Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:23 - ಪರಿಶುದ್ದ ಬೈಬಲ್‌

23 ಆದರೆ ಆ ಸಮಯದಲ್ಲಿ ದೇವರ ಮಾರ್ಗದ ಬಗ್ಗೆ ತೀವ್ರ ಗಲಭೆಯೊಂದು ಎಫೆಸದಲ್ಲಿ ಉಂಟಾಯಿತು. ಅದು ನಡೆದ ರೀತಿ ಇಂತಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ಕಾಲದಲ್ಲಿ ಈ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದೇ ಸಮಯಕ್ಕೆ ಎಫೆಸದಲ್ಲಿ ಕ್ರಿಸ್ತಮಾರ್ಗ ಅನ್ವೇಷಣೆಯ ನಿಮಿತ್ತ ತೀವ್ರಗಲಭೆ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ಕಾಲದಲ್ಲಿ ಕ್ರಿಸ್ತ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಕ್ರಿಸ್ತ ಯೇಸುವಿನ ಮಾರ್ಗದ ವಿಷಯವಾಗಿ ಆ ಸಮಯದಲ್ಲಿ ದೊಡ್ಡ ಗಲಭೆ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತ್ಯಾ ಎಳಾರ್ ಎಪೆಸಾತ್ ಧನಿಯಾಚ್ಯಾ ವಾಟೆಚ್ಯಾ ವಿಶಯಾತ್ ಲೈ ಮೊಟೊ ಧಂಗೊ ಉಟಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:23
10 ತಿಳಿವುಗಳ ಹೋಲಿಕೆ  

ಫೇಲಿಕ್ಸನು ಯೇಸುವಿನ ಮಾರ್ಗದ ಬಗ್ಗೆ ಮೊದಲೇ ಸಾಕಷ್ಟು ಅರ್ಥಮಾಡಿಕೊಂಡಿದ್ದನು. ಅವನು ವಿಚಾರಣೆಯನ್ನು ನಿಲ್ಲಿಸಿ, “ಸೇನಾಧಿಪತಿಯಾದ ಲೂಸಿಯನು ಇಲ್ಲಿಗೆ ಬಂದಾಗ, ಈ ಸಂಗತಿಗಳ ಬಗ್ಗೆ ನಾನು ತೀರ್ಪನ್ನು ಕೊಡುತ್ತೇನೆ” ಎಂದು ಹೇಳಿದನು.


ಆದರೆ ಆ ಯೆಹೂದ್ಯರಲ್ಲಿ ಕೆಲವರು ಮೊಂಡರಾದರು. ಅವರು ನಂಬದೆ ದೇವರ ಮಾರ್ಗವನ್ನು ಜನರೆಲ್ಲರ ಎದುರಿನಲ್ಲಿ ದೂಷಿಸಿದರು. ಆದ್ದರಿಂದ ಪೌಲನು ಏಷ್ಯಾ ಪ್ರಾಂತ್ಯದ ಆ ಯೆಹೂದ್ಯರನ್ನೆಲ್ಲ ಬಿಟ್ಟು, ಯೇಸುವಿನ ಶಿಷ್ಯರನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ, ತುರನ್ನನ ಶಾಲೆಯಲ್ಲಿ ಪ್ರತಿದಿನವೂ ಚರ್ಚೆ ನಡೆಸಿದನು.


ದಮಸ್ಕದಲ್ಲಿ ಕ್ರಿಸ್ತನ ಮಾರ್ಗವನ್ನು ಅನುಸರಿಸುವವರನ್ನು ಕಂಡುಹಿಡಿದು, ಸ್ತ್ರೀಯರು, ಪುರುಷರು ಎನ್ನದೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದುಕೊಂಡು ಬರಲು ತನಗೆ ಅಧಿಕಾರ ಕೊಟ್ಟಿರುವುದಾಗಿ ದಮಸ್ಕ ಪಟ್ಟಣದ ಸಭಾಮಂದಿರಗಳಿಗೆ ಪತ್ರಬರೆಯಬೇಕೆಂದು ಕೇಳಿಕೊಂಡನು.


ನಾವು ಪ್ರಸಿದ್ಧರಾಗಿದ್ದರೂ ಕೆಲವರು ನಮ್ಮನ್ನು ಅಪ್ರಸಿದ್ಧರಂತೆ ಕಾಣುತ್ತಾರೆ. ನಾವು ಸಾಯುವಂತಿದ್ದರೂ ಬದುಕಿದ್ದೇವೆ; ಶಿಕ್ಷಿಸಲ್ಪಟ್ಟರೂ ಕೊಲ್ಲಲ್ಪಡಲಿಲ್ಲ;


“ಆದರೆ ನಾನು ನಿನಗೆ ಹೇಳುವುದೇನೆಂದರೆ, ಯೇಸುವಿನ ಮಾರ್ಗದ ಹಿಂಬಾಲಕನಾದ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ. ಯೇಸುವಿನ ಮಾರ್ಗವು ಸರಿಯಲ್ಲವೆಂದು ಯೆಹೂದ್ಯರು ಹೇಳುತ್ತಾರೆ. ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಪುಸ್ತಕಗಳಲ್ಲಿಯೂ ಬರೆದಿರುವ ಪ್ರತಿಯೊಂದನ್ನು ನಾನು ನಂಬುತ್ತೇನೆ.


ಯೇಸುವಿನ ಮಾರ್ಗವನ್ನು ಯಾರು ಹಿಂಬಾಲಿಸುತ್ತಾರೋ ಅವರನ್ನು ನಾನು ಹಿಂಸಿಸಿದೆನು. ನನ್ನ ದೆಸೆಯಿಂದ ಅವರಲ್ಲಿ ಕೆಲವರು ಕೊಲ್ಲಲ್ಪಟ್ಟರು. ನಾನು ಪುರುಷರನ್ನು ಮತ್ತು ಸ್ತ್ರೀಯರನ್ನು ಬಂಧಿಸಿ ಸೆರೆಮನೆಗೆ ಹಾಕಿದೆನು.


ಅಪೊಲ್ಲೋಸನು ಸಭಾಮಂದಿರದಲ್ಲಿ ಬಹು ಧೈರ್ಯವಾಗಿ ಮಾಡಿದ ಉಪದೇಶವನ್ನು ಕೇಳಿದ ಪ್ರಿಸ್ಕಿಲ್ಲ ಮತ್ತು ಅಕ್ವಿಲ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ, ದೇವರ ಮಾರ್ಗವನ್ನು ಆಳವಾಗಿ ಗ್ರಹಿಸಿಕೊಳ್ಳಲು ನೆರವು ನೀಡಿದರು.


ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರುತ್ತೇವೆ.


ಅನೇಕ ಪ್ರಯಾಣಗಳನ್ನು ಮಾಡಿದೆನು. ನದಿಗಳಿಂದಲೂ ಕಳ್ಳರಿಂದಲೂ ನನ್ನ ಸ್ವಂತ ಜನರಾದ ಯೆಹೂದ್ಯರಿಂದಲೂ ಮತ್ತು ಯೆಹೂದ್ಯರಲ್ಲದವರಿಂದಲೂ ಅಪಾಯಕ್ಕೀಡಾಗಿದ್ದೆನು. ಪಟ್ಟಣಗಳಲ್ಲಿಯೂ ಜನರು ವಾಸವಾಗಿಲ್ಲದ ಸ್ಥಳಗಳಲ್ಲಿಯೂ ಸಮುದ್ರಗಳಲ್ಲಿಯೂ ಸುಳ್ಳುಸಹೋದರರ ಮಧ್ಯದಲ್ಲಿಯೂ ಅಪಾಯಕ್ಕೀಡಾಗಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು