Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:3 - ಪರಿಶುದ್ದ ಬೈಬಲ್‌

3 ಪೌಲನು ಅವರಿಗೆ, “ನೀವು ಯಾವ ಬಗೆಯ ದೀಕ್ಷಾಸ್ನಾನ ಪಡೆದಿರಿ?” ಎಂದು ಕೇಳಿದನು. ಅವರು, “ಯೋಹಾನನು ಬೋಧಿಸಿದ ದೀಕ್ಷಾಸ್ನಾನವನ್ನು ನಾವು ಮಾಡಿಸಿಕೊಂಡೆವು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು; “ನೀವು ಏನನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ” ಎಂದು ಕೇಳಿದ್ದಕ್ಕೆ ಅವರು; “ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನಮಾಡಿಸಿಕೊಂಡೆವು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹಾಗಾದರೆ ನೀವು ಯಾವ ಸ್ನಾನದೀಕ್ಷೆಯನ್ನು ಪಡೆದಿರಿ?” ಎಂದು ಪೌಲನು ಕೇಳಲು, “ನಾವು ಯೊವಾನ್ನನ ಸ್ನಾನದೀಕ್ಷೆ ಪಡೆದೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು - ನೀವು ಯಾವದನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ ಎಂದು ಕೇಳಿದ್ದಕ್ಕೆ ಅವರು - ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಹಾಗಾದರೆ ನೀವು ಯಾವ ದೀಕ್ಷಾಸ್ನಾನವನ್ನು ಪಡೆದುಕೊಂಡಿದ್ದೀರಿ?” ಎಂದು ಪೌಲನು ಕೇಳಿದಾಗ ಅವರು, “ಯೋಹಾನನ ದೀಕ್ಷಾಸ್ನಾನವನ್ನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಪಾವ್ಲುನ್ ತೆಂಕಾ,“ ತುಮಿ ಖಚ್ಚ್ಯಾ ರಿತಿಚೆ ಬಾಲ್ತಿಮ್ ಘೆಟ್ಲ್ಯಾಶಿ?” ಮನುನ್ ಇಚಾರ್‍ಲ್ಯಾನ್. ತೆನಿ ಜುವಾಂವಾಚೆ ಬಾಲ್ತಿಮ್ ಅಮಿ ಕರುನ್ ಘೆಟ್ಲ್ಯಾಂವ್ ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:3
8 ತಿಳಿವುಗಳ ಹೋಲಿಕೆ  

ಅಪೊಲ್ಲೋಸನು ಯಾವಾಗಲೂ ಬಹು ಉತ್ಸುಕತೆಯಿಂದ ಯೇಸುವಿನ ಬಗ್ಗೆ ಜನರಿಗೆ ಉಪದೇಶಿಸುತ್ತಿದ್ದನು. ಯೇಸುವಿನ ಬಗ್ಗೆ ಅಪೊಲ್ಲೋಸನು ಹೇಳಿದ ಸಂಗತಿಗಳು ಸರಿಯಾಗಿದ್ದವು. ಆದರೆ ಸ್ನಾನಿಕ ಯೋಹಾನನ ದೀಕ್ಷಾಸ್ನಾನವೊಂದೇ ಇವನಿಗೆ ಗೊತ್ತಿತ್ತು.


ನಮ್ಮಲ್ಲಿ ಕೆಲವರು ಯೆಹೂದ್ಯರಿದ್ದಾರೆ, ಕೆಲವರು ಗ್ರೀಕರಿದ್ದಾರೆ, ಕೆಲವರು ಗುಲಾಮರಿದ್ದಾರೆ, ಕೆಲವರು ಸ್ವತಂತ್ರರಿದ್ದಾರೆ, ಆದರೆ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಬ್ಬನೇ ಪವಿತ್ರಾತ್ಮನ ಮೂಲಕ ದೀಕ್ಷಾಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬನೇ ಪವಿತ್ರಾತ್ಮನನ್ನು ಕೊಡಲಾಯಿತು.


ಈ ಜನರು ಪ್ರಭುವಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರು. ಆದರೆ ಪವಿತ್ರಾತ್ಮನು ಅವರಲ್ಲಿ ಯಾರ ಮೇಲೆಯೂ ಇನ್ನೂ ಇಳಿದು ಬಂದಿರಲಿಲ್ಲ. ಈ ಕಾರಣದಿಂದಲೇ ಪೇತ್ರ ಮತ್ತು ಯೋಹಾನರು ಪ್ರಾರ್ಥಿಸಿದರು.


ಆದ್ದರಿಂದ ನೀವು ಹೋಗಿ, ಲೋಕದಲ್ಲಿರುವ ಜನರೆಲ್ಲರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ. ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ಅವರಿಗೆಲ್ಲ ದೀಕ್ಷಾಸ್ನಾನ ಮಾಡಿಸಿ.


ಯೋಹಾನನು ಉಪದೇಶಿಸಿದ ದೇವರ ವಾಕ್ಯವನ್ನು ಜನರೆಲ್ಲರೂ ಸ್ವೀಕರಿಸಿಕೊಂಡರು. ಸುಂಕವಸೂಲಿಗಾರರೂ ಸ್ವೀಕರಿಸಿಕೊಂಡರು. ಇವರೆಲ್ಲರೂ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು.


ಆ ಸಮಯದಲ್ಲಿ ನಮಗೆ ದೀಕ್ಷಾಸ್ನಾನ, ಹಸ್ತಾರ್ಪಣ, ಸತ್ತವರ ಪುನರುತ್ಥಾನ ಮತ್ತು ನಿತ್ಯವಾದ ನ್ಯಾಯತೀರ್ಪು ಇವುಗಳನ್ನು ಕುರಿತು ಬೋಧಿಸಲಾಯಿತು. ಆದರೆ ಈಗ ನಾವು ಪೂರ್ಣ ತಿಳುವಳಿಕೆಗೆ ಹೋಗುವುದು ಅಗತ್ಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು