Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:11 - ಪರಿಶುದ್ದ ಬೈಬಲ್‌

11 ಕ್ರೇಟ್‌ನವರು ಮತ್ತು ಅರೇಬಿಯವರು ಇದ್ದಾರೆ. ನಮ್ಮಲ್ಲಿರುವ ಕೆಲವು ಜನರು ಹುಟ್ಟು ಯೆಹೂದ್ಯರು. ಉಳಿದವರು ಮತಾಂತರ ಹೊಂದಿದವರು. ನಾವು ಬೇರೆಬೇರೆ ದೇಶಗಳವರು. ಆದರೆ ಈ ಜನರು ಮಾತಾಡುತ್ತಿರುವುದು ನಮ್ಮ ಸ್ವಂತ ಭಾಷೆಗಳಲ್ಲಿ ನಮಗೆ ಕೇಳಿಸುತ್ತಿದೆ! ಅವರು ದೇವರ ಬಗ್ಗೆ ಹೇಳುತ್ತಿರುವ ಮಹಾಸಂಗತಿಗಳು ನಮಗೆಲ್ಲರಿಗೂ ಅರ್ಥವಾಗುತ್ತಿವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ” ಎಂದು ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯೆಹೂದ್ಯರೂ ಯೆಹೂದ್ಯ ಧರ್ಮಾವಲಂಬಿಗಳೂ ಆದ ಅನ್ಯರೂ, ಕ್ರೇಟ್ ಮತ್ತು ಅರೇಬಿಯದವರೂ ಇಲ್ಲಿದ್ದಾರೆ. ದೇವರ ಮಹತ್ಕಾರ್ಯಗಳನ್ನು ಕುರಿತು ಇವರು ಮಾತನಾಡುತ್ತಿರುವುದನ್ನು ನಾವೆಲ್ಲರೂ ನಮ್ಮ ನಮ್ಮ ಭಾಷೆಗಳಲ್ಲೇ ಕೇಳುತ್ತಿದ್ದೇವಲ್ಲಾ!” ಎಂದು ಅಚ್ಚರಿಯನ್ನು ವ್ಯಕ್ತಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅರಬೀದೇಶದವರೂ ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವದನ್ನು ಕೇಳುತ್ತೇವೆ ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇವರಲ್ಲದೆ, ಯೆಹೂದ್ಯರು ಮತ್ತು ಯೆಹೂದಿ ವಿಶ್ವಾಸಕ್ಕೆ ಬಂದಿದ್ದವರೂ ಇಲ್ಲಿದ್ದಾರೆ. ಅವರೊಂದಿಗೆ ಕ್ರೇತದವರು ಹಾಗೂ ಅರಬೀಯರು ನಮ್ಮ ಭಾಷೆಗಳಲ್ಲಿಯೇ ದೇವರ ಮಹತ್ಕಾರ್ಯಗಳನ್ನು ಹೇಳುತ್ತಿರುವದನ್ನು ಕೇಳುತ್ತಿದ್ದೇವಲ್ಲಾ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜುದೆವಾಂಚೆ ಅನಿ ಜುದೆವಾಂಚೊ ಧರ್ಮ್ ಚಾಲ್ವನ್ ಘೆವ್ನ್ ಜಾತಲಿ ದುಸ್ರಿ ಲೊಕಾ ಕ್ರೆತಾತ್ಲಿ ಅನಿ ಅರೆಬಿಯಾತ್ಲಿ ಜಾಲ್ಯಾರ್ಬಿ, ದೆವಾನ್ ಕರಲ್ಲ್ಯಾ ಮೊಟ್ಯಾ ಕಾಮಾಂಚ್ಯಾ ವಿಶಯಾತ್ ಅಮ್ಚ್ಯಾ ಸ್ವತಾಚ್ಯಾ ಬಾಶಾನಿ ಸಾಂಗ್ತಲೆ ಅಮಿ ಆಯ್ಕಿಸಾರ್ಕೆ ಹೊಲೆ ಮನುನ್ ಬೊಲುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:11
36 ತಿಳಿವುಗಳ ಹೋಲಿಕೆ  

ಮತ್ತೊಬ್ಬನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯನ್ನೂ ಇನ್ನೊಬ್ಬನಿಗೆ ಪ್ರವಾದಿಸುವ ಸಾಮರ್ಥ್ಯವನ್ನೂ ಇನ್ನೊಬ್ಬನಿಗೆ ಒಳ್ಳೆಯ ಮತ್ತು ಕೆಟ್ಟ ಆತ್ಮಗಳ ನಡುವೆ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವ ಸಾಮರ್ಥ್ಯವನ್ನೂ ಕೊಡುತ್ತಾನೆ; ಒಬ್ಬನಿಗೆ ಅನೇಕ ಭಾಷೆಗಳನ್ನು ಮಾತಾಡುವ ಸಾಮರ್ಥ್ಯವನ್ನೂ ಮತ್ತೊಬ್ಬನಿಗೆ ಆ ಭಾಷೆಗಳನ್ನು ಅನುವಾದಿಸುವ ಸಾಮರ್ಥ್ಯವನ್ನೂ ಕೊಡುತ್ತಾನೆ.


“ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ಪರಿಶುದ್ಧತೆಯಲ್ಲಿ ನೀನೇ ಸರ್ವೋತ್ತಮನು. ಭಯಂಕರ ಕಾರ್ಯಗಳನ್ನು ಮಾಡಿ ಪ್ರಖ್ಯಾತಿಹೊಂದಿದವನೂ ನೀನೇ. ಅದ್ಭುತಕಾರ್ಯಗಳನ್ನು ಮಾಡುವಾತನೂ ನೀನೇ.


ಇದಲ್ಲದೆ, ದೇವರು ಅದ್ಭುತಕಾರ್ಯಗಳಿಂದ, ಸೂಚಕಕಾರ್ಯಗಳಿಂದ, ನಾನಾ ವಿಧವಾದ ಮಹತ್ಕಾರ್ಯಗಳಿಂದ ಮತ್ತು ಪವಿತ್ರಾತ್ಮನ ವರಗಳನ್ನು ತನ್ನ ಇಷ್ಟಾನುಸಾರವಾಗಿ ದಯಪಾಲಿಸುವುದರ ಮೂಲಕ ಅದನ್ನು ಸ್ಥಿರಪಡಿಸಿದನು.


ಅವರ ಪ್ರವಾದಿಗಳಲ್ಲಿ ಒಬ್ಬನು, “ಕ್ರೇತದ ಜನರು ಯಾವಾಗಲೂ ಸುಳ್ಳು ಹೇಳುತ್ತಾರೆ. ಅವರು ದುಷ್ಟ ಮೃಗಗಳಾಗಿದ್ದಾರೆ; ಸೋಮಾರಿತನದಿಂದ ಕೆಲಸವನ್ನೇ ಮಾಡದೆ ಹೊಟ್ಟೆಬಾಕರಾಗಿದ್ದಾರೆ” ಎಂದು ಹೇಳಿದ್ದಾನೆ.


ಅರಬೀಯರ ಎಲ್ಲಾ ರಾಜರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಈ ರಾಜರು ಮರುಭೂಮಿಯಲ್ಲಿ ವಾಸಮಾಡುತ್ತಾರೆ.


ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆನು. ನಿನ್ನ ಅದ್ಭುತಕಾರ್ಯಗಳ ಕುರಿತು ಹಾಡುವೆನು.


ಗ್ರಹಿಸಲಶಕ್ಯವಾದ ಅದ್ಭುತಕಾರ್ಯಗಳನ್ನೂ ಅಸಂಖ್ಯಾತವಾದ ಮಹತ್ಕಾರ್ಯಗಳನ್ನೂ ಆತನು ಮಾಡುವನು.


ಇನ್ನೂ ಪೂರ್ಣವಾಗಿಲ್ಲದ ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿಯೂ ಪ್ರತಿಯೊಂದು ಪಟ್ಟಣದಲ್ಲಿ ಸಭಾಹಿರಿಯರನ್ನು ಆರಿಸುವುದಕ್ಕಾಗಿಯೂ ನಾನು ನಿನ್ನನ್ನು ಕ್ರೇತದಲ್ಲಿ ಬಿಟ್ಟು ಬಂದೆನು.


ಆ ರೇವು (ಸುರಕ್ಷಿತ ರೇವು) ಚಳಿಗಾಲದಲ್ಲಿ ಹಡಗು ನಿಲ್ಲುವುದಕ್ಕೆ ಒಳ್ಳೆಯ ಸ್ಥಳವಾಗಿರಲಿಲ್ಲ. ಆದ್ದರಿಂದ ಹಡಗು ಅಲ್ಲಿಂದ ಹೊರಡಲೇಬೇಕೆಂದು ಹೆಚ್ಚುಮಂದಿ ನಿರ್ಧರಿಸಿದರು. ನಾವು ಫೆನಿಕ್ಸ್‌ಗೆ ತಲುಪಬಹುದೆಂದು ಅವರ ನಿರೀಕ್ಷೆಯಾಗಿತ್ತು. ಚಳಿಗಾಲದಲ್ಲಿ ಹಡಗು ಅಲ್ಲಿ ತಂಗಬಹುದಾಗಿತ್ತು. ಫೆನಿಕ್ಸ್ ಕ್ರೇಟ್ ದ್ವೀಪದ ಒಂದು ಪಟ್ಟಣ. ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದ್ದ ಬಂದರನ್ನು ಅದು ಹೊಂದಿತ್ತು.


ನಾವು ಅನೇಕ ದಿನಗಳವರೆಗೆ ನಿಧಾನವಾಗಿ ನೌಕಾಯಾನ ಮಾಡಿದೆವು. ಎದುರುಗಾಳಿ ಬೀಸುತ್ತಿದ್ದುದರಿಂದ ನಾವು ಸ್ನೀಡ ಪಟ್ಟಣವನ್ನು ತಲುಪುವುದೇ ಕಷ್ಟವಾಯಿತು. ಆ ಮಾರ್ಗದಲ್ಲಿ ಇನ್ನೂ ಮುಂದೆ ಪ್ರಯಾಣ ಮಾಡಲು ನಮಗೆ ಸಾಧ್ಯವಾಗಲಿಲ್ಲ. ಆದ್ದರಿಂದ ನಾವು ಸಾಲ್ಮೊನೆಯ ಸಮೀಪದಲ್ಲಿದ್ದ ಕ್ರೇಟ್ ದ್ವೀಪದ ದಕ್ಷಿಣದ ಭಾಗದಲ್ಲಿ ನೌಕಾಯಾನ ಮಾಡಿದೆವು.


“ಯೆಹೂದವೇ, ತಲೆಯೆತ್ತಿ ಬೋಳುಗುಡ್ಡಗಳ ಕಡೆಗೆ ನೋಡು. ನೀನು ಕಾಮಕೇಳಿ ಆಡದ ಸ್ಥಳ ಯಾವುದಾದರೂ ಇದೆಯೇ? ಅರಬೀಯನಂತೆ ನೀನು ಮಾರ್ಗದ ಮಗ್ಗುಲಲ್ಲಿ ಪ್ರಿಯತಮರಿಗಾಗಿ ಎದುರುನೋಡುತ್ತಾ ಕುಳಿತಿರುವೆ. ನೀನು ಭೂಮಿಯನ್ನು ಅಪವಿತ್ರಗೊಳಿಸಿದೆ; ಹೇಗೆಂದರೆ, ನೀನು ಅನೇಕ ಕೆಟ್ಟಕೆಲಸಗಳನ್ನು ಮಾಡಿದೆ. ನನಗೆ ವಿಶ್ವಾಸದ್ರೋಹ ಮಾಡಿದೆ.


ಈ ಪಾಠವು ಸರ್ವಶಕ್ತನಾದ ಯೆಹೋವನಿಂದ ಬರುತ್ತದೆ. ಆತನು ಆಶ್ಚರ್ಯಕರವಾದ ಸಲಹೆಯನ್ನು ಕೊಡುತ್ತಾನೆ. ಆತನು ನಿಜವಾಗಿಯೂ ಜ್ಞಾನಿ.


ಯೆಹೋವನೇ, ನೀನೇ ನನ್ನ ದೇವರು. ನಿನ್ನನ್ನು ಗೌರವಿಸಿ ನಿನ್ನ ನಾಮವನ್ನು ಸ್ತುತಿಸುವೆನು. ನೀನು ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. ಬಹಳ ಕಾಲದ ಹಿಂದೆ ನೀನು ಹೇಳಿರುವ ವಿಷಯಗಳು ಸತ್ಯವೇ ಸರಿ. ನೀನು ಮುಂತಿಳಿಸಿದಂತೆಯೇ ಎಲ್ಲವೂ ಸಂಭವಿಸಿದವು.


ಆದರೆ ಬಾಬಿಲೋನ್ ಇನ್ನು ಮುಂದೆ ಸುಂದರವಾಗಿರದು. ಮುಂದಿನ ದಿವಸಗಳಲ್ಲಿ, ಜನರು ಅಲ್ಲಿ ವಾಸಿಸರು. ಅರಬ್ಬಿಯರು ತಮ್ಮ ಗುಡಾರಗಳನ್ನು ಅಲ್ಲಿ ಹಾಕುವದಿಲ್ಲ. ಕುರುಬರು ತಮ್ಮ ಮಂದೆಯನ್ನು ಮೇಯಿಸಲು ಅಲ್ಲಿಗೆ ಬರುವದಿಲ್ಲ.


ಮಹತ್ಕಾರ್ಯಗಳನ್ನು ಮಾಡಬಲ್ಲ ಆತನಿಗೆ ಸ್ತೋತ್ರಮಾಡಿರಿ. ಆತನ ಪ್ರೀತಿ ಶಾಶ್ವತವಾದದ್ದು.


ದೇವರು ಅಮೋಘವಾದ ಕಾರ್ಯಗಳನ್ನು ಮಾಡುವುದರಿಂದ ಆತನ ದಯೆಯನ್ನೂ ಕೃಪೆಯನ್ನೂ ಜ್ಞಾಪಿಸಿಕೊಳ್ಳುತ್ತೇವೆ.


ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.


ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.


ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.


ಆತನ ಮಹಿಮೆಯನ್ನು ಜನಾಂಗಗಳಿಗೆ ಪ್ರಕಟಿಸಿರಿ. ಆತನ ಅಮೋಘ ಕಾರ್ಯಗಳ ಕುರಿತು ಸಾರಿ ಹೇಳಿರಿ.


ಯೆಹೋವನೇ, ನಿನ್ನ ಮಹತ್ಕಾರ್ಯಗಳ ಕುರಿತು ಆಕಾಶಮಂಡಲವು ಸ್ತುತಿಸುತ್ತಿದೆ. ಪರಿಶುದ್ಧರ ಸಭೆಯು ಅವುಗಳ ಕುರಿತು ಹಾಡಿಕೊಂಡಾಡುವುದು.


ನಾವು ಅವುಗಳನ್ನು ಮರೆಯುವುದೇ ಇಲ್ಲ. ನಮ್ಮ ಜನರು ಕೊನೆಯ ತಲೆಮಾರಿನವರೆಗೂ ಅವುಗಳನ್ನು ಹೇಳುತ್ತಲೇ ಇರುವರು. ನಾವೆಲ್ಲರೂ ಯೆಹೋವನ ಪರಾಕ್ರಮವನ್ನೂ ಅದ್ಭುತಕಾರ್ಯಗಳನ್ನೂ ಹೇಳುತ್ತಾ ಕೊಂಡಾಡುವೆವು.


ಯೆಹೋವನೇ, ನಿನ್ನ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವೆನು. ಬಹುಕಾಲದ ಹಿಂದೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಿಸಿಕೊಳ್ಳುವೆನು.


ದೇವರೇ, ಬಾಲ್ಯದಿಂದಲೂ ನೀನೇ ನನಗೆ ಉಪದೇಶಕನಾಗಿರುವೆ. ನಿನ್ನ ಅದ್ಭುತಕಾರ್ಯಗಳ ಕುರಿತು ಇಂದಿನವರೆಗೂ ಪ್ರಚುರಪಡಿಸುತ್ತಿದ್ದೇನೆ.


ಯೆಹೋವನೇ, ನನ್ನ ದೇವರೇ, ನೀನು ಅನೇಕ ಮಹತ್ಕಾರ್ಯಗಳನ್ನು ಮಾಡಿರುವೆ! ನನ್ನ ವಿಷಯದಲ್ಲಿ ನಿನಗೆ ಅತಿಶಯವಾದ ಆಲೋಚನೆಗಳಿವೆ. ಅವುಗಳನ್ನು ವಿವರಿಸಿ ಹೇಳಲು ಸಾಧ್ಯವಿಲ್ಲ; ಅವು ಅಸಂಖ್ಯಾತವಾಗಿವೆ.


ಫಿಲಿಷ್ಟಿಯರೊಂದಿಗೂ ಗೂರ್‌ಬಾಳಿನಲ್ಲಿ ವಾಸಿಸುತ್ತಿದ್ದ ಅರಬಿಯರೊಂದಿಗೂ ಹಾಗೂ ಮೆಗೂನ್ಯರೊಡನೆಯೂ ಯುದ್ಧಮಾಡಲು ದೇವರು ಅವನಿಗೆ ಸಹಾಯ ಮಾಡಿದನು.


ಫಿಲಿಷ್ಟಿಯರಲ್ಲಿ ಕೆಲವರು ಅವನಿಗೆ ಬೆಳ್ಳಿಬಂಗಾರಗಳ ಕಾಣಿಕೆಗಳನ್ನು ತಂದುಕೊಟ್ಟರು; ಅವನೊಬ್ಬ ಬಲಿಷ್ಠನಾದ ರಾಜನೆಂದು ಅವರು ತಿಳಿದುಕೊಂಡಿದ್ದರು. ಅರಬಿಯದ ಜನರು ಯೆಹೋಷಾಫಾಟನಿಗೆ ಪಶುಗಳ ಹಿಂಡುಗಳನ್ನು ತಂದುಕೊಟ್ಟರು. ಅವುಗಳಲ್ಲಿ ಏಳು ಸಾವಿರದ ಏಳುನೂರು ಟಗರುಗಳು ಮತ್ತು ಏಳು ಸಾವಿರದ ಏಳುನೂರು ಹೋತಗಳು ಇದ್ದವು.


ಹಡಗುಗಳಿಂದ ಸಿಗುತ್ತಿದ್ದ ಬಂಗಾರವಲ್ಲದೆ ವ್ಯಾಪಾರಿಗಳಿಂದಲೂ ಅರೇಬಿಯಾದ ರಾಜರಿಂದಲೂ ರಾಜ್ಯಪಾಲರುಗಳಿಂದಲೂ ಬಂಗಾರವನ್ನು ಅವನು ಪಡೆಯುತ್ತಿದ್ದನು.


ಆದ್ದರಿಂದ ಹಾಗರಳು ಅರೇಬಿಯಾದಲ್ಲಿರುವ ಸೀನಾಯಿ ಪರ್ವತದಂತಿದ್ದಾಳೆ. ಯೆಹೂದ್ಯರ ನಗರವಾದ ಜೆರುಸಲೇಮಿಗೆ ಆಕೆಯು ಅನುರೂಪವಾಗಿದ್ದಾಳೆ. ಈ ನಗರವು ಗುಲಾಮಗಿರಿಯಲ್ಲಿದೆ ಮತ್ತು ಅದರ ಜನರೆಲ್ಲರೂ ಧರ್ಮಶಾಸ್ತ್ರಕ್ಕೆ ಗುಲಾಮರಾಗಿದ್ದಾರೆ.


ಅಪೊಸ್ತಲರನ್ನು ನೋಡುವುದಕ್ಕಾಗಿ ಜೆರುಸಲೇಮಿಗೂ ಹೋಗಲಿಲ್ಲ. ಅವರು ನನಗಿಂತ ಮೊದಲೇ ಅಪೊಸ್ತಲರಾಗಿದ್ದರು. ಆದರೆ, ನಾನು ತಡಮಾಡದೆ ಅರೇಬಿಯಾಕ್ಕೆ ಹೋದೆನು. ಆ ಬಳಿಕ ದಮಸ್ಕ ಪಟ್ಟಣಕ್ಕೆ ಹಿಂತಿರುಗಿದೆನು.


ಅರೇಬಿಯದ ಬಗ್ಗೆ ದುಃಖಕರವಾದ ಸಂದೇಶ: ದೇದಾನಿನಿಂದ ಬಂದ ಪ್ರಯಾಣಿಕರು ಅರೇಬಿಯ ಮರುಭೂಮಿಯಲ್ಲಿನ ಪೊದೆಗಳಲ್ಲಿ ರಾತ್ರಿ ತಂಗಿದರು.


ದೇವರು ಸಭೆಯಲ್ಲಿ ಅಪೊಸ್ತಲರಿಗೆ ಮೊದಲನೆಯ ಸ್ಥಾನವನ್ನೂ ಪ್ರವಾದಿಗಳಿಗೆ ಎರಡನೆಯ ಸ್ಥಾನವನ್ನೂ ಉಪದೇಶಕರಿಗೆ ಮೂರನೆಯ ಸ್ಥಾನವನ್ನೂ ಇಟ್ಟಿದ್ದಾನೆ. ಇದಲ್ಲದೆ ದೇವರು, ಅದ್ಭುತಕಾರ್ಯಗಳನ್ನು ಮಾಡುವ ಜನರಿಗೂ ಸ್ಪಸ್ಥಪಡಿಸುವ ಜನರಿಗೂ ಇತರರಿಗೆ ಸಹಾಯಮಾಡುವ ಜನರಿಗೂ ಮುನ್ನಡೆಸಬಲ್ಲ ಜನರಿಗೂ ವಿವಿಧ ಭಾಷೆಗಳನ್ನು ಮಾತಾಡಬಲ್ಲ ಜನರಿಗೂ ಸಭೆಯಲ್ಲಿ ಸ್ಥಾನವನ್ನು ಕೊಟ್ಟಿದ್ದಾನೆ.


ಫ್ರಿಜಿಯದವರು, ಪಾಂಫಿಲಿಯದವರು, ಈಜಿಪ್ಟ್‌ನವರು ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರು, ರೋಮ್‌ನವರು,


ಜನರೆಲ್ಲರೂ ವಿಸ್ಮಯಗೊಂಡರು ಮತ್ತು ಗಲಿಬಿಲಿಯಾದರು. ಅವರು, “ಏನು ನಡೆಯುತ್ತಿದೆ?” ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು.


ಬಳಿಕ ಒಳ್ಳೆಯ ಗಾಳಿಯು ದಕ್ಷಿಣದ ಕಡೆಯಿಂದ ಬೀಸತೊಡಗಿತು. ಹಡಗಿನಲ್ಲಿದ್ದ ಜನರು, “ನಮಗೆ ಬೇಕಾಗಿದ್ದು ಈ ಗಾಳಿಯೇ, ಈಗ ಅದು ನಮಗೆ ದೊರಕಿತು!” ಎಂದು ಭಾವಿಸಿಕೊಂಡರು. ಆದ್ದರಿಂದ ಅವರು ಹಡಗಿನ ಲಂಗರನ್ನು ಮೇಲಕ್ಕೆ ಎಳೆದರು. ನಾವು ಕ್ರೇಟ್ ದ್ವೀಪದ ಕರಾವಳಿಯಲ್ಲೇ ನೌಕಾಯಾನ ಮಾಡಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು