Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:41 - ಪರಿಶುದ್ದ ಬೈಬಲ್‌

41 ಪೇತ್ರನು ಹೇಳಿದ್ದನ್ನು ಸ್ವೀಕರಿಸಿಕೊಂಡ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿನ ಸುಮಾರು ಮೂರುಸಾವಿರ ಜನರು ವಿಶ್ವಾಸಿಗಳ ಗುಂಪಿಗೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಅವನ ಮಾತಿಗೆ ಒಪ್ಪಿಕೊಂಡವರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿವಸ ಸುಮಾರು ಮೂರುಸಾವಿರ ಜನರು ಅವರಲ್ಲಿ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತೆಂಚ್ಯಾತ್ಲ್ಯಾ ಲೈ ಲೊಕಾನಿ ಪೆದ್ರು ಸಾಂಗ್ತಲೆ ವಿಶ್ವಾಸ್ ಕರ್‍ಲ್ಯಾನಿ ಅನಿ ಬಾಲ್ತಿಮ್ ಘೆಟ್ಲ್ಯಾನಿ, ತ್ಯಾ ದಿಸಿ ಸುಮಾರ್ ತಿನ್ ಹಜಾರ್ ಲೊಕಾ ದೆವಾಚ್ಯಾ ಲೊಂಕಾಂಚ್ಯಾ ತಾಂಡ್ಯಾಕ್ ಮಿಳ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:41
21 ತಿಳಿವುಗಳ ಹೋಲಿಕೆ  

ಆದರೆ ಪೇತ್ರ ಮತ್ತು ಯೋಹಾನರ ಬೋಧನೆಯನ್ನು ಕೇಳಿ ಅನೇಕರು ನಂಬಿಕೊಂಡರು. ಆಗ ಆ ಸಮುದಾಯದಲ್ಲಿ ವಿಶ್ವಾಸಿಗಳ ಸಂಖ್ಯೆ ಐದು ಸಾವಿರಕ್ಕೆ ಏರಿತ್ತು.


ಅವರು ದೇವರನ್ನು ಕೊಂಡಾಡುತ್ತಿದ್ದರು ಮತ್ತು ಜನರೆಲ್ಲರೂ ಅವರನ್ನು ಇಷ್ಟಪಡುತ್ತಿದ್ದರು. ಪ್ರತಿದಿನವೂ ಹೆಚ್ಚುಹೆಚ್ಚು ಜನರು ರಕ್ಷಣೆ ಹೊಂದುತ್ತಿದ್ದರು; ಪ್ರಭುವು ಅವರನ್ನೆಲ್ಲಾ ವಿಶ್ವಾಸಿಗಳ ಸಭೆಗೆ ಸೇರಿಸುತ್ತಿದ್ದನು.


ಇದನ್ನು ಕೇಳಿದಾಗ, ಅವರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪೇತ್ರನನ್ನು ಮತ್ತು ಉಳಿದ ಅಪೊಸ್ತಲರನ್ನು, “ಈಗ ನಾವೇನು ಮಾಡಬೇಕು?” ಎಂದು ಕೇಳಿದರು.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನಲ್ಲಿ ನಂಬಿಕೆ ಇಡುವ ವ್ಯಕ್ತಿಯು ನಾನು ಮಾಡಿದ ಕಾರ್ಯಗಳನ್ನೇ ಮಾಡುವನು. ಹೌದು ನಾನು ಮಾಡುವ ಕಾರ್ಯಗಳಿಗಿಂತಲೂ ದೊಡ್ಡಕಾರ್ಯಗಳನ್ನು ಅವನು ಮಾಡುವನು. ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತಿದ್ದೇನೆ.


ಪೌಲನ ಈ ಮಾತುಗಳನ್ನು ಕೇಳಿದ ಯೆಹೂದ್ಯರಲ್ಲದ ಜನರು ಬಹು ಸಂತೋಷಪಟ್ಟು ಪ್ರಭುವಿನ ಸಂದೇಶಕ್ಕಾಗಿ ಸ್ತುತಿಸಿದರು. ನಿತ್ಯಜೀವವನ್ನು ಹೊಂದಿಕೊಳ್ಳಲು ಆಯ್ಕೆಯಾಗಿದ್ದವರೆಲ್ಲರೂ ನಂಬಿಕೊಂಡರು.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು. ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿಬರುವರು. ಆ ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು.


ಕೆಲವು ದಿನಗಳಾದ ಮೇಲೆ ವಿಶ್ವಾಸಿಗಳು ಸಭೆ ಸೇರಿದ್ದರು. (ಅಲ್ಲಿ ಸುಮಾರು ನೂರಿಪ್ಪತ್ತು ಮಂದಿ ಇದ್ದರು.) ಪೇತ್ರನು ಎದ್ದುನಿಂತುಕೊಂಡು ಹೀಗೆಂದನು:


ನೀವು ನಮ್ಮನ್ನೂ ಪ್ರಭುವನ್ನೂ ಅನುಸರಿಸಿದಿರಿ; ಬಹಳ ಹಿಂಸೆಯನ್ನು ಅನುಭವಿಸಿದಿರಿ; ನಮ್ಮ ಉಪದೇಶವನ್ನು ನೀವು ಸಂತಸದಿಂದ ಒಪ್ಪಿಕೊಂಡಿರಿ. ಪವಿತ್ರಾತ್ಮನೇ ನಿಮಗೆ ಆ ಸಂತಸವನ್ನು ನೀಡಿದನು.


ಆತನಿಗೆ ವಿಧೇಯನಾಗದವನು ದೇವಜನರಿಂದ ಬೇರ್ಪಟ್ಟು ಮರಣ ಹೊಂದುವನು.’


ಬಳಿಕ, ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಮತ್ತು ಸಂಬಂಧಿಕರನ್ನು (ಅವರೆಲ್ಲರು ಒಟ್ಟಿಗೆ ಎಪ್ಪತ್ತೈದು ಮಂದಿ) ಈಜಿಪ್ಟಿಗೆ ಆಹ್ವಾನಿಸಲು ಕೆಲವು ಜನರನ್ನು ಕಳುಹಿಸಿದನು.


ನೀವೆಲ್ಲರೂ ಸರ್ಕಾರದ ಅಧಿಕಾರಿಗಳಿಗೆ ವಿಧೇಯರಾಗಿರಬೇಕು. ಪ್ರತಿಯೊಬ್ಬ ಅಧಿಕಾರಿಗೆ ಅಧಿಕಾರವನ್ನು ಕೊಟ್ಟಿರುವವನು ದೇವರೇ. ಈಗಿರುವ ಎಲ್ಲಾ ಅಧಿಕಾರಿಗಳಿಗೆ ದೇವರೇ ಅಧಿಕಾರವನ್ನು ಕೊಟ್ಟಿದ್ದಾನೆ.


ಬಹಳ ಹಿಂದೆ ನೋಹನ ಕಾಲದಲ್ಲಿ ದೇವರಿಗೆ ಅವಿಧೇಯರಾಗಿದ್ದವರೇ ಅವರು. ನೋಹನು ನಾವೆಯನ್ನು ಕಟ್ಟುತ್ತಿದ್ದಾಗ ದೇವರು ತಾಳ್ಮೆಯಿಂದ ಕಾಯುತ್ತಿದ್ದನು. ಕೆಲವರು ಅಂದರೆ ಎಂಟು ಮಂದಿ ಮಾತ್ರ, ಆ ನಾವೆಯಲ್ಲಿ ನೀರಿನ ಮೂಲಕ ರಕ್ಷಿಸಲ್ಪಟ್ಟರು.


ಎರಡನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸಮುದ್ರದ ಮೇಲೆ ಸುರಿದನು. ಆಗ ಸಮುದ್ರವು ಸತ್ತ ಮನುಷ್ಯನ ರಕ್ತದಂತಾಯಿತು. ಸಮುದ್ರದಲ್ಲಿದ್ದ ಜೀವಜಂತುಗಳೆಲ್ಲ ಸತ್ತುಹೋದವು.


ಸೀಮೋನ್ ಪೇತ್ರನು ದೋಣಿಯೊಳಕ್ಕೆ ಹೋಗಿ ಬಲೆಯನ್ನು ದಡಕ್ಕೆ ಎಳೆದುಕೊಂಡು ಬಂದನು. ಬಲೆಯು ದೊಡ್ಡ ಮೀನುಗಳಿಂದ ತುಂಬಿತ್ತು. ಅದರಲ್ಲಿ 153 ಮೀನುಗಳಿದ್ದವು. ಅವು ಬಹಳ ಭಾರವಾಗಿದ್ದರೂ ಬಲೆಯು ಹರಿದುಹೋಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು