೇಳಿ ಅನೇಕ ಯೆಹೂದ್ಯರು ಮತ್ತು ಗ್ರೀಕರು ನಂಬಿಕೊಂಡರು.


ಪೇತ್ರ ಮತ್ತು ಯೋಹಾನರು ಯೆಹೂದ್ಯನಾಯಕರ ಸಭೆಯಿಂದ ಹೊರಟು ತಮ್ಮ ಸಮುದಾಯಕ್ಕೆ ಹೋದರು. ಮಹಾಯಾಜಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ತಮಗೆ ಹೇಳಿದ ಪ್ರತಿಯೊಂದನ್ನು ಅವರು ತಮ್ಮ ಸಮುದಾಯದವರಿಗೆ ತಿಳಿಸಿದರು.


ಎಲ್ಲಾ ವಿಶ್ವಾಸಿಗಳು ಒಟ್ಟಾಗಿ ವಾಸಿಸುತ್ತಿದ್ದರು. ಅವರು ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಿದ್ದರು.


ಯೆಹೂದ್ಯರು, “ಇವನನ್ನು ನಾವು ಕಂಡುಕೊಳ್ಳಲಾಗದಂತೆ ಇವನು ಎಲ್ಲಿಗೆ ಹೋಗುವನು? ನಮ್ಮವರು ವಾಸವಾಗಿರುವ ಗ್ರೀಕ್ ಜನರ ಪಟ್ಟಣಗಳಿಗೆ ಹೋಗಿ ಗ್ರೀಕರಿಗೆ ಉಪದೇಶಿಸುವನೇ?


ನಿನ್ನ ಪ್ರಿಯನು ಎಲ್ಲಿಗೆ ಹೋದನು? ನೀನು ಸ್ತ್ರೀಯರಲ್ಲಿ ಅತ್ಯಂತ ಸೌಂದರ್ಯವತಿ. ನಿನ್ನ ಪ್ರಿಯನು ಯಾವ ಕಡೆಗೆ ಹೋದನು? ನೀನು ಹೇಳಿದರೆ, ನಾವು ನಿನಗೋಸ್ಕರ ಅವನನ್ನು ಹುಡುಕುವೆವು.


ಜ್ಞಾನಿಗಳೊಂದಿಗೆ ಸ್ನೇಹದಿಂದಿರಿ. ಆಗ ನೀವೂ ಜ್ಞಾನಿಗಳಾಗುವಿರಿ. ಆದರೆ ನೀವು ಜ್ಞಾನಹೀನರನ್ನು ನಿಮ್ಮ ಸ್ನೇಹಿತರನ್ನಾಗಿ ಆಯ್ದುಕೊಂಡರೆ, ನಿಮಗೆ ತೊಂದರೆ ಉಂಟಾಗುವುದು.


ನಿಮ್ಮ ಮೂರ್ಖ ಮಾರ್ಗಗಳನ್ನು ತೊರೆದುಬಿಡಿ. ಆಗ ನಿಮಗೆ ಜೀವವು ದೊರೆಯುವುದು. ವಿವೇಕಮಾರ್ಗದಲ್ಲಿ ಮುಂದೆ ಸಾಗಿರಿ” ಎಂದು ಆಕೆ ಹೇಳಿದಳು.


ಆ ಸಮಯದಲ್ಲಿ ವಿವಿಧ ಜನಾಂಗಗಳ ಜನರು ನನ್ನನ್ನು ನೋಡಲು ಬರುವರು. ಅವರು ನನ್ನ ಜನರಾಗುವರು. ಮತ್ತು ನಾನು ನಿಮ್ಮ ನಗರದಲ್ಲಿ ವಾಸಿಸುವೆನು.” ಆಗ ಸರ್ವಶಕ್ತನಾದ ದೇವರು ನನ್ನನ್ನು ಕಳುಹಿಸಿದ್ದಾನೆಂದು ನಿಮಗೆ ಗೊತ್ತಾಗುವುದು.


ಅದೇ ರಾತ್ರಿಯಲ್ಲಿ ವಿಶ್ವಾಸಿಗಳು ಪೌಲ ಸೀಲರನ್ನು ಬೆರೋಯ ಎಂಬ ಮತ್ತೊಂದು ಪಟ್ಟಣಕ್ಕೆ ಕಳುಹಿಸಿದರು. ಬೆರೋಯದಲ್ಲಿ ಪೌಲ ಸೀಲರು ಯೆಹೂದ್ಯರ ಸಭಾಮಂದಿರಕ್ಕೆ ಹೋದರು.


ಆದ್ದರಿಂದ ವಿಶ್ವಾಸಿಗಳು ಪೌಲನನ್ನು ಸಮುದ್ರತೀರಕ್ಕೆ ಆ ಕೂಡಲೇ ಕಳುಹಿಸಿದರು. ಆದರೆ ಸೀಲ ತಿಮೊಥೆಯರು ಬೆರೋಯದಲ್ಲಿ ಉಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು