Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:24 - ಪರಿಶುದ್ದ ಬೈಬಲ್‌

24 ಯೇಸು ಮರಣವೇದನೆಯನ್ನು ಅನುಭವಿಸಿದನು. ಆದರೆ ದೇವರು ಆತನನ್ನು ಬಿಡಿಸಿದನು. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಮರಣವು ಯೇಸುವನ್ನು ಹಿಡಿದುಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆತನನ್ನು ದೇವರು ಮರಣವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಯಾಕಂದರೆ ಮರಣವು ಆತನನ್ನು ಹಿಡುಕೊಂಡಿರುವದು ಅಸಾಧ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ದೇವರು ಯೇಸುವನ್ನು ಮರಣ ವೇದನೆಯಿಂದ ಬಿಡಿಸಿ ಜೀವಂತವಾಗಿ ಎಬ್ಬಿಸಿದರು. ಏಕೆಂದರೆ ಯೇಸುವನ್ನು ಹಿಡಿದಿಟ್ಟುಕೊಂಡಿರಲು ಮರಣಕ್ಕೆ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜೆಜುನ್ ಮರ್ನಾಚೊ ತರಾಸ್ ಸೊಸ್ಲ್ಯಾನ್, ಖರೆ ದೆವಾನ್ ತೆಕಾ ಮರ್‍ನಾತ್ನಾ ಉಟ್ವುಲ್ಯಾನ್, ತಸೆ ಹೊವ್ನ್ ಮರ್ನಾಚ್ಯಾನ್ ಜೆಜುಕ್ ಧರುನ್ ಘೆವ್ಕ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:24
45 ತಿಳಿವುಗಳ ಹೋಲಿಕೆ  

ದೇವರು ತನ್ನ ಶಕ್ತಿಯಿಂದ ಪ್ರಭು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ದೇವರು ನಮ್ಮನ್ನು ಸಹ ಜೀವಂತವಾಗಿ ಎಬ್ಬಿಸುವನು.


ನೀವು ಕ್ರಿಸ್ತನ ಮೂಲಕ ದೇವರನ್ನು ನಂಬಿದ್ದೀರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ನಂತರ ದೇವರು ಆತನಿಗೆ ಪ್ರಭಾವವನ್ನು ದಯಪಾಲಿಸಿದನು. ಆದ್ದರಿಂದ ನಿಮ್ಮ ನಂಬಿಕೆ ಮತ್ತು ನಿರೀಕ್ಷೆಗಳು ದೇವರಲ್ಲಿರಲಿ.


ನೀವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಕ್ರಿಸ್ತನೊಂದಿಗೆ ಹೂಳಲ್ಪಟ್ಟಿರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸುವುದರ ಮೂಲಕ ತೋರಿದ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಆ ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಮೇಲಕ್ಕೆ ಎದ್ದುಬಂದಿರಿ.


ಆದ್ದರಿಂದ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದು ಯೇಸುವನ್ನೇ ಹೊರತು ದಾವೀದನನ್ನಲ್ಲ! ಇದಕ್ಕೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ನಾವು ಆತನನ್ನು ಕಂಡೆವು!


ದೇವರು ಕ್ರಿಸ್ತನನ್ನು ಪರಲೋಕದೊಳಗೆ ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು.


ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನೇ ಅದನ್ನು ಇಚ್ಛಾಪೂರ್ವಕವಾಗಿ ಕೊಡುತ್ತೇನೆ. ನನ್ನ ಪ್ರಾಣವನ್ನು ಕೊಡುವುದಕ್ಕೂ ಅದನ್ನು ಮತ್ತೆ ಪಡೆದುಕೊಳ್ಳುವುದಕ್ಕೂ ನನಗೆ ಹಕ್ಕಿದೆ. ಹೀಗೆ ಮಾಡಬೇಕೆಂದು ತಂದೆಯೇ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.


ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರು ನಮ್ಮನ್ನು ಸಹ ಕ್ರಿಸ್ತನೊಂದಿಗೆ ಎಬ್ಬಿಸುತ್ತಾನೆ ಎಂಬುದು ನಮಗೆ ಗೊತ್ತಿದೆ. ದೇವರು ನಮ್ಮನ್ನು ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನು.


ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಸತ್ತುಹೋಗುವ ನಿಮ್ಮ ದೇಹಗಳಿಗೆ ಆತನು ಜೀವವನ್ನು ಸಹ ಕೊಡುತ್ತಾನೆ. ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನು ದೇವರೇ. ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ಆತನು ನಿಮ್ಮ ದೇಹಗಳಿಗೆ ಜೀವವನ್ನು ಕೊಡುತ್ತಾನೆ.


ಹೀಗಿರಲಾಗಿ, ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ, ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು ಮತ್ತು ನಾವು ಆತನ ಮರಣದಲ್ಲಿ ಪಾಲುಗಾರರಾದೆವು. ನಾವು ಜೀವಂತವಾಗಿ ಎದ್ದು ಹೊಸ ಜೀವಿತವನ್ನು ನಡೆಸಬೇಕೆಂದು ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು. ಕ್ರಿಸ್ತನು ತಂದೆಯ ಅದ್ಭುತವಾದ ಶಕ್ತಿಯ ಮೂಲಕ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಂತೆಯೇ ನಾವು ಜೀವಂತವಾಗಿ ಎದ್ದುಬಂದೆವು.


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


ದೇವಕುಮಾರನು ಪರಲೋಕದಿಂದ ಬರುವುದನ್ನು ಎದುರುನೋಡುವುದಕ್ಕಾಗಿ ನೀವು ಹಾಗೆ ಮಾಡಿದಿರಿ. ದೇವರೇ ಆ ಕುಮಾರನನ್ನು ಸತ್ತವರೊಳಗಿಂದ ಜೀವಂತವಾಗಿ ಮೇಲಕ್ಕೆಬ್ಬಿಸಿದನು. ಆತನೇ ಯೇಸು. ಮುಂದೆ ಬರುವ ದೇವರ ಕೋಪದ ತೀರ್ಪಿನಿಂದ ನಮ್ಮನ್ನು ರಕ್ಷಿಸುವವನು ಆತನೇ.


“ಯೇಸುವೇ ಪ್ರಭು”ವೆಂದು ನಿನ್ನ ಬಾಯಿಯ ಮೂಲಕ ಹೇಳುವುದಾದರೆ ಮತ್ತು ಯೇಸುವನ್ನು ಸತ್ತವರೊಳಗಿಂದ ಜೀವಂತನಾಗಿ ಎಬ್ಬಿಸಿದವನು ದೇವರೇ ಎಂದು ನಿನ್ನ ಹೃದಯದಲ್ಲಿ ನಂಬುವುದಾದರೆ, ನೀನು ರಕ್ಷಣೆ ಹೊಂದುವೆ.


ನಮಗಾಗಿಯೂ ಬರೆಯಲ್ಪಟ್ಟಿವೆ. ನಾವು ನಂಬುವುದರಿಂದ ದೇವರು ನಮ್ಮನ್ನು ಸಹ ಸ್ವೀಕರಿಸಿಕೊಳ್ಳುವನು. ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನಲ್ಲಿ (ದೇವರಲ್ಲಿ) ನಾವು ನಂಬಿಕೆ ಇಡುತ್ತೇವೆ.


ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”


ಆದರೆ ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು!


ಹೀಗೆ ನೀವು ಜೀವದಾಯಕನನ್ನೇ ಕೊಂದುಹಾಕಿದಿರಿ! ಆದರೆ ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಇದಕ್ಕೆ ನಾವೇ ಸಾಕ್ಷಿಗಳು. ಇದನ್ನು ನಾವು ಕಣ್ಣಾರೆ ಕಂಡಿದ್ದೇವೆ.


ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನನ್ನನ್ನು ಅಪೊಸ್ತಲನನ್ನಾಗಿ ಆರಿಸಿದವರು ಮನುಷ್ಯರಲ್ಲ. ನಾನು ಮನುಷ್ಯರಿಂದ ಕಳುಹಿಸಲ್ಪಟ್ಟವನಲ್ಲ. ನನ್ನನ್ನು ಅಪೊಸ್ತಲನನ್ನಾಗಿ ಮಾಡಿದವರು ಯಾರೆಂದರೆ, ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು. ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ದೇವರೇ.


ದೇವರು ತನ್ನ ವಿಶೇಷ ಸೇವಕನನ್ನು (ಯೇಸುವನ್ನು) ಮೊಟ್ಟಮೊದಲು ನಿಮ್ಮ ಬಳಿಗೆ ಕಳುಹಿಸಿದನು. ನಿಮ್ಮನ್ನು ಆಶೀರ್ವದಿಸುವುದಕ್ಕಾಗಿ ದೇವರು ಯೇಸುವನ್ನು ಕಳುಹಿಸಿದನು. ಆತನು ನಿಮ್ಮನ್ನು ನಿಮ್ಮ ಕೆಟ್ಟಕಾರ್ಯಗಳಿಂದ ದೂರಮಾಡಿ ಆಶೀರ್ವದಿಸುತ್ತಾನೆ.”


ಅಲ್ಲದೆ, ದೇವರ ಬಗ್ಗೆ ನಾವು ಸುಳ್ಳುಸಾಕ್ಷಿ ಹೇಳಿದಂತಾಗುವುದು. ಏಕೆಂದರೆ, ದೇವರು ಕ್ರಿಸ್ತನನ್ನು ಜೀವಂತವಾಗಿ ಎಬ್ಬಿಸಿದನೆಂದು ನಾವು ದೇವರ ಬಗ್ಗೆ ಬೋಧಿಸಿದೆವು. ಜನರು ಜೀವಂತವಾಗಿ ಎದ್ದುಬರದಿದ್ದರೆ, ದೇವರು ಕ್ರಿಸ್ತನನ್ನು ಜೀವಂತವಾಗಿ ಎಬ್ಬಿಸಲೇ ಇಲ್ಲ.


ಆದರೆ ದೇವರಿಂದ ಜೀವಂತವಾಗಿ ಎಬ್ಬಿಸಲ್ಪಟ್ಟ ಯೇಸುವಿನ ದೇಹ ಸಮಾಧಿಯಲ್ಲಿ ಕೊಳೆಯಲ್ಪಡಲಿಲ್ಲ.


ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ!


(ಯೇಸು ಸತ್ತು ಜೀವಂತವಾಗಿ ಎದ್ದುಬರಬೇಕೆಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದಿರುವುದು ಈ ಶಿಷ್ಯರಿಗೆ ಇನ್ನೂ ಅರ್ಥವಾಗಿರಲಿಲ್ಲ.)


ಯೆಹೋವನೇ, ನಾನು ನಿನ್ನ ಸೇವಕ. ನಿನ್ನ ದಾಸಿಯರಲ್ಲೊಬ್ಬಳ ಮಗ. ನೀನೇ ನನ್ನ ಪ್ರಥಮ ಉಪಾಧ್ಯಾಯ!


ನಾನೇ ಜೀವಿಸುವಾತನು. ನಾನು ಸತ್ತೆನು, ಆದರೆ ಇಗೋ ನೋಡು, ನಾನು ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿವೆ.


ಕ್ರಿಸ್ತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನೆಂದು ನಾವು ಬೋಧಿಸಿದ್ದೇವೆ. ಹೀಗಿರಲಾಗಿ, ಜನರಿಗೆ ಪುನರುತ್ಥಾನವಿಲ್ಲವೆಂದು ನಿಮ್ಮಲ್ಲಿ ಕೆಲವರು ಹೇಳುತ್ತಿರುವುದೇಕೆ?


ಆದಕಾರಣ, ಮತ್ತೆ ಜೀವಿಸುವುದಕ್ಕಾಗಿಯೇ ಕ್ರಿಸ್ತನು ಸತ್ತು ಸಮಾಧಿಯೊಳಗಿಂದ ಜೀವಂತನಾಗಿ ಎದ್ದುಬಂದನು. ಸತ್ತುಹೋದ ಜನರಿಗೂ ಬದುಕಿರುವ ಜನರಿಗೂ ತಾನು ಪ್ರಭುವಾಗಿರಬೇಕೆಂದು ಆತನು ಹೀಗೆ ಮಾಡಿದನು.


ದೇವಜನರು ದೋಷಿಗಳೆಂದು ಯಾರು ಹೇಳಬಲ್ಲರು? ಯಾರು ಇಲ್ಲ! ಕ್ರಿಸ್ತ ಯೇಸು ನಮಗೋಸ್ಕರ ಪ್ರಾಣಕೊಟ್ಟನು. ಅಷ್ಟೇ ಅಲ್ಲ, ಆತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಈಗ ಆತನು ದೇವರ ಬಲಗಡೆಯಲ್ಲಿದ್ದಾನೆ ಮತ್ತು ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಿದ್ದಾನೆ.


ಆದಕಾರಣವೇ ಜನರು ನಂಬಲಾಗಲಿಲ್ಲ. ಏಕೆಂದರೆ ಯೆಶಾಯನು ಮತ್ತೊಂದು ಕಡೆಯಲ್ಲಿ ಹೀಗೆ ಹೇಳಿದ್ದಾನೆ:


ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”


ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.


ಆ ಮಕ್ಕಳು ಭೌತಿಕ ಶರೀರ ಹೊಂದಿದ್ದರು. ಆದ್ದರಿಂದ ಯೇಸು ತಾನೇ ಅವರಂತಾದನು. ಆತನು ತನ್ನ ಸಾವಿನ ಮೂಲಕ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಗೊಳಿಸಿ,


“ಸ್ವಾಮೀ, ಆ ಸುಳ್ಳುಗಾರನು ಬದುಕಿದ್ದಾಗ, ‘ಮೂರು ದಿನಗಳ ಬಳಿಕ ನಾನು ಪುನರುತ್ಥಾನ ಹೊಂದುತ್ತೇನೆ’ ಎಂದು ಹೇಳಿದ್ದು ನಮಗಿನ್ನೂ ನೆನಪಿದೆ.


ಆತನನ್ನು ಬಾಧೆಯಿಂದ ಜಜ್ಜಬೇಕೆಂಬುದು ಯೆಹೋವನ ನಿರ್ಧಾರವಾಗಿತ್ತು. ಆದ್ದರಿಂದ ಈ ಸೇವಕನು ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಆದರೆ ಆತನು ತನ್ನ ಹೊಸ ಜೀವಿತದಲ್ಲಿ ಚಿರಂಜೀವಿಯಾಗುವನು. ಆತನು ತನ್ನ ಜನರನ್ನು ದೃಷ್ಟಿಸಿ ನೋಡುವನು. ಯೆಹೋವನ ಸಂಕಲ್ಪದ ಮೇರೆಗೆ ಎಲ್ಲವನ್ನೂ ಆತನು ಮಾಡುವನು.


ದೇವರ ಸಂದೇಶವನ್ನು ಹೊಂದಿದ್ದ ಜನರನ್ನು ಈ ಪವಿತ್ರ ಗ್ರಂಥವು ದೇವರುಗಳೆಂದು ಕರೆದಿದೆ. ಪವಿತ್ರ ಗ್ರಂಥವು ಯಾವಾಗಲೂ ಸತ್ಯವಾದದ್ದು.


“ಸಮಾಧಿಯಿಂದ ಅವರನ್ನು ರಕ್ಷಿಸುವೆನು; ಮರಣದಿಂದ ಅವರನ್ನು ಪಾರುಮಾಡುವೆನು. ಮರಣವೇ, ನಿನ್ನ ವ್ಯಾಧಿಗಳೆಲ್ಲಿ? ಸಮಾಧಿಯೇ, ನಿನ್ನ ಶಕ್ತಿ ಎಲ್ಲಿ? ನಾನು ಪ್ರತಿಕಾರ ಸಲ್ಲಿಸುವದಿಲ್ಲ.


“ಸಹೋದರರೇ, ಪವಿತ್ರಾತ್ಮನು ದಾವೀದನ ಮೂಲಕವಾಗಿ ಪವಿತ್ರ ಗ್ರಂಥದಲ್ಲಿ ಮುಂತಿಳಿಸಿದ್ದ ಸಂಗತಿ ನೆರವೇರಬೇಕಿತ್ತು. ನಮ್ಮ ಸ್ವಂತ ಗುಂಪಿನವರಲ್ಲಿ ಒಬ್ಬನಾದ ಯೂದನ ಬಗ್ಗೆ ದಾವೀದನು ಹೇಳಿದ್ದಾನೆ. ಯೂದನು ನಮ್ಮೊಂದಿಗೆ ಸೇವೆ ಮಾಡಿದನು. ಯೇಸುವನ್ನು ಬಂಧಿಸುವವರಿಗೆ ಯೂದನು ಮಾರ್ಗದರ್ಶಕನಾಗುತ್ತಾನೆಂದು ಪವಿತ್ರಾತ್ಮನು ತಿಳಿಸಿದ್ದನು.”


“ಆದರೆ ನಾನು ಅಶ್ಶೂರವನ್ನು ಉಪಯೋಗಿಸುತ್ತೇನೆಂದು ಅದಕ್ಕೆ ತಿಳಿಯದು. ಅಶ್ಶೂರಕ್ಕೆ ತಾನು ನನ್ನ ಕೈಯಲ್ಲಿರುವ ಒಂದು ಸಾಧನವೆಂದು ಗೊತ್ತಿರದು. ಅನೇಕಾನೇಕ ಜನಾಂಗಗಳನ್ನು ನಾಶಮಾಡಲು ಅಶ್ಶೂರವು ಬಯಸುತ್ತದೆ ಮತ್ತು ಅದಕ್ಕಾಗಿ ಯೋಜನೆಗಳನ್ನು ಮಾಡುತ್ತದೆ.


ನೀವು ಯೇಸುವನ್ನು ಕೊಂದಿರಿ. ನೀವು ಆತನನ್ನು ಶಿಲುಬೆಯ ಮೇಲೆ ನೇತುಹಾಕಿದಿರಿ. ಆದರೆ ದೇವರು, ಅಂದರೆ ನಮ್ಮ ಪಿತೃಗಳ ದೇವರೇ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು!


ಹೂಳಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬಂದನು.


ಆದರೆ ಕ್ರಿಸ್ತನು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ. ನಿದ್ರೆಹೋದವರಲ್ಲಿ ಅಂದರೆ ಸತ್ತುಹೋದ ಎಲ್ಲಾ ವಿಶ್ವಾಸಿಗಳಲ್ಲಿ ಆತನೇ ಪ್ರಥಮ ಫಲವಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು