Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:1 - ಪರಿಶುದ್ದ ಬೈಬಲ್‌

1 ಪಂಚಾಶತ್ತಮ ಹಬ್ಬದ ದಿನ ಬಂದಾಗ ಅವರೆಲ್ಲರು ಒಂದು ಸ್ಥಳದಲ್ಲಿ ಒಟ್ಟಾಗಿ ಸೇರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪಂಚಾಶತ್ತಮ ಹಬ್ಬದ ದಿನ ಭಕ್ತವಿಶ್ವಾಸಿಗಳೆಲ್ಲರೂ ಒಂದು ಸ್ಥಳದಲ್ಲಿ ಸಭೆಸೇರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರು ಏಕಮನಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬದಂದು, ಅವರೆಲ್ಲರೂ ಒಂದೇ ಸ್ಥಳದಲ್ಲಿ ಒಂದಾಗಿ ಕೂಡಿ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪೆಂತೆಕೊಸ್ತಾಚ್ಯಾ ಸನಾದಿಸಿ ದೆವಾಚಿ ಸಗ್ಳ್ಯಿ ಲೊಕಾ ಎಕ್ ಜಾಗ್ಯಾರ್ ಗೊಳಾ ಹೊವ್ನ್ ಯೆಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:1
23 ತಿಳಿವುಗಳ ಹೋಲಿಕೆ  

ಹೀಗೆ ನೀವೆಲ್ಲರೂ ಒಂದೇ ಹೃದಯದಿಂದಲೂ ಒಂದೇ ಮನಸ್ಸಿನಿಂದಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.


ನಿಮ್ಮಲ್ಲಿ ಇವುಗಳು ಇರುವುದಾದರೆ, ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ. ಆಗ ನನ್ನ ಸಂತೋಷವು ಪರಿಪೂರ್ಣವಾಗುವುದು. ಒಬ್ಬರಿಗೊಬ್ಬರು ಒಂದೇ ಪ್ರೀತಿ ಉಳ್ಳವರಾಗಿರಿ. ಅನ್ಯೋನ್ಯಭಾವವುಳ್ಳವರಾಗಿದ್ದು ಒಂದೇ ಗುರಿಯಿಂದ ಜೀವಿಸಿರಿ.


ಅದೇನೇ ಇರಲಿ, ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ಬಾಳಿರಿ. ಆಗ ನಾನು ನಿಮ್ಮ ಬಳಿಗೆ ಬಂದರೂ ಸರಿ, ನಿಮ್ಮಿಂದ ದೂರದಲ್ಲಿದ್ದರೂ ಸರಿ, ನಿಮ್ಮ ವಿಷಯದಲ್ಲಿ ಒಳ್ಳೆಯ ಸಂಗತಿಗಳನ್ನು ಕೇಳುತ್ತೇನೆ. ನೀವು ಒಂದೇ ಉದ್ದೇಶದಿಂದ ದೃಢವಾಗಿದ್ದೀರೆಂದೂ ಸುವಾರ್ತೆಯಿಂದ ಉಂಟಾದ ನಂಬಿಕೆಗೋಸ್ಕರ ಏಕಮನಸ್ಸಿನಿಂದ ಕೆಲಸ ಮಾಡುತ್ತಿದ್ದೀರೆಂದೂ ಕೇಳುತ್ತಲೇ ಇರುತ್ತೇನೆ.


ಆದರೆ ನಾನು ಪಂಚಾಶತ್ತಮ ಹಬ್ಬದವರೆಗೆ ಎಫೆಸದಲ್ಲಿ ಇರುತ್ತೇನೆ.


ಆಗ ನಾನು ಇತರ ಜನಾಂಗಗಳವರ ಭಾಷೆಯನ್ನು ಬದಲಾಯಿಸಿ ದೇವರಾದ ಯೆಹೋವನ ನಾಮವನ್ನು ಉಚ್ಚರಿಸುವಂತೆ ಮಾಡುವೆನು. ಅವರೆಲ್ಲರೂ ನನ್ನನ್ನು ಆರಾಧಿಸುವರು. ಒಟ್ಟಾಗಿ ಸೇರಿ ಒಂದೇ ಜನಾಂಗವಾಗಿ ನನ್ನನ್ನು ಆರಾಧಿಸುವರು.


ವಿಶ್ವಾಸಿಗಳ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಸಮುದಾಯದಲ್ಲಿದ್ದ ಯಾವನಾಗಲಿ ತನ್ನಲ್ಲಿರುವವುಗಳನ್ನು ತನ್ನದೆಂದು ಹೇಳುತ್ತಿರಲಿಲ್ಲ. ಬದಲಾಗಿ, ಅವರು ಪ್ರತಿಯೊಂದನ್ನು ಹಂಚಿಕೊಳ್ಳುತ್ತಿದ್ದರು.


“ಇದಲ್ಲದೆ ನೀವು ಸುಗ್ಗಿಯ ಜಾತ್ರೆಯನ್ನು ಆಚರಿಸಬೇಕು. ನೀವು ಬಿತ್ತಿದ ಹೊಲಗಳಲ್ಲಿ ಬೆಳೆಗಳನ್ನು ಕೊಯ್ಯುವ ಕಾಲದಲ್ಲಿ ಈ ಜಾತ್ರೆಯು ಆರಂಭವಾಗುವುದು. “ಇದಲ್ಲದೆ ಫಲಸಂಗ್ರಹ ಜಾತ್ರೆಯನ್ನೂ ನೀವು ಆಚರಿಸಬೇಕು. ವರ್ಷಾಂತ್ಯದಲ್ಲಿ ನೀವು ಹೊಲತೋಟಗಳ ಬೆಳೆಗಳನ್ನೆಲ್ಲಾ ಒಟ್ಟುಗೂಡಿಸುವ ಕಾಲದಲ್ಲಿ ಇದು ಆರಂಭವಾಗುವುದು.


ಎಫೆಸದಲ್ಲಿ ತಂಗಬಾರದೆಂದು ಪೌಲನು ಆಗಲೇ ನಿರ್ಧಾರ ಮಾಡಿದ್ದನು. ಏಷ್ಯಾದಲ್ಲಿ ದೀರ್ಘಕಾಲ ತಂಗಲು ಅವನಿಗೆ ಇಷ್ಟವಿರಲಿಲ್ಲ. ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂದು ಅವನು ತನ್ನ ಪ್ರಯಾಣವನ್ನು ತ್ವರಿತಗೊಳಿಸಿದನು.


ಇದನ್ನು ಕೇಳಿದಾಗ ವಿಶ್ವಾಸಿಗಳು ಏಕಮನಸ್ಸಿನಿಂದ ದೇವರಲ್ಲಿ ಪ್ರಾರ್ಥಿಸಿದರು: ಅವರೆಲ್ಲರಲ್ಲಿ ಒಂದೇ ಮನಸ್ಸಿತ್ತು. “ಒಡೆಯನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಲೋಕದಲ್ಲಿರುವ ಪ್ರತಿಯೊಂದನ್ನೂ ನಿರ್ಮಿಸಿದಾತನು ನೀನೇ.


ಒಂದೇ ಜನಾಂಗವಾಗುವ ಬಯಕೆಯನ್ನು ನಾನು ಅವರಲ್ಲಿ ಉಂಟುಮಾಡುವೆನು. ಅವರು ತಮ್ಮ ಜೀವಮಾನವೆಲ್ಲಾ ನನ್ನನ್ನು ಆರಾಧಿಸಬೇಕೆಂಬ ಬಯಕೆಯನ್ನು ಹೊಂದಿರುವರು. ಹೌದು, ಅವರ ಬಯಕೆಯೂ ಅವರ ಮಕ್ಕಳ ಬಯಕೆಯೂ ಇದೇ ಆಗಿರುವುದು.


“ವಾರಗಳ ಹಬ್ಬವನ್ನು ಆಚರಿಸಿರಿ. ಈ ಹಬ್ಬಕ್ಕಾಗಿ ಗೋಧಿಬೆಳೆಯ ಪ್ರಥಮ ಕಾಳನ್ನು ಉಪಯೋಗಿಸಿರಿ ಮತ್ತು ವರ್ಷಾಂತ್ಯದಲ್ಲಿ ಸುಗ್ಗಿಹಬ್ಬವನ್ನು ಆಚರಿಸಿರಿ.


ಅಪೊಸ್ತಲರು ಅನೇಕ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿದರು. ಜನರೆಲ್ಲರೂ ಆ ಕಾರ್ಯಗಳನ್ನು ನೋಡಿದರು. ಅಪೊಸ್ತಲರು ಒಟ್ಟಾಗಿ ಸೊಲೊಮೋನನ ಮಂಟಪದಲ್ಲಿರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು.


ಇದಲ್ಲದೆ, ದೇವರ ಶಕ್ತಿಯು ಯೆಹೂದದ ಜನರನ್ನು ಒಂದಾಗಿ ಮಾಡಿತು. ಆದ್ದರಿಂದ ಅವರು ಅರಸನಿಗೆ ಮತ್ತು ಅಧಿಕಾರಿಗಳಿಗೆ ವಿಧೇಯರಾದರು. ಹೀಗೆ ಜನರು ಯೆಹೋವನ ಕಟ್ಟಳೆಗಳಿಗೆ ವಿಧೇಯರಾದರು.


ಆಹಾ, ಸಹೋದರರು ಅನ್ಯೋನ್ಯತೆಯಿಂದಿರುವುದು ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು.


ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು.


ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು.


ಯೋಹಾನನು ಜನರಿಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನವಾಗುವುದು” ಎಂದು ಆತನು ಹೇಳಿದನು.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲಹೊಂದಿ ಜೆರುಸಲೇಮಿನಲ್ಲಿಯೂ ಇಡೀ ಜುದೇಯದಲ್ಲಿಯೂ ಸಮಾರ್ಯದಲ್ಲಿಯೂ ಮತ್ತು ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಎಂದನು.


ಹೀಗೆ ವಿಶ್ವಾಸಿಗಳು ಪ್ರಾರ್ಥಿಸುತ್ತಿದ್ದಾಗ, ಅವರು ಸಭೆ ಸೇರಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ದೇವರ ವಾಕ್ಯವನ್ನು ಭಯವಿಲ್ಲದೆ ಪ್ರಕಟಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು