Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:38 - ಪರಿಶುದ್ದ ಬೈಬಲ್‌

38 ನಮ್ಮಲ್ಲಿ ನ್ಯಾಯಾಲಯಗಳಿವೆ ಮತ್ತು ನ್ಯಾಯಾಧೀಶರುಗಳು ಇದ್ದಾರೆ. ದೇಮೇತ್ರಿಯನಿಗಾಗಲಿ ಮತ್ತು ಅವನೊಂದಿಗೆ ಕೆಲಸ ಮಾಡುವ ಜನರಿಗಾಗಲಿ ಯಾರ ಮೇಲಾದರೂ ದೂರುಗಳಿವೆಯೇ? ದೂರುಗಳಿದ್ದರೆ, ಅವರು ನ್ಯಾಯಾಲಯಗಳಿಗೆ ಹೋಗಬೇಕು! ಅವರು ಪರಸ್ಪರ ವಾದ ಮಾಡಲು ಅದೇ ತಕ್ಕ ಸ್ಥಳ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಹೀಗಿರುವುದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಅಕ್ಕಸಾಲಿಗರಿಗೂ ಯಾವನ ಮೇಲಾದರೂ ದೂರುಗಳಿದ್ದರೆ ನ್ಯಾಯಸ್ಥಾನಗಳುಂಟು, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯವಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ದೆಮೆತ್ರಿಯನಿಗೇ ಆಗಲಿ, ಅವನ ಜೊತೆ ಕೆಲಸಗಾರರಿಗೇ ಆಗಲಿ, ಯಾರ ಮೇಲಾದರೂ ಏನಾದರೂ ಆಪಾದನೆ ಇದ್ದರೆ, ಅದಕ್ಕೆ ನ್ಯಾಯಾಲಯಗಳು ತೆರೆದಿವೆ; ರಾಜ್ಯಪಾಲರಿದ್ದಾರೆ; ಅವರು ಅಲ್ಲಿಗೆ ಹೋಗಿ ದೂರು ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ಒಂದು ವ್ಯವಹಾರವಿದ್ದರೆ ನ್ಯಾಯಸ್ಥಾನಗಳುಂಟು, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯವಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಹೀಗಿರುವುದರಿಂದ ದೇಮೇತ್ರಿಯನಿಗೂ ಅವನ ಸಹ ಶಿಲ್ಪಿಗಳಿಗೂ ಯಾವುದೇ ವ್ಯಕ್ತಿಯ ವಿರುದ್ಧ ಏನಾದರೂ ಆಪಾದನೆಗಳಿದ್ದರೆ ಅವರಿಗಾಗಿ ನ್ಯಾಯಾಲಯಗಳು ತೆರೆದಿವೆ. ರಾಜ್ಯಪಾಲರು ಇದ್ದಾರೆ; ಅವರ ಮುಂದೆ ದೂರುಗಳನ್ನು ಸಲ್ಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಅಶೆ ರಾತಾನಾ ದೆಮೆತ್ರಿ ಅನಿ ತೆಚಿ ಕಾಮಾ ಕರ್ತಲ್ಯಾಕ್ನಿ ಕೊನಾಚ್ಯಾ ವಿರೊದ್‍ಬಿ ಝಗ್ಡೊ ರ್‍ಹಾಲ್ಯಾರ್ ಅಮ್ಚೆ ಅಧಿಕಾರಿ ಹಾತ್, ಅನಿ ಝಡ್ತಿ ಕರ್‍ತಲೊ ಜಾಗೊ ಹಾಯ್, ಥೈ ಜಾವ್ನ್ ತಕ್ರಾರ್ ಸಾಂಗುಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:38
8 ತಿಳಿವುಗಳ ಹೋಲಿಕೆ  

ಸೆರ್ಗ್ಯಪೌಲನೆಂಬ ರಾಜ್ಯಪಾಲನ ಹತ್ತಿರದಲ್ಲೇ ಅವನು ಯಾವಾಗಲೂ ಇರುತ್ತಿದ್ದನು. ಸೆರ್ಗ್ಯಪೌಲನು ಜ್ಞಾನವಂತನಾಗಿದ್ದನು. ಅವನು ದೇವರ ವಾಕ್ಯವನ್ನು ಕೇಳಲು ಬಾರ್ನಬ ಮತ್ತು ಸೌಲರನ್ನು ಆಮಂತ್ರಿಸಿದನು.


ನಿಮ್ಮಲ್ಲಿ ಯಾವನಿಗಾದರೂ ಮತ್ತೊಬ್ಬನ ಮೇಲೆ ವಿರೋಧವಿದ್ದರೆ, ನೀವು ನ್ಯಾಯಾಲಯಗಳಿಗೆ ಹೋಗುವುದೇಕೆ? ಅವರು ನೀತಿವಂತರಲ್ಲ. ಹೀಗಿರಲು ನಿಮಗೆ ನ್ಯಾಯತೀರ್ಪು ಮಾಡಲು ಅವರಿಗೆ ನೀವು ಅವಕಾಶ ಮಾಡಿಕೊಡುವುದೇಕೆ? ನಿಮಗೆ ನಾಚಿಕೆಯಾಗಬೇಕು. ನಿಮಗೆ ನ್ಯಾಯತೀರ್ಪು ನೀಡಲು ನೀವು ದೇವಜನರಿಗೆ ಏಕೆ ಅವಕಾಶ ಕೊಡಬಾರದು?


ಪೌಲನು ಮಾತಾಡುವುದಕ್ಕೆ ಸಿದ್ಧನಾಗಿದ್ದನು. ಆದರೆ ಗಲ್ಲಿಯೋನ ಯೆಹೂದ್ಯರಿಗೆ, “ಯೆಹೂದ್ಯರೇ, ಅಪರಾಧವಾಗಲಿ ದುಷ್ಕೃತ್ಯವಾಗಲಿ ನಡೆದಿದ್ದರೆ ನಾನು ನಿಮ್ಮ ದೂರು ಕೇಳುತ್ತಿದ್ದೆನು.


“ನಿಮ್ಮ ನ್ಯಾಯಸ್ಥಾನದಲ್ಲಿ ನ್ಯಾಯತೀರಿಸಲಾಗದ ಕಷ್ಟದ ಸಮಸ್ಯೆಗಳು ಬರುವವು. ಅವು ಕೊಲೆ ಅಥವಾ ಇಬ್ಬರ ಮಧ್ಯೆ ವಿವಾದವಿರಬಹುದು; ಅಥವಾ ಜಗಳಮಾಡಿ ಗಾಯಗೊಂಡಿರುವ ಪ್ರಕರಣವಾಗಿರಬಹುದು. ನಿಮ್ಮ ಪಟ್ಟಣಗಳ ನ್ಯಾಯಸ್ಥಾನದಲ್ಲಿ ಈ ಪ್ರಕರಣಗಳ ವಿಚಾರಣೆ ನಡಿಸುವಾಗ ಸರಿಯಾದ ಇತ್ಯರ್ಥಮಾಡಿ ತೀರ್ಪುಮಾಡಲು ಕಷ್ಟವಾದಲ್ಲಿ ನೀವು ದೇವರು ಆರಿಸುವ ಸ್ಥಳಕ್ಕೆ ಹೋಗಬೇಕು.


ಆದರೆ ಮಂತ್ರವಾದಿಯಾದ ಎಲಿಮನು ಬಾರ್ನಬ ಮತ್ತು ಸೌಲರಿಗೆ ವಿರೋಧವಾಗಿದ್ದನು. (ಬಾರ್ ಯೇಸುವನ್ನು ಗ್ರೀಕ್ ಭಾಷೆಯಲ್ಲಿ ಎಲಿಮ ಎಂದು ಕರೆಯುತ್ತಿದ್ದರು.) ರಾಜ್ಯಪಾಲನು ಯೇಸುವಿನಲ್ಲಿ ನಂಬಿಕೆ ಇಡದ ಹಾಗೆ ಮಾಡಲು ಎಲಿಮನು ಪ್ರಯತ್ನಿಸಿದನು.


ಇದನ್ನು ಕಂಡ ರಾಜ್ಯಪಾಲನು ಪ್ರಭುವನ್ನು ನಂಬಿಕೊಂಡನು. ಪ್ರಭುವಿನ ವಿಷಯವಾದ ಉಪದೇಶವನ್ನು ಕೇಳಿ ವಿಸ್ಮಿತನಾದನು.


ಅಲ್ಲಿ ದೇಮೇತ್ರಿಯನೆಂಬ ಒಬ್ಬ ವ್ಯಕ್ತಿಯಿದ್ದನು. ಅವನು ಅಕ್ಕಸಾಲಿಗನಾಗಿದ್ದನು. ಅರ್ತೆಮಿ ದೇವತೆಯ ಗುಡಿಯಾಕಾರದಲ್ಲಿ ಬೆಳ್ಳಿಯಿಂದ ಚಿಕ್ಕಚಿಕ್ಕ ಗುಡಿಗಳನ್ನು ಅವನು ತಯಾರಿಸುತ್ತಿದ್ದನು. ಈ ಕಸುಬನ್ನು ಮಾಡುತ್ತಿದ್ದ ಜನರು ಬಹಳವಾಗಿ ಹಣ ಸಂಪಾದಿಸಿದರು.


“ನೀವು ಬೇರೆ ಏನನ್ನಾದರೂ ಕುರಿತು ಮಾತಾಡಬೇಕೆಂದಿದ್ದೀರಾ? ಮಾತಾಡಬೇಕೆಂದಿದ್ದರೆ, ಕಾನೂನುಬದ್ಧವಾದ ನಗರಸಭೆಗೆ ಬನ್ನಿರಿ. ಅಲ್ಲಿ ಅದನ್ನು ನಿರ್ಧರಿಸಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು