Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:17 - ಪರಿಶುದ್ದ ಬೈಬಲ್‌

17 ‘ದೇವರು ಹೀಗೆನ್ನುತ್ತಾನೆ: ಕೊನೆಯ ದಿನಗಳಲ್ಲಿ, ನಾನು ನನ್ನ ಆತ್ಮವನ್ನು ಎಲ್ಲಾ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಮಕ್ಕಳು, ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಯುವಜನರು ದರ್ಶನಗಳನ್ನು ಕಾಣುವರು. ನಿಮ್ಮ ವಯೋವೃದ್ಧರು ವಿಶೇಷ ಕನಸುಗಳನ್ನು ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸುರಿಸುವೆನು ಸರ್ವರ ಮೇಲೂ ಎನ್ನಾತ್ಮವನು ಅಂತಿಮ ದಿನಗಳಲಿ; ಪ್ರವಾದಿಸುವರಾಗ ನಿಮ್ಮ ಕುವರ ಕುವರಿಯರು; ದಿವ್ಯದರ್ಶನ ಪಡೆವರು ನಿಮ್ಮ ಯುವಜನರು; ಕನಸುಕಾಣುವರು ನಿಮ್ಮ ವಯೋವೃದ್ಧರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ದೇವರು ಹೇಳುವುದೇನೆಂದರೆ: ‘ಅಂತ್ಯ ದಿನಗಳಲ್ಲಿ ನನ್ನ ಆತ್ಮವನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು, ನಿಮ್ಮ ಯುವಜನರಿಗೆ ದರ್ಶನಗಳು ಕಾಣುವವು, ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಆಕ್ರಿಚ್ಯಾ ದಿಸಾತ್ನಿ ಅಪ್ನಿ ಕರ್‍ತಲೆ ಕಾಯ್ ಮನುನ್ ದೆವ್ ಸಾಂಗ್ತಾ! ಮಿಯಾ ಮಾಜೊ ಆತ್ಮೊ ಸಗ್ಳ್ಯಾ ಲೊಕಾಂಚ್ಯಾ ವರ್‍ತಿ ಘಾಲ್ತಾ, ತುಮ್ಚಿ ಲೆಕಾ ಅನಿ ಲೆಕಿಯಾ ಪ್ರವಾದ್ ಕರ್ತಾತ್, ತುಮ್ಚಿ ದಾಂಡ್ಗಿ ಲೊಕಾ ದರ್ಶನ್ ಬಗ್ತ್ಯಾತ್, ಅನಿ ತುಮ್ಚಿ ಮ್ಹಾತಾರಿ ಮಾನ್ಸಾ ಸಪ್ನಾ ಬಗ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:17
38 ತಿಳಿವುಗಳ ಹೋಲಿಕೆ  

“ಬಾಯಾರಿದ ಜನರಿ ಗೆ ನಾನು ನೀರು ಹೊಯ್ಯುವೆನು. ಬಂಜ ರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು.


ಪೇತ್ರನೊಂದಿಗೆ ಬಂದಿದ್ದ ಯೆಹೂದ್ಯ ವಿಶ್ವಾಸಿಗಳು ವಿಸ್ಮಿತರಾದರು. ಯೆಹೂದ್ಯರಲ್ಲದ ಜನರಿಗೂ ಸಹ ಪವಿತ್ರಾತ್ಮಧಾರೆಯಾದದ್ದನ್ನು ಕಂಡು ಅವರು ಆಶ್ಚರ್ಯಪಟ್ಟರು.


ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮನನ್ನು ಕುರಿತು ಹೇಳಿದನು. ಆತನು ಇನ್ನೂ ತನ್ನ ಮಹಿಮೆಯನ್ನು ಹೊಂದಿಲ್ಲದಿದ್ದ ಕಾರಣ ಪವಿತ್ರಾತ್ಮನು ಇನ್ನೂ ಬಂದಿರಲಿಲ್ಲ.


ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.


ಅವರನ್ನು ಹಿಂದಕ್ಕೆ ಬರಮಾಡಿ ಒಗ್ಗಟ್ಟಿನಲ್ಲಿರುವಂತೆ ಮಾಡುವೆನು. ಅವರಲ್ಲಿ ಹೊಸ ಆತ್ಮವನ್ನು ಇರಿಸುವೆನು. ಅವರಲ್ಲಿರುವ ಕಲ್ಲಿನ ಹೃದಯವನ್ನು ತೆಗೆದು ಮೃದುವಾದ ಹೃದಯವನ್ನಿಡುವೆನು.


ಈಗ, ಕೊನೆಯ ದಿನಗಳಲ್ಲಿ ದೇವರು ಮತ್ತೆ ನಮ್ಮ ಜೊತೆಯಲ್ಲಿ ತನ್ನ ಮಗನ ಮೂಲಕ ಮಾತನಾಡಿದನು. ದೇವರು ತನ್ನ ಮಗನ ಮೂಲಕ ಲೋಕವನ್ನೆಲ್ಲ ಸೃಷ್ಟಿಸಿ, ಸಮಸ್ತಕ್ಕೂ ಆತನನ್ನೇ ಬಾಧ್ಯಸ್ತನನ್ನಾಗಿ ಮಾಡಿದನು.


ದೇವರು ಸಭೆಯಲ್ಲಿ ಅಪೊಸ್ತಲರಿಗೆ ಮೊದಲನೆಯ ಸ್ಥಾನವನ್ನೂ ಪ್ರವಾದಿಗಳಿಗೆ ಎರಡನೆಯ ಸ್ಥಾನವನ್ನೂ ಉಪದೇಶಕರಿಗೆ ಮೂರನೆಯ ಸ್ಥಾನವನ್ನೂ ಇಟ್ಟಿದ್ದಾನೆ. ಇದಲ್ಲದೆ ದೇವರು, ಅದ್ಭುತಕಾರ್ಯಗಳನ್ನು ಮಾಡುವ ಜನರಿಗೂ ಸ್ಪಸ್ಥಪಡಿಸುವ ಜನರಿಗೂ ಇತರರಿಗೆ ಸಹಾಯಮಾಡುವ ಜನರಿಗೂ ಮುನ್ನಡೆಸಬಲ್ಲ ಜನರಿಗೂ ವಿವಿಧ ಭಾಷೆಗಳನ್ನು ಮಾತಾಡಬಲ್ಲ ಜನರಿಗೂ ಸಭೆಯಲ್ಲಿ ಸ್ಥಾನವನ್ನು ಕೊಟ್ಟಿದ್ದಾನೆ.


ಪ್ರತಿಯೊಬ್ಬನೂ ದೇವರ ರಕ್ಷಣೆಯನ್ನು ಕಾಣುವನು!’ ಎಂಬುದಾಗಿ ಅಡವಿಯಲ್ಲಿ ಒಬ್ಬನು ಕೂಗುತ್ತಿದ್ದಾನೆ.”


ಮದುವೆಯಾಗಿಲ್ಲದ ನಾಲ್ಕುಮಂದಿ ಹೆಣ್ಣುಮಕ್ಕಳು ಅವನಿಗಿದ್ದರು. ಅವರೆಲ್ಲರಿಗೂ ಪ್ರವಾದಿಸುವ ವರವಿತ್ತು.


ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆಯತನವನ್ನೂ ಗೌರವಿಸಲು ಬರುವರು.


ಅಂತಿಮ ದಿನಗಳಲ್ಲಿ ಏನು ಸಂಭವಿಸುತ್ತದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ಜನರು ನಿಮ್ಮನ್ನು ನೋಡಿ ಕುಚೋದ್ಯ ಮಾಡುವರು. ಅವರು ತಮ್ಮ ಇಚ್ಛೆಗನುಸಾರವಾದ ಕೆಟ್ಟಕಾರ್ಯಗಳನ್ನೇ ಮಾಡುತ್ತಾ ಜೀವಿಸುತ್ತಾರೆ.


ಮತ್ತೊಬ್ಬನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯನ್ನೂ ಇನ್ನೊಬ್ಬನಿಗೆ ಪ್ರವಾದಿಸುವ ಸಾಮರ್ಥ್ಯವನ್ನೂ ಇನ್ನೊಬ್ಬನಿಗೆ ಒಳ್ಳೆಯ ಮತ್ತು ಕೆಟ್ಟ ಆತ್ಮಗಳ ನಡುವೆ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವ ಸಾಮರ್ಥ್ಯವನ್ನೂ ಕೊಡುತ್ತಾನೆ; ಒಬ್ಬನಿಗೆ ಅನೇಕ ಭಾಷೆಗಳನ್ನು ಮಾತಾಡುವ ಸಾಮರ್ಥ್ಯವನ್ನೂ ಮತ್ತೊಬ್ಬನಿಗೆ ಆ ಭಾಷೆಗಳನ್ನು ಅನುವಾದಿಸುವ ಸಾಮರ್ಥ್ಯವನ್ನೂ ಕೊಡುತ್ತಾನೆ.


ನಮ್ಮ ಈ ನಿರೀಕ್ಷೆಯು ನಮ್ಮನ್ನು ಎಂದಿಗೂ ನಿರಾಶರನ್ನಾಗಿ ಮಾಡುವುದಿಲ್ಲ. ಅದು ಎಂದಿಗೂ ವ್ಯರ್ಥವಾಗುವುದಿಲ್ಲ. ಏಕೆಂದರೆ ದೇವರು ನಮಗೆ ಉಡುಗೊರೆಯಾಗಿ ಕೊಟ್ಟಿರುವ ಪವಿತ್ರಾತ್ಮನ ಮೂಲಕ ತನ್ನ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾನೆ.


ನಾನು ಇಸ್ರೇಲ್ ಜನಾಂಗದವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ಅನಂತರ ನಾನು ಎಂದಿಗೂ ಅವರಿಗೆ ವಿಮುಖನಾಗಿರುವದಿಲ್ಲ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಪ್ರತಿಯೊಂದು ಆರಾಧನಾ ದಿನದಲ್ಲಿ ಪ್ರತಿಯೊಬ್ಬರೂ ಬಂದು ನನ್ನನ್ನು ಆರಾಧಿಸುವರು. ಪ್ರತಿಯೊಂದು ಸಬ್ಬತ್ ದಿನದಲ್ಲೂ ತಿಂಗಳ ಮೊದಲ ದಿನದಲ್ಲೂ ಅವರು ನನ್ನ ಬಳಿಗೆ ಬರುವರು.”


ಎಲ್ಲರೂ ಮೌನವಾಗಿರಿ. ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಹೊರಬರುತ್ತಿದ್ದಾನೆ.


ಕೊನೆಯ ದಿನಗಳಲ್ಲಿ ಯೆಹೋವನಾಲಯದ ಪರ್ವತವು ಎಲ್ಲಾ ಬೆಟ್ಟಗಳಿಗಿಂತಲೂ ಮಹೋನ್ನತವಾದ ಪರ್ವತವಾಗಿರುವುದು.


ನೀವು ನನ್ನ ಗದರಿಕೆಗೆ ಕಿವಿಗೊಟ್ಟರೆ, ನನ್ನ ಮನಸ್ಸಿನಲ್ಲಿರುವುದನ್ನೆಲ್ಲ ತಿಳಿಸುವೆನು; ನನ್ನ ಆಲೋಚನೆಗಳನ್ನು ನಿಮಗೆ ಗೊತ್ತುಪಡಿಸುವೆನು.


ಹುಲ್ಲುಗಾವಲಿನ ಮೇಲೆ ಸುರಿಯುವ ಮಳೆಯಂತೆಯೂ ಭೂಮಿಯನ್ನು ಹದಗೊಳಿಸುವ ಹಿತವಾದ ಮಳೆಯಂತೆಯೂ ನೀನು ಅವನಿಗೆ ಸಹಾಯಕನಾಗಿರು.


ನೀನು ಮಗನಿಗೆ ಯಾರ್ಯಾರನ್ನು ಕೊಟ್ಟೆಯೋ ಅವರೆಲ್ಲರಿಗೂ ಮಗನು ನಿತ್ಯಜೀವವನ್ನು ಕೊಡಬೇಕೆಂದು ನೀನು ಮಗನಿಗೆ ಅಧಿಕಾರವನ್ನು ಕೊಟ್ಟಿರುವೆ.


ಅಂತ್ಯದ ದಿವಸಗಳಲ್ಲಿ ಯೆಹೋವನ ಆಲಯದ ಪರ್ವತವು ಎಲ್ಲಾ ಪರ್ವತಗಳಿಗಿಂತಲೂ ಅತ್ಯುನ್ನತವಾಗಿರುವುದು. ಅದು ಬೆಟ್ಟಗಳಿಗಿಂತಲೂ ಉನ್ನತವಾಗಿರುವದು. ಅಲ್ಲಿಗೆ ಜನರು ಗುಂಪುಗುಂಪಾಗಿ ಹೋಗುವರು.


ಆಗ ಯೆಹೋವನ ಮಹಿಮೆಯು ಪ್ರದರ್ಶಿಸಲ್ಪಡುವದು. ಆಗ ಎಲ್ಲರೂ ಯೆಹೋವನ ಮಹಿಮೆಯನ್ನು ನೋಡುವರು. ಯೆಹೋವನೇ ಇವುಗಳನ್ನು ಸ್ವತಃ ನುಡಿದಿದ್ದಾನೆ.”


ಬಳಿಕ ಯಾಕೋಬನು ತನ್ನ ಗಂಡುಮಕ್ಕಳನ್ನು ತನ್ನ ಬಳಿಗೆ ಕರೆಯಿಸಿ, “ನನ್ನ ಎಲ್ಲಾ ಗಂಡುಮಕ್ಕಳೇ, ನನ್ನ ಬಳಿಗೆ ಬನ್ನಿರಿ. ನಿಮಗೆ ಮುಂದೆ ಏನು ಸಂಭವಿಸುವುದೆಂದು ತಿಳಿಸುತ್ತೇನೆ.


ನಿನ್ನನ್ನು ಹಿಂಸಿಸುವವರು ತಮ್ಮ ದೇಹದ ಮಾಂಸವನ್ನೇ ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವಂತೆ ತಮ್ಮ ಸ್ವಂತ ರಕ್ತವನ್ನೇ ಕುಡಿಸಿ ಅಮಲೇರಿಸುವೆನು; ಆಗ ಯೆಹೋವನೇ ನಿನ್ನನ್ನು ರಕ್ಷಿಸಿದನೆಂದು ಜನರೆಲ್ಲರೂ ತಿಳಿದುಕೊಳ್ಳುವರು. ಯಾಕೋಬ್ಯರ ಸರ್ವಶಕ್ತನಾದ ದೇವರು ನಿಮ್ಮನ್ನು ರಕ್ಷಿಸಿದನೆಂದು ಎಲ್ಲರೂ ತಿಳಿಯುವರು.”


ನಿಮ್ಮ ಬೆಳ್ಳಿಬಂಗಾರಗಳು ತುಕ್ಕು ಹಿಡಿಯುತ್ತವೆ. ನೀವು ತಪ್ಪಿತಸ್ಥರೆಂಬುದಕ್ಕೆ ಅದೇ ಸಾಕ್ಷಿಯಾಗಿದೆ. ಅವುಗಳ ತುಕ್ಕು ನಿಮ್ಮ ದೇಹವನ್ನು ಬೆಂಕಿಯಂತೆ ತಿಂದುಬಿಡುತ್ತವೆ. ನೀವು ಈ ಕೊನೆಯ ದಿನಗಳಲ್ಲಿ ನಿಮ್ಮ ಭಂಡಾರವನ್ನು ತುಂಬಿಸಿಕೊಂಡಿದ್ದೀರಿ.


ದಾನಿಯೇಲನೇ, ಭವಿಷ್ಯದಲ್ಲಿ ನಿನ್ನ ಜನರಿಗೆ ಏನಾಗುವದೆಂಬುದನ್ನು ನಿನಗೆ ವಿವರಿಸಲು ನಾನು ಈಗ ಇಲ್ಲಿಗೆ ಬಂದೆನು. ಈ ಕನಸು ಭವಿಷ್ಯದ ಒಂದು ಕಾಲದ ಕುರಿತಾಗಿದೆ” ಎಂದು ಹೇಳಿದನು.


ಪ್ರಾರ್ಥನೆಯನ್ನು ಕೇಳುವಾತನೇ, ಜನರೆಲ್ಲರೂ ನಿನ್ನ ಬಳಿಗೆ ಬರುವರು.


ಈ ಪ್ರವಾದಿಗಳಲ್ಲಿ “ಅಗಬ” ಎಂಬ ಒಬ್ಬನಿದ್ದನು. ಅಗಬನು ಅಂತಿಯೋಕ್ಯದಲ್ಲಿ ಪವಿತ್ರಾತ್ಮನ ಪ್ರೇರಣೆಯಿಂದ, “ಇಡೀ ಪ್ರಪಂಚಕ್ಕೆ ಭೀಕರ ಕ್ಷಾಮ ಬರಲಿದೆ” ಎಂದು ಹೇಳಿದನು. (ಈ ಬರಗಾಲವು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ ಬಂದಿತು.)


ಆದರೆ ಈ ಹೊತ್ತು ಇಲ್ಲಿ ನಡೆಯುತ್ತಿರುವ ಸಂಗತಿಗಳ ಬಗ್ಗೆ ಪ್ರವಾದಿಯಾದ ಯೋವೇಲನು ಹೀಗೆ ಬರೆದಿದ್ದಾನೆ:


ಆ ಸಮಯದಲ್ಲಿ ನಾನು ನನ್ನ ಆತ್ಮವನ್ನು ನನ್ನ ದಾಸದಾಸಿಯರ ಮೇಲೆ ಸುರಿಸುವೆನು. ಆಗ ಅವರು ಪ್ರವಾದಿಸುವರು.


ಯೇಸು ಪರಲೋಕಕ್ಕೆ ಎತ್ತಲ್ಪಟ್ಟನು. ಈಗ ಯೇಸು ದೇವರೊಂದಿಗಿದ್ದಾನೆ, ದೇವರ ಬಲಗಡೆಯಲ್ಲಿದ್ದಾನೆ. ಈಗ ತಂದೆಯು (ದೇವರು) ಪವಿತ್ರಾತ್ಮನನ್ನು ಯೇಸುವಿಗೆ ಕೊಟ್ಟಿದ್ದಾನೆ. ಪವಿತ್ರಾತ್ಮನನ್ನು ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದನು. ಆದ್ದರಿಂದ ಯೇಸು ಈಗ ಆ ಆತ್ಮನನ್ನು ಸುರಿಸಿದ್ದಾನೆ. ನೀವು ನೋಡುತ್ತಿರುವುದು ಮತ್ತು ಕೇಳುತ್ತಿರುವುದು ಇದನ್ನೇ.


ಆ ಕಾಲದಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು