Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:15 - ಪರಿಶುದ್ದ ಬೈಬಲ್‌

15 ನಿಮ್ಮ ಅಪವಾದಗಳು ಕೇವಲ ಪದಗಳಿಗೂ ಹೆಸರುಗಳಿಗೂ ಮತ್ತು ನಿಮ್ಮ ಸ್ವಂತ ಧರ್ಮಶಾಸ್ತ್ರಕ್ಕೂ ಸಂಬಂಧಪಟ್ಟಿವೆ. ಆದ್ದರಿಂದ ನೀವೇ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಈ ಸಂಗತಿಗಳಿಗೆ ನ್ಯಾಯಾಧೀಶನಾಗಿರಲು ನನಗೆ ಇಷ್ಟವಿಲ್ಲ!” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ, ಹೆಸರುಗಳನ್ನೂ, ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವುದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವುದಕ್ಕೆ ನನಗಂತೂ ಮನಸ್ಸಿಲ್ಲ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದರೆ ಇದು ನಾಮನೇಮಗಳಿಗೆ ಹಾಗು ನಿಮ್ಮ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ಪ್ರಶ್ನೆ. ಅದನ್ನು ನಿಮ್ಮನಿಮ್ಮಲ್ಲೇ ಇತ್ಯರ್ಥಮಾಡಿಕೊಳ್ಳಿ. ಇಂಥ ವಿಷಯಗಳನ್ನು ವಿಚಾರಣೆಮಾಡಲು ನನಗೆ ಮನಸ್ಸಿಲ್ಲ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ ಹೆಸರುಗಳನ್ನೂ ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ವಾಕ್ಯ, ಹೆಸರುಗಳ ಮತ್ತು ನಿಮ್ಮ ನಿಯಮದ ವಿಷಯವಾಗಿರುವ ಪ್ರಶ್ನೆಗಳಾಗಿದ್ದರೆ, ಈ ಸಂಗತಿಯನ್ನು ನೀವೇ ಬಗೆಹರಿಸಿಕೊಳ್ಳಿ, ಅಂಥ ವಿಷಯಗಳಿಗೆ ನಾನು ನ್ಯಾಯಾಧೀಶನಾಗಿರಲಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ಹಿ ವಾದ್ ವಿವಾದಾ ಕರ್‍ತಲಿ ಬೊಲ್ನಿಯಾ ಅನಿ ನಾವಾ ತುಮ್ಚ್ಯಾ ಸ್ವತಾಚ್ಯಾ ಖಾಯ್ದ್ಯಾಂಚ್ಯಾ ಪುಸ್ತಕಾಕ್ ಸಂಬದ್ ಪಡಲ್ಲಿ ಹಾತ್, ತಸೆ ತುಮಿಚ್ ಹೆ ಸಮಾ ಕರುನ್ ಘೆವ್ಚೆ, ಹ್ಯಾ ಸಂಗ್ತಿಯಾಕ್ನಿ ಝಡ್ತಿ ಕರ್‍ತಲೊ ಹೊವ್ನ್ ರ್‍ಹಾವ್ಕ್ ಮಾಕಾ ಮನ್ ನಾ! ಮನುನ್ ಸಾಂಗುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:15
13 ತಿಳಿವುಗಳ ಹೋಲಿಕೆ  

ಅಲ್ಲಿ ನನಗೆ ತಿಳಿದುಬಂದದ್ದೇನೆಂದರೆ, ಪೌಲನು ದುಷ್ಕೃತ್ಯಗಳನ್ನು ಮಾಡಿದ್ದಾನೆಂದು ಯೆಹೂದ್ಯರು ಹೇಳಿದರೂ ಅವರ ಆಪಾದನೆಗಳು ಅವರ ಸ್ವಂತ ಯೆಹೂದ್ಯ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟದ್ದಾಗಿದ್ದವು. ಅಲ್ಲದೆ ಇವನನ್ನು ಸೆರೆಮನೆಗಾಗಲಿ ಮರಣದಂಡನೆಗಾಗಲಿ ಗುರಿಪಡಿಸಬಹುದಾದ ಯಾವ ಅಪರಾಧವೂ ಇರಲಿಲ್ಲ.


ಅವರು ಹೇಳಿದ ಸಂಗತಿಗಳು ಅವರ ಸ್ವಂತ ಧರ್ಮಕ್ಕೆ ಸಂಬಂಧಪಟ್ಟಿದ್ದವು ಮತ್ತು ಯೇಸು ಎಂಬ ವ್ಯಕ್ತಿಯನ್ನು ಕುರಿತದ್ದಾಗಿದ್ದವು. ಸತ್ತುಹೋದ ಯೇಸು ಈಗ ಜೀವಂತವಾಗಿದ್ದಾನೆಂದು ಪೌಲನು ಹೇಳಿದನು.


ದುರ್ಬೋಧಕನು ಗರ್ವದಿಂದ ತುಂಬಿದವನಾಗಿರುತ್ತಾನೆ ಮತ್ತು ಅವನಿಗೆ ಏನೂ ಅರ್ಥವಾಗುವುದಿಲ್ಲ. ಅವನು ಕುತರ್ಕ ವಾಗ್ವಾದ ಮಾಡುವುದರಲ್ಲಿ ಆಸಕ್ತನಾಗಿದ್ದಾನೆ. ಇದರಿಂದ ಹೊಟ್ಟೆಕಿಚ್ಚು, ಜಗಳ, ನಿಂದನೆ ಮತ್ತು ದುಸ್ಸಂಶಯಗಳು ಉಂಟಾಗುತ್ತವೆ.


ಬುದ್ಧಿಯಿಲ್ಲದೆ ಕುತರ್ಕ ಮಾಡುವ ಜನರಿಂದ, ನಿರರ್ಥಕವಾದ ವಂಶಾವಳಿಗಳ ಚರಿತ್ರೆಯ ಬಗ್ಗೆ ಮಾತನಾಡುವ ಜನರಿಂದ, ಮೋಶೆಯು ಬರೆದಿರುವ ಧರ್ಮಶಾಸ್ತ್ರದಲ್ಲಿರುವ ನಿಯಮಗಳ ಬಗ್ಗೆ ತೊಂದರೆಯನ್ನು ಉಂಟುಮಾಡುವ ಮತ್ತು ವಾಗ್ವಾದ ಮಾಡುವ ಜನರಿಂದ ದೂರವಾಗಿರು. ಅವುಗಳಿಗೆ ಯಾವ ಬೆಲೆಯೂ ಇಲ್ಲ, ಅವುಗಳಿಂದ ಜನರಿಗೆ ಯಾವ ಪ್ರಯೋಜನವೂ ಇಲ್ಲ.


ಮೂಢತನದ ಮತ್ತು ಕ್ಷುಲ್ಲಕವಾದ ವಾದವಿವಾದಗಳಿಂದ ದೂರವಾಗಿರು. ಆ ವಾಗ್ವಾದಗಳು ಬೆಳೆದು ದೊಡ್ಡದಾಗುತ್ತವೆ ಎಂಬುದು ನಿನಗೆ ತಿಳಿದಿದೆ.


ಕಲ್ಪನಾಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಗಮನಕೊಡಬಾರದೆಂದು ಅವರಿಗೆ ಆಜ್ಞಾಪಿಸು. ಆ ಸಂಗತಿಗಳು ವಾದವಿವಾದಗಳನ್ನು ಮಾತ್ರ ತರುತ್ತವೆ. ಅವುಗಳಿಂದ ದೇವರ ಕಾರ್ಯಕ್ಕೆ ಪ್ರಯೋಜನವೇನೂ ಇಲ್ಲ. ದೇವರ ಕಾರ್ಯವನ್ನು ನಂಬಿಕೆಯಿಂದ ಮಾಡಬೇಕು.


ನಾನು ನಿನ್ನೊಂದಿಗೆ ಮಾತಾಡಲು ಬಹು ಸಂತೋಷಪಡುತ್ತೇನೆ. ಯಾಕೆಂದರೆ, ಯೆಹೂದ್ಯರ ಎಲ್ಲಾ ಸಂಪ್ರದಾಯಗಳ ಬಗ್ಗೆ ಮತ್ತು ಯೆಹೂದ್ಯರು ವಾದಿಸುತ್ತಿರುವ ಸಂಗತಿಗಳ ಬಗ್ಗೆ ನಿನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ದಯವಿಟ್ಟು ನನ್ನ ಮಾತುಗಳನ್ನು ತಾಳ್ಮೆಯಿಂದ ಆಲಿಸು.


ಜನರ ಮನಸ್ಸನ್ನು ಬದಲಾಯಿಸಲು ತನಗೆ ಸಾಧ್ಯವಿಲ್ಲವೆಂದೂ ಜನರು ಗಲಭೆ ಆರಂಭಿಸಲಿದ್ದಾರೆಂದೂ ತಿಳಿದುಕೊಂಡ ಪಿಲಾತನು ಸ್ವಲ್ಪ ನೀರನ್ನು ತೆಗೆದುಕೊಂಡು ಜನರೆಲ್ಲರ ಎದುರಿನಲ್ಲಿ ತನ್ನ ಕೈಗಳನ್ನು ತೊಳೆದುಕೊಳ್ಳುತ್ತಾ, “ಈ ಮನುಷ್ಯನ ಸಾವಿಗೆ ನಾನು ಜವಾಬ್ದಾರನಲ್ಲ. ಆತನನ್ನು ಶಿಲುಬೆಗೇರಿಸುತ್ತಿರುವವರು ನೀವೇ!” ಎಂದು ಹೇಳಿದನು.


ಪಿಲಾತನು ಯೆಹೂದ್ಯರಿಗೆ, “ಯೆಹೂದ್ಯರಾದ ನೀವೇ ಇವನನ್ನು ಕರೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ತೀರ್ಪುಮಾಡಿ” ಎಂದು ಹೇಳಿದನು. ಯೆಹೂದ್ಯರು, “ಆದರೆ ಒಬ್ಬನಿಗೆ ಮರಣದಂಡನೆ ವಿಧಿಸಲು ನಿನ್ನ ಕಾನೂನು ನಮಗೆ ಅವಕಾಶ ಕೊಡುವುದಿಲ್ಲ” ಎಂದು ಉತ್ತರಕೊಟ್ಟರು.


“ನಾನು ಪಾಪ ಮಾಡಿದೆ, ನಿರಪರಾಧಿಯನ್ನು ಕೊಲ್ಲಲು ನಿಮಗೆ ಒಪ್ಪಿಸಿಬಿಟ್ಟೆ” ಎಂದು ಹೇಳಿದನು. ಯೆಹೂದ್ಯ ನಾಯಕರು, “ಅದಕ್ಕೆ ನಾವೇನು ಮಾಡೋಣ! ಅದು ನಿನ್ನ ಸಮಸ್ಯೆ, ನಮ್ಮದಲ್ಲ!” ಎಂದು ಉತ್ತರಕೊಟ್ಟರು.


ರಾಜ್ಯಪಾಲನಿಗೆ, “ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಲ್ಲಿ ದೇವರನ್ನು ಆರಾಧಿಸಬೇಕೆಂದು ಇವನು ಜನರಿಗೆ ಉಪದೇಶಿಸುತ್ತಿದ್ದಾನೆ!” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು