Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:8 - ಪರಿಶುದ್ದ ಬೈಬಲ್‌

8 ಕ್ರಿಸ್ಪನು ಸಭಾಮಂದಿರದ ಅಧ್ಯಕ್ಷನಾಗಿದ್ದನು. ಕ್ರಿಸ್ಪನು ಮತ್ತು ಅವನ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ಪ್ರಭುವಿನಲ್ಲಿ ನಂಬಿಕೆಯಿಟ್ಟರು. ಕೊರಿಂಥದಲ್ಲಿ ಇತರ ಅನೇಕ ಜನರು ಪೌಲನಿಗೆ ಕಿವಿಗೊಟ್ಟರು ಮತ್ತು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪ್ರಾರ್ಥನಾಮಂದಿರದ ಅಧ್ಯಕ್ಷ ಕ್ರಿಸ್ಪ ಎಂಬವನೂ ಅವನ ಮನೆಯವರೆಲ್ಲರೂ ಪ್ರಭುವಿನಲ್ಲಿ ವಿಶ್ವಾಸವಿಟ್ಟರು. ಕೊರಿಂಥದ ಇನ್ನೂ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟರು ಮತ್ತು ದೀಕ್ಷಾಸ್ನಾನ ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕರು ಕೇಳಿ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸಭಾಮಂದಿರದ ನಾಯಕ ಕ್ರಿಸ್ಪ ಎಂಬುವನು ತನ್ನ ಮನೆಯವರೆಲ್ಲರೊಂದಿಗೆ ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಟ್ಟನು. ಪೌಲನ ಬೋಧನೆ ಕೇಳಿದ ಕೊರಿಂಥದವರಲ್ಲಿ ಇನ್ನೂ ಅನೇಕರು ವಿಶ್ವಾಸವನ್ನಿಟ್ಟು ದೀಕ್ಷಾಸ್ನಾನ ಪಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕ್ರಿಸ್ಪಸ್ ಮನ್ತಲೊ ಎಕ್ ಮಾನುಸ್ ಸಿನಾಗೊಚೊ ಅದಿಕಾರಿ ಹೊಲ್ಲೊ, ಅನಿ ತೆಚ್ಯಾ ಘರಾತ್ ಹೊತ್ತಿ ಸಗ್ಳ್ಯಾ ಲೊಕಾನಿ ಧನಿಯಾಚೆರ್ ವಿಶ್ವಾಸ್ ಥವ್ಲ್ಯಾನಿ, ಕೊರಿಂಥ್ ಮನ್ತಲ್ಯಾ ಗಾಂವಾತ್ ಪಾವ್ಲುನ್ ಸಾಂಗಲ್ಲಿ ಬರಿ ಖಬರ್ ಆಯ್ಕಲ್ಯಾ ಲೈ ಲೊಕಾನಿ ವಿಶ್ವಾಸ್ ಕರುನ್ ಬಾಲ್ತಿಮ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:8
25 ತಿಳಿವುಗಳ ಹೋಲಿಕೆ  

ಅವನು ನಿಮ್ಮೊಂದಿಗೆ ಮಾತಾಡುವನು. ಅವನು ಹೇಳುವ ಸಂಗತಿಗಳು ನಿನ್ನನ್ನೂ ನಿನ್ನ ಕುಟಂಬದವರನ್ನೂ ರಕ್ಷಿಸುತ್ತವೆ’ ಎಂದು ಹೇಳಿದನು.


ಆದರೆ ಫಿಲಿಪ್ಪನು ದೇವರ ರಾಜ್ಯದ ಬಗ್ಗೆ ಮತ್ತು ಯೇಸುಕ್ರಿಸ್ತನ ಶಕ್ತಿಯ ಬಗ್ಗೆ ಜನರಿಗೆ ಸುವಾರ್ತೆಯನ್ನು ಹೇಳಿದನು. ಗಂಡಸರು ಮತ್ತು ಹೆಂಗಸರು ಫಿಲಿಪ್ಪನು ಹೇಳಿದ್ದನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ಬಳಿಕ ಅವರೆಲ್ಲರೂ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಾಲಯದ ಮುಂದೆಯೇ ಹೊಡೆದರು. (ಸೋಸ್ಥೆನನು ಆಗ ಸಭಾಮಂದಿರದ ಅಧ್ಯಕ್ಷನಾಗಿದ್ದನು.) ಆದರೆ ಗಲ್ಲಿಯೋನ ಅದನ್ನು ತನ್ನ ಗಮನಕ್ಕೆ ತೆಗೆದುಕೊಳ್ಳಲಿಲ್ಲ.


ಇದಾದ ಮೇಲೆ ಅವನು ಪೌಲ ಸೀಲರನ್ನು ಮನೆಗೆ ಕರೆದೊಯ್ದು ಅವರಿಗೆ ಊಟಮಾಡಿಸಿದನು. ಆ ಜನರೆಲ್ಲರೂ ಪ್ರಭುವಿನಲ್ಲಿ ನಂಬಿಕೆ ಇಟ್ಟದ್ದರಿಂದ ಬಹ ಸಂತೋಷಭರಿತರಾದರು.


ಮೋಶೆಯ ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳ ಗ್ರಂಥಗಳನ್ನು ಓದಲಾಯಿತು. ಬಳಿಕ ಸಭಾಮಂದಿರದ ನಾಯಕರು ಪೌಲ ಬಾರ್ನಬರಿಗೆ, “ಸಹೋದರರೇ, ಇಲ್ಲಿರುವ ಜನರಿಗೆ ಸಹಾಯವಾಗುವಂತೆ ಏನನ್ನಾದರೂ ನೀವು ಹೇಳಬೇಕೆಂದಿದ್ದರೆ, ದಯವಿಟ್ಟು ಹೇಳಿ!” ಎಂಬ ಸಂದೇಶವನ್ನು ಕಳುಹಿಸಿದರು.


ಕೊರ್ನೇಲಿಯನು ದೈವಭಕ್ತನಾಗಿದ್ದನು. ಅವನು ಮತ್ತು ಅವನ ಕುಟುಂಬದಲ್ಲಿ ವಾಸವಾಗಿದ್ದ ಇತರ ಎಲ್ಲಾ ಜನರು ನಿಜದೇವರನ್ನು ಆರಾಧಿಸುತ್ತಿದ್ದರು. ಅವನು ಬಡವರಿಗೆ ಧಾರಾಳವಾಗಿ ಹಣವನ್ನು ಕೊಡುತ್ತಿದ್ದನು. ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಿದ್ದನು.


ಯೇಸು ಅಲ್ಲಿ ಇನ್ನೂ ಮಾತನಾಡುತ್ತಿದ್ದನು. ಅಷ್ಟರಲ್ಲಿ ಕೆಲವು ಜನರು ಸಭಾಮಂದಿರದ ಅಧಿಕಾರಿಯಾದ ಯಾಯಿರನ ಮನೆಯಿಂದ ಬಂದು ಯಾಯಿರನಿಗೆ, “ನಿನ್ನ ಮಗಳು ಸತ್ತುಹೋದಳು. ಈಗ ಬೋಧಕನಿಗೆ ತೊಂದರೆ ಕೊಡುವ ಅಗತ್ಯವಿಲ್ಲ” ಎಂದು ಹೇಳಿದರು.


ಸಭಾಮಂದಿರದ ಅಧಿಕಾರಿಯೊಬ್ಬನು ಆ ಸ್ಥಳಕ್ಕೆ ಬಂದನು. ಅವನ ಹೆಸರು ಯಾಯಿರ. ಅವನು ಯೇಸುವನ್ನು ಕಂಡು, ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿ,


ಆದ್ದರಿಂದ ನೀವು ಹೋಗಿ, ಲೋಕದಲ್ಲಿರುವ ಜನರೆಲ್ಲರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ. ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ಅವರಿಗೆಲ್ಲ ದೀಕ್ಷಾಸ್ನಾನ ಮಾಡಿಸಿ.


“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.


ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”


ಅಬ್ರಹಾಮನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೆ ಅಂದರೆ ಅವನ ಮನೆಯಲ್ಲಿ ಹುಟ್ಟಿದ ಎಲ್ಲಾ ಸೇವಕರಿಗೆ ಮತ್ತು ಅವನು ಕ್ರಯಕ್ಕೆ ತೆಗೆದುಕೊಂಡಿದ್ದ ಎಲ್ಲಾ ಸೇವಕರಿಗೆ ಸುನ್ನತಿಯಾಯಿತು.


ತರುವಾಯ ಪೌಲನು ಅಥೆನ್ಸನ್ನು ಬಿಟ್ಟು ಕೊರಿಂಥ ಪಟ್ಟಣಕ್ಕೆ ಹೋದನು.


ಅಪೊಲ್ಲೋಸನು ಕೊರಿಂಥ ಪಟ್ಟಣದಲ್ಲಿದ್ದಾಗ ಪೌಲನು ಎಫೆಸ ಪಟ್ಟಣಕ್ಕೆ ಪ್ರಯಾಣ ಮಾಡುತ್ತಾ ದಾರಿಯಲ್ಲಿ ಸಿಕ್ಕಿದ ಕೆಲವು ಊರುಗಳನ್ನು ಸಂದರ್ಶಿಸಿದನು. ಅವನು ಎಫೆಸ ಪಟ್ಟಣವನ್ನು ತಲುಪಿದಾಗ, ಕೆಲವು ಮಂದಿ ಶಿಷ್ಯರನ್ನು ಕಂಡು,


ಕ್ರಿಸ್ತ ಯೇಸುವಿನಲ್ಲಿ ಪವಿತ್ರರಾಗಿ ಮಾಡಲ್ಪಟ್ಟಿರುವ ಕೊರಿಂಥದ ದೇವರ ಸಭೆಯವರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲ್ಪಟ್ಟಿದ್ದೀರಿ. ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಂಬಿಕೆ ಇಡುವ ಎಲ್ಲಾ ಜನರೊಂದಿಗೆ ನೀವು ಕರೆಯಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನು ಅವರಿಗೂ ನಮಗೂ ಪ್ರಭುವಾಗಿದ್ದಾನೆ.


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನಾನು ದೇವರ ಚಿತ್ತಾನುಸಾರ ಅಪೊಸ್ತಲನಾಗಿದ್ದೇನೆ. ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಇಡೀ ಅಖಾಯ ಸೀಮೆಯಲ್ಲಿರುವ ದೇವಜನರೆಲ್ಲರಿಗೂ ನಾನು ಈ ಪತ್ರವನ್ನು ಕ್ರಿಸ್ತನಲ್ಲಿ ನಮ್ಮ ಸಹೋದರನಾದ ತಿಮೊಥೆಯನೊಡನೆ ಸೇರಿ ಬರೆಯುತ್ತಿದ್ದೇನೆ.


ನಿಮ್ಮನ್ನು ಶಿಕ್ಷಿಸುವುದಕ್ಕಾಗಲಿ ನೋಯಿಸುವುದಕ್ಕಾಗಲಿ ನನಗೆ ಇಷ್ಟವಿರಲಿಲ್ಲ. ಆದಕಾರಣ ನಾನು ನಿಮ್ಮ ಬಳಿಗೆ ಹಿಂತಿರುಗಿ ಬರಲಿಲ್ಲ. ಇದು ಸತ್ಯ. ಇದಕ್ಕೆ ದೇವರೇ ಸಾಕ್ಷಿ.


ಕೊರಿಂಥದಲ್ಲಿರುವ ನಿಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತಾಡಿದ್ದೇವೆ. ನಮ್ಮ ಹೃದಯಗಳನ್ನು ನಿಮ್ಮ ಮುಂದೆ ತೆರೆದಿಟ್ಟಿದ್ದೇವೆ.


ಎರಸ್ತನು ಕೊರಿಂಥದಲ್ಲಿ ನೆಲಸಿದನು. ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ನಾನು ಅವನನ್ನು ಮಿಲೇತದಲ್ಲಿ ಇರಿಸಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು