Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:27 - ಪರಿಶುದ್ದ ಬೈಬಲ್‌

27 ಇದರಿಂದಾಗಿ ಜನರು ನಮ್ಮ ಕೆಲಸದ ವಿರುದ್ಧ ರೊಚ್ಚಿಗೇಳಬಹುದು. ಅಷ್ಟೇ ಅಲ್ಲ, ಮಹಾದೇವತೆಯಾದ ಅರ್ತೆಮಿಯ ಗುಡಿಯನ್ನು ಜನರು ಕಡೆಗಣಿಸುವ ಸಾಧ್ಯತೆಯೂ ಇದೆ. ಆಗ, ಏಷ್ಯಾದಲ್ಲಿ ಮತ್ತು ಇಡೀ ಪ್ರಪಂಚದಲ್ಲಿ ಪೂಜಿಸಲ್ಪಡುತ್ತಿರುವ ಅರ್ತೆಮಿಯ ದೇವತೆಯ ವೈಭವ ಅಳಿದುಹೋಗುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇದರಿಂದ ನಮ್ಮ ಉದ್ಯೋಗಕ್ಕೆ ಕುಂದು ಬರುವುದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ, ಎಲ್ಲಾ ಆಸ್ಯಸೀಮೆಯೂ, ಲೋಕವೆಲ್ಲಾ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆ ಗಂಡಾಂತರವುಂಟಾಗುತ್ತದೆಂದು” ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇದರಿಂದಾಗಿ ನಮ್ಮ ಕಸಬಿಗೇ ಕೆಟ್ಟ ಹೆಸರು ಬರುವ ಅಪಾಯವಿದೆ. ಅಷ್ಟೇ ಏಕೆ, ಅರ್ತೆಮೀ ಮಹಾದೇವಿಯ ಗುಡಿ ಹೇಳಹೆಸರಿಲ್ಲದಂತಾಗುವ ಸಂಭವವಿದೆ. ಇಡೀ ಏಷ್ಯದಲ್ಲೂ ಜಗತ್ತಿನ ಎಲ್ಲೆಲ್ಲೂ ಪೂಜಿಸಲಾಗುವ ಆ ದೇವತೆಯ ವೈಭವ ಅಳಿದುಹೋಗುವ ಅಪಾಯವಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇದರಿಂದ ನಮ್ಮ ಉದ್ಯೋಗಕ್ಕೆ ಅಪಕೀರ್ತಿ ಬರುವ ಹಾಗಿರುವದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ ಎಲ್ಲಾ ಆಸ್ಯಸೀಮೆಯೂ ಲೋಕವೂ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆಯೂ ಗಂಡಾಂತರವುಂಟೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಇದರಿಂದ ಈಗ ನಮ್ಮ ವೃತ್ತಿಗೆ ಅಪಾಯ ಬಂದಿರುವುದಲ್ಲದೆ ಅರ್ತೆಮೀ ಮಹಾದೇವಿಯ ಗುಡಿಯ ಬಗ್ಗೆಯೂ ಯೋಚಿಸಬೇಕು. ಏಕೆಂದರೆ ಏಷ್ಯಾದಲ್ಲಿಯೂ ಇಡೀ ಜಗತ್ತಿನಲ್ಲೆಲ್ಲಾ ಪೂಜಿಸುತ್ತಿರುವ ದೇವಿಯ ಮಹತ್ವವು ಸಹ ಕುಂದಿಹೋಗುವಂತಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅಶೆ ರಾತಾನಾ ಅಮ್ಚ್ಯಾ ಹ್ಯಾ ವ್ಯಾಪಾರಾಚೆ ನಾವ್ ಬುರ್ಶೆ ಹೊವ್ನ್ ಜಾವ್ಕ್ ಲಾಗ್ಲಾ, ತವ್ಡೆಚ್ ನ್ಹಯ್ ಅಮ್ಚ್ಯಾ ಅರ್ತಮೆ ದೆವತೆಚಿ ಗುಡಿಬಿ ತರಾಸಾತ್ ಹಾಯ್, ತಿಚೆ ಮೊಟೆಪಾನಬಿ ನಾಸ್ ಹೊವ್ನ್ ಜಾತಾ, ಆಸ್ಯಾ ಶಾರಾತ್ಲಿ ಸಗ್ಳಿ ಲೊಕಾ ಪುಜ್ಯಾ ಕರ್‍ತಲೆ ಹಿಚೆ ನಾವ್ ನಾಸ್ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:27
11 ತಿಳಿವುಗಳ ಹೋಲಿಕೆ  

ಅವರು ಯೆಹೋವನಿಗೆ ಭಯಪಡುವರು. ಯಾಕೆಂದರೆ ಆತನು ಅವರ ದೇವರುಗಳನ್ನು ನಾಶಮಾಡಿದ್ದಾನೆ. ಆಗ ದೂರದಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸುವರು.


ಇದಲ್ಲದೆ ಕೆಡುಕರಲ್ಲಿ ವಾದವಿವಾದಗಳು ಹುಟ್ಟುತ್ತವೆ. ಆ ಜನರು ಸತ್ಯವನ್ನು ತೊರೆದವರಾಗಿದ್ದಾರೆ. ದೇವರ ಸೇವೆಯು ಐಶ್ವರ್ಯವನ್ನು ಗಳಿಸುವ ಮಾರ್ಗವೆಂಬುದು ಅವರ ಆಲೋಚನೆ.


ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.


ಮೃಗದ ತಲೆಗಳಲ್ಲಿ ಒಂದು ತಲೆಯು ಗಾಯಗೊಂಡು ಸತ್ತಂತೆ ಕಾಣುತ್ತಿತ್ತು. ಆದರೆ ಮರಣಕರವಾದ ಈ ಗಾಯವನ್ನು ವಾಸಿಮಾಡಲಾಯಿತು. ಈ ಲೋಕದಲ್ಲಿದ್ದ ಜನರೆಲ್ಲರೂ ಆಶ್ಚರ್ಯಗೊಂಡು ಆ ಮೃಗವನ್ನು ಹಿಂಬಾಲಿಸಿದರು.


ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ. ಆದರೆ ಈ ಲೋಕವು ಕೆಡುಕನ ವಶದಲ್ಲಿದೆ.


ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯ ದೇಶಗಳ ಮೂಲಕ ಜೆರುಸಲೇಮಿಗೆ ಹೋಗಲು ಯೋಜನೆ ಮಾಡಿದನು. “ನಾನು ಜೆರುಸಲೇಮನ್ನು ಸಂದರ್ಶಿಸಿದ ಮೇಲೆ ರೋಮ್ ನಗರವನ್ನು ಸಹ ಸಂದರ್ಶಿಸಬೇಕು” ಎಂದು ಪೌಲನು ಯೋಚಿಸಿಕೊಂಡನು.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


ಅದರಲ್ಲಿ ಸ್ವಲ್ಪ ಮರದ ತುಂಡು ಉಳಿದಿರುತ್ತದೆ. ಅದನ್ನು ನೋಡಿ ಆ ಮನುಷ್ಯನು ಅದರಿಂದ ವಿಗ್ರಹವನ್ನು ತಯಾರಿಸುವನು. ಅದನ್ನು ದೇವರೆಂದು ಕರೆಯುವನು. ಅದರ ಮುಂದೆ ಅಡ್ಡಬಿದ್ದು ಆರಾಧಿಸುವನು. ಅದರ ಮುಂದೆ ಪ್ರಾರ್ಥಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಹೇಳುತ್ತಾನೆ.


ದೇವರ ರಾಜ್ಯದ ಶುಭವಾರ್ತೆಯನ್ನು ಲೋಕದಲ್ಲೆಲ್ಲಾ ಪ್ರತಿ ಜನಾಂಗಕ್ಕೂ ಸಾರಲಾಗುವುದು. ಆಗ ಅಂತ್ಯವು ಬರುತ್ತದೆ.


ಹೀಗೆ ಎರಡು ವರ್ಷಗಳು ಕಳೆದವು. ಇದರಿಂದಾಗಿ, ಏಷ್ಯಾದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರು ಮತ್ತು ಗ್ರೀಕರು ಪ್ರಭುವಿನ ವಾಕ್ಯವನ್ನು ಕೇಳಿದರು.


ಮೂರನೆಯ ದೇವದೂತನು ಮೊದಲ ಇಬ್ಬರು ದೇವದೂತರನ್ನು ಹಿಂಬಾಲಿಸಿದನು. ಈ ಮೂರನೆಯ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ ಹೀಗೆ ಹೇಳಿದನು: “ಮೃಗವನ್ನೂ ಮೃಗದ ವಿಗ್ರಹವನ್ನೂ ಆರಾಧಿಸುವವನಿಗೆ ಮತ್ತು ಮೃಗದ ಗುರುತನ್ನು ಹಣೆಯ ಮೇಲಾಗಲಿ ಇಲ್ಲವೆ ತನ್ನ ಕೈಗಳ ಮೇಲಾಗಲಿ ಹಾಕಿಸಿಕೊಳ್ಳುವವನಿಗೆ ಕೇಡಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು