Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:13 - ಪರಿಶುದ್ದ ಬೈಬಲ್‌

13-14 ಕೆಲವು ಯೆಹೂದ್ಯರು ಸಹ ಊರೂರುಗಳಿಗೆ ಸಂಚರಿಸುತ್ತಾ ದೆವ್ವದಿಂದ ಪೀಡಿತರಾಗಿದ್ದ ಜನರೊಳಗಿಂದ ದೆವ್ವಗಳನ್ನು ಯೇಸುವಿನ ಹೆಸರಿನ ಮೂಲಕ ಹೊರಡಿಸುತ್ತಿದ್ದರು. ಸ್ಕೇವ ಎಂಬವನ ಏಳು ಮಂದಿ ಗಂಡುಮಕ್ಕಳೂ ಹೀಗೇ ಮಾಡುತ್ತಿದ್ದರು. (ಸ್ಕೇವನು ಪ್ರಧಾನಯಾಜಕನಾಗಿದ್ದನು.) ಅವರೆಲ್ಲರೂ, “ಪೌಲನು ಯಾವ ಯೇಸುವಿನ ಬಗ್ಗೆ ಹೇಳುತ್ತಿದ್ದಾನೋ ಆ ಯೇಸುವಿನ ಹೆಸರಿನಿಂದಲೇ ನೀನು ಹೊರಗೆ ಬರಬೇಕೆಂದು ನಾವು ಆಜ್ಞಾಪಿಸುತ್ತೇವೆ” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ದೆವ್ವಬಿಡಿಸುವವರು” ಎನಿಸಿಕೊಂಡು ಊರೂರು ಸುತ್ತುತ್ತಿದ್ದ ಕೆಲವು ಯೆಹೂದ್ಯರು ಸಹ ಪ್ರಭು ಯೇಸುವಿನ ನಾಮವನ್ನು ಬಳಸಿ ದೆವ್ವಬಿಡಿಸಲು ಯತ್ನಿಸಿದರು. ಇವರು ದೆವ್ವಗಳಿಗೆ, “ಪೌಲನು ಸಾರುತ್ತಿರುವ ಯೇಸುವಿನ ನಾಮದಲ್ಲಿ ನಿಮಗೆ ಆಣೆಯಿಟ್ಟು ಆಜ್ಞಾಪಿಸುತ್ತೇವೆ,” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದೆವ್ವಬಿಡಿಸುವವರೆನಿಸಿಕೊಂಡು ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದೆವ್ವಹಿಡಿದವರ ಮೇಲೆ - ಪೌಲನು ಸಾರುವ ಯೇಸುವಿನ ಆಣೆ ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವದಕ್ಕೆ ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕೆಲವು ಯೆಹೂದ್ಯರು ದುರಾತ್ಮಗಳನ್ನು ಬಿಡಿಸಲು ಪ್ರಯತ್ನಿಸಿ, “ಪೌಲನು ಸಾರುತ್ತಿರುವ ಯೇಸುವಿನ ಹೆಸರಿನಲ್ಲಿ ನಾನು ನಿಮಗೆ ಆಜ್ಞಾಪಿಸುತ್ತೇನೆ,” ಎಂದು ಅವರು ಕರ್ತ ಯೇಸುವಿನ ಹೆಸರನ್ನು ಬಳಸಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಗಿರೆ ಸೊಡಸ್ತಲಿ ಜುದೆವಾಂಚಿ ಲೊಕಾ ಥೈ ಫಿರುಂಗೆತ್ ಹೊತ್ತಿ ತೆಂಚ್ಯಾತ್ಲಿ ಉಲ್ಲಿ ಲೊಕಾ ಧನಿಯಾ ಜೆಜುಚೆ ನಾವ್ ವಾಪ್ರುನ್ ಘೆವ್ನ್ ಗಿರೆ ಸೊಡ್ಸುಕ್ ಕಟ್ಪಟ್ ಕರಿತ್ ಹೊತ್ತಿ, ತೆನಿ ಪಾವ್ಲು ಪರ್ಗಟ್ ಕರುಲಾಗಲ್ಯಾ ಜೆಜುಚ್ಯಾ ನಾವಾನ್ ಹುಕುಮ್ ದಿತಾ, ಭಾಯ್ರ್ ಯೆ ಮನುನ್ ಮ್ಹಾರ್‍ವಾಕ್ನಿ ಸಾಂಗಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:13
15 ತಿಳಿವುಗಳ ಹೋಲಿಕೆ  

ನಾನು ಸೈತಾನನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತೇನೆ ಎಂದು ನೀವು ಹೇಳುತ್ತೀರಿ. ಅದು ನಿಜವಾದರೆ, ನಿಮ್ಮ ಜನರು ಯಾವ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾರೆ? ಆದ್ದರಿಂದ ನಿಮ್ಮ ಸ್ವಂತ ಜನರೇ ನಿಮ್ಮನ್ನು ತಪ್ಪಿತಸ್ಥರೆಂದು ನಿರೂಪಿಸುತ್ತಾರೆ.


ಆಗ ಯೋಹಾನನು, “ಗುರುವೇ, ಯಾರೋ ಒಬ್ಬನು ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುತ್ತಿರುವುದನ್ನು ನಾವು ನೋಡಿದೆವು. ಅವನು ನಮ್ಮವನಲ್ಲ. ಆದ್ದರಿಂದ ನಿನ್ನ ಹೆಸರನ್ನು ಹೇಳಕೂಡದೆಂದು ಅವನಿಗೆ ಹೇಳಿದೆವು” ಎಂದನು.


ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾಗಿದ್ದರೆ, ನಿಮ್ಮ ಜನರು ದೆವ್ವಗಳನ್ನು ಯಾವ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನಿಮ್ಮ ಸ್ವಂತ ಜನರೇ ನಿಮ್ಮನು ತಪ್ಪಿತಸ್ಥರೆಂದು ಹೇಳುತ್ತಾರೆ.


ಯೋಹಾನನು, “ಗುರುವೇ, ನಿನ್ನ ಹೆಸರಿನ ಮೂಲಕ ಜನರಿಂದ ದೆವ್ವಗಳನ್ನು ಬಿಡಿಸುತ್ತಿದ್ದ ಒಬ್ಬ ವ್ಯಕ್ತಿಯನ್ನು ನಾವು ನೋಡಿದೆವು. ಅವನು ನಮ್ಮವನಲ್ಲದ ಕಾರಣ ನಿನ್ನ ಹೆಸರನ್ನು ಬಳಸಕೂಡದೆಂದು ಅವನಿಗೆ ಹೇಳಿದೆವು” ಎಂದರು.


ಯೇಸು ಅವನಿಗೆ, “ಎಲೈ ದೆವ್ವವೇ, ಅವನೊಳಗಿಂದ ಹೊರಗೆ ಬಾ” ಎಂದು ಹೇಳಿದನು. ಆಗ ಅವನು ಗಟ್ಟಿಯಾದ ಧ್ವನಿಯಿಂದ ಅರಚುತ್ತಾ, “ಯೇಸುವೇ, ಪರಾತ್ಪರನಾದ ದೇವಕುಮಾರನೇ, ನನ್ನಿಂದ ನಿನಗೆ ಏನಾಗಬೇಕಾಗಿದೆ? ದೇವರಾಣೆಯಿಟ್ಟು ಬೇಡಿಕೊಳ್ಳುತ್ತೇನೆ, ನನ್ನನ್ನು ಹಿಂಸಿಸಬೇಡ” ಎಂದು ಕೇಳಿಕೊಂಡನು.


ಆದರೆ ಯೇಸು ಮೌನವಾಗಿದ್ದನು. ಪ್ರಧಾನಯಾಜಕನು ಮತ್ತೆ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದೇನೆ, ನೀನು ದೇವಕುಮಾರನಾದ ಕ್ರಿಸ್ತನೋ? ನಮಗೆ ತಿಳಿಸು” ಎಂದನು.


ಆದರೆ ಅಹಾಬನು, “ಯೆಹೋವನ ಶಕ್ತಿಯಿಂದ ನೀನು ಮಾತನಾಡುತ್ತಿಲ್ಲ. ನೀನು ನಿನ್ನ ಸ್ವಂತ ಮಾತುಗಳನ್ನು ಹೇಳುತ್ತಿರುವೆ. ನನಗೆ ನೀನು ನಿಜವನ್ನು ಹೇಳು! ನಾನು ನಿನಗೆ ಎಷ್ಟು ಸಲ ಹೇಳಬೇಕು? ಯೆಹೋವನು ತಿಳಿಸುವುದನ್ನೇ ನನಗೆ ಹೇಳು!” ಎಂದು ಕೇಳಿದನು.


ಆದರೆ ಸೌಲನು ಆ ದಿನ ಮತ್ತೊಂದು ದೊಡ್ಡ ತಪ್ಪನ್ನು ಮಾಡಿದನು. ಇಸ್ರೇಲರು ಬಳಲಿದ್ದರು ಮತ್ತು ಹಸಿದಿದ್ದರು. ಸೌಲನು ಅವರಿಗೆ, “ನಾನು ಶತ್ರುಗಳನ್ನು ಸೋಲಿಸಬೇಕಾಗಿರುವುದರಿಂದ ನಿಮ್ಮಲ್ಲಿ ಸಾಯಂಕಾಲದೊಳಗೆ ಊಟಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟು ಹೇಳಿದ್ದರಿಂದ ಇಸ್ರೇಲಿನ ಯಾವ ಸೈನಿಕನೂ ಊಟಮಾಡಲಿಲ್ಲ.


ಆ ಸಮಯದಲ್ಲಿ ಯೆಹೋಶುವನು, ಇಸ್ರೇಲಿನ ಜನರಿಂದ ಪ್ರಮಾಣಮಾಡಿಸಿ ಅವರಿಗೆ, “ಈ ಜೆರಿಕೊ ಪಟ್ಟಣವನ್ನು ಪುನಃ ಕಟ್ಟಲು ಪ್ರಯತ್ನಿಸುವವನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಲಿ. ಈ ನಗರಕ್ಕೆ ಅಡಿಗಲ್ಲನ್ನಿಡುವ ವ್ಯಕ್ತಿಯು ತನ್ನ ಹಿರಿಯ ಮಗನನ್ನು ಕಳೆದುಕೊಳ್ಳಲಿ; ಹೆಬ್ಬಾಗಿಲನ್ನು ನಿಲ್ಲಿಸುವ ವ್ಯಕ್ತಿ ತನ್ನ ಕಿರಿಯ ಮಗನನ್ನು ಕಳೆದುಕೊಳ್ಳಲಿ” ಎಂದು ಹೇಳಿದನು.


ನೀನು ನನ್ನನ್ನು ನನ್ನ ದೇಶದಿಂದ ಬಲವಂತವಾಗಿ ಹೊರಡಿಸುತ್ತಿರುವೆ. ನಿನ್ನನ್ನು ನೋಡುವುದಕ್ಕಾಗಲಿ ನಿನ್ನ ಸಮೀಪದಲ್ಲಿ ಇರುವುದಕ್ಕಾಗಲಿ ನನಗೆ ಸಾಧ್ಯವಿರುವುದಿಲ್ಲ! ನನಗೆ ಮನೆಯೂ ಇಲ್ಲ! ನಾನು ಭೂಮಿಯ ಮೇಲೆ ಸ್ಥಳದಿಂದ ಸ್ಥಳಕ್ಕೆ ಬಲವಂತವಾಗಿ ಅಲೆದಾಡಬೇಕಾಗುವುದು. ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.


ಕಳೆದ ದಿನಗಳಲ್ಲಿ ನೀನು ಸಸಿಗಳನ್ನು ನೆಟ್ಟಾಗ ಸಸಿಗಳು ಚೆನ್ನಾಗಿ ಬೆಳೆದವು. ಆದರೆ ಈಗ ನೀನು ಸಸಿ ನೆಟ್ಟರೂ ಭೂಮಿ ಫಲಿಸುವುದಿಲ್ಲ. ನಿನಗೆ ಭೂಮಿಯ ಮೇಲೆ ಮನೆ ಇರುವುದಿಲ್ಲ. ನೀನು ಸ್ಥಳದಿಂದ ಸ್ಥಳಕ್ಕೆ ಅಲೆದಾಡುವೆ” ಎಂದು ಹೇಳಿದನು.


ಅವನ ಮಕ್ಕಳು ತಮ್ಮ ಮನೆಯನ್ನು ಕಳೆದುಕೊಂಡು ತಿರುಕರಂತೆ ಅಲೆಯುತ್ತಾ ಭಿಕ್ಷುಕರಾಗಲಿ.


ಯೇಸುವಿನ ಬಗ್ಗೆ ನಾವು ಬೋಧಿಸಿದ ಸಂಗತಿಗಳಿಗೆ ಭಿನ್ನವಾದಂಥ ಸಂಗತಿಗಳನ್ನು ಬೋಧಿಸುವ ಬೋಧಕರು ನಿಮ್ಮ ಬಳಿಗೆ ಬಂದು ಬೋಧಿಸಿದರೂ ನೀವು ತಾಳ್ಮೆಯಿಂದಿರುತ್ತೀರಿ. ನೀವು ನಮ್ಮಿಂದ ಸ್ವೀಕರಿಸಿಕೊಂಡ ಪವಿತ್ರಾತ್ಮನಿಗೂ ಸುವಾರ್ತೆಗೂ ಭಿನ್ನವಾದ ಆತ್ಮವನ್ನೂ ಸುವಾರ್ತೆಯನ್ನೂ ಸ್ವೀಕರಿಸಿಕೊಳ್ಳಲು ಬಹು ಇಷ್ಟವುಳ್ಳವರಾಗಿದ್ದೀರಿ. ಆದ್ದರಿಂದ ನೀವು ನಮ್ಮ ವಿಷಯದಲ್ಲಿ ತಾಳ್ಮೆಯಿಂದಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು