Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:11 - ಪರಿಶುದ್ದ ಬೈಬಲ್‌

11 ದೇವರು ಪೌಲನ ಕೈಯಿಂದ ಬಹು ವಿಶೇಷವಾದ ಮಹತ್ಕಾರ್ಯಗಳನ್ನು ಮಾಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದುದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೇವರು ಪೌಲನ ಕೈಯಿಂದ ಅಸಾಧಾರಣ ಅದ್ಭುತಗಳನ್ನು ಮಾಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರು ಪೌಲನ ಮುಖಾಂತರ ಅಸಾಧಾರಣ ಅದ್ಭುತಗಳನ್ನು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ದೆವ್ ಪಾವ್ಲುಚ್ಯಾ ಹಾತಿನ್ ಹೊಯ್ ನಸಲ್ಲಿ ಮೊಟಿ ಕಾಮಾ ಕರ್ಸುನ್ಗೆತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:11
10 ತಿಳಿವುಗಳ ಹೋಲಿಕೆ  

ಅಪೊಸ್ತಲರು ಅನೇಕ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿದರು. ಜನರೆಲ್ಲರೂ ಆ ಕಾರ್ಯಗಳನ್ನು ನೋಡಿದರು. ಅಪೊಸ್ತಲರು ಒಟ್ಟಾಗಿ ಸೊಲೊಮೋನನ ಮಂಟಪದಲ್ಲಿರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು.


ಇದಲ್ಲದೆ, ದೇವರು ಅದ್ಭುತಕಾರ್ಯಗಳಿಂದ, ಸೂಚಕಕಾರ್ಯಗಳಿಂದ, ನಾನಾ ವಿಧವಾದ ಮಹತ್ಕಾರ್ಯಗಳಿಂದ ಮತ್ತು ಪವಿತ್ರಾತ್ಮನ ವರಗಳನ್ನು ತನ್ನ ಇಷ್ಟಾನುಸಾರವಾಗಿ ದಯಪಾಲಿಸುವುದರ ಮೂಲಕ ಅದನ್ನು ಸ್ಥಿರಪಡಿಸಿದನು.


ಸಿಮೋನನು ಸಹ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡನು. ಸಿಮೋನನು ಫಿಲಿಪ್ಪನ ಸಮೀಪದಲ್ಲೇ ಇದ್ದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಸಿಮೋನನು ನೋಡಿ ವಿಸ್ಮಿತನಾದನು.


ಹೀಗೆ ಆಕೆ ಅನೇಕ ದಿನಗಳವರೆಗೆ ಮಾಡಿದಳು. ಇದರಿಂದ ಬೇಸರಗೊಂಡ ಪೌಲನು ಹಿಂತಿರುಗಿ, ಆ ಆತ್ಮಕ್ಕೆ, “ಅವಳನ್ನು ಬಿಟ್ಟು ಹೋಗಬೇಕೆಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ!” ಎಂದು ಹೇಳಿದನು. ಆ ಕೂಡಲೇ ಆ ಆತ್ಮವು ಹೊರಬಂದಿತು.


ದೇವರು ಪವಿತ್ರಾತ್ಮನನ್ನು ಕೊಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ದೇವರು ಮಹತ್ಕಾರ್ಯಗಳನ್ನು ಮಾಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ಇಲ್ಲ! ಸುವಾರ್ತೆಯನ್ನು ಕೇಳಿ ಅದನ್ನು ನಂಬಿಕೊಂಡದ್ದರಿಂದ ದೇವರು ನಿಮಗೆ ಪವಿತ್ರಾತ್ಮನನ್ನು ಕೊಡುತ್ತಾನೆ ಮತ್ತು ಮಹತ್ಕಾರ್ಯಗಳನ್ನು ಮಾಡುತ್ತಾನೆ.


ಆಗ ಇಡೀ ಸಭೆಯು ಮೌನವಾಯಿತು. ಅವರು ಪೌಲ ಬಾರ್ನಬರಿಗೆ ಕಿವಿಗೊಟ್ಟರು. ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ದೇವರು ತಮ್ಮ ಮೂಲಕವಾಗಿ ಮಾಡಿದ ಎಲ್ಲಾ ಅದ್ಭುತಕಾರ್ಯಗಳ ಮತ್ತು ಸೂಚಕಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಹೇಳಿದರು.


ಆದರೆ ಪೌಲ ಬಾರ್ನಬರು ಇಕೋನಿಯಾದಲ್ಲಿ ಬಹುಕಾಲವಿದ್ದು ಪ್ರಭುವಿನ ಕುರಿತು ಧೈರ್ಯದಿಂದ ಮಾತಾಡಿದರು. ಪ್ರಭುವು ಅವರ ಮೂಲಕ ಸೂಚಕಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡಿ ತನ್ನ ಕೃಪಾಸಂದೇಶವನ್ನು ನಿರೂಪಿಸಿದನು.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನಲ್ಲಿ ನಂಬಿಕೆ ಇಡುವ ವ್ಯಕ್ತಿಯು ನಾನು ಮಾಡಿದ ಕಾರ್ಯಗಳನ್ನೇ ಮಾಡುವನು. ಹೌದು ನಾನು ಮಾಡುವ ಕಾರ್ಯಗಳಿಗಿಂತಲೂ ದೊಡ್ಡಕಾರ್ಯಗಳನ್ನು ಅವನು ಮಾಡುವನು. ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು