Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:5 - ಪರಿಶುದ್ದ ಬೈಬಲ್‌

5 ಬಹು ಧಾರ್ಮಿಕರಾದ ಅನೇಕ ಯೆಹೂದ್ಯರು ಆ ಸಮಯದಲ್ಲಿ ಜೆರುಸಲೇಮಿನಲ್ಲಿದ್ದರು. ಇವರಲ್ಲಿ ಪ್ರಪಂಚದ ಪ್ರತಿಯೊಂದು ದೇಶದಿಂದ ಬಂದ ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಕಾಶದ ಕೆಳಗಿರುವ ಎಲ್ಲಾ ದೇಶಗಳಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದೇ ಸಮಯದಲ್ಲಿ ವಿಶ್ವದ ಎಲ್ಲಾ ದೇಶಗಳಿಂದ ಧರ್ಮನಿಷ್ಠ ಯೆಹೂದ್ಯರು ಜೆರುಸಲೇಮಿಗೆ ಬಂದು ತಂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಕಾಶದ ಕೆಳಗಿರುವ ಎಲ್ಲಾ ದೇಶದವರೊಳಗಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇವಿುನಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಜಗತ್ತಿನ ಪ್ರತಿಯೊಂದು ದೇಶದಿಂದಲೂ ಬಂದ ದೇವಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಲೈ ಭಕ್ತಿವಂತ್ ಹೊತ್ತಿ ಜುದೆವಾಂಚಿ ಲೊಕಾ ತ್ಯಾ ವೆಳಾರ್ ಜೆರುಜಲೆಮಾತ್ ಹೊತ್ತಿ, ತೆಂಚ್ಯಾತ್ ಜಗಾತ್ಲ್ಯಾ ಹರ್ ಎಕ್ ದೆಶ್ಯಾಕ್ನಾ ಯೆಲ್ಲಿ ಲೊಕಾಬಿ ಹೊತ್ತಿ, ತೊ ಆವಾಜ್ ಯೆಲ್ಲ್ಯಾ ತನ್ನಾ ಥೈ ಲೈ ಲೊಕಾ ಗೊಳಾ ಹೊಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:5
17 ತಿಳಿವುಗಳ ಹೋಲಿಕೆ  

ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು.


ನೀವು ಕೇಳಿದ ಸುವಾರ್ತೆಯ ಮೇಲೆ ನಿಮಗಿರುವ ನಂಬಿಕೆಯಲ್ಲಿ ದೃಢವಾಗಿ ನೆಲೆಗೊಂಡಿದ್ದು ಅದರಿಂದುಂಟಾಗುವ ನಿರೀಕ್ಷೆಯನ್ನು ಬಿಟ್ಟು ಹೋಗದಿದ್ದರೆ ಇದು ಸಾಧ್ಯ. ಈ ಸುವಾರ್ತೆಯನ್ನು ಪ್ರಪಂಚದ ಜನರಿಗೆಲ್ಲ ಸಾರಲಾಗಿದೆ. ಪೌಲನಾದ ನಾನು ಈ ಸುವಾರ್ತೆಯನ್ನು ಸಾರುವ ಸೇವಕನಾದೆನು.


“ದಮಸ್ಕದಲ್ಲಿ ಅನನೀಯ ಎಂಬುವನು ನನ್ನ ಬಳಿಗೆ ಬಂದನು. ಅನನೀಯನು ಧಾರ್ಮಿಕ ವ್ಯಕ್ತಿಯಾಗಿದ್ದನು. ಅವನು ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯನಾಗಿದ್ದನು. ಅಲ್ಲಿ ವಾಸವಾಗಿದ್ದ ಯೆಹೂದ್ಯರೆಲ್ಲರು ಅವನನ್ನು ಗೌರವಿಸುತ್ತಿದ್ದರು.


ಆದರೆ ಯೆಹೂದ್ಯರು ಕೆಲವು ಧಾರ್ಮಿಕ ಸ್ತ್ರೀಯರನ್ನೂ ನಗರದ ನಾಯಕರನ್ನೂ ಪ್ರಚೋಧಿಸಿ, ಪೌಲ ಬಾರ್ನಬರ ಮೇಲೆ ಅವರು ಕೋಪಗೊಳ್ಳುವಂತೆಯೂ ಅವರಿಗೆ ವಿರೋಧಿಗಳಾಗುವಂತೆಯೂ ಮಾಡಿ ಪೌಲ ಬಾರ್ನಬರನ್ನು ಪಟ್ಟಣದಿಂದ ಹೊರಗಟ್ಟಿಸಿದರು.


ಕೊರ್ನೇಲಿಯನೊಂದಿಗೆ ಮಾತಾಡಿದ ದೇವದೂತನು ಹೊರಟುಹೋದನು. ಬಳಿಕ ಕೊರ್ನೇಲಿಯನು ತನ್ನ ಸೇವಕರಲ್ಲಿ ಇಬ್ಬರನ್ನೂ ಒಬ್ಬ ಸೈನಿಕನನ್ನೂ ಕರೆದನು. ಈ ಸೈನಿಕನು ದೈವಭಕ್ತನಾಗಿದ್ದನು. ಕೊರ್ನೇಲಿಯನ ಆಪ್ತಸಹಾಯಕರಲ್ಲಿ ಇವನೂ ಒಬ್ಬನಾಗಿದ್ದನು.


ಕೊರ್ನೇಲಿಯನು ದೈವಭಕ್ತನಾಗಿದ್ದನು. ಅವನು ಮತ್ತು ಅವನ ಕುಟುಂಬದಲ್ಲಿ ವಾಸವಾಗಿದ್ದ ಇತರ ಎಲ್ಲಾ ಜನರು ನಿಜದೇವರನ್ನು ಆರಾಧಿಸುತ್ತಿದ್ದರು. ಅವನು ಬಡವರಿಗೆ ಧಾರಾಳವಾಗಿ ಹಣವನ್ನು ಕೊಡುತ್ತಿದ್ದನು. ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಿದ್ದನು.


ಆದ್ದರಿಂದ ಫಿಲಿಪ್ಪನು ಸಿದ್ಧನಾಗಿ ಹೊರಟನು. ಇಥಿಯೋಪಿಯಾದ ಒಬ್ಬನನ್ನು ಅವನು ದಾರಿಯಲ್ಲಿ ಕಂಡನು. ಈ ಮನುಷ್ಯನು ನಪುಂಸಕನಾಗಿದ್ದನು. ಇಥಿಯೋಪಿಯದ ರಾಣಿಯಾದ ಕಂದಾಕೆಯ ಆಸ್ಥಾನದಲ್ಲಿ ಇವನು ಮುಖ್ಯಾಧಿಕಾರಿಯಾಗಿದ್ದನು. ಹಣವನ್ನೆಲ್ಲ ನೋಡಿಕೊಳ್ಳುವ ಜವಾಬ್ದಾರಿ ಇವನದೇ ಆಗಿತ್ತು. ಈ ಮನುಷ್ಯನು ಆರಾಧನೆಗಾಗಿ ಜೆರುಸಲೇಮಿಗೆ ಹೋಗಿದ್ದನು.


ಪಂಚಾಶತ್ತಮ ಹಬ್ಬದ ದಿನ ಬಂದಾಗ ಅವರೆಲ್ಲರು ಒಂದು ಸ್ಥಳದಲ್ಲಿ ಒಟ್ಟಾಗಿ ಸೇರಿದ್ದರು.


ಅಲ್ಲಿ ಗ್ರೀಕ್ ಜನರು ಸಹ ಇದ್ದರು. ಪಸ್ಕಹಬ್ಬದಲ್ಲಿ ಆರಾಧಿಸುವುದಕ್ಕಾಗಿ ಜೆರುಸಲೇಮಿಗೆ ಹೋಗಿದ್ದವರಲ್ಲಿ ಇವರೂ ಸೇರಿದ್ದರು.


ಅವರಲ್ಲಿ ಕ್ಲೆಯೋಫನೆಂಬುವನು, “ಇತ್ತೀಚೆಗೆ ಜೆರುಸಲೇಮಿನಲ್ಲಿ ನಡೆದ ಸಂಗತಿಯನ್ನು ತಿಳಿಯದಿರುವ ವ್ಯಕ್ತಿ ಎಂದರೆ ನೀನೊಬ್ಬನೇ ಇರಬೇಕು” ಎಂದು ಉತ್ತರಿಸಿದನು.


“ಮನುಷ್ಯಕುಮಾರನು ಬಂದಾಗ ನಿಮಗೇ ಗೊತ್ತಾಗುವುದು. ಆಕಾಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಹೊಳೆಯುವ ಮಿಂಚಿನಂತೆ ಆತನು ಬರುವನು.


ದೇವರ ರಾಜ್ಯದ ಶುಭವಾರ್ತೆಯನ್ನು ಲೋಕದಲ್ಲೆಲ್ಲಾ ಪ್ರತಿ ಜನಾಂಗಕ್ಕೂ ಸಾರಲಾಗುವುದು. ಆಗ ಅಂತ್ಯವು ಬರುತ್ತದೆ.


ಸರ್ವಶಕ್ತನಾದ ಯೆಹೋವನಿಂದ ನಾನು ಈ ಸಂದೇಶವನ್ನು ಹೊಂದಿದೆನು.


“ಆ ಜನರಲ್ಲಿ ಕೆಟ್ಟ ಯೋಜನೆಗಳು ಇದ್ದು ಕೆಟ್ಟದ್ದನ್ನೇ ಮಾಡುವವರಾಗಿದ್ದಾರೆ. ಅದಕ್ಕಾಗಿ ನಾನು ಅವರನ್ನು ಶಿಕ್ಷಿಸಲು ಬರುತ್ತಿದ್ದೇನೆ. ನಾನು ಎಲ್ಲಾ ಜನಾಂಗಗಳನ್ನೂ ಎಲ್ಲಾ ಜನರನ್ನೂ ಒಟ್ಟುಗೂಡಿಸುವೆನು. ಎಲ್ಲಾ ಜನರು ಒಟ್ಟುಗೂಡಿ ನನ್ನ ಸಾಮರ್ಥ್ಯವನ್ನು ನೋಡುವರು.


ಸುತ್ತಲಿರುವ ಜನಾಂಗಗಳು ನಿಮಗೆ ಹೆದರಿ ನಡುಗುವಂತೆ ನಾನು ಮಾಡುತ್ತಿದ್ದೇನೆ. ಅವರು ನಿಮ್ಮ ಬಗ್ಗೆ ಸುದ್ದಿಯನ್ನು ಕೇಳಿ ಹೆದರಿಕೊಳ್ಳುವರು ಮತ್ತು ಭಯದಿಂದ ನಡುಗುವರು.’


“ಇದಲ್ಲದೆ ನೀವು ಸುಗ್ಗಿಯ ಜಾತ್ರೆಯನ್ನು ಆಚರಿಸಬೇಕು. ನೀವು ಬಿತ್ತಿದ ಹೊಲಗಳಲ್ಲಿ ಬೆಳೆಗಳನ್ನು ಕೊಯ್ಯುವ ಕಾಲದಲ್ಲಿ ಈ ಜಾತ್ರೆಯು ಆರಂಭವಾಗುವುದು. “ಇದಲ್ಲದೆ ಫಲಸಂಗ್ರಹ ಜಾತ್ರೆಯನ್ನೂ ನೀವು ಆಚರಿಸಬೇಕು. ವರ್ಷಾಂತ್ಯದಲ್ಲಿ ನೀವು ಹೊಲತೋಟಗಳ ಬೆಳೆಗಳನ್ನೆಲ್ಲಾ ಒಟ್ಟುಗೂಡಿಸುವ ಕಾಲದಲ್ಲಿ ಇದು ಆರಂಭವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು