Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:28 - ಪರಿಶುದ್ದ ಬೈಬಲ್‌

28 ಹೇಗೆ ಜೀವಿಸಬೇಕೆಂಬುದನ್ನು ನೀನು ನನಗೆ ಉಪದೇಶಿಸಿದೆ. ನಿನ್ನ ಪ್ರಸನ್ನತೆಯು ನನ್ನಲ್ಲಿ ಮಹಾ ಆನಂದವನ್ನು ಉಂಟುಮಾಡುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಜೀವದ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನನ್ನಾಗಮಾಡುವಿ’ ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅಮರ ಜೀವಮಾರ್ಗವನೆನಗೆ ತೋರ್ಪಡಿಸಿದೆ ನಿನ್ನ ಶ್ರೀಸಾನ್ನಿಧ್ಯ ಸಂತಸದಿಂದೆನ್ನ ಭರಿತನಾಗಿಸುವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಜೀವಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗಮಾಡುವಿ ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೀವು ನನಗೆ ಜೀವಮಾರ್ಗಗಳನ್ನು ತಿಳಿಯಪಡಿಸಿರುವಿರಿ; ನಿಮ್ಮ ಸನ್ನಿಧಿಯಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಕಶೆ ಜಿವನ್ ಕರುಚೆ ಮನುನ್ ತಿಯಾ ಮಾಕಾ ದಾಕ್ವುನ್ ದಿಲೆ, ಅನಿ ತಿಯಾ ಮಾಜ್ಯಾ ಇದ್ರಾಕ್ ರ್‍ಹಾತಲೆ ಮಾಕಾ ಉಮ್ಮೆದಿನ್ ಭರಿ ಸಾರ್ಕೆ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:28
14 ತಿಳಿವುಗಳ ಹೋಲಿಕೆ  

ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ. ನಿನ್ನ ಸನ್ನಿಧಿಯಲ್ಲಿದ್ದರೆ ಪರಿಪೂರ್ಣ ಸಂತೋಷವಿರುವುದು; ನಿನ್ನ ಬಲಗಡೆಯಲ್ಲಿದ್ದರೆ ಶಾಶ್ವತವಾದ ಆನಂದವಿರುವುದು.


ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.


ಯೆಹೋವನೇ ನಿನ್ನ ಮಾರ್ಗಗಳನ್ನು ನನಗೆ ತಿಳಿಸು. ನಿನ್ನ ಮಾರ್ಗಗಳನ್ನು ನನಗೆ ಉಪದೇಶಿಸು.


ನೀನು ರಾಜನಿಗೆ ಶಾಶ್ವತವಾದ ಆಶೀರ್ವಾದವನ್ನು ಕೊಟ್ಟಿರುವೆ. ಅವನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡುವನು.


ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.


ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು. ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.


ಅವಳು ಸಮಾಧಿಯಂತೆ ಇದ್ದಾಳೆ. ಅವಳ ಬಳಿಗೆ ಹೋಗುವವನು ಎಂದಿಗೂ ಹಿಂತಿರುಗಿ ಬರುವುದಿಲ್ಲ; ಅವನ ಜೀವನವು ಮೊದಲಿನಂತಿರುವುದಿಲ್ಲ.


ನಾನು ನೀತಿಮಾರ್ಗದಲ್ಲಿಯೂ ನ್ಯಾಯಮಾರ್ಗದಲ್ಲಿಯೂ ನಡೆಯುತ್ತೇನೆ.


ಅವನು ದೀರ್ಘಾಯುಷ್ಯವನ್ನು ಕೇಳಿಕೊಂಡಾಗ ನೀನು ದಯಪಾಲಿಸಿದೆ. ದೇವರೇ, ನೀನು ರಾಜನಿಗೆ ಶಾಶ್ವತವಾದ ಜೀವಿತವನ್ನು ಅನುಗ್ರಹಿಸಿದೆ.


ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ.


ಯಾಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ತೊರೆದುಬಿಡುವುದಿಲ್ಲ. ನಿನ್ನ ಪರಿಶುದ್ಧನ ದೇಹವು ಸಮಾಧಿಯಲ್ಲಿ ಕೊಳೆಯಲು ನೀನು ಅವಕಾಶ ಕೊಡುವುದಿಲ್ಲ.


“ನನ್ನ ಸಹೋದರರೇ, ನಮ್ಮ ಪಿತೃವಾದ ದಾವೀದನ ಬಗ್ಗೆ ನಾನು ನಿಮಗೆ ನಿಜವಾಗಿಯೂ ಹೇಳಬಲ್ಲೆನು. ಅವನು ಸತ್ತುಹೋದನು ಮತ್ತು ಅವನಿಗೆ ಸಮಾಧಿಯಾಯಿತು. ಅವನ ಸಮಾಧಿಯು ನಮ್ಮ ಮಧ್ಯದಲ್ಲಿ ಇಂದಿನವರೆಗೂ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು