Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:21 - ಪರಿಶುದ್ದ ಬೈಬಲ್‌

21 ಪೌಲನು ಅವರಿಗೆ, “ದೇವರು ಬಯಸುವುದಾದರೆ, ನಾನು ನಿಮ್ಮ ಬಳಿಗೆ ಮತ್ತೆ ಬರುತ್ತೇನೆ” ಎಂದು ಹೇಳಿ ಅಲ್ಲಿಂದ ಹೊರಟನು. ಹೀಗೆ ಪೌಲನು ಎಫೆಸದಿಂದ ನೌಕಾಯಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರನ್ನು ಬೀಳ್ಕೊಡುತ್ತಾ, “ದೇವರ ಚಿತ್ತವಾದರೆ ನಾನು ನಿಮ್ಮಲ್ಲಿಗೆ ಮರಳಿ ಬರುತ್ತೇನೆ,” ಎಂದು ಹೇಳಿ ಎಫೆಸದಿಂದ ಸಮುದ್ರ ಪ್ರಯಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವರ ಚಿತ್ತವಾದರೆ ತಿರಿಗಿ ನಿಮ್ಮ ಬಳಿಗೆ ಬರುತ್ತೇನೆಂದು ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೋದನು. ಆಮೇಲೆ ಎಫೆಸದಿಂದ ಸಮುದ್ರಪ್ರಯಾಣ ಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಅವನು ಅಲ್ಲಿಂದ ಹೊರಟು ಹೋಗಲಿಕ್ಕಿದ್ದಾಗ, “ದೇವರ ಚಿತ್ತವಾದರೆ, ನಾನು ಹಿಂದಿರುಗಿ ಬರುವೆ,” ಎಂದನು. ಆಮೇಲೆ ಎಫೆಸದಿಂದ ನೌಕೆಯಲ್ಲಿ ಪ್ರಯಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಹೆಚ್ಯಾ ಬದ್ಲಾಕ್ ತೆನಿ ಜಾತಾನಾ ತೆಂಕಾ ದೆವಾಚೊ ಮನ್ ರ್‍ಹಾಲ್ಯಾರ್, ಮಿಯಾ ಪರ್ತುನ್ ತುಮ್ಚ್ಯಾಕ್ಡೆ ಯೆತಾ ಮನುನ್ ಸಾಂಗುನ್ ಢೊನಾತ್ನಾ ಸಮುಂದರಾಚ್ಯಾ ವಾಟೆನ್ ಎಫೆಸಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:21
28 ತಿಳಿವುಗಳ ಹೋಲಿಕೆ  

ಆದರೆ ನಾನು ಬಹುಬೇಗನೆ ನಿಮ್ಮ ಬಳಿಗೆ ಬರುತ್ತೇನೆ. ಪ್ರಭುವಿನ ಚಿತ್ತವಾದರೆ, ನಾನು ಬಂದು ಜಂಬಕೊಚ್ಚಿಕೊಳ್ಳುವವರು ಹೇಳುವ ಮಾತನ್ನಲ್ಲ, ಅವರು ಏನು ಮಾಡಬಲ್ಲರೆಂಬುದನ್ನು ಗೊತ್ತುಮಾಡಿಕೊಳ್ಳುವೆನು.


ಆದ್ದರಿಂದ, ನೀವು ಹೀಗೆ ಹೇಳಬೇಕು, “ಪ್ರಭುವು ಇಚ್ಛೆಪಟ್ಟರೆ, ನಾವು ಜೀವಿಸಿರುತ್ತೇವೆ. ಇಂಥಿಂಥದ್ದನ್ನು ಮಾಡುತ್ತೇವೆ.”


ದೇವರ ಚಿತ್ತವಾದರೆ ಹೀಗೆ ಮುಂದಕ್ಕೆ ಸಾಗುತ್ತಾ ಹೋಗುವೆವು.


ಅನಂತರ, ದೇವರು ಬಯಸುವುದಾದರೆ ನಾನು ನಿಮ್ಮ ಬಳಿಗೆ ಬರುತ್ತೇನೆ. ನಾನು ಸಂತೋಷದಿಂದ ಬಂದು ನಿಮ್ಮ ಸಂಗಡವಿದ್ದು ವಿಶ್ರಾಂತಿಯನ್ನು ಪಡೆಯುತ್ತೇನೆ.


ಎಫೆಸದಲ್ಲಿ ತಂಗಬಾರದೆಂದು ಪೌಲನು ಆಗಲೇ ನಿರ್ಧಾರ ಮಾಡಿದ್ದನು. ಏಷ್ಯಾದಲ್ಲಿ ದೀರ್ಘಕಾಲ ತಂಗಲು ಅವನಿಗೆ ಇಷ್ಟವಿರಲಿಲ್ಲ. ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂದು ಅವನು ತನ್ನ ಪ್ರಯಾಣವನ್ನು ತ್ವರಿತಗೊಳಿಸಿದನು.


ಕೆಟ್ಟದ್ದನ್ನು ಮಾಡಿ ಸಂಕಟ ಪಡುವುದಕ್ಕಿಂತ ಒಳ್ಳೆಯದನ್ನು ಮಾಡಿ ಸಂಕಟಪಡುವುದು ಉತ್ತಮ. ಹೌದು, ಅದು ದೇವರ ಅಪೇಕ್ಷೆಯಾಗಿದ್ದರೆ ಅದೇ ಒಳ್ಳೆಯದು.


ಸಹೋದರ ಸಹೋದರಿಯರೇ, ನಿಮಗೆ ವಂದನೆಗಳು. ಪರಿಪೂರ್ಣರಾಗಿರಲು ಪ್ರಯತ್ನಿಸಿ. ನಾನು ಕೇಳಿಕೊಂಡ ಕಾರ್ಯಗಳನ್ನು ಮಾಡಿರಿ. ಒಂದೇ ಮನಸ್ಸು ಉಳ್ಳವರಾಗಿದ್ದು ಸಮಾಧಾನದಿಂದ ಜೀವಿಸಿರಿ. ಆಗ ಪ್ರೀತಿಸ್ವರೂಪನೂ ಶಾಂತಿದಾಯಕನೂ ಆದ ದೇವರು ನಿಮ್ಮೊಂದಿಗೆ ಇರುವನು.


ಈಗ ನಿಮ್ಮ ಬಳಿಗೆ ಬರಲು ನನಗೆ ಇಷ್ಟವಿಲ್ಲ. ಏಕೆಂದರೆ ನಾನು ಬೇರೆ ಸ್ಥಳಗಳಿಗೆ ಹೋಗಬೇಕಾಗಿರುವುದರಿಂದ ನಿಮ್ಮೊಂದಿಗೆ ಬಹಳ ಕಾಲವಿರಲು ಸಾಧ್ಯವಿಲ್ಲ. ಪ್ರಭುವು ಅವಕಾಶಕೊಡುವುದಾದರೆ, ನಾನು ನಿಮ್ಮೊಂದಿಗೆ ದೀರ್ಘಕಾಲ ತಂಗುವ ನಿರೀಕ್ಷೆಯಿಂದಿದ್ದೇನೆ.


ಜೆರುಸಲೇಮಿಗೆ ಹೋಗದಂತೆ ನಾವು ಅವನನ್ನು ಒಪ್ಪಿಸಲಾಗಲಿಲ್ಲ. ಆದ್ದರಿಂದ ಬೇಡಿಕೊಳ್ಳುವುದನ್ನು ನಿಲ್ಲಿಸಿ, “ಪ್ರಭುವಿನ ಚಿತ್ತವು ನೆರವೇರಲೆಂದು ಪ್ರಾರ್ಥಿಸುತ್ತೇವೆ” ಎಂದೆವು.


ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯ ದೇಶಗಳ ಮೂಲಕ ಜೆರುಸಲೇಮಿಗೆ ಹೋಗಲು ಯೋಜನೆ ಮಾಡಿದನು. “ನಾನು ಜೆರುಸಲೇಮನ್ನು ಸಂದರ್ಶಿಸಿದ ಮೇಲೆ ರೋಮ್ ನಗರವನ್ನು ಸಹ ಸಂದರ್ಶಿಸಬೇಕು” ಎಂದು ಪೌಲನು ಯೋಚಿಸಿಕೊಂಡನು.


ವಿಗ್ರಹಗಳಿಗೆ ಅರ್ಪಿಸಿರುವ ಆಹಾರವನ್ನು ತಿನ್ನಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ. ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ನೀವು ಇವುಗಳಿಂದ ದೂರವಿದ್ದರೆ ನಿಮಗೆ ಒಳ್ಳೆಯದಾಗುವುದು. ನಿಮಗೆ ಶುಭವಾಗಲಿ!


ಮತ್ತೊಬ್ಬನು, “ಸ್ವಾಮೀ, ನಾನು ನಿನ್ನನ್ನು ಹಿಂಬಾಲಿಸುವೆನು. ಆದರೆ ಮೊದಲು ನನ್ನ ಕುಟುಂಬದವರ ಬಳಿಗೆ ಹೋಗಿಬರಲು ಅವಕಾಶ ನೀಡು” ಎಂದು ಹೇಳಿದನು.


ಬಳಿಕ ಯೇಸು ಅವರಿಂದ ಸ್ವಲ್ಪದೂರ ಹೋಗಿ ನೆಲದ ಮೇಲೆ ಬೋರಲಬಿದ್ದು, “ನನ್ನ ತಂದೆಯೇ, ಸಾಧ್ಯವಿದ್ದರೆ, ಸಂಕಟದ ಈ ಪಾತ್ರೆಯನ್ನು ನನಗೆ ಕೊಡಬೇಡ. ಆದರೆ ನನ್ನ ಇಷ್ಟದಂತಲ್ಲ, ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.


“ಅಬೀಬ್ ತಿಂಗಳನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಆ ತಿಂಗಳಲ್ಲಿ ನಿಮ್ಮ ದೇವರಾದ ಯೆಹೋವನನ್ನು ಗೌರವಿಸುವುದಕ್ಕಾಗಿ ಪಸ್ಕಹಬ್ಬವನ್ನು ಆಚರಿಸಬೇಕು. ಯಾಕೆಂದರೆ ಆ ತಿಂಗಳಲ್ಲೇ ನಿಮ್ಮ ದೇವರಾದ ಯೆಹೋವನು ರಾತ್ರಿಯಲ್ಲಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು.


ಯೇಸು ಜನರನ್ನು ಬೀಳ್ಕೊಟ್ಟ ಮೇಲೆ ಪ್ರಾರ್ಥಿಸುವುದಕ್ಕಾಗಿ ಬೆಟ್ಟದ ಮೇಲಕ್ಕೆ ಹೋದನು.


ಬಳಿಕ ಅವರು ಎಫೆಸ ಪಟ್ಟಣಕ್ಕೆ ಹೋದರು. ಪ್ರಿಸ್ಕಿಲ್ಲ ಮತ್ತು ಅಕ್ವಿಲರನ್ನು ಪೌಲನು ಬಿಟ್ಟಿಹೋದದ್ದು ಇಲ್ಲಿಯೇ. ಪೌಲನು ಎಫೆಸದಲ್ಲಿದ್ದಾಗ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರೊಂದಿಗೆ ಚರ್ಚಿಸಿದನು.


ಆ ಯೆಹೂದ್ಯರು ಇನ್ನೂ ಸ್ವಲ್ಪಕಾಲ ಇರಬೇಕೆಂದು ಪೌಲನನ್ನು ಕೇಳಿಕೊಂಡರು. ಆದರೆ ಅವನು ಒಪ್ಪಲಿಲ್ಲ.


ಅಲೆಕ್ಸಾಂಡ್ರಿಯಾ ಪಟ್ಟಣದಿಂದ ಅಪೊಲ್ಲೋಸನೆಂಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಿದ್ಯಾವಂತನಾಗಿದ್ದನು ಮತ್ತು ಪವಿತ್ರ ಗ್ರಂಥದಲ್ಲಿ ಪಾಂಡಿತ್ಯ ಪಡೆದಿದ್ದನು.


ಅಪೊಲ್ಲೋಸನು ಕೊರಿಂಥ ಪಟ್ಟಣದಲ್ಲಿದ್ದಾಗ ಪೌಲನು ಎಫೆಸ ಪಟ್ಟಣಕ್ಕೆ ಪ್ರಯಾಣ ಮಾಡುತ್ತಾ ದಾರಿಯಲ್ಲಿ ಸಿಕ್ಕಿದ ಕೆಲವು ಊರುಗಳನ್ನು ಸಂದರ್ಶಿಸಿದನು. ಅವನು ಎಫೆಸ ಪಟ್ಟಣವನ್ನು ತಲುಪಿದಾಗ, ಕೆಲವು ಮಂದಿ ಶಿಷ್ಯರನ್ನು ಕಂಡು,


ಎಫೆಸದಲ್ಲಿದ್ದ ಯೆಹೂದ್ಯರು ಮತ್ತು ಗ್ರೀಕರು ಇದನ್ನು ಕೇಳಿ ಭಯಗ್ರಸ್ತರಾದರು ಮತ್ತು ಪ್ರಭು ಯೇಸುವಿನ ಹೆಸರನ್ನು ಸನ್ಮಾನಿಸಿದರು.


(ಜೆರುಸಲೇಮಿನಲ್ಲಿ ಪೌಲನೊಂದಿಗಿದ್ದ ತ್ರೊಫಿಮ ಎಂಬವನನ್ನು ಆ ಯೆಹೂದ್ಯರು ನೋಡಿದ್ದರು. ಎಫೆಸದ ತ್ರೊಫಿಮನು ಗ್ರೀಕನಾಗಿದ್ದನು. ಪೌಲನು ಇವನನ್ನು ಪವಿತ್ರ ಸ್ಥಳದೊಳಗೆ ಕರೆದುಕೊಂಡು ಹೋಗಿದ್ದಾನೆಂದು ಅವರು ಭಾವಿಸಿಕೊಂಡರು.)


ಕೇವಲ ನನ್ನ ಮಾನುಷ ಸ್ವಭಾವದಿಂದ ನಾನು ಎಫೆಸದಲ್ಲಿ ದುಷ್ಟಮೃಗಗಳೊಂದಿಗೆ ಹೋರಾಡಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, “ತಿನ್ನೋಣ, ಕುಡಿಯೋಣ, ಏಕೆಂದರೆ ನಾವು ನಾಳೆ ಸಾಯುತ್ತೇವೆ.”


ಆದರೆ ನಾನು ಪಂಚಾಶತ್ತಮ ಹಬ್ಬದವರೆಗೆ ಎಫೆಸದಲ್ಲಿ ಇರುತ್ತೇನೆ.


ಕ್ರಿಸ್ತ ಯೇಸುವಿನ ಅಪೊಸ್ತಲನಾಗಿರುವ ಪೌಲನು ಬರೆಯುವ ಪತ್ರ. ನಾನು ದೇವರ ಇಷ್ಟಾನುಸಾರವಾಗಿ ಅಪೊಸ್ತಲನಾಗಿದ್ದೇನೆ. ಎಫೆಸ ಪಟ್ಟಣದಲ್ಲಿ ವಾಸವಾಗಿರುವ ಮತ್ತು ಕ್ರಿಸ್ತಯೇಸುವಿನಲ್ಲಿ ನಂಬಿಕೆಯಿಟ್ಟಿರುವ ಪರಿಶುದ್ಧ ದೇವಜನರಿಗೆ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ.


ಆ ಧ್ವನಿಯು, “ನೀನು ನೋಡುವುದನ್ನೆಲ್ಲ ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಏಳು ಸಭೆಗಳಿಗೆ ಕಳುಹಿಸು” ಎಂದು ಹೇಳಿತು.


“ಎಫೆಸದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿರುವಾತನು ಮತ್ತು ಏಳು ದೀಪಸ್ತಂಭಗಳ ನಡುವೆ ತಿರುಗಾಡುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು