Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:10 - ಪರಿಶುದ್ದ ಬೈಬಲ್‌

10 ನಾನು ನಿನ್ನೊಂದಿಗಿದ್ದೇನೆ. ನಿನಗೆ ಕೇಡುಮಾಡಲು ಯಾರಿಗೂ ಸಾಧ್ಯವಿಲ್ಲ. ನನ್ನ ಅನೇಕ ಜನರು ಈ ಪಟ್ಟಣದಲ್ಲಿ ಇದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನಗೆ ಕೇಡು ಮಾಡುವುದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಾನು ನಿನ್ನೊಡನೆ ಇದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ಹಾನಿಮಾಡುವುದಿಲ್ಲ. ಪಟ್ಟಣದ ಅನೇಕ ಜನರು ನನ್ನ ಪರವಾಗಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡು ಮಾಡುವದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನೇ ನಿನ್ನೊಂದಿಗಿದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ನಿನಗೆ ಕೇಡನ್ನುಂಟುಮಾಡುವುದಿಲ್ಲ. ಏಕೆಂದರೆ ನನಗಾಗಿ ಈ ಪಟ್ಟಣದಲ್ಲಿ ಅನೇಕ ಜನರಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಕಶ್ಯಾಕ್ ಮಟ್ಲ್ಯಾರ್, ಮಿಯಾಚ್ ತುಜ್ಯಾ ವಾಂಗ್ಡಾ ಹಾಯ್ ತುಕಾ ಬುರ್ಶೆ ಕರುಕ್ ಕೊನಾಚ್ಯಾನ್ ಬಿ ಹೊಯ್ನಾ, ಮಾಜಿ ಉಲ್ಲಿ ಲೊಕಾ ಹ್ಯಾ ಶಾರಾತ್ ಹಾತ್, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:10
26 ತಿಳಿವುಗಳ ಹೋಲಿಕೆ  

ಆದರೆ ಪ್ರಭುವು ನನಗೆ, “ನನ್ನ ಕೃಪೆಯೇ ನಿನಗೆ ಸಾಕು, ನೀನು ಬಲಹೀನನಾಗಿರುವಾಗ ನನ್ನ ಶಕ್ತಿಯು ನಿನ್ನಲ್ಲಿ ಪರಿಪೂರ್ಣವಾಗಿರುತ್ತದೆ” ಎಂದು ಹೇಳಿದನು.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.


ಈಗ ಹೋಗು. ನೀನು ಮಾತಾಡುವಾಗ ನಾನೇ ನಿನ್ನೊಂದಿಗಿರುವೆನು. ನೀನು ಹೇಳಬೇಕಾದ ಮಾತುಗಳನ್ನು ನಾನು ನಿನಗೆ ಕೊಡುವೆನು” ಎಂದು ಹೇಳಿದನು.


ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.


ನನಗೆ ಬೇರೆ ಕುರಿಗಳು ಸಹ ಇವೆ. ಅವುಗಳು ಇಲ್ಲಿರುವ ಈ ಮಂದೆಯಲ್ಲಿಲ್ಲ. ನಾನು ಅವುಗಳನ್ನು ಸಹ ಒಳಗೆ ನಡೆಸಬೇಕು. ಅವುಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಮುಂದಿನ ಕಾಲದಲ್ಲಿ ಒಂದೇ ಮಂದೆಯಿರುವುದು ಮತ್ತು ಒಬ್ಬನೇ ಕುರುಬನಿರುವನು.


ಪ್ರಭುವು ನಿನ್ನ ಆತ್ಮದ ಸಂಗಡ ಇರಲಿ. ಆತನ ಕೃಪೆಯು ನಿನ್ನೊಂದಿಗಿರಲಿ.


“ನಿನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಆ ಮಾತುಗಳು ನಿನ್ನನ್ನು ತಪ್ಪಿತಸ್ಥಳೆಂದು ತೋರಿಸಲಾರವು. “ಯೆಹೋವನ ಸೇವಕರಿಗೆ ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ” ಎಂದು ಯೆಹೋವನು ಅನ್ನುತ್ತಾನೆ.


ಹೌದು, ಯೆಹೂದ್ಯರಿಗಾಗಿಯೂ ಲೋಕದಲ್ಲೆಲ್ಲಾ ಚದರಿಹೋಗಿರುವ ದೇವರ ಮಕ್ಕಳನ್ನೆಲ್ಲ ಒಂದುಗೂಡಿಸುವುದಕ್ಕಾಗಿಯೂ ಆತನು ಸಾಯಲಿದ್ದನು.


ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳು ಇವೆ ಎಂಬುದು ಸಹ ದೇವರಿಗೆ ತಿಳಿದಿದೆ.


ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.


‘ಆದಿಯಿಂದಲೂ ಈ ಕಾರ್ಯಗಳನ್ನು ತಿಳಿಯಪಡಿಸಲಾಗಿದೆ.’


ಆದರೆ ಇವುಗಳಿಂದ ನೀವೇನೂ ನಾಶವಾಗುವುದಿಲ್ಲ.


ನಿನ್ನ ಕಷ್ಟಕಾಲದಲ್ಲಿ ನಾನು ನಿನ್ನೊಂದಿಗಿರುವೆನು. ನೀನು ಜಲರಾಶಿಯನ್ನು ಹಾದುಹೋಗುವಾಗ ನಾನೇ ನಿನ್ನೊಂದಿಗಿರುವೆ. ನೀನು ನದಿಗಳನ್ನು ದಾಟುವಾಗ ಅಪಾಯಕ್ಕೆ ಗುರಿಯಾಗದಿರುವೆ. ಬೆಂಕಿಯೊಳಗಿಂದ ನಡೆಯುವಾಗ ನಿನಗೆ ಹಾನಿಯಾಗದು.


ಆದರೆ ಪ್ರಭುವು ನನ್ನ ಬಳಿಯೇ ಇದ್ದನು. ನಾನು ಸುವಾರ್ತೆಯನ್ನು ಯೆಹೂದ್ಯರಲ್ಲದವರಿಗೆ ಸಂಪೂರ್ಣವಾಗಿ ಬೋಧಿಸಲು ಪ್ರಭುವು ನನಗೆ ಶಕ್ತಿಯನ್ನು ದಯಪಾಲಿಸಿದನು. ಆ ಸುವಾರ್ತೆಯನ್ನು ಯೆಹೂದ್ಯರಲ್ಲದ ಜನರೆಲ್ಲರೂ ಕೇಳುವುದು ಪ್ರಭುವಿನ ಇಷ್ಟವಾಗಿತ್ತು. ಆತನು ನನ್ನನ್ನು ಸಿಂಹದ (ಶತ್ರು) ಬಾಯಿಂದ ರಕ್ಷಿಸಿದನು.


ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)


ಯುದ್ಧ ಮಾಡಲು ಯೋಜನೆ ಹಾಕಿರಿ. ಆದರೆ ನಿಮ್ಮ ಯೋಜನೆಯೆಲ್ಲಾ ನಿಷ್ಫಲವಾಗುವುದು. ನಿಮ್ಮ ಸೈನ್ಯಕ್ಕೆ ಆಜ್ಞೆಕೊಡಿರಿ. ಆದರೆ ಅದು ನಿಷ್ಪ್ರಯೋಜಕವಾಗುವುದು. ಯಾಕೆಂದರೆ ದೇವರು ನಮ್ಮೊಂದಿಗಿದ್ದಾನೆ!


ಯೆಹೂದ್ಯರಲ್ಲದ ಜನರಿಗೆ ದೇವರು ತನ್ನ ಪ್ರೀತಿಯನ್ನು ಹೇಗೆ ತೋರಿಸಿದ್ದಾನೆಂದು ಸೀಮೋನನು ನಮಗೆ ತಿಳಿಸಿದ್ದಾನೆ. ಮೊಟ್ಟಮೊದಲ ಬಾರಿಗೆ, ದೇವರು ಯೆಹೂದ್ಯರಲ್ಲದ ಜನರನ್ನು ಸ್ವೀಕರಿಸಿಕೊಂಡನು. ಅವರನ್ನು ತನ್ನ ಜನರನ್ನಾಗಿ ಮಾಡಿಕೊಂಡನು.


ಅನೇಕ ಸಲ ಶತ್ರುಗಳು ಇಸ್ರೇಲರಿಗೆ ತುಂಬ ಕಷ್ಟಗಳನ್ನು ಉಂಟು ಮಾಡುತ್ತಿದ್ದರು. ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಿದ್ದರು; ಪ್ರತಿಸಲವೂ ಯೆಹೋವನು ಅವರ ಗೋಳಾಟವನ್ನು ಕೇಳಿ ಮರುಕಪಡುತ್ತಿದ್ದನು. ಪ್ರತಿಸಲವೂ ಅವರನ್ನು ಶತ್ರುಗಳಿಂದ ರಕ್ಷಿಸಲು ಒಬ್ಬ ನ್ಯಾಯಾಧೀಶನನ್ನು ಕಳುಹಿಸಿ ಕೊಡುತ್ತಿದ್ದನು. ಯೆಹೋವನು ಆ ನ್ಯಾಯಾಧೀಶರ ಜೊತೆಯಲ್ಲಿಯೇ ಇರುತ್ತಿದ್ದನು. ಹೀಗಾಗಿ ಪ್ರತಿಸಲವೂ ಇಸ್ರೇಲರನ್ನು ಅವರ ಶತ್ರುಗಳಿಂದ ರಕ್ಷಿಸಲಾಯಿತು.


ನಾನು ಮೋಶೆಯ ಸಂಗಡ ಇದ್ದಂತೆ ನಿನ್ನ ಸಂಗಡವೂ ಇರುತ್ತೇನೆ. ನಿನ್ನ ಜೀವಮಾನದಲ್ಲೆಲ್ಲಾ ಯಾವನೂ ನಿನ್ನನ್ನು ತಡೆಯಲಾರನು. ನಾನು ನಿನ್ನನ್ನು ಕೈಬಿಡುವುದಿಲ್ಲ; ತೊರೆದುಬಿಡುವುದಿಲ್ಲ” ಎಂದು ಹೇಳಿದನು.


ಒಂದು ರಾತ್ರಿ ಪೌಲನಿಗೆ ದರ್ಶನವಾಯಿತು. ಪ್ರಭುವು ಅವನಿಗೆ, “ಭಯಪಡಬೇಡ! ಜನರಿಗೆ ಬೋಧಿಸುತ್ತಲೇ ಇರು, ನಿಲ್ಲಿಸಬೇಡ!


ಪೌಲನು ದೇವರ ಸತ್ಯವನ್ನು ಜನರಿಗೆ ಉಪದೇಶಿಸುತ್ತಾ ಅಲ್ಲಿ ಒಂದೂವರೆ ವರ್ಷದವರೆಗೆ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು